ಸುಂದರ ಕಾಡಿನ ರೋಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ
ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು
ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ
ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ
ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ
ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ
ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ
ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…
ಭರವಸೆಯ ಬುತ್ತಿ, ಶಾಂತಿದೂತೆ – ಜೇನ್ ಗುಡಾಲ್: ಕ್ಷಮಾ ವಿ.ಭಾನುಪ್ರಕಾಶ್ ಬರಹ
ಸಂಶೋಧನೆಗಳಿಗಾಗಿ ಸೆರೆಯಲ್ಲಿರುವ ಪ್ರಾಣಿಗಳ ಆರೈಕೆಯ ಬಗ್ಗೆ, ವನ್ಯಜೀವಿಗಳ ಅಕ್ರಮ ಸಾಗಾಣಿಕೆ ಹಾಗೂ ಮಾರಾಟದ ವಿರುದ್ಧ ತಮ್ಮ ಸಂಸ್ಥೆಯ ಮೂಲಕ ಜೇನ್ ವಿಶ್ವಮಟ್ಟದಲ್ಲಿ ಪ್ರಭಾವಿ ಹೆಸರಾಗಿದ್ದು, ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ. ಜೇನ್ ಗುಡಾಲ್ ಇನ್ಸ್ಟಿಟ್ಯೂಟ್ ನ ‘ರೂಟ್ಸ್ ಆಂಡ್ ಶೂಟ್ಸ್’ ಎಂಬ ಶಾಖೆಯು ಯುವಪೀಳಿಗೆಯನ್ನು ಪರಿಸರ ರಕ್ಷಣೆಯ ನಿಜವಾದ ಸವಾಲುಗಳಿಗೆ ಸಿದ್ಧ ಪಡಿಸುವೆಡೆಗೆ, ಪರಿಸರದ ಬಗ್ಗೆ ಜವಾಬ್ದಾರಿಯಿಂದ ನಡೆದುಕೊಳ್ಳುವ ಕಡೆಗೆ ಅನೇಕ ಯೋಜನೆಗಳ ಮುಖಾಂತರ ಮಾರ್ಗದರ್ಶನ ನೀಡುತ್ತಿದೆ.
ಇತ್ತೀಚ್ಚೆಗೆ ತೀರಿಕೊಂಡ ವಿಜ್ಞಾನಿ ಜೇನ್ ಗುಡಾಲ್ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ ನಿಮ್ಮ ಓದಿಗೆ
ನಮ್ಮನೆಯ ದೀಪಾವಳಿ…: ರೂಪಶ್ರೀ ಕಲ್ಲಿಗನೂರ್ ಬರಹ
ಕನಿಷ್ಟ ಎರಡು ವಾರಗಳ ಹಿಂದಿನಿಂದ ಕೆಲಸ ಆರಂಭಿಸಿರುತ್ತಿದ್ದ ಅಮ್ಮ, ದೀಪಾವಳಿ ಬಟ್ಟೆ ಶಾಪಿಂಗಿಗೆ ಬಂದಿದ್ದು ಕಡಿಮೆಯೇ. ಅಕ್ಕ-ನಾನು ಆಯ್ದ ಬಟ್ಟೆಗಳು ಅವರಿಗೆ ಯಾವಾಗಲೂ ಖುಷಿಯೇ. ಹಾಗಾಗಿ ನೀವೇ ಆರಿಸಿತಂದುಬಿಡಿ ಅಂತ ನಮ್ಮೆಲ್ಲರನ್ನೂ ಕಳಿಸಿಬಿಡುತ್ತಿದ್ದರು. ಹಾಗಾಗಿ ನಮ್ಮದೆಲ್ಲ ಬಟ್ಟೆ ಕೊಂಡಾದ ಮೇಲೆ, ಅಮ್ಮನಿಗೆಂದು ಚಂದದ ಸೀರೆ ಆರಿಸುವ ಜವಾಬ್ದಾರಿ ನಮ್ಮಗಳ ಮೇಲಿರುತ್ತಿತ್ತು. ಅಪ್ಪನೂ, ನಾವೂ ಎಲ್ಲರೂ ಸೇರಿ ಅಮ್ಮನಿಗೆ ಒಪ್ಪಬಹುದಾದ ಸೀರೆಯನ್ನು ಬಹಳ ಕುತೂಹಲದಿಂದ ಆರಿಸುತ್ತಿದ್ದೆವು. ದೀಪಾವಳಿಯ ಆಚರಣೆಯ ಕುರಿತು ರೂಪಶ್ರೀ ಕಲ್ಲಿಗನೂರ್ ಬರಹ
ದೀಪಾವಳಿ ಹಬ್ಬದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಬರಹ
ಅಂತೂ ಈಡಿಗೆ ಬೆಂಕಿ ತಾಕಿಸಿ ಅದು ಉರಿಯುವುದರೊಳಗೆ ನನ್ನನ್ನು ಅಲ್ಲಿಂದ ಮನೆಗೆ ಕಳಿಸಿದ್ದರು. ಅದಾದ ಮೇಲೆ ಎಂದೂ ನಾನು ಬಾನ ಹೊತ್ತಿದ್ದು ನೆನಪಿಲ್ಲ. ನನಗೆ ದೇವರನ್ನು ಹೊತ್ಕೋಬೇಕು ಅಂತ ಆಸೆ ಇತ್ತು. ಆದರೆ ನಾವು ದೇವರನ್ನು ತಲೆಮೇಲೆ ಹೊರಬಾರ್ದು ಅನ್ನುತ್ತಿದ್ದರು. ಅದಕ್ಕೆ ಅನೇಕ ನಿಯಮಗಳಿರುತ್ತವೆ ಅನ್ನುತ್ತಿದ್ದರು. ನಾವ್ಯಾಕೆ ಹೊತ್ಕೋಬಾರ್ದು ಎಂಬ ಪ್ರಶ್ನೆ ನನ್ನನ್ನು ಕಾಡುತ್ತಲೆ ಇತ್ತು. ಅಂತೂ ಆ ವರ್ಷದ ದೀವಣ್ಗೆ ಹಬ್ಬ ಮುಗಿದುಹೋಗಿತ್ತು. ಪ್ರತಿ ದೀಪಾವಳಿ ಹಬ್ಬದಲ್ಲೂ ಅಂತಹ ನೆನಪುಗಳು ಮತ್ತೆ ಮತ್ತೆ ಮರುಕಳಿಸುತ್ತಲೆ ಇರುತ್ತವೆ.
ಮಾರುತಿ ಗೋಪಿಕುಂಟೆ ನೆನಪುಗಳು
ತುಳುನಾಡಿನ ದೀಪಾವಳಿ: ಫಕೀರ್ ಮುಹಮ್ಮದ್ ಕಟ್ಪಾಡಿ ನೆನಪುಗಳು
ಪಟಾಕಿ ಸುಡುವುದರ ಬಗ್ಗೆ ಕ್ಲಾಸಿನಲ್ಲಿ ಪಾಠದ ಮಧ್ಯೆ ಸುಮ್ಮನೆ ದಂಡಕ್ಕೆ ಎಂದು ಬೋಧಿಸಿದ್ದ ನಮ್ಮ ನೆರೆಮನೆಯ ದೇಜು ಮಾಸ್ಟ್ರು ತಮ್ಮ ಮಕ್ಕಳು ಕೃಷ್ಣ, ಲಕ್ಷ್ಮಣ, ಪುಟ್ಟ ಮಗು ಮಾರುತಿಯರನ್ನು ಕರೆದುಕೊಂಡು ಬಂದು ನಮ್ಮ ತಂದೆಯವರ ಜೊತೆಗೆ ನಿಂತು ಉತ್ಸವವನ್ನು ನೋಡಿದಂತಾಯಿತೆಂದು ಹೇಳಿಕೊಂಡು, ಖುಷಿ ಪಟ್ಟುಕೊಂಡು, ನಮ್ಮ ಸಂತೋಷದಲ್ಲಿ ಭಾಗಿಯಾಗಿದ್ದರು. ಸುಮಾರು ಅರ್ಧ ಗಂಟೆಗಳ ಕಾಲ ನಮ್ಮ ಸುಡು ಮದ್ದು ಬಿರುಸು ಬಾಣಗಳ ವೈಭವವನ್ನು ಸವಿದ ಊರವರು ಮುಂದೆ ವರ್ಷಗಟ್ಟಲೆ ಈ ದೀಪಾವಳಿಯನ್ನು `ಗುರುಕುಲೆ ಇಲ್ಲದ ದೀಪೋಲಿ’ ಎಂತಲೇ ನೆನಸಿ ಕೊಳ್ಳುತ್ತಿದ್ದರು.
ತುಳುನಾಡಿನ ದೀಪಾವಳಿಯ ಆಚರಣೆಗಳ ಕುರಿತು ಫಕೀರ್ ಮುಹಮ್ಮದ್ ಕಟ್ಪಾಡಿ ನೆನಪುಗಳು ನಿಮ್ಮ ಓದಿಗೆ
ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ
ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ









