ಒಮ್ಮೆ ಹಚ್ಚಿಕೊಂಡರೆ….: ಮಾಲಾ ಮ. ಅಕ್ಕಿಶೆಟ್ಟಿ ಬರಹ
ಎರಡು ದಿನದ ವಸ್ತಿಯ ನಂತರ ಮನೆಗೆ ತಲುಪುವವರೆಗೂ ಮನಸ್ಸು ನಿಯಂತ್ರಣದಲ್ಲಿರಲಿಲ್ಲ. ಯಾವ ಗಿಡಗಳು ಹೋದವು? ಆಕೆಯಂತೂ ಎಲ್ಲವೂ ಅಂದಳು, ಕೆಲವಾದರೂ ಉಳಿಯಬಾರದೇ ಎಂದು ಮನಸ್ಸು ಪ್ರಾರ್ಥಿಸುತ್ತಿತ್ತು. ಅಂದು ಮನೆಯ ತಲುಪುವ ಹಾದಿಗುಂಟ ಬರುವಾಗ ನೋಡಿದರೆ ಎಲ್ಲವೂ ಬಟಾ ಬಯಲು, ಎರಡೂ ಕಡೆ ಎಲ್ಲ ಗಿಡಗಳನ್ನು ಕಿತ್ತಿದ್ದಾರೆ. ಇನ್ನು ನಮ್ಮದೇನು ಎನ್ನುತ್ತಾ ನಮ್ಮ ಮನೆಯ ಮುಂದೆ ಬಂದಾಗ ಎಲ್ಲ ಗಿಡಗಳು ಹೋಗಿ ಕೇವಲ ಎರಡು ಗಿಡ ಉಳಿದಿದ್ದವು.
ಮಾಲಾ ಮ. ಅಕ್ಕಿಶೆಟ್ಟಿ ಬರಹ ನಿಮ್ಮ ಓದಿಗೆ
ರಾಜ್ಕುಮಾರ್ ಅಂದ್ರ ಏನಂದ್ಕಂಡೆ?: ಎಂ. ಜವರಾಜ್ ಹೊಸ ಕಾದಂಬರಿಯ ಆಯ್ದ ಭಾಗ
ಪಂಚಾಯ್ತಿ ಆಫೀಸ್ ಮಗ್ಗುಲು ಬೀದಿಲಿದ್ದ ಕುಂಟ ಸಿದ್ದಪ್ಪನ ಮನೆಯ ಅಂಗಳದಲ್ಲಿ ಒಂದಷ್ಟು ಜನ ಮಾತಾಡ್ತ ನಿಂತಿದ್ದರು. ಅಲ್ಲಿಗೆ ನಾಕಾರು ಪೇಪರು ಬರುತ್ತಿದ್ದವು. ಕುಂಟ ಸಿದ್ದಪ್ಪ ಬಿಳಿಪಂಚೆ ಬಿಳಿ ಶರ್ಟು ಹಾಕೊಂಡು ಕ್ರಾಪ್ ತಲೆ ಬಾಚ್ಕೊಂಡು ಕಾಲಿನ ಮೇಲೆ ಕಾಲು ಹಾಕಿಕೊಂಡು “ಇದು ಗೋಕಾಕ್ ಚಳುವಳಿ ಅಂತ. ಅವ್ರೊಬ್ಬ ದೊಡ್ ಕವಿ. ಅವ್ರು ಸರ್ಕಾರಕ್ಕೆ ಬರ್ದ ಪತ್ರನ ಇಟ್ಕೊಂಡು ನಡಿತಿರ ಹೋರಾಟ ಇದು. ಏಯ್ ನೋಡ್ರಪ್ಪ, ಬಾಯಿಲ್ಲಿ” ಅಂತ ಕರೆದು, “ನೀನು ಐದ್ನೆ ಕ್ಲಾಸಾ? ನಾಕ್ನೆ ಕ್ಲಾಸಾ?” ಅಂದ. ನಾನು, ʼಹುʼ” ಎನ್ನುವವನಂತೆ ತಲೆದೂಗಿದೆ. “ಹೌದಾ? ಹೋಗು, ಇನ್ಮೇಲ ಇಂಗ್ಲಿಸ್ ಗಿಂಗ್ಲಿಸ್ ಓದಂಗಿಲ್ಲ, ಬರೀ ಕನ್ನಡ. ನಿನ್ತವು ಇಂಗ್ಲಿಸ್ ಬುಕ್ಸ್ ಇದ್ರ ತೂದು ಬಿಸಾಕಿ ಕನ್ನಡ ಇಟ್ಗ” ಅಂದ. ಅಲ್ಲೊಬ್ಬ ಕೇಳ್ತಿದ್ದವನು “ಇದ್ಕ ರಾಜ್ಕುಮಾರ್ ಯಾಕ್ ಮದ್ಯಕ್ ಬಂದ?” ಅಂತ ಕೇಳಿದ.
ಎಂ. ಜವರಾಜ್ ಹೊಸ ಕಾದಂಬರಿ “ಪೋಸ್ಟ್ಮ್ಯಾನ್ ಗಂಗಣ್ಣ” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ
ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು ಅಥವಾ ಮನೆಯ ಜಂತಿ ಕಾಣುತ್ತ ಸುಮ್ಮನಿರುತ್ತಿದ್ದಳು....
ಸುಂದರ ಕಾಡಿನ ರೋಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ
ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು
ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ
ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ
ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ
ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ
ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ
ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…
ಭರವಸೆಯ ಬುತ್ತಿ, ಶಾಂತಿದೂತೆ – ಜೇನ್ ಗುಡಾಲ್: ಕ್ಷಮಾ ವಿ.ಭಾನುಪ್ರಕಾಶ್ ಬರಹ
ಸಂಶೋಧನೆಗಳಿಗಾಗಿ ಸೆರೆಯಲ್ಲಿರುವ ಪ್ರಾಣಿಗಳ ಆರೈಕೆಯ ಬಗ್ಗೆ, ವನ್ಯಜೀವಿಗಳ ಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ವಿರುದ್ಧ ತಮ್ಮ ಸಂಸ್ಥೆಯ ಮೂಲಕ ಜೇನ್ ವಿಶ್ವಮಟ್ಟದಲ್ಲಿ ಪ್ರಭಾವಿ ಹೆಸರಾಗಿದ್ದು, ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ. ಜೇನ್ ಗುಡಾಲ್ ಇನ್ಸ್ಟಿಟ್ಯೂಟ್ ನ ‘ರೂಟ್ಸ್ ಆಂಡ್ ಶೂಟ್ಸ್’ ಎಂಬ ಶಾಖೆಯು ಯುವಪೀಳಿಗೆಯನ್ನು ಪರಿಸರ ರಕ್ಷಣೆಯ ನಿಜವಾದ ಸವಾಲುಗಳಿಗೆ ಸಿದ್ಧ ಪಡಿಸುವೆಡೆಗೆ, ಪರಿಸರದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳುವ ಕಡೆಗೆ ಅನೇಕ ಯೋಜನೆಗಳ ಮುಖಾಂತರ ಮಾರ್ಗದರ್ಶನ ನೀಡುತ್ತಿದೆ.
ಇತ್ತೀಚ್ಚೆಗೆ ತೀರಿಕೊಂಡ ವಿಜ್ಞಾನಿ ಜೇನ್ ಗುಡಾಲ್ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ ನಿಮ್ಮ ಓದಿಗೆ
ನಮ್ಮನೆಯ ದೀಪಾವಳಿ…: ರೂಪಶ್ರೀ ಕಲ್ಲಿಗನೂರ್ ಬರಹ
ಕನಿಷ್ಟ ಎರಡು ವಾರಗಳ ಹಿಂದಿನಿಂದ ಕೆಲಸ ಆರಂಭಿಸಿರುತ್ತಿದ್ದ ಅಮ್ಮ, ದೀಪಾವಳಿ ಬಟ್ಟೆ ಶಾಪಿಂಗಿಗೆ ಬಂದಿದ್ದು ಕಡಿಮೆಯೇ. ಅಕ್ಕ-ನಾನು ಆಯ್ದ ಬಟ್ಟೆಗಳು ಅವರಿಗೆ ಯಾವಾಗಲೂ ಖುಷಿಯೇ. ಹಾಗಾಗಿ ನೀವೇ ಆರಿಸಿತಂದುಬಿಡಿ ಅಂತ ನಮ್ಮೆಲ್ಲರನ್ನೂ ಕಳಿಸಿಬಿಡುತ್ತಿದ್ದರು. ಹಾಗಾಗಿ ನಮ್ಮದೆಲ್ಲ ಬಟ್ಟೆ ಕೊಂಡಾದ ಮೇಲೆ, ಅಮ್ಮನಿಗೆಂದು ಚಂದದ ಸೀರೆ ಆರಿಸುವ ಜವಾಬ್ದಾರಿ ನಮ್ಮಗಳ ಮೇಲಿರುತ್ತಿತ್ತು. ಅಪ್ಪನೂ, ನಾವೂ ಎಲ್ಲರೂ ಸೇರಿ ಅಮ್ಮನಿಗೆ ಒಪ್ಪಬಹುದಾದ ಸೀರೆಯನ್ನು ಬಹಳ ಕುತೂಹಲದಿಂದ ಆರಿಸುತ್ತಿದ್ದೆವು. ದೀಪಾವಳಿಯ ಆಚರಣೆಯ ಕುರಿತು ರೂಪಶ್ರೀ ಕಲ್ಲಿಗನೂರ್ ಬರಹ









