ಮೆಲ್ಲಗೆ ಗದರುವ ನನ್ನ ಅಪರ್ಣೇ…: ನಾಗರಾಜ ವಸ್ತಾರೆ ಬರಹ
ಸಮಾರಂಭದ ಬಳಿಕ ಇವಳ ಬದಿಯಲ್ಲಿ ನಾನು ಕಾರಿನತ್ತ ಸರಿಯುತ್ತಿರುವಾಗ ಮುಖ್ಯಮಂತ್ರಿಗಳ ಕಾರು ನಮ್ಮನ್ನು ಬಳಸಿತು. ಇವಳನ್ನು ನೋಡಿದ್ದೇ ಅವರು ಕಾರು ನಿಲ್ಲಿಸಲು ಹೇಳಿ, ಇಳಿದು ಅವತ್ತಿನ ನಿರೂಪಣೆಯನ್ನು ಹೊಗಳಿದರು. ಸುಮಾರು ಹತ್ತು ನಿಮಿಷ. ಸುಮ್ಮನೆ ಶ್ರೋತೃವಾದೆ. ಬೀಳ್ಕೊಡುವಾಗ- ಸರ್, ಇವರು ನನ್ನ ಹಸ್ಬೆಂಡ್ ಅಂತ ಪರಿಚಯಿಸಿದಳು.
ನೆನ್ನೆ ರಾತ್ರಿ ತೀರಿಕೊಂಡ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕುರಿತು ಅವರ ಪತಿ, ಕತೆಗಾರ ನಾಗರಾಜ ವಸ್ತಾರೆ ಬರೆದಿದ್ದ ಬರಹವೊಂದು ನಿಮ್ಮ ಓದಿಗೆ
ಶ್ರುತಿ ಬಿ.ಆರ್. ಗೆ ಲಭಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ‘ಯುವ ಪುರಸ್ಕಾರ’
ಚಿಕ್ಕಂದಿನಿಂದ ಅಮ್ಮ ತರೀಕೆರೆಯ ಸಾರ್ವಜನಿಕ ಗ್ರಂಥಾಲಯದಿಂದ ತಂದು ಕೊಡುತ್ತಿದ್ದ ಮಕ್ಕಳ ಪುಸ್ತಕಗಳನ್ನು, ಮನೆಗೆ ತರಿಸುತ್ತಿದ್ದ ಚಂಪಕ, ಬಾಲಮಂಗಳ ಮಾಸಿಕಗಳು, ಪ್ರಜಾವಾಣಿ ಮತ್ತು ಮಯೂರದಲ್ಲಿ ಬರುತ್ತಿದ್ದ ಮಕ್ಕಳ ಕತೆಗಳು, ಪುಟ್ಟಿ ರಾಮನ್ ಮುಂತಾದ ಕಾರ್ಟೂನ್ಗಳನ್ನು ನಾನು ನನ್ನ ಅಕ್ಕ ಪೈಪೋಟಿಯಲ್ಲಿ ಓದುತ್ತಿದ್ದೆವು, ಅದೇ ಪೈಪೋಟಿ ಮುಂದುವರೆದು ಸುಧಾದಲ್ಲಿ ಬರುತ್ತಿದ್ದ ಧಾರಾವಾಹಿಗಳು ಮತ್ತು ಹೊಸ ಪುಸ್ತಕಗಳನ್ನು ಮೊದಲು ಓದಲು ಜಗಳವಾಡುತ್ತಿದ್ದೆವು.
ಪಂ. ರಾಜೀವ ತಾರಾನಾಥರ ಬದುಕಿನ ಕೆಲವು ಪುಟಗಳು…
ಇನ್ನೊಮ್ಮೆ ಗುರುಗಳನ್ನು ಗರುಡನಿಗೆ ಹೋಲಿಸಿದ್ದರು. “ಆಕಾಶದಲ್ಲಿ ಗರುಡ ಒಂದೇ ಮೇಲೆ ಹಾರ್ತಾ ಇರುತ್ತದೆ. ಅದಕ್ಕೆ ತಾನು ಎಲ್ಲರಿಗಿಂತ ಮೇಲೆ ಹಾರ್ತೀನಿ ಅಂತಿಲ್ಲ ಅಥವಾ ಹಾಗೆ ಹಾರಬೇಕೆಂಬ ಸ್ಪರ್ಧೆಯೂ ಇಲ್ಲ. ಎಲ್ಲ ಹಕ್ಕಿಗಳಿಗಿಂತ ಮೇಲೆ ಹಾರೋದು ಅದರ ಸಹಜ ಗುಣ…
ಪಂಡಿತ್ ರಾಜೀವ ತಾರಾನಾಥರ ಸಂಗೀತ-ಜೀವನದ ಕುರಿತು ಕತೆಗಾರ್ತಿ ಸುಮಂಗಲಾ ಬರಹ
ಅಪ್ಪಯ್ಯ ಎಂದರೆ….: ಇಂದಿರಾ ಜಾನಕಿ ಎಸ್. ಶರ್ಮ ಬರಹ
ಒಂದುದಿನ ಅಪ್ಪಯ್ಯ ‘ಚಂದಮಾಮ’ ಪುಸ್ತಕ ಓದುತ್ತಿದ್ದಾಗ ಬಂದ ಪರಿಚಿತರೊಬ್ಬರು …… ನೀವೂ ಚಂದಮಾಮ ಓದ್ತೀರಾ…?” ಎಂದು ಆಶ್ಚರ್ಯದಿಂದ ಕೇಳಿದ್ದರು. ಆಗ ಅಪ್ಪಯ್ಯ …. ಯಾರ ಮನೆ ಹಾಳುಮಾಡುವುದು… ಎಂದು ಯೋಚಿಸುವುದಕ್ಕಿಂತ ಚಂದಮಾಮ ಓದುವುದೇ ಒಳ್ಳೆದಲ್ವೋ…..!” ಅಂತ ಹೇಳಿದ್ದರು.
ಲೇಖಕ-ಪ್ರವಚನಕಾರ-ಯಕ್ಷಗಾನ ಕಲಾವಿದರೂ ಆಗಿದ್ದ ದೇರಾಜೆ ಸೀತಾರಾಮಯ್ಯನವರ ಮಗಳು ಇಂದಿರಾ ಜಾನಕಿ ಎಸ್. ಶರ್ಮ ತಮ್ಮ ತಂದೆಯ ಕುರಿತು ಹಂಚಿಕೊಂಡ ಕೆಲವು ನೆನಪುಗಳು…
ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪುರಸ್ಕಾರ: ಸುಧಾ ಆಡುಕಳ ಬರಹ
ಹಿಜಾಬ್ ಧಾರಣೆಯ ವಿರುದ್ಧ ಇರಾನಿ ಮಹಿಳೆಯರೆಲ್ಲರೂ ಬಂಡೆದ್ದಿರುವ ವಿಷಯ ಇಡಿಯ ಜಗತ್ತಿಗೆ ತಿಳಿದಿದೆ. ಮೊಹಮ್ಮದಿ ಈ ಹೋರಾಟದ ಮುಂಚೂಣಿಯಲ್ಲಿರುವವರು. ‘ಮಹಿಳೆ – ಜೀವನ – ಸ್ವಾತಂತ್ರ್ಯ’ ಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು ತಮ್ಮ ಹೋರಾಟವನ್ನು ಸಂಘಟಿಸಿದರು. ಮಹಿಳೆಯರ ಮೇಲೆ ನಡೆಯುತ್ತಿರುವ ಎಲ್ಲ ರೀತಿಯ ದೌರ್ಜನ್ಯಗಳು ನಿಲ್ಲಬೇಕು.
ಈ ಸಲದ ನೊಬೆಲ್ ಶಾಂತಿ ಪುರಸ್ಕೃತ ನರ್ಗೆಸ್ ಮೊಹಮ್ಮದಿ ಅವರ ಕುರಿತು ಸುಧಾ ಆಡುಕಳ ಬರಹ
ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ
ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ
ಜಿ. ಎಚ್. ನಾಯಕರ ನೆನಪು: ಡಾ. ಎಲ್.ಸಿ. ಸುಮಿತ್ರಾ ಬರಹ
ಮೀರಕ್ಕ ಕೂಡ ಯಾವಾಗಲೂ ನೂಲಿನ ಸೀರೆ ಧರಿಸುವವರು. ನಾವು ಎಂಎ ಓದುತ್ತಿದ್ದಾಗ ಮಾನಸಗಂಗೋತ್ರಿಯ ಬಯಲು ರಂಗಮಂದಿರದ ಆವರಣದಲ್ಲಿ ನಡೆದ ಯಾವುದೋ ಕಾರ್ಯಕ್ರಮ ನೋಡಲು ಮೀರಕ್ಕ, ಮಗಳು ಕೀರ್ತಿಯೊಡನೆ ಬಂದಿದ್ದರು. ಅವರುಟ್ಟ ರೇಷ್ಮೆ ಸೀರೆಯನ್ನು ಚೆನ್ನಾಗಿದೆಯೆಂದು ನಮ್ಮ ಗುಂಪಿನಲ್ಲಿದ್ದವರು ಯಾರೋ ಹೇಳಿದಾಗ ಕೀರ್ತಿ ತಕ್ಷಣ ಇದು ಅಮ್ಮನಿಗೆ ಯಾರೋ ಪ್ರಸೆಂಟ್ ಮಾಡಿದ್ದು ಅಪ್ಪ ಬರೀ ಕಾಟನ್ ಸೀರೆ ಕೊಡಿಸ್ತಾರೆ ಅಂತ ತಮಾಷೆಗೆಂಬಂತೆ ಹೇಳಿದಳು.
ನೆನ್ನೆಯಷ್ಟೇ ಅಗಲಿದ ಹಿರಿಯ ವಿಮರ್ಶಕ ಜಿ. ಎಚ್. ನಾಯಕರ ಕುರಿತು ಡಾ. ಎಲ್.ಸಿ. ಸುಮಿತ್ರಾ ಹಂಚಿಕೊಂಡಿದ್ದ ನೆನಪುಗಳು ನಿಮ್ಮ ಓದಿಗೆ
ಅಕ್ಷರದ ಮೂಲಕ ಚಿರಂಜೀವಿಯಾಗಿರುವ ಶ್ರೀನಿವಾಸ ವೈದ್ಯ
ನವೋದಯಕಾಲದ ಲೇಖಕರು ಎದುರಿಸುವ ಎಲ್ಲಬಗೆಯ ವಿಪ್ಲವ ಮತ್ತು ಆತಂಕಗಳನ್ನು ಒಂದು ಕುಟುಂಬದ ಕಥೆಯಮೂಲಕ ಹೇಳುವ ಶ್ರೀನಿವಾಸ ವೈದ್ಯರ ಕ್ರಿಯಾಶೀಲತೆಯನ್ನು ಇಲ್ಲಿ ಕಾಣಬಹುದಾಗಿದೆ. ಅನೇಕ ಸಲ ಅನಂತಮೂರ್ತಿಯವರ ಮೌನಿಯಲ್ಲಿ ಈ ಕಾದಂಬರಿಯ ನೆರಳು ಬಿದ್ದಿರಬಹುದೇ ಅನಿವುವಷ್ಟು ಪ್ರಭಾವಶಾಲಿಯಾಗಿದೆ. ಬೇರು ಕಳೆದುಕೊಂಡ ವ್ಯಕ್ತಿ ಹೊಸ ಬೇರಿನೊಂದಿಗೆ ಕಂಡುಕೊಳ್ಳುವ ಆರ್ಥಿಕ ಭದ್ರತೆ ಮತು ಸಾಮಾಜಿಕ ಸ್ಥಾನಮಾನವನ್ನೂ ಪಡೆದುಕೊಳ್ಳುವ ಕ್ರಿಯೆ ಬ್ರಿಟಿಷರಿಂದ ಭಾರತಕ್ಕೆ ಸಿಗುವ ಸ್ವಾಂತಂತ್ರ್ಯದ ಜೊತೆಗೆ ಹಾಸುಹೊಕ್ಕಾಗಿದೆ.
ಇಂದು ತೀರಿಹೋದ ಶ್ರೀನಿವಾಸ ವೈದ್ಯರ ಕೃತಿಗಳ ಕುರಿತು ನಾರಾಯಣ ಯಾಜಿ ಬರಹ
ಶ್ರೀನಿವಾಸ ವೈದ್ಯರೆಂದರೆ….
ಅವರು ಈಸಿದಷ್ಟೂ, ಓದುಗರಾದ ನಾವು ಇದ್ದು ಜಯಿಸುತ್ತೇವೆ. ಅಂತರಂಗ-ಬಹಿರಂಗ, ವ್ಯಕ್ತಿ-ಸಮಾಜ ಎಂದೆಲ್ಲ ಕಾಲ್ಪನಿಕ ಗಡಿರೇಖೆ ಹಾಕಿಕೊಳ್ಳದೇ ಒಟ್ಟಂದದಲ್ಲಿ ಸಮಾಜವನ್ನು ತುಂಬಾ ಅಚ್ಛೆಯಿಂದ, ಅಷ್ಟೇ ಅಚ್ಚರಿಯಿಂದ ಅನುಭವಿಸಿದ ಈ ಜೀವಿಯ ಬರವಣಿಗೆಯಲ್ಲಿ ಬದುಕು ತನ್ನೆಲ್ಲ ನೆಳಲು ಬೆಳಕುಗಳೊಂದಿಗೆ ಬಸಿಯುತ್ತದೆ. ಇದು ಹೀಗೇಕೆ ಎಂದೆಲ್ಲ ಕೇಳದೇ, ಅರೆ ಇದು ಹೀಗಿದೆಯಲ್ಲ ಎಂದು ಸೋಜಿಗದಿಂದ ಇರವನ್ನು ಅನುಭವಿಸುವ ಅರಿವಿನ ದಾರಿ ಇದು. `ಅರಿವೇ ಗುರು’ ಎಂದರೆ, `ಹೌದ್ರೀ, ಆದರೆ ಅದೂ ಅಲ್ಲಲ್ಲಿ ಸ್ವಲ್ಪ ಹರಿದಿರ್ತದೆ’ ಎಂದು ಗಹಗಹಿಸಿ ನಗುವ ವೈದ್ಯರ ವಿನೋದ ಅಪ್ಪಟ.









