Advertisement

ಸಂಪಿಗೆ ಸ್ಪೆಷಲ್

ಕಳೆದ ವರ್ಷದ ಹಲವು ಬಣ್ಣಗಳು..: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಕಳೆದ ವರ್ಷದ ಹಲವು ಬಣ್ಣಗಳು..: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಐಸ್‌ಕ್ಯಾಂಡಿ ತೆಗೆದುಕೊಳ್ಳಬೇಕೆಂಬ ಯೋಚನೆ ಮೊದಲು ಬಂದದ್ದು ಅಣ್ಣನಿಗೆ. ಹೋಗಿ ನಿಂತ ನಾವು ಮೂರು ಐಸ್‌ಕ್ಯಾಂಡಿ ಕೊಡಲು ಹೇಳಿದೆವು. ನನಗೆ ಆಮೇಲೆಯೇ ಹೊಳೆದದ್ದು, ಮನೆಯಲ್ಲಿ ಅಮ್ಮ ಇದ್ದಾಳೆ. ಅಮ್ಮನಿಗೆಂದು ಇನ್ನೊಂದು ಐಸ್‌ಕ್ಯಾಂಡಿ ಕೊಡಲು ಹೇಳಿದೆ. ನಾನು ಎರಡು ಕೈಗಳಲ್ಲಿಯೂ ಐಸ್‌ಕ್ಯಾಂಡಿ ಹಿಡಿದು ಹೊರಟೆ. “ಮನೆ ಮುಟ್ಟುವಷ್ಟರಲ್ಲಿ ಅದು ಕರಗಿಹೋಗಿರುತ್ತದೆ. ಬೇಡ” ಎಂದು ಹೇಳಿದ ಅಪ್ಪನ ಮಾತು ನನ್ನ ಕಿವಿಯನ್ನೇ ಹೊಕ್ಕಿರಲಿಲ್ಲ.
೨೦೨೩ನೇ ವರ್ಷ ಬದುಕಿಗೆ ಹಚ್ಚಿದ ಹಲವು ಬಣ್ಣಗಳ ಕುರಿತು ವಿಶ್ವನಾಥ ಎನ್.‌ ನೇರಳಕಟ್ಟೆ ಬರಹ

read more
ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ನಮ್ಮನ್ನು ನಾವು ತಿದ್ದಿಕೊಳ್ಳುವುದೇ ಹೊಸತನ: ಕೀರ್ತನ ಎಂ. ಬರಹ

ಈಗಿನ ಓಡುವ ಕಾಲದಲ್ಲಿ ಸಂಕಲ್ಪ ಮಾಡಿದರೆ ಸಾಲದು ದೃಢ ಸಂಕಲ್ಪ ಮುಖ್ಯ. ಅದನ್ನು ಪಾಲಿಸುವ ಅನುಸರಿಸುವ ಏಕ ಮನಸ್ಥಿತಿ ಮುಖ್ಯ. ಅಂದುಕೊಂಡಿದ್ದನ್ನು ಮಾಡಿ ಸಾಧಿಸುತ್ತೇನೆ ಎನ್ನುವ ಗಟ್ಟಿ ಮನಸ್ಸು, ಹಟ, ಛಲ ಮುಖ್ಯ. ಅದೆಲ್ಲವೂ ನಮ್ಮನ್ನು ಒಳ್ಳೆಯ ಮಾರ್ಗದಲ್ಲಿ ಕರೆದುಕೊಂಡು ಹೋಗುವುದರಲ್ಲಿ ನಿರತವಾಗಿರಬೇಕು.
ಹೊಸ ವರ್ಷವನ್ನು ಆರಂಭಿಸುವುದರ ಕುರಿತು ಕೀರ್ತನ ಎಂ. ಬರಹ ನಿಮ್ಮ ಓದಿಗೆ

read more
ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಬದುಕು ನಿಂತ ನೀರಲ್ಲ, ಬದಲಾವಣೆ ಜಗದ ನಿಯಮ ಎಂದುಕೊಂಡೇ ಮನುಷ್ಯ ಬದಲಾವಣೆಗೊಳಪಟ್ಟುಕೊಂಡು ಹೊಸ ರೂಪಾಂತರಗಳನ್ನು ಆವಿಸ್ಕರಿಸಿ ಹೊಸ ಜಗದ ಸೃಷ್ಟಿಗೆ ನಾಂದಿ ಹಾಡುತ್ತಾ ಬಂದ. ಪ್ರತಿ ವರ್ಷವೂ ಹೊಸದೊಂದು ಜನ್ಮವೆಂದುಕೊಂಡೆ ಹೊಸ ಸೃಷ್ಟಿಗಳಿಗೆ ಬುನಾದಿ ಹಾಕಲಾರಂಭಿಸಿದ. ಎಲ್ಲಾ ಎಲ್ಲೆಗಳನ್ನು ಮೀರಿ ಲೋಕದೊಳಿತಿಗೆ ಸ್ಪೃಷ್ಯ ಯಾವುದೋ ಅವುಗಳ ಸೃಷ್ಟಿಯಲ್ಲಿ ತಲ್ಲೀನನಾದ.
ಹಳ್ಳಿಗಳಲ್ಲಿನ ಹೊಸ ವರ್ಷದಾಚರಣೆಯ ಕುರಿತು ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

read more
ಬದುಕಿಗಿಷ್ಟು ಸಾಕೆಂದರೆ ಆಗುವುದಿಲ್ಲವೆ?: ರೂಪಶ್ರೀ ಕಲ್ಲಿಗನೂರ್‌ ಬರಹ

ಬದುಕಿಗಿಷ್ಟು ಸಾಕೆಂದರೆ ಆಗುವುದಿಲ್ಲವೆ?: ರೂಪಶ್ರೀ ಕಲ್ಲಿಗನೂರ್‌ ಬರಹ

ನಾನು ನಾನೆಂದು ಬದುಕಿದ ನನ್ನ ಬದುಕು ಎಲ್ಲಿ ಹೋಗುತ್ತದೆ… ಸಿಟ್ಟಿಗೆ, ಸಂತೋಷಕ್ಕೆ, ತ್ಯಾಗಕ್ಕೆ, ಭೋಗಕ್ಕೆ… ಏನಾದರೂ ಅರ್ಥ ಉಳಿಯಬಹುದ? ಕೆಟ್ಟವನಾಗಿದ್ದರೆ ನಾಲ್ಕು ಜನರೊಂದಿಗೆ ಸಿಟ್ಟು, ಒಳ್ಳೆಯವನಾಗಿದ್ದರೆ ಅದೇ ನಾಲ್ಕು ಜನರೊಂದಿಗೆ ಪ್ರೀತಿ… ಅಷ್ಟೇ… ಇಷ್ಟು ಬದುಕಿನಲ್ಲಿ ನಮಗಾಗಿ ನಾವು ಏನು ಮಾಡಿಕೊಂಡರೂ, ಅದೂ ನಮ್ಮ ಜೀವಿತಾವಧಿಯ ನೆಮ್ಮದಿಗಾಗಿ ಅಷ್ಟೇ ಅಲ್ಲದೇ ಬೇರೇನೂ ಅಲ್ಲ.
ಬದುಕಿನ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

read more
ಡಾ. ಅಂಬೇಡ್ಕರ್‌ ಬರೆದ ಪ್ರೇಮಪತ್ರ…: ಸದಾನಂದ ಆರ್. ಅನುವಾದ

ಡಾ. ಅಂಬೇಡ್ಕರ್‌ ಬರೆದ ಪ್ರೇಮಪತ್ರ…: ಸದಾನಂದ ಆರ್. ಅನುವಾದ

ಮೊದಲಿಗೆ, ಉಕ್ಕಿ ಹರಿಯುವ ಪ್ರೀತಿಯನ್ನು ನಿಯಂತ್ರಿಸಲು ನಾವು ಕಲಿಯಬೇಕು. ನೀನೀಗ ಪ್ರೀತಿಯ ಬಲಿಪಶುವಾಗಿರುವೆ ಎನ್ನುವ ಆತಂಕ ನನ್ನದು. ನನ್ನಿಂದ ದೂರವಿರಲು ನಿನ್ನಿಂದ ಸಾಧ್ಯವಿಲ್ಲ ಅನ್ನುವುದನ್ನು ನಾನು ಬಲ್ಲೆನು. ನನಗೂ ನೀನು ನನ್ನ ಹತ್ತಿರ ಇರಬೇಕೆಂಬ ಆಸೆಯಿದೆ. ಆದರೆ ನೀನು ನನಗೆ ಒಂದಿಷ್ಟು ಸಮಯಾವಕಾಶ ನೀಡಬೇಕೆಂದು ಕೋರುವೆ. ನಿನ್ನ ತಾಳ್ಮೆಯನ್ನು ನಾನು ಖಂಡಿತ ಪರೀಕ್ಷಿಸುವುದಿಲ್ಲ ಎನ್ನುವುದಂತೂ ಖಾತ್ರಿ.
ಡಾ. ಬಿ.ಆರ್. ಅಂಬೇಡ್ಕರ್‌ ತಮ್ಮ ಮದುವೆಗೂ ಮುನ್ನ ತಮ್ಮ ಪತ್ನಿಗೆ ಬರೆದಿದ್ದ ಪತ್ರವನ್ನು ಸದಾನಂದ ಆರ್. ಕನ್ನಡಕ್ಕೆ ಅನುವಾದಿಸಿದ್ದಾರೆ

read more
ನಾವೂನೂ ಹಕ್ಕಿಗಳಾಗೋಣ ಬಾರಾ: ಮಹಾಲಕ್ಷ್ಮೀ ಕೆ. ಎನ್. ಬರಹ

ನಾವೂನೂ ಹಕ್ಕಿಗಳಾಗೋಣ ಬಾರಾ: ಮಹಾಲಕ್ಷ್ಮೀ ಕೆ. ಎನ್. ಬರಹ

ರೇಷ್ಮೆ ಲಂಗದ ಅಕ್ಕ ಮತ್ತು ಅವಳ ಪುಟ್ಟ ತಮ್ಮ ಹಿಡಿಯಲು ಹೋದಾಗ ಕೈಗೆ ಸಿಗದವು, ಮನುಷ್ಯ ಮುಟ್ಟಿದರೆ ತನ್ನ ಮೈಯನ್ನ ಸ್ವಚ್ಛ ಮಾಡಿಕೊಳ್ಳುವಂತವು, ಈ ನೆಲದಲ್ಲಿ ನಿಧಿಯಿದೆ; ಏಳು ಎಡೆಯ ಸರ್ಪ ಅದನ್ನ ಕಾಯ್ತಿದೆ ಎಂಬ ಅವರ ಈರಪ್ಪನ ಮಾತಿನ ಮೇಲಿನ ಅವರ ಎಳೆಯ ನಂಬಿಕೆ, ಅಂತ್ಯದಲ್ಲಿ ಸಮಯ ಕಳೆದಂತೆ ಬಳ್ಳಾರಿಯಲ್ಲಿನ ಗಣಿಗಾರಿಕೆಗೆ ಹಸಿರುಟ್ಟ ನೆಲವೆಲ್ಲ ಬರಡಾಗಿ ದಾರಿತುಂಬಾ ಧೂಳು ತುಂಬಿ, ಗಿಳಿಯಬಣ್ಣವೂ ಕೆಂಪಾಗಿಯೇ ಬಿಡುವ ಧಾರುಣ ವಾಸ್ತವದ ಕತೆ ನೆನಪಾಗುತ್ತೆ.
ಮಹಾಲಕ್ಷ್ಮೀ. ಕೆ. ಎನ್ ಬರಹ ನಿಮ್ಮ ಓದಿಗೆ

read more
ವಸ್ತುಗಳ ನಡುವೊಂದು ವಾಸ್ತವ: ಸೌರಭಾ ಕಾರಿಂಜೆ ಬರಹ

ವಸ್ತುಗಳ ನಡುವೊಂದು ವಾಸ್ತವ: ಸೌರಭಾ ಕಾರಿಂಜೆ ಬರಹ

ಡಿಕ್ಲಟರಿಂಗ್ ನಮ್ಮ ದೇಹದ ಆರೋಗ್ಯಕ್ಕೂ ಒಳ್ಳೆಯದು. ಮನೆಯಲ್ಲಿ ಸೇರಿಕೊಂಡ ಅನೇಕ ವಸ್ತುಗಳು ಹಲವು ರೀತಿಯ ರೋಗಗಳಿಗೆ ಕಾರಣವಾಗುವ ಧೂಳಿಗೆ, ಅಸ್ತಮಾದಂತಹ ಖಾಯಿಲೆಗಳಿಗೆ ಕಾರಣವಾಗಬಹುದು. ಆಗಾಗ ಡಿಕ್ಲಟರಿಂಗ್ ಮಾಡುವುದರಿಂದ ಅದನ್ನು ತಡೆಯಬಹುದು. ಅಂತೂ ಈ ಡಿಕ್ಲಟರಿಂಗ್‌ನ ಹಿಂದೆ ಎಲ್ಲದಕ್ಕಿಂತ ಮುಖ್ಯವಾಗಿ ಯಾವುದು ಸಂತೋಷವನ್ನು ನೀಡುತ್ತದೆಯೋ ಅದನ್ನು ಮಾಡಿ ಮತ್ತು ಸಂತೋಷವನ್ನು ತರುವಂತಹ ವಸ್ತುಗಳನ್ನು ಮಾತ್ರ ಇಟ್ಟುಕೊಳ್ಳಿ ಎನ್ನುವ ಸಂದೇಶವಿದೆ.
“ಡಿಕ್ಲಟರಿಂಗ್‌” ಕುರಿತು ಸೌರಭಾ ಕಾರಿಂಜೆ ಬರಹ ನಿಮ್ಮ ಓದಿಗೆ

read more
ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಕೊಕ್….ಕೊಕ್ಕ್… ಕುಕ್ಕುಟಾಯಣ: ವಸಂತಕುಮಾರ್ ಕಲ್ಯಾಣಿ ಪ್ರಬಂಧ

ಸುಮಾರು ನಾಲ್ಕು ಮೂವತ್ತಕ್ಕೆ ಯಾವುದೋ ಕನಸಿನ ಲೋಕದಲ್ಲಿದ್ದವನಿಗೆ, ಎಂಪಿ ಶಂಕರ್ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಪ್ರಭಾಕರ್, ಶಕ್ತಿಪ್ರಸಾದ್ ಮುಂತಾದವರೆಲ್ಲ ಒಟ್ಟಿಗೆ ಗಹಗಹಿಸಿ ನಕ್ಕ ಹಾಗೆ ದನಿ ಕೇಳಿ ಎಚ್ಚರವಾಯಿತು. ಕೆಲಕ್ಷಣದ ನಂತರ ಅದು ಚೇಚಿ ಮನೆಯ ಕೋಳಿಯ ಕೂಗು ಎಂಬ ಕಟು ವಾಸ್ತವ ಅರಿವಿಗೆ ಬಂತು. ಸರಿ ‘ಸುಸು’ ಮಾಡಿ ನೀರು ಕುಡಿದು ಮಲಗಿದರಾಯಿತು ಎಂದು, ಎಲ್ಲ ಮುಗಿಸಿ ಮಲಗಿದರೆ, ಅದರ ಆರ್ಭಟ ಇನ್ನಷ್ಟು ಹೆಚ್ಚಾಯಿತು.
ವಸಂತಕುಮಾರ್ ಕಲ್ಯಾಣಿ ಪ್ರಬಂಧ ನಿಮ್ಮ ಓದಿಗೆ

read more
ನಮ್ಮ ಓದನ್ನು ರೂಪಿಸಿದ ಮಾಯಾದರ್ಪಣದ ಮಾಯಾವಿ: ಎಂ. ಎಸ್. ಶ್ರೀರಾಮ್ ಬರಹ

ನಮ್ಮ ಓದನ್ನು ರೂಪಿಸಿದ ಮಾಯಾದರ್ಪಣದ ಮಾಯಾವಿ: ಎಂ. ಎಸ್. ಶ್ರೀರಾಮ್ ಬರಹ

ದಿವಾಕರ್‌ಗೆ ಸಾಹಿತ್ಯದ ಬಗ್ಗೆ ಇರುವ ಆಳವಾದ ಒಳನೋಟಗಳು, ಸಂಗೀತ ಮತ್ತು ಸಿನಿಮಾಗಳ ಬಗ್ಗೆಯೂ ಇದೆ. ಬೇಂದ್ರೆಯವರ ಅನೇಕ ಕವಿತೆಗಳಿಗೆ ದಿವಾಕರ್ ರಾಗಸಂಯೋಜನೆ ಮಾಡಿದ್ದಾರೆ. ‘ಮಲ್ಲಿಗೆ’ಯಲ್ಲಿದ್ದಾಗ ಅನೇಕ ಪುಸ್ತಕಗಳ ಮುಖಪುಟಗಳನ್ನೂ ವಿನ್ಯಾಸ ಮಾಡಿದ್ದರು.
ಎಂಭತ್ತರ ಹೊಸ್ತಿನಲ್ಲಿರುವ ಹಿರಿಯ ಕಥೆಗಾರ ಎಸ್. ದಿವಾಕರ್ ಅವರ ಸಾಹಿತ್ಯ ಸಂಭ್ರಮದ ಕೃತಿ “ಪರಿಮಳದ ಪಡಸಾಲೆ”ಗೆ ಎಂ.ಎಸ್.‌ ಶ್ರೀರಾಮ್‌ ಬರೆದ ಬರಹ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ