Advertisement

ಪ್ರವಾಸ

ಆರ್ಥಿಕ ಬಿಕ್ಕಟ್ಟಿನ ಆಂತರಿಕ ಗಲಭೆಯಲ್ಲಿ ಶ್ರೀಲಂಕಾ ಪ್ರವಾಸ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ಆರ್ಥಿಕ ಬಿಕ್ಕಟ್ಟಿನ ಆಂತರಿಕ ಗಲಭೆಯಲ್ಲಿ ಶ್ರೀಲಂಕಾ ಪ್ರವಾಸ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ಶ್ರೀಲಂಕಾದಲ್ಲಿರುವ ಪರಿಸ್ಥಿತಿಯಿಂದ ಗೈಡ್ ಬರಲಿಲ್ಲವೇ? ಅಥವಾ ತಪ್ಪಿಸಿಕೊಂಡನೆ? ಸ್ವಲ್ಪ ಗಾಬರಿಯಾಯಿತು. ಮತ್ತೆ ನಾವಿಬ್ಬರು ಸುಶೀಲ ಮತ್ತು ಶಾಂತಮ್ಮ ಹತ್ತಿರಕ್ಕೆ ಹೋದೆವು. ಅಷ್ಟರಲ್ಲಿ ನಮ್ಮ 12 ಜನರ ಗುಂಪಿನ ಒಂದಷ್ಟು ಜನರು ನಮ್ಮಂತೆ ಗೈಡ್‌ಗಾಗಿ ಹುಡುಕಾಡುತ್ತಿದ್ದರು. ಕೊನೆಗೂ ಒಬ್ಬಾತ ತಮಿಳಿನಲ್ಲಿ ಮಾತನಾಡುತ್ತ ಚಾರಿಯಟ್ ವರ್ಲ್ಡ್‌ ಟೂರ್ ಎಂದು ಹತ್ತಿರಕ್ಕೆ ಬಂದ. ನಾನು, `ಏಯ್ ಎಲ್ಲಿ ಹೋಗಿದ್ದೆಯೊ ಮಹರಾಯ ಇಷ್ಟೊತ್ತು? ನಾವೆಲ್ಲ ಹುಡುಕಿ ಹುಡುಕಿ ಸಾಕಾಯಿತು’ ಎಂದೆ. ಆತ ಇಂಗ್ಲಿಷ್ ಮತ್ತು ತಮಿಳು ಮಾತನಾಡತೊಡಗಿದ.
ಶ್ರೀಲಂಕಾ ಪ್ರವಾಸದ ಕುರಿತು ಡಾ. ವೆಂಕಟಸ್ವಾಮಿ ಬರಹ

read more
ನಾನು ಸುರೀನಾಮಿಯಾದೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾನು ಸುರೀನಾಮಿಯಾದೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಆತಂಕದಲ್ಲೋ, ಆಸೆಯಲ್ಲೋ ತಮ್ಮ ಹಾಗೆಯೇ ಕಾಣುವ ಭಾರತೀಯರನ್ನು ಸುರೀನಾಮಿಗಳು ಎಂದು ಭಾವಿಸುತ್ತಾರೆ. ಡಚ್ಚರು ಅವರು ಭಾರತೀಯರಲ್ಲ, ಕೇವಲ ಸುರೀನಾಮಿಗಳು ಎಂದು ಪ್ರವಾಸಿ ಭಾರತೀಯರನ್ನು ಎಚ್ಚರಿಸುತ್ತಾರೆ. ಕೆಲವರನ್ನು ಕಂಡಾಗ ಅವರು ಭಾರತೀಯರಾಗಿದ್ದರೆ ಎಂದು ನಮಗೂ ಆಸೆಯಾಗುತ್ತದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹನ್ನೆರಡನೆಯ ಬರಹ

read more
ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ:  ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗೆ ಬಂದಿದ್ದ ಮಹಿಳೆಯೊಬ್ಬರು ಹೋಟಲ್‌ನಲ್ಲಿ ಊಟ ಮಾಡುತ್ತಿದ್ದಾಗ ನಮ್ಮ ದೇಶದವರೇ ಆದ ಹೋಟಲ್ ಮಾಲಿಕನಿಗೆ `ಸಿಂಗಾಪುರದಲ್ಲಿ ಕ್ರೈಮ್ ರೇಟ್ ಏನಿದೆ?’ ಎಂದು ಕೇಳಿಬಿಟ್ಟರು. ಆತ, `ಮೇಡಮ್ ಸಿಂಗಾಪುರದಲ್ಲಿ ಕ್ರೈಮ್ ರೇಟ್ ಝೀರೋ. ಅದೆಲ್ಲ ಭಾರತದಲ್ಲಿ’ ಎಂದು ಕೋಪ ಮಾಡಿಕೊಂಡು ಹೇಳಿದರು.
ಡಾ. ವೆಂಕಟಸ್ವಾಮಿ ಪ್ರವಾಸ ಕಥನದಲ್ಲಿ ಸಿಂಗಪೂರ್‌ ಕುರಿತ ಬರಹ ಇಲ್ಲಿದೆ

read more
ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಕ್ಕಳು ಮತ್ತು ಮಾತೃಭೂಮಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಮ್ಮದು ಅನಗತ್ಯ ಭಯ, ಆತಂಕ. ನಮ್ಮದೆಲ್ಲವೂ ಕಲ್ಪಿತ ಭಯ ಎಂಬ ಅರಿವು ಕೂಡ ಕೆಲವು ಪೋಷಕರಲ್ಲಿ ಕಂಡು ಬಂತು. ನಮ್ಮ ಆತಂಕ, ಭಯಗಳು ಮಕ್ಕಳ ಭವಿಷ್ಯದ ಜೀವನಕ್ಕೆ ಅಡ್ಡಿಯಾಗಬಾರದು, ನಾವಿಲ್ಲದ ನಾಳಿನ ಬದುಕಿನಲ್ಲಿ ಅವರು ಹೇಗಿರಬೇಕು, ಹೇಗೆ ಬಾಳಬೇಕು ಎಂಬುದನ್ನು ನಿರ್ಧರಿಸುವ ಹಕ್ಕೂ ನಮಗಿಲ್ಲ ಅಲ್ಲವೇ ಎಂದು ಪೋಷಕರು ಅವರವರಲ್ಲೇ ಪರಸ್ಪರ ಚರ್ಚಿಸಿಕೊಂಡು ಸಮಾಧಾನ ಮಾಡಿಕೊಳ್ಳುತ್ತಾರೆ. ಈ ಯಾವ ಆತಂಕಗಳೂ ಮಕ್ಕಳಿಗಿಲ್ಲ ಎಂಬ ಅರಿವು ಕೂಡ ಈ ಸಮಾಧಾನದ ಹಿಂದಿದೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

read more
ಮೊಮ್ಮಕ್ಕಳಿಂದ ಕಲಿಯುವುದು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮೊಮ್ಮಕ್ಕಳಿಂದ ಕಲಿಯುವುದು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಕ್ಕಳನ್ನು ಪ್ರಬುದ್ಧರನ್ನಾಗಿ ಮಾಡುವ ನಮ್ಮ ಆತುರದಲ್ಲಿ ಅವರ ಬಾಲ್ಯದ ಸಂತೋಷಕ್ಕೆ ನಾವು ಅಡ್ಡ ಬರಬಾರದಷ್ಟೇ. ಈ ಎಚ್ಚರ ನನಗೆ ಯಾವಾಗಲೂ ಇತ್ತು. ನನಗೆ ಎಚ್ಚರವಿಲ್ಲದಿದ್ದರೂ ಏನೂ ತೊಂದರೆ ಆಗುತ್ತಿರಲಿಲ್ಲ. ಏಕೆಂದರೆ, ಅವನು ಪುಸ್ತಕಗಳಿಗಿಂತ ಹೆಚ್ಚಾಗಿ ತನ್ನ ವಯಸ್ಸಿನ ಮಕ್ಕಳ ಜೊತೆ ಬೆರೆಯುವುದನ್ನೇ, ಅವರೊಡನೆ ಆಟವಾಡುವುದನ್ನೇ ತುಂಬಾ ಇಷ್ಟಪಡುತ್ತಿದ್ದ. ದಣಿಯುವ ತನಕ ಅಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

read more
ಉಸಿರುಗಟ್ಟಿ ತತ್ತರಿಸುತ್ತಿರುವ ಆಗ್ನೇಯ ಏಷ್ಯಾ ದೇಶಗಳು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ಉಸಿರುಗಟ್ಟಿ ತತ್ತರಿಸುತ್ತಿರುವ ಆಗ್ನೇಯ ಏಷ್ಯಾ ದೇಶಗಳು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಾವು ಗುಹೆಯಲ್ಲಿ ನಿಂತುಕೊಂಡು ಆಕಾಶದ ಕಡೆಗೆ ನೋಡಿದಾಗ ಮಳೆ ಒಂದೇ ಸಮನೆ ಸುರಿಯುತ್ತಿತ್ತು, ಆದರೆ ನಾವು ತೂತುಗಳಿಂದ ದೂರಕ್ಕೆ ನಿಂತಿದ್ದರಿಂದ ನೆನೆಯಲಿಲ್ಲ. ಬಿದ್ದ ನೀರು ಜರೋ ಎಂದು ಸದ್ದು ಮಾಡುತ್ತ ಹರಿದುಹೋಗುತ್ತಿದ್ದರೂ ನಮಗೆ ಕಾಣಿಸಲಿಲ್ಲ. ಸೂರ್ಯನ ಬೆಳಕು ನೇರವಾಗಿ ಗುಹೆಗಳ ಒಳಕ್ಕೆ ಬೀಳುವುದರ ಜೊತೆಗೆ ಮಳೆಗಾಲದಲ್ಲಿ ಅಪಾರವಾದ ಮಳೆ ಗುಹೆಗಳ ಒಳಕ್ಕೆ ಸುರಿಯುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆದ ಮಲೇಷ್ಯಾ ಪ್ರವಾಸದ ಮತ್ತಷ್ಟು ಅನುಭವಗಳು ನಿಮ್ಮ ಓದಿಗೆ

read more
ಮಕ್ಕಳ ಆಟ:  ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಕ್ಕಳ ಆಟ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್‌ನ ಮನೆಗಳಲ್ಲಿ ಇನ್ನೂ ಒಂದು ಸಂಗತಿಯನ್ನು ಗಮನಿಸಿದೆ. ಜೊತೆಯಲ್ಲಿ ಆಡಲು ಮಕ್ಕಳು ಸಿಗದೆ ಇರಬಹುದು. ಇದಕ್ಕೆ ಬದಲಾಗಿ, ಪ್ರತಿ ಮನೆಯಲ್ಲೂ ಒಂದೊಂದು ಶಿಶುವಿಹಾರಕ್ಕೆ ಆಗುವಷ್ಟು ಆಟದ ಸಾಮಾನುಗಳು, ಎಲೆಕ್ಟ್ರಾನಿಕ್ ಉಪಕರಣಗಳು ತುಂಬಿ ತುಳುಕುತ್ತಿರುತ್ತವೆ. ಮಕ್ಕಳು ಈ ಉಪಕರಣಗೊಳಡನೆಯೇ ಹೆಚ್ಚು ಸಮಯ ಕಳೆಯುತ್ತಾರೆ. ಆತ್ಮೀಯ ಸಂಬಂಧ ಸ್ಥಾಪಿಸಿಕೊಳ್ಳುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಹತ್ತನೆಯ ಬರಹ

read more
ಆಗ್ನೇಯ ಏಷ್ಯಾದ ಮಲೇಷ್ಯಾ ದೇಶ: ಡಾ ವೆಂಕಟಸ್ವಾಮಿ ಪ್ರವಾಸ ಕಥನ

ಆಗ್ನೇಯ ಏಷ್ಯಾದ ಮಲೇಷ್ಯಾ ದೇಶ: ಡಾ ವೆಂಕಟಸ್ವಾಮಿ ಪ್ರವಾಸ ಕಥನ

ಅಲ್ಲಿಂದ ಇಳಿದು ಬಂದು ಕಟ್ಟಡದ ಮುಂದಿನ ಪ್ರಾಂಗಣದಲ್ಲಿ ನಿಂತುಕೊಂಡು ಅವಳಿ ಗೋಪುರಗಳನ್ನೇ ನೋಡತೊಡಗಿದೆವು. ಒಂದು ರೀತಿಯಲ್ಲಿ ತವರು/ಉಕ್ಕಿನ ಬಣ್ಣಹೊಂದಿರುವ ಕಟ್ಟಡದ ಮೇಲೆ ಚಂದ್ರನು ನಗುತ್ತಿದ್ದರೂ ಕಟ್ಟಡದ ಬೆಳಕಿನ ಮುಂದೆ ಅವನ ಮುಖ ಮಂಕಾದಂತೆ ಕಾಣಿಸುತ್ತಿತ್ತು. ಸುಮಾರು ಹೊತ್ತು ನಾವು ಆ ಕಟ್ಟಡದ ಕಡೆಗೆ ನೋಡುತ್ತಲೆ ನಿಂತಿದ್ದೆವು. ನಮ್ಮ ಸುತ್ತಲೂ ಮಂಗೋಲಿಯನ್ ಬಣ್ಣದ ತೆಳು ದೇಹಗಳ ಯುವ ಜೋಡಿಗಳು ಉಲ್ಲಾಸದ ಮಾತುಗಳಲ್ಲಿ ತೊಡಗಿಕೊಂಡಿದ್ದವು.
ಡಾ. ಎಂ. ವೆಂಕಟಸ್ವಾಮಿ ಮಲೇಷ್ಯಾ ಪ್ರವಾಸದ ಅನುಭವಗಳು ನಿಮ್ಮ ಓದಿಗೆ

read more
ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನನ್ನ ಹೆಂಡತಿ ಇಂಗ್ಲಿಷ್‌ನಲ್ಲಿ ಇಷ್ಟೆಲ್ಲ ಹೇಳಿದಳು. ಇದು ಆಕೆಗೆ ಅರ್ಥವಾಯಿತೋ ಇಲ್ಲವೋ ಗೊತ್ತಾಗಲಿಲ್ಲ. ನಾಯಿಮರಿಯನ್ನು ಕಂಕುಳಿನಲ್ಲಿ ಬಿಗಿಯಾಗಿ ಇಟ್ಟುಕೊಂಡು ಕತ್ತನ್ನು ಹಿಸುಕುತ್ತಾ ತಲೆಯ ಮೇಲೆ ಜೋರಾಗಿ ಮೊಟಕುತ್ತಾ ಕರೆದುಕೊಂಡು ಹೋದಳು. ನಾಯಿಮರಿ ಕೂಡ ಬೊಗಳುತ್ತಲೇ ಕೊಸರಾಡುತ್ತಿತ್ತು. ನಾವು ನಾಲ್ಕೂ ಜನ ಮಂಕಾದೆವು, ಗಾಬರಿ ಬಿದ್ದೆವು. ವಾಯು ವಿಹಾರದ, ಆಟದ ಸಂತೋಷ ಮಾಯವಾಗಿತ್ತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಒಂಭತ್ತನೆಯ ಬರಹ

read more

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ