ಇರಾನಿಗೂ ಹಿಂದೂಸ್ತಾನಕ್ಕೂ ಅಂಟಿರುವ ಸಾವಿರಾರು ವರ್ಷಗಳ ನಂಟು: ಶೇಷಾದ್ರಿ ಗಂಜೂರು ಬರಹ
ಗಹನವಾದ ವಿಚಾರಗಳನ್ನು ಪ್ರಸ್ತಾಪಿಸುವಾಗ ಅವಕ್ಕೆ ಭಾರತದೊಂದಿಗೆ ಸಂಬಂಧ ಕಲ್ಪಿಸುವುದನ್ನು ಪರ್ಷಿಯನ್ ಕಾವ್ಯಪರಂಪರೆಯಲ್ಲಿ ನಾವು ಮತ್ತೆ ಮತ್ತೆ ಕಾಣಬಹುದು. ಉದಾಹರಣೆಗೆ, ಫಿರ್ದೂಸಿಯ ಒಂದು ಶತಮಾನದ ನಂತರ ಬಂದ ನಿಜ಼ಾಮಿ ಗಂಜಾವಿಯ ಹಫ್ತ್ ಪೇಕಾರ್ ಕಾವ್ಯದಲ್ಲಿ ಭಾರತೀಯ ರಾಜಕುಮಾರಿಯೊಬ್ಬಳು ಆ ಕಥನದ ನಾಯಕ ಬೆಹ್ರಾಮನಿಗೆ ಆತ್ಮ ಸಂಯಮದ ಮಹತ್ವವನ್ನು ಹೇಳಿಕೊಡುತ್ತಾಳೆ.
ಇರಾನಿಗೂ ಹಿಂದೂಸ್ತಾನಕ್ಕೂ ಇರುವ ನಂಟಿನ ಕುರಿತು ಶೇಷಾದ್ರಿ ಗಂಜೂರು ಬರಹ
ಯುಗಾದಿ ಅಂದ್ರೆ ನಂಗಿಷ್ಟ: ರೂಪಶ್ರೀ ಕಲ್ಲಿಗನೂರ್ ಬರಹ
ಚೈತ್ರ ಮಾಸ ಅಂದರೆ ಫಕ್ಕನೆ ನೆನಪಾಗೋದು ಹಸಿರು, ಯಾಕಂದ್ರೆ ಚಳಿಗಾಲದಲ್ಲಿ ಬರಡಾಗಿ ನಿಂತಿದ್ದ ಗಿಡ, ಮರಾ, ಬಳ್ಳಿಗಳು ಚಿಗುರೊ ಕಾಲ. ಹಾಗಾಗಿ ಊರ ತುಂಬ, ಗಿಡ-ಮರಗಳೆಲ್ಲ ಹೂ-ಹಸಿರು ಹೊದ್ದು ಚಂದವಾಗಿ ನಗುತ್ತ ನಿಂತಿರುವುದನ್ನ ನೋಡೋದೇ ಚಂದ. ಮೈತುಂಬಾ ಹೂ ಹೊತ್ತು ನಿಲ್ಲುವ ಮರಗಳನ್ನು ನೋಡುವಾಗಲೆಲ್ಲ, ವರ್ಷದ ಪ್ರತಿ ಮಾಸವೂ ಚೈತ್ರ ಮಾಸವೇ ಆಗಿದ್ದರೆ ಎಷ್ಟು ಚಂದ ಅಲ್ಲವೇ ಅನ್ನಿಸುತ್ತೆ.
ಚೈತ್ರಮಾಸದ ಯುಗಾದಿಯ ಕುರಿತು ರೂಪಶ್ರೀ ಕಲ್ಲಿಗನೂರ್ ಬರಹ
ಸರ್ಕಲ್ ಆಫ್ ಲೈಫ್- ಬಾಲ್ಯ, ಹದಿಹರೆಯ, ವೃದ್ಧಾಪ್ಯಗಳ ಆಲಿಂಗನ: ಡಾ. ರಾಜೇಂದ್ರಕುಮಾರ್ ಕೆ ಮುದ್ನಾಳ್ ಬರಹ
ಮಾತೇ ಮಾಣಿಕ್ಯ ಎನ್ನುವವರಿಗೆ ಮಾತು ಮಾಣಿಕ್ಯವಲ್ಲ ಮೌನ ಮಾಣಿಕ್ಯ ಎಂಬ ಸೂತ್ರಕ್ಕೆ ತಕ್ಕಂತೆ ಮಕ್ಕಳು ಅಣಿಯಾಗಿದ್ದರು. ಬೊಂಬೆ ಆಟದಲ್ಲಿ ಪ್ರಾವಿಣ್ಯತೆ ಪಡೆದ ಕ್ರಿಯಾಶೀಲರು ಗೊಂಬೆಯನ್ನು ಬಹಳ ಅಮೋಘವಾಗಿ ಓಡುವುದನ್ನು, ನಡೆಯುವುದನ್ನು, ಹಾರಾಡುವುದನ್ನು, ನಿಧಾನಗತಿಯ ಚಲನೆಯನ್ನು, ಬೈಕ್ ಸವಾರಿ ಮಾಡುವುದನ್ನು, ಕನಸು ಕಾಣುವ ವೈಶಿಷ್ಟ್ಯತೆಯನ್ನು ಅದ್ಭುತವಾಗಿ ರಚಿಸಿಕೊಂಡಿದ್ದರು. ಹದಿಹರೆಯದಲ್ಲಿರುವಾಗ ಮನುಷ್ಯನ ಆಸೆ ಆಕಾಂಕ್ಷೆಗಳು ಕೇವಲ ಮಾತುಗಳಲ್ಲಿಲ್ಲ ಭಾವನೆಗಳಲ್ಲಿವೆ.
ಕಲ್ಬುರ್ಗಿ ನಾಟಕೋತ್ಸವದಲ್ಲಿ ಪ್ರದರ್ಶನಗೊಂಡ ‘ಸರ್ಕಲ್ ಆಫ್ ಲೈಫ್’ ಪಪೇಟ್ ಶೋ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ
ಬಾಪುವಿನ ನೆರಳಲ್ಲಿ ಬೆಳಕು ಕಾಣಿಸುವ ‘ನಮ್ಮೊಳಗೊಬ್ಬ ಗಾಂಧಿ’ಯ ಸತ್ಯಾನ್ವೇಷಣೆ: ಡಾ.ರಾಜೇಂದ್ರಕುಮಾರ್ ಕೆ ಮುದ್ನಾಳ್
ಮಹಿಳೆಯರ ಬದುಕು ಸ್ವಾವಲಂಬಿಯಾಗಿರಬೇಕೆಂದು ಶಕ್ತಿದಾಯಕವಾಗಿ ಇರಬೇಕೆಂದು ಗಾಂಧಿ ಬಯಸಿದ್ದರು ಎಂಬುದನ್ನು ಮೂಕಮ್ಮ ಮತ್ತು ರಮಾ ಪಾತ್ರದ ಮೂಲಕ ನಾಟಕಕಾರರು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ರಮಾ ವಿಧವೆಯಾಗಿದ್ದರು ಮತ್ತೊಬ್ಬನನ್ನು ಪ್ರೀತಿಸಿ ಮರು ಮದುವೆ ಮಾಡಿಕೊಳ್ಳುವ ಉತ್ಸಾಹವನ್ನು ತೋರಿಸಿದ್ದು ಕೂಡ ಗಾಂಧಿ ವಿಚಾರಧಾರೆಗಳಿಗೆ ಮನಸೋತು. ರಮಾ ಮತ್ತು ರಹಿಮರ ಪ್ರೇಮ ಭಾವೈಕ್ಯತೆಯ ಪ್ರತೀಕವಾಗಿ ಹೊರಹೊಮ್ಮಿದೆ.
‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ
ಮುನ್ನೂರು ರಾಮಾಯಣಗಳು ಮತ್ತು…: ಸುಕನ್ಯಾ ಕನಾರಳ್ಳಿ ಬರಹ
ಶತಮಾನಗಳ ಅವಧಿಯಲ್ಲಿ ಈ ಭಾಷಾಪಟ್ಟಿಯಲ್ಲಿರುವ ಕೆಲವಂತೂ ಒಂದಕ್ಕಿಂತ ಹೆಚ್ಚು ರಾಮನ ಕಥೆಗಳನ್ನು ಹೊಮ್ಮಿಸಿವೆ. ಸಂಸ್ಕೃತ ಒಂದರಲ್ಲೇ ಕಾವ್ಯ, ಪುರಾಣಗಳ ರೂಪದಲ್ಲಿ ಇಪ್ಪತ್ತೈದಕ್ಕಿಂತಲೂ ಹೆಚ್ಚು ರಾಮಕಥೆಗಳಿವೆ. ಶಾಸ್ತ್ರೀಯ ಮತ್ತು ಜಾನಪದೀಯ ನೆಲೆಗಳೆರಡರಲ್ಲೂ ನಾಟಕ, ನೃತ್ಯ-ನಾಟಕ ಮತ್ತು ಇತರ ರೂಪಗಳನ್ನು ಸೇರಿಸಿದರೆ ಅದರ ಸಂಖ್ಯೆ ಇನ್ನೂ ಹೆಚ್ಚು. ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಸಂಸ್ಕೃತಿಗಳಲ್ಲಿ ಇರುವ ಎಲ್ಲ ಶಿಲ್ಪ, ಉಬ್ಬುಶಿಲ್ಪ, ಮುಖವಾಡ, ನೆರಳಿನಾಟ, ಮತ್ತು ಚಕ್ಕಳಗೊಂಬೆ ಪ್ರದರ್ಶನಗಳನ್ನೂ ಸೇರಿಸಬೇಕು.
ಎ. ಕೆ. ರಾಮಾನುಜನ್ನರ ಸಂಶೋಧನಾ ಲೇಖನ ‘ಮುನ್ನೂರು ರಾಮಾಯಣಗಳು, ಐದು ಉದಾಹರಣೆಗಳು ಮತ್ತು ಅನು-ವಾದದ ಬಗೆಗಿನ ಮೂರು ಚಿಂತನೆಗಳು’ ಕುರಿತು ಸುಕನ್ಯಾ ಕನಾರಳ್ಳಿ ಬರಹ
ವಿಫುಲ ರೂಪ ಧಾರಿಣಿ ಹುಡುಕಾಡುತಿದೆ ಮನುಷ್ಯ ಪ್ರೀತಿಗಾಗಿ….: ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ
ಇಂದಿನ ಆಧುನಿಕ ತಂತ್ರಜ್ಞಾನ ಕೃತಕ ಬುದ್ಧಿಮತ್ತೆಯಲ್ಲಿ ನಿಸರ್ಗದ ಚೈತನ್ಯವನ್ನು ನೋಡುವುದನ್ನು ಮರೆತುಬಿಟ್ಟಿದ್ದೇವೆ. ಗುಬ್ಬಿ ಗೂಡು ಕಟ್ಟುವುದನ್ನು,ಸೂರ್ಯೋದಯ ಚಂದ್ರೋದಯಗಳ ನಯನ ಮನೋಹರ ದೃಶ್ಯವನ್ನು, ಕರು ಆಕಳ ಕೆಚ್ಚಲನ್ನು ಹುಡುಕುವ ಹೊತ್ತನ್ನು ಮರೆತುಬಿಟ್ಟಿದ್ದೇವೆ. ಆಕಾಶದಿಂದ ಜಾರುವ ಮಳೆ, ಕಾಮನಬಿಲ್ಲು, ಇಬ್ಬನಿಯ ರೂಪ, ಪ್ರೀತಿ -ವಿರಹಗಳ ನಡುವಿನ ಬಾಂಧವ್ಯ, ಮೌನ ರಹಸ್ಯಗಳ ನಡುವಿನ ವಿಸ್ಮಯ. ಇವುಗಳ ನಡುವಿನ ಪ್ರೀತಿಯನ್ನು ಗಳಿಸುವ, ಬೆಳೆಸುವ, ಉಳಿಸುವ ದಾಹ ನಮ್ಮದಾಗಲಿ ಎಂಬ ಆಶಯ ವಿಫುಲ ರೂಪ ಧಾರಣಿಯದು. ಏಕೆಂದರೆ ‘ದಾರಿ ನೂರಾರಿವೆ ಬಿಡುಗಡೆಯ ಬೆಳಕಿನ ಅರಮನೆಗೆ’ ಎಂಬ ಸಾಲುಗಳು ನಮ್ಮಲ್ಲಿ ಪ್ರೀತಿಯ ಬುಗ್ಗೆ ಚಿಮ್ಮುವಂತಾಗಲಿ.
ಜಿ.ಎಸ್. ಶಿವರುದ್ರಪ್ಪನವರ ಕವಿತೆಗಳನ್ನು ಆಧರಿಸಿದ ‘ವಿಫುಲ ರೂಪ ದಾರಿಣಿ’ ಕಾವ್ಯ ಅಭಿನಯದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ
How to use:Ledger Live application:on desktop
Ledger Live Mobile Version Features and Benefits Ledger live mobile version Upgrade your cryptocurrency management with the Ledger Live mobile version. Designed for convenience, this app provides instant access to your assets right from your smartphone. With a...
ಸರ್ಕೀಟ್: ದಿಕ್ಕು ತೋಚದ ಬದುಕಿನ ಸಿಕ್ಕುಗಳು: ಶರೀಫ್ ಕಾಡುಮಠ ಬರಹ
ಒಂದು ಮಗುವಿನ ವರ್ತನೆ ಅಸಹಜವಾಗಿ ಕಾಣಿಸುವಂತೆ, ಪುಟ್ಟ ಹುಡುಗನೊಬ್ಬ ಈ ಪರಿ ನಟಿಸುವುದು ಖಂಡಿತ ಸಾಮಾನ್ಯ ಸಂಗತಿಯಲ್ಲ. ಚಿತ್ರದುದ್ದಕ್ಕೂ ಜೆಫ್ರನ್ ಎಷ್ಟು ತೀವ್ರವಾಗಿ ಕಾಡುತ್ತಾನೆ ಎಂದರೆ, ಆತನ ಚೇಷ್ಟೆ, ಅಕ್ವೇರಿಯಂ ಒಡೆದು ಹಾಕುವ ದೃಶ್ಯ, ಟ್ರೇ ಪೂರ್ತಿ ಮೊಟ್ಟೆ ಎತ್ತಿಕೊಂಡು ಹೋಗಿ ಟೆರೇಸ್ ಮೇಲೆ ಕೂತು ಹಾಯಾಗಿ ಕೆಳಗೆ ಎಸೆಯುವ ದೃಶ್ಯ, ತಾನಿಚ್ಛಿಸಿದ್ದು ಈ ಕ್ಷಣವೇ ಬೇಕು ಎಂದು ಬಿಡದೇ ಹಠ ಮಾಡಿ ಕೂಗಾಡುವ ದೃಶ್ಯ, ಅವನ ಮಿತಿಯಿಲ್ಲದ ತರಲೆಗಳೆಲ್ಲವೂ ನಮ್ಮ ಸಹನೆಯನ್ನೂ ಮೀರಿಸುವಷ್ಟು.
ಮಲಯಾಳಂನ “ಸರ್ಕೀಟ್” ಚಿತ್ರದ ಕುರಿತು ಶರೀಫ್ ಕಾಡುಮಠ ಬರಹ
‘ಕಾಲ ನದಿಯಲಿ ನಮ್ಮ ಬಾಳ ದೋಣಿ’: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ಈ ಮೇಲು ಕೀಳುಗಳ ಕೀಲುಗೊಂಬೆ ಆಟದಲಿ ಜೊತೆಗಿದ್ದು ಬದುಕನ್ನು ಸಹ್ಯ ಮಾಡಿದ್ದಕ್ಕೆ ದಾರಿಯ ಪ್ರಯಾಣದ ಸಂಭ್ರಮವನ್ನು ಹೆಚ್ಚಿಸಿದ್ದಕ್ಕೆ ಯಾರಿಗೋ ಧನ್ಯವಾದ ಹೇಳಬೇಕು. ನನ್ನ ಅಹಂಗಳಲ್ಲಿ ಕುಳಿತು ಯಾರಿಗೋ ಚುಚ್ಚಿ ಮಾತಾಡಿದ್ದ ನೆನಪಾಗಿ ಸಾರಿ ಕೇಳಬೇಕು. ಸುಮ್ಮನೆ ಇಲ್ಲದ ಅವಸರವನ್ನು ಆರೋಪಿಸಿಕೊಂಡು ಬೇರುಗಳನ್ನು ಮರೆತಿದ್ದೇನೆ. ಹತ್ತಿರ ಕೂತು ಆ ಜೀವದ ಹೃದಯದ ಮಾತುಗಳನ್ನು ಕೇಳಿಸಿಕೊಳ್ಳುವುದಿತ್ತು. ಸಂಜೆಗಣ್ಣಿನ ನಿರೀಕ್ಷೆಯ ನೋಟದ ಅಪ್ಪ ಅಮ್ಮ ಇನ್ನೂ ಊರಿನ ಮನೆಯಲ್ಲಿದ್ದಾರೆ. ಹೇಗಾದರೂ ಮಾಡಿ ಈ ಸಲವಾದರೂ ಜೊತೆಗೆ ಕರೆದುಕೊಂಡು ಬರಬೇಕಿತ್ತು…
ಹೊಸ ವರ್ಷದ ಆಚರಣೆಯ ಈ ಹೊತ್ತಿಗೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ








