Advertisement

ಪ್ರವಾಸ

ಆಮ್‌ಸ್ಟರ್‌ಡ್ಯಾಮ್‌ನ ಕಾಲುವೆಗಳಲ್ಲಿ ವಿಹಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಆಮ್‌ಸ್ಟರ್‌ಡ್ಯಾಮ್‌ನ ಕಾಲುವೆಗಳಲ್ಲಿ ವಿಹಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಗೈಡ್, `ಇಲ್ಲಿಗೆ ಬರುವ ಕೆಲವು ಉತ್ಸಾಹಿ ಪ್ರವಾಸಿಗರು ರಾತ್ರಿ ನಗರದಲ್ಲಿ ಕಳೆದುಹೋಗುತ್ತಾರೆ. ಒಂದೆರಡು ದಿನಗಳಾದ ಮೇಲೆ ತಮ್ಮ ಇರುವಿಕೆಯ ಸ್ಮೃತಿಗೆ ಹಿಂದಿರುಗಿದಾಗ ತಾವಿರುವ ಹೋಟಲಿಗೆ ಹಿಂದಿರುಗಿಬರುತ್ತಾರೆ. ನೀವ್ಯಾರಾದರೂ ಕಳೆದುಹೋಗುವುದಾದರೆ, ರಾತ್ರಿ ನಿಮ್ಮ ಹೋಟಲ್‌ನಿಂದ ಹೊರಕ್ಕೆ ಬಂದರೆ ಸಾಕು, ಉಳಿದ ಕೆಲಸಗಳು ತನಗೆತಾನೇ ನಡೆಯುತ್ತವೆ. ನೀವ್ಯಾರಾದರೂ ತಯಾರಿದ್ದರೆ ನಾನು ಕರೆದುಕೊಂಡು ಹೋಗುತ್ತೇನೆ, ಆದರೆ ಹಿಂದಕ್ಕೆ ಕರೆದುತರುವ ಗ್ಯಾರಂಟಿ ಕೊಡಲಾರೆ.
ಆಮ್‌ಸ್ಟರ್‌ಡ್ಯಾಮ್‌ನ ಪ್ರವಾಸ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ ನಿಮ್ಮ ಓದಿಗೆ

read more
ಸ್ವಿಟ್ಜರ್ಲೆಂಡ್ ಮತ್ತು ಜಗತ್ತಿನ ಕಪ್ಪು ಹಣ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಸ್ವಿಟ್ಜರ್ಲೆಂಡ್ ಮತ್ತು ಜಗತ್ತಿನ ಕಪ್ಪು ಹಣ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ದೀರ್ಘ ಕಾಲದಿಂದಲೂ ಸ್ವಿಟ್ಜರ್ಲೆಂಡ್ ತಟಸ್ಥತೆ ಮತ್ತು ರಾಷ್ಟ್ರೀಯ ಸಾರ್ವಭೌಮತ್ವತೆಯನ್ನು ಕಾಪಾಡಿಕೊಂಡು ಬಂದಿರುವುದರಿಂದ ಜಗತ್ತಿನ ಎಲ್ಲಾ ದೊಡ್ಡ ಬ್ಯಾಂಕ್‌ಗಳ ಮುಖ್ಯಕೇಂದ್ರಗಳು ಇಲ್ಲಿ ನೆಲೆಗೊಂಡಿದ್ದು ಸ್ವಿಸ್ ಬ್ಯಾಂಕಿಂಗ್ ಕ್ಷೇತ್ರವು ಸ್ಥಿರ ಅಭಿವೃದ್ಧಿಯನ್ನು ಹೊಂದಿದೆ.
ಸ್ವಿಟ್ಜರ್ಲೆಂಡ್ ದೇಶದ ಪ್ರವಾಸ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹದ ಎರಡನೆಯ ಭಾಗ ಇಲ್ಲಿದೆ

read more
ಶಿಕ್ಷಣದ ರೀತಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಶಿಕ್ಷಣದ ರೀತಿ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಮಗುವಿನ ಸಾಮರ್ಥ್ಯ, ಒಲವು, ಮನೋಧರ್ಮಗಳನ್ನು ತಿಳಿಯುವ ಭಾಷೆ, ಗಣಿತಕ್ಕೆ ನಂತರದ ಸ್ಥಾನ, ಮೊದಲು ಮಗು ಭಾವನಾತ್ಮಕವಾಗಿ ಹೇಗಿದೆಯೆಂದು ತಿಳಿದು, ಅಂದಾಜು ಮಾಡಿ ಪೋಷಕರಿಗೆ ತಿಳಿಸುತ್ತಾರೆ. ತನ್ನ ವಯಸ್ಸಿನವರೊಡನೆ ಹೇಗೆ ಸಂವಹನ ಮಾಡುತ್ತದೆ, ಒಂದು ತಂಡದ ಸದಸ್ಯನಾಗಿ ಹೇಗೆ ಕೆಲಸ ಮಾಡುತ್ತದೆ, ನೆರವು ನೀಡಬಲ್ಲದೆ, ನೆರವು ಪಡೆಯಬಲ್ಲದೆ, ಇತರರ ಸಾಮರ್ಥ್ಯವನ್ನು ಗೌರವಿಸಬಲ್ಲದೆ, ತನ್ನ ನಿಲುವನ್ನು ಇತರರ ಮೇಲೆ ಹೇರದೆ ತರ್ಕಬದ್ಧವಾಗಿ ವಿವರಿಸಬಲ್ಲದೆ, ತಪ್ಪನ್ನು ತಿದ್ದಿಕೊಳ್ಳಬಲ್ಲದೆ, ನಿರಾಶೆ, ವೈಫಲ್ಯಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ, ಅನ್ಯ ಸಂಸ್ಕೃತಿ, ಹಿನ್ನೆಲೆಯಿಂದ ಬಂದ ಮಕ್ಕಳನ್ನು ಹೇಗೆ ಕಾಣುತ್ತದೆ…
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ”

read more
ಭೂಮಿಯ ಮೇಲಿನ ಸುಂದರ ಸಮೃದ್ಧ ದೇಶ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಭೂಮಿಯ ಮೇಲಿನ ಸುಂದರ ಸಮೃದ್ಧ ದೇಶ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಈಗ ನಾನೊಬ್ಬನೆ ಹೊರಗಿದ್ದು ನಮ್ಮ ಗುಂಪಿನ ಎಲ್ಲರೂ ಒಳಗಿದ್ದರು. ನಮ್ಮ ಗೈಡ್ ಎಲ್ಲರೂ ಹೋಗುವುದನ್ನು ದೃಢಪಡಿಸಿಕೊಂಡು ಹಿಂದೆಬರುತ್ತಿದ್ದನು. ನನ್ನ ಸಮಸ್ಯೆಯನ್ನು ನೋಡಿದ ಗೈಡ್, `ಕೆಳಗಡೆ ಬಗ್ಗಿಕೊಂಡು ಬಂದುಬಿಡಿ ಸರ್’ ಎಂದ. ಒಂದೆರಡು ಕ್ಷಣ ಸುತ್ತಲೂ ನೋಡಿ ಕೊನೆಗೆ ನೆಲದಲ್ಲಿ ಕುಳಿತುಕೊಂಡು ಮಗುವಿನಂತೆ ಕಾಲುಗಳನ್ನು ಬಿಟ್ಟು ದೇಖಿಕೊಂಡು ಒಳಕ್ಕೆ ಹೋಗಿಬಿಟ್ಟೆ. ಹಿಂದೆ ಇದ್ದ ಇಬ್ಬರು ಯುರೋಪಿಯನ್ ಮಹಿಳೆಯರು ಕಣ್ಣುಗಳನ್ನು ಸಣ್ಣದಾಗಿಸಿಕೊಂಡು ವಿಚಿತ್ರ ಪ್ರಾಣಿಯನ್ನು ನೋಡುವಂತೆ ನನ್ನ ಕಡೆಗೆ ನೋಡಿದರು. ಅಲ್ಲೆಲ್ಲ ಕ್ಯಾಮರಾಗಳಿದ್ದರೂ ಅವು ನನ್ನನ್ನು ಕ್ಷಮಿಸಿಬಿಟ್ಟಿದ್ದವು ಎನಿಸುತ್ತದೆ.
ಸ್ವಿಟ್ಜರ್ಲೆಂಡ್ ದೇಶದ ಪ್ರವಾಸ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

read more
ಇಂಗ್ಲಿಷ್ ಮತ್ತು ನೆದರ್‌ಲ್ಯಾಂಡ್ಸ್: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇಂಗ್ಲಿಷ್ ಮತ್ತು ನೆದರ್‌ಲ್ಯಾಂಡ್ಸ್: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್ ಯುರೋಪಿನ ಭಾಗ. ಇಂಗ್ಲೆಂಡಿಗೆ ಹತ್ತಿರ. ರೈಲಿನಲ್ಲಿ ಕೂಡ ಕೇವಲ ನಾಲ್ಕು ಘಂಟೆಗಳ ಪ್ರಯಾಣ. ಯುರೋಪಿನಲ್ಲಿ ಬಹು ಭಾಷಾ ಸಂಸ್ಕೃತಿ ಇದೆ. ಬಹುಪಾಲು ಯುರೋಪಿಯನ್ನರು ಒಂದು ಭಾಷೆಗಿಂತ ಹೆಚ್ಚು ಭಾಷೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಬಳಸುತ್ತಾರೆ, ಅಥವಾ ಬಳಸಲು ಬಲ್ಲರು. ಆದರೂ ಕೆಲ ದೇಶಗಳಲ್ಲಿ ಪ್ರವಾಸಿಗಳ ಜೊತೆ, ಅದರಲ್ಲೂ ಶ್ವೇತವರ್ಣೀಯರಲ್ಲದವರ ಜೊತೆ ತಮ್ಮ ಮಾತೃ ಭಾಷೆಯಲ್ಲೇ ಮಾತನಾಡುವ ಹಠ ಹಿಡಿಯುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ನಾಲ್ಕನೆಯ ಬರಹ

read more
ಐಫೆಲ್‌ ಟವರ್‌ಗಿಂತ ತಿರುಪತಿಯೇ ವಾಸಿ!: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಐಫೆಲ್‌ ಟವರ್‌ಗಿಂತ ತಿರುಪತಿಯೇ ವಾಸಿ!: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

1887 ಜನವರಿ, 28ರಂದು ಅಡಿಪಾಯ ಅಗೆಯಲು ಪ್ರಾರಂಭಿಸಿ 1889 ಮಾರ್ಚ್ 31ರಂದು ಗೋಪುರವನ್ನು ಕಟ್ಟಿ ಮುಗಿಸಲಾಯಿತು. ಇಪ್ಪತ್ತು ವರ್ಷಗಳಲ್ಲಿ ಗೋಪುರವನ್ನು ಕೆಡವಲು ಮೊದಲಿಗೆ ತೀರ್ಮಾನಿಸಲಾಗಿತ್ತು. ಜನರು ಮೊದಲಿಗೆ ಗೋಪುರ ತುಂಬಾ ಕೆಟ್ಟದಾಗಿ ಕಾಣಿಸುತ್ತಿದೆ, ಪ್ಯಾರಿಸ್ ನಗರದ ಅಂದವನ್ನು ಕೆಡಿಸಿಬಿಟ್ಟಿದೆ ಎಂದು ದೂರಿದರು. ಆದರೆ ಅದು ಮುಂದಿನ ದಿನಗಳಲ್ಲಿ ಪ್ಯಾರಿಸ್‌ಗೆ ದೊಡ್ಡ ಆಸ್ತಿಯಾಗಿ ಮಾರ್ಪಟ್ಟಿತು. ಮುಂದಿನ ದಿನಗಳಲ್ಲಿ ಗೋಪುರದ ಮೇಲೆ ಸಂವಹನ, ಗುರುತ್ವಾಕರ್ಷಣೆ, ವಿದ್ಯುಚ್ಛಕ್ತಿ ಮತ್ತು ಪವನಶಾಸ್ತ್ರ ಪ್ರಯೋಗಾಲಯವನ್ನು ಅದರ ಮೇಲೆ ಸ್ಥಾಪನೆ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

read more
ನೆದರ್‌ಲ್ಯಾಂಡ್ಸ್ ಬಾಣಂತನ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನೆದರ್‌ಲ್ಯಾಂಡ್ಸ್ ಬಾಣಂತನ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಆವತ್ತಿನ ಪರಿಸ್ಥಿತಿಯಲ್ಲಿ ಅದು ಕನಸಿನಲ್ಲೂ ಕೂಡ ಸಾಧ್ಯವಿರಲಿಲ್ಲ. ಮಗಳು ಉದ್ಯೋಗಿಯಾಗಿದ್ದರಿಂದ ಇಲ್ಲಿಗೆ ಬಂದು ಬಾಣಂತನ ಮುಗಿಸಿಕೊಂಡು ಹೋಗುವುದು ಸಾಧ್ಯವಿರಲಿಲ್ಲ. ಮಗಳಿಗೆ ಕೂಡ ಪ್ರಾರಂಭದ ಸಂಭ್ರಮ ಮುಗಿದ ಮೇಲೆ, ನಾನಾ ರೀತಿಯ ಆತಂಕ, ಅನುಮಾನಗಳು. ಕೆಲಸ, ಸಂಸಾರ, ಸ್ಕೂಲಿಗೆ ಹೋಗುತ್ತಿರುವ ಏಳು ವರ್ಷದ ಮಗ, ತನ್ನ ಆರೋಗ್ಯ, ಹೆರಿಗೆಗೆ ತಯಾರಿ, ಹೀಗೆ. ಎಲ್ಲವನ್ನೂ ಹೇಗೆ ವ್ಯವಸ್ಥಿತಗೊಳಿಸಬೇಕೆಂಬ ಗೊಂದಲ, ಸವಾಲು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

read more
ಲೂವ ಗ್ಯಾಲರಿಯೊಳಗಿನ ಕಲಾಲೋಕ…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಲೂವ ಗ್ಯಾಲರಿಯೊಳಗಿನ ಕಲಾಲೋಕ…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಮೊದಲ ನೋಟಕ್ಕೆ ಅತ್ಯಂತ ಮೃದುವಾದ ಮೆತ್ತನೆ ಹಾಸಿಗೆ ಮೇಲೆ ಮಲಗಿರುವ ಬೆತ್ತಲೆ ಮಹಿಳೆಯಂತೆ ಕಾಣಿಸುತ್ತದೆ. ಆದರೆ ಅದು ನಿಜವಾಗಿ ಪುರುಷನ ಆಕೃತಿ, ಇನ್ನಷ್ಟು ತೀವ್ರವಾಗಿ ಕಣ್ಣಾಡಿಸಿದಾಗ ವಾಸ್ತವವಾಗಿ ಅದು ಗಂಡು ಮತ್ತು ಹೆಣ್ಣಿನ ಲೈಂಗಿಕ ಅಂಗಗಳನ್ನು ಹೊಂದಿರುವ ಹರ್ಮಾಫ್ರೋಡಿಟಿಸ್ ದೇವ/ದೇವತೆಯ ಆಕೃತಿಯಾಗಿದೆ (ಹೆಲೆನಿಸ್ಟಿಕ್ ಕಂಚಿನ ರೋಮನ್ ನಕಲು).
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಮೂರನೆಯ ಭಾಗ ನಿಮ್ಮ ಓದಿಗೆ

read more
ಇಷ್ಟೊಂದ್‌ ಜನಾ.. ಎಲ್ಲಿಂದ ಬಂದೋರು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇಷ್ಟೊಂದ್‌ ಜನಾ.. ಎಲ್ಲಿಂದ ಬಂದೋರು: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ವಿಪರೀತ ಜನ, ಸಮಯದ ಅಭಾವ. ಎರಡು ಮೂರು ದಿನಗಳಾದರೂ ಈ ಅರಮನೆಯನ್ನು ಸುತ್ತಿನೋಡಬೇಕು. ವಿಧಿಯಿಲ್ಲದೆ ಸಾಧ್ಯವಾದಷ್ಟು ನೋಡುತ್ತಾ ಹೊರಟೆವು. ಇದರಲ್ಲಿ ಪ್ರತಿಯೊಬ್ಬರೂ ಎಲ್ಲಾ ಕಡೆ ನಿಂತುಕೊಂಡು ಫೋಟೋಗಳನ್ನು ಹಿಡಿಯುವ ಹಿಂಸೆ ಬೇರೆ. ಜೊತೆಯಲ್ಲಿದ್ದ ನಮ್ಮ ಬೆಂಗಳೂರಿನ ಮಹಿಳೆಯೊಬ್ಬರನ್ನು `ಅಲ್ಲಮ್ಮ ತಮ್ಮ ತಮ್ಮ ಮುಖಗಳನ್ನ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಇಲ್ಲಿಗೆ ಬರಬೇಕೆ?’ ಎಂದಾಗ, `ಅಲ್ಲಣ್ಣ ನಾವು ಇಲ್ಲಿಗೆ ಬಂದಿದ್ದೀವಿ ಅಂತ ಗೊತ್ತಾಗಬೇಕಲ್ಲ, ಜನರಿಗೆ’ ಎಂದರು.
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಎರಡನೇ ಭಾಗ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ