Advertisement

ಸಂಪಿಗೆ ಸ್ಪೆಷಲ್

“ನಾವುಗಳಿಲ್ಲಿ ಪರಸ್ಪರರು”: ಮಹಾಲಕ್ಷ್ಮೀ ಕೆ. ಎನ್. ಬರಹ

“ನಾವುಗಳಿಲ್ಲಿ ಪರಸ್ಪರರು”: ಮಹಾಲಕ್ಷ್ಮೀ ಕೆ. ಎನ್. ಬರಹ

ಇಳೆಗೆ ತಂಪು ಬೇಕು ವರುಣನಿಗೆ ಕಾಯ್ತಾಳೆ. ಅವನಿಗೆ ನೆಲೆಬೇಕು ಇವಳನ್ನೇ ಅರಸುತ್ತಾನೆ. “ಇವರಿಬ್ಬರದ್ದೂ ಇಲ್ಲಿ ಪರಸ್ಪರತೆ”. ಇದ್ದಕ್ಕಿದ್ದಂತೆ ಮೋಡ ಹೆಪ್ಪುಗಟ್ಟುತ್ತೆ, ಕಪ್ಪುಗಾಗುತ್ತೆ, ಕತ್ತಲಿನಂತಾಗುತ್ತೆ, ಎಲ್ಲವೂ ನಿಶ್ಶಬ್ಧವಾಗುತ್ತೆ, ಹಕ್ಕಿ ಹಿಂಡು ಗೂಡನ್ನರಸಿ ಚಿಲಿಪಿಲಿಗುಟ್ಟುತ್ತಾ ಬರುತ್ವೆ, ಜೋರುಗಾಳಿ ನಿಲ್ಲುತ್ತೆ, ಎಲ್ಲರೂ- ಎಲ್ಲವೂ ಬಾನಿಗೆ ಮುಖಮಾಡಿ ನೋಡುವಷ್ಟರಲ್ಲಿ ಧೋ…. ಅಂತ ಜಡಿ ಮಳೆ ಬಂದೇಬಿಡುತ್ತೆ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

read more
ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಭಾವಗಳ ‘ತೇರ’ ಯಾತ್ರೆ….: ರಾಮ್ ಪ್ರಕಾಶ್ ರೈ ಕೆ ಬರಹ

ಜೈಲಿನ ಕೈದಿಯೊಬ್ಬರು “ನಾವು ಮನುಷ್ಯರಾಗಿ ಹುಟ್ಟಿಲ್ಲ, ಮನುಷ್ಯರಾಗಲು ಹುಟ್ಟಿದ್ದೇವೆ” ಎಂದರೆ, ಇನ್ನೊಮ್ಮೆ “ಜೈಲು ಹೆರಿಗೆ ಮನೆಯಂತೆ, ಇಲ್ಲಿಗೆ ಬಂದವರು ಹೊಸ ಹುಟ್ಟು ಪಡೆದೇ ಹೊರಹೋಗುವುದು” ಎನ್ನುತ್ತಾರೆ. ಸುಖದ ಬದುಕು ಸಾಗುತ್ತಿರಬೇಕಾದರೆ ಹಿರಿಯ ಮಹಿಳೆಗೆ ಬಸ್ಸಿನ ಸೀಟು ಬಿಟ್ಟುಕೊಡುವ ಪ್ರಿಯ, ಕಷ್ಟ ಕಾಲಿಟ್ಟಾಗ ಆ ಮಹಿಳೆಯ ಕಡೆಗೆ ನಿರ್ಭಾವುಕ ನೋಟವನ್ನು ಬೀರುವ ಪರಿ, ಆ ಬದಲಾವಣೆಯಂತೂ ಮಾನವ ಬದುಕಿನ ವಾಸ್ತವ ನಡುವಳಿಕೆಗೆ ಹಿಡಿದ ದರ್ಪಣದಂತೆ ಕಾಣುತ್ತದೆ.
ಹೇಮಂತ್‌ ರಾವ್‌ ನಿರ್ದೇಶನದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಕುರಿತು ರಾಮ್ ಪ್ರಕಾಶ್ ರೈ ಕೆ ಬರಹ

read more
ಬಾಗಿಲಿಗೆ ಬಂದಿಹನು ಬಳೆಗಾರ: ಸ್ಮಿತಾ ರಾಘವೇಂದ್ರ ಬರಹ

ಬಾಗಿಲಿಗೆ ಬಂದಿಹನು ಬಳೆಗಾರ: ಸ್ಮಿತಾ ರಾಘವೇಂದ್ರ ಬರಹ

ನನಗೂ ಒಳಗೊಳಗೇ ಗಾಭರಿ; ಮದುವೆಗೂ ಮುಂಚೆ ಡಜನ್ ಗಟ್ಟಲೆ ಬಳೆ ತುಂಬಿಕೊಂಡು ಒಂದೂ ಒಡೆಯದಂತೆ ಇಟ್ಟುಕೊಳ್ಳುತ್ತಿದ್ದೆನಲ್ಲ.. ಈಗ ಏನಾಯ್ತು. ಗಡಿಬಿಡಿಯಲ್ಲಿ ಕೆಲಸ ಮಾಡಿದ್ರೆ ಬಳೆ ಒಡದೆ ಹೋಗ್ತದೆ ನೋಡು ಅಂದ ಅಮ್ಮನ ಮಾತು ನೆನಪಾಗಿ ಸಮಾಧಾನವಾಗುತ್ತಿತ್ತಾದರೂ ಈ ಅಪಶಕುನ ಎನ್ನುವ ಭಯದಿಂದ ತಪ್ಪಿಸಿಕೊಳ್ಳಲು ಗಾಜಿನ ಬಳೆ ತೊಡುವುದನ್ನು ಕ್ರಮೇಣ ಬದಲಿಸಿದ್ದೆ.
ಬಳೆಗಾರ ಮತ್ತು ಬಳೆಗಳ ಕುರಿತು ಸ್ಮಿತಾ ರಾಘವೇಂದ್ರ ಕಲ್ಲೇಶ್ವರ ಬರಹ ನಿಮ್ಮ ಓದಿಗೆ

read more
ಮಕ್ಕಳನ್ನು ಪೊರೆವ ಮಾತೃಭಾಷೆ ಕಲಿಸಿ: ಸದಾಶಿವ ಸೊರಟೂರು ಬರಹ

ಮಕ್ಕಳನ್ನು ಪೊರೆವ ಮಾತೃಭಾಷೆ ಕಲಿಸಿ: ಸದಾಶಿವ ಸೊರಟೂರು ಬರಹ

ಆರಂಭದಲ್ಲಿ ಮಗುವಿನ ಭಾಷೆಯಲ್ಲದೆ ಬೇರೆ ಭಾಷೆಯಲ್ಲಿ ಕಲಿಸುವ ವಿಚಾರಗಳು ಮಗುವಿಗೆ ಆಪ್ತವಾಗುವುದಿಲ್ಲ. ಬೇರೆ ಭಾಷೆಯಿಂದ ತಿಳುವಳಿಕೆ ಸಿಗಬಹುದು, ಒಳ್ಳೆಯ ನೌಕರಿ ಸಿಗಬಹುದು; ಬದುಕಿನ ರುಚಿ ಸಿಗುವುದಿಲ್ಲ. ನೆನಪಿರಲಿ ಮಗು ಕನ್ನಡ ಕಲಿತಿದೆ ಅಂದರೆ ಬರೀ ಭಾಷೆ ಕಲಿಯುತ್ತಿದೆ ಎಂದರ್ಥವಲ್ಲ; ಕನ್ನಡದ ಸಂಸ್ಕೃತಿಯನ್ನು ಕಲಿಯುತ್ತಿದೆ ಎಂದರ್ಥ.
ಕನ್ನಡ ರಾಜ್ಯೋತ್ಸವದ ನಿಮಿತ್ತ ಯಾವುದೇ ಕಲಿಕೆಗೂ ಮಾತೃಭಾಷೆ ಮಕ್ಕಳಿಗೆ ಎಷ್ಟು ಮುಖ್ಯ ಎಂಬುದರ ಕುರಿತು ಸದಾಶಿವ ಸೊರಟೂರು ಬರಹ ನಿಮ್ಮ ಓದಿಗೆ

read more
ಮರ್ಯಾದೆ ಉಳಿಸಿದ ಒಂದು ರೂಪಾಯಿ!: ಬಸವನಗೌಡ ಹೆಬ್ಬಳಗೆರೆ ಬರಹ

ಮರ್ಯಾದೆ ಉಳಿಸಿದ ಒಂದು ರೂಪಾಯಿ!: ಬಸವನಗೌಡ ಹೆಬ್ಬಳಗೆರೆ ಬರಹ

ಈಗಿನಂತೆ ಆಗ ಮಕ್ಕಳಿಗೆ ನೋಟ್ ಬುಕ್ಕಿನ ರಾಶಿ ಇರುತ್ತಿರಲಿಲ್ಲ. ಆರು ಪುಸ್ತಕವಿದ್ದರೆ ಆರು ನೋಟ್ಸ್, ಒಂದು ಆಲ್ ರಫ್ ಅಷ್ಟೇ. ಸಮಾಜ ನೋಟ್ಸ್‌ನಲ್ಲಿ ಇರುವ ಪಾಠಕ್ಕನುಗುಣವಾಗಿ ಪೌರನೀತಿ, ಭೂಗೋಳ, ಇತಿಹಾಸ ಎಂದು ಭಾಗ ಮಾಡಿ ಬಳಸಿಕೊಳ್ಳುತ್ತಿದ್ದೆವು. ಆಗ ಫೇಮಸ್ ಆಗಿದ್ದ ರೇನಾಲ್ಡ್ಸ್ ಪೆನ್ನನ್ನು ಪರೀಕ್ಷೆ ಬರೆಯಲು ಮಾತ್ರ ತೆಗೆದುಕೊಳ್ಳುತ್ತಿದ್ದೆನು. ಒಂದೊಮ್ಮೆ ಅದರ ಇಂಕ್ ಮುಗಿದು ಹೋದರೆ ಅದರ ಕಡ್ಡಿಯನ್ನು‌ ಎಸೆಯುತ್ತಿರಲಿಲ್ಲ.
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

read more
ವಿಶ್ವಕಪ್ ಹೋರಾಟಕ್ಕೆ ಅಣಿಯಾದ ಬಲಾಢ್ಯರು: ವೆಂಕಟೇಶ ಬಿ.ಎಂ. ಬರಹ

ವಿಶ್ವಕಪ್ ಹೋರಾಟಕ್ಕೆ ಅಣಿಯಾದ ಬಲಾಢ್ಯರು: ವೆಂಕಟೇಶ ಬಿ.ಎಂ. ಬರಹ

ಕೆಲವು ವರ್ಷಗಳ ಹಿಂದೆ ಭಾರತ ಪಾಕಿಸ್ತಾನ ಪಂದ್ಯವೆಂದರೆ ಥೇಟ್ ಯುದ್ಧದ ರೀತಿ ಇರುತ್ತಿತ್ತು. ಅಂದಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುವಾಗ ಆವೇಶಭರಿತರಾಗಿ ಎದುರಾಳಿಗಳನ್ನು ಹುರಿದು ಮುಕ್ಕುವ ರೀತಿ ಆಡುತ್ತಿದ್ದರು. ಆದರೆ ಈಗಿನ ಆಟಗಾರರು ಪಾಕಿಸ್ತಾನದ ವಿರುದ್ಧ ಆಡುತ್ತಿದ್ದೇವೆ ಎನ್ನುವ ಪರಿವೆಯೇ ಇಲ್ಲದೆ ನಗಾಡಿಕೊಂಡು ಚಡ್ಡಿದೋಸ್ತಿಗಳ ಜೊತೆ ಆಡುವಂತೆ ವರ್ತಿಸುತ್ತಾರೆ ಎಂದು ಗೆಳೆಯ ಹೇಳಿದ.
ಕ್ರಿಕೆಟ್‌ ವಿಶ್ವಕಪ್‌ ಕುರಿತ ವೆಂಕಟೇಶ್‌ ಬಿ.ಎಂ. ಬರಹ ನಿಮ್ಮ ಓದಿಗೆ

read more
ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

read more
ವೇಷ ಕಳಚಿ ನಡೆಯಬೇಕು…: ಆಶಾ ಜಗದೀಶ್ ಬರಹ

ವೇಷ ಕಳಚಿ ನಡೆಯಬೇಕು…: ಆಶಾ ಜಗದೀಶ್ ಬರಹ

ನಿಜ ಏನೆಂದರೆ, ನಾವು ಸತ್ಯವನ್ನು ಎದುರಿಸುವ ಶಕ್ತಿಯನ್ನು ಪಡೆಯಬೇಕಿದೆ. ನಾವು ಒಳಗೆ ಹೇಗಿದ್ದೇವೋ ಹೊರಗೂ ಅದೇ ಆಗಿ ತೋರಿಸಿಕೊಳ್ಳುವ ಧಾರ್ಷ್ಟ್ಯವನ್ನು ಬೆಳೆಸಿಕೊಳ್ಳಬೇಕಿದೆ. ಇಲ್ಲವಾದರೆ ವೇಷ ಕಳಚುವುದು ಎಷ್ಟು ಹೊತ್ತಿನ ಕೆಲಸ! ನಾವು ಯಾವುದು ಅಲ್ಲವೋ ಅದಾಗಿ ನಮ್ಮನ್ನು ನಾವು ತೋರಿಸಿಕೊಳ್ಳಲಿಕ್ಕೆ ನಮಗೆ ಹೆಚ್ಚು ಪ್ರಯತ್ನ ಬೇಕಾಗಬಹುದು. ಆದರೆ ನಾವು ನಾವಾಗಿರುವುದಕ್ಕೆ ಅಷ್ಟೊಂದು ಪ್ರಯತ್ನ ಬೇಕಿರುವುದಿಲ್ಲ. ನಾವು ನಾವಾಗಲ್ಲದೆ ನಾವು ಬಯಸಿದ ನಾವಲ್ಲದ ಪಾತ್ರವಾಗಿ ಜಗತ್ತನ್ನು ನಂಬಿಸಲು ಸದಾ ಎಚ್ಚರದಿಂದ ಇರಬೇಕಾಗಿರುತ್ತದೆ.
ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

read more
ಬಸಪ್ಪ ಕಾಕಾನ ನೆನಪುಗಳು: ಶರಣಗೌಡ ಪಾಟೀಲ ಬರೆದ ಪ್ರಬಂಧ

ಬಸಪ್ಪ ಕಾಕಾನ ನೆನಪುಗಳು: ಶರಣಗೌಡ ಪಾಟೀಲ ಬರೆದ ಪ್ರಬಂಧ

ಬಸಪ್ಪ ಕಾಕಾನ ಮನಸ್ಸು ಕೂಡ ಬಿಳಿ ಬಟ್ಟೆಯಷ್ಟೇ ಶುಭ್ರಗಿತ್ತು. ಆತ ಬಿಳಿ ಬಟ್ಟೆ ಧರಿಸಿ ಹೊರಟರೆ ಥೇಟ ಸ್ವಾತಂತ್ರ್ಯ ಹೋರಾಟಗಾರ ಕಂಡಂತೆ ಕಾಣಿಸುತ್ತಿದ್ದ. ಎದುರಿಗೆ ಸಿಕ್ಕವರಿಗೆಲ್ಲ ಮಾತಾಡಿಸಿ ಊಟ ತಿಂಡಿ ಕೆಲಸ ಕಾರ್ಯದ ಬಗ್ಗೆ ವಿಚಾರಿಸುತ್ತಿದ್ದ. ಬಸಪ್ಪ ಕಾಕಾನ ಕುಟುಂಬವೂ ಚಿಕ್ಕದಾಗಿತ್ತು. ಒಬ್ಬನೇ ಮಗ ಆತನಿಗೆ ಅಂಗಡಿ ವ್ಯವಹಾರದ ಬಗ್ಗೆ ಯಾವದೂ ಗೊತ್ತಿರಲಿಲ್ಲ. ಬೇಕಂತಲೇ ಬಸಪ್ಪ ಕಾಕಾ ಗೊತ್ತು ಪಡಿಸಿರಲಿಲ್ಲ.
ಶರಣಗೌಡ ಬಿ. ಪಾಟೀಲ, ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ