ತಾವರೆಯ ಧ್ಯಾನ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಲಲಿತ ಪ್ರಬಂಧ
ರೀಲ್ಸ್ನಲ್ಲಿ ತೋರಿಸಿದ ಹಾಗೆ ಎರಡು ದಿನಗಳಲ್ಲಿ ಅದರಲ್ಲಿ ಸೃಷ್ಟಿಯ ಕುರುಹುಗಳು ಕಂಡುಬರಬೇಕಿತ್ತು. ದಿನ ಎರಡಾಯಿತು ಮೂರಾಯಿತು ಬೀಜ ಕದಲಲಿಲ್ಲ. ಬೀಜಗಳನ್ನು ಹೊರತೆಗೆದು ಕೈಯಲ್ಲಿಟ್ಟು ನೋಡಿದ. ತಿರುಗಿಸಿ ತಿರುಗಿಸಿ ನೋಡಿದರೂ ಬೀಜ ನಿಸ್ತೇಜವಾಗಿ ಬಿದ್ದುಕೊಂಡಿತ್ತು. ಅದು ಮೊಳಕೆಯೊಡೆಯುವ ಯಾವ ಮನಸ್ಸನ್ನೂ ಮಾಡಲಿಲ್ಲ. ಮೊದಮೊದಲು ಧ್ರುವನ ಈ ತಳಮಳವನ್ನು ನೋಡಿ ನಾನು ಜೋರಾಗಿ ನಗುತ್ತಿದ್ದೆ. ಮೊದಲೇ ಹೇಳಿದ್ದೆ ನಿಂಗೆ ಇದು ವರ್ಕ್ ಔಟ್ ಆಗಲ್ಲ ಅಂತ. ಸುಮ್ನೆ ಟೈಮ್ ವೇಸ್ಟ್. ರೀಲ್ಸ್ನಲ್ಲಿ ಸುಮ್ನೆ ತೋರಿಸಿ ನಮ್ಮನ್ನು ಮಂಗ ಮಾಡ್ತಾರೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ
ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ
ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ
ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ
ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್ ಬರಹ ನಿಮ್ಮ ಓದಿಗೆ
ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ
ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ
ಮಾನ್ಸೂನ್ ಮಳೆ ಬಾಲ್ಯದ ನೆನಪುಗಳನ್ನು ಹೊತ್ತು ತರುವ ತೇರು: ಮಹಾಲಕ್ಷ್ಮೀ. ಕೆ. ಎನ್. ಬರಹ
ಬೆಚ್ಚಗಿನ ಸ್ವೆಟರ್, ರಾತ್ರಿ ಚಳಿಗೆ ಬೆಚ್ಚಗಿನ ಕಂಬಳಿ, ಮನೆಯ ಹೆಂಚಿನ ಮೇಲಿಂದ ಮಳೆ ನೀರು ಇಳಿಯುವ ಜೋಗುಳದಂತಹ ಶಬ್ದ, ಅಕ್ಕನ ಎಂಟು ತಿಂಗಳ ಮಗಳು ತೊಟ್ಟಿಲಿನಿಂದ ಹೊರಗೆ ತಿಳಿ – ಬಿಳಿ ಕಣ್ಣು ಬಿಟ್ಟು ಜಿಟಿಜಿಟಿ ಮಳೆಯ ರಭಸ ನೋಡುವ ಕುತೂಹಲದ ಕೂಸು. ಹಬೆಯಾಡುವ – ಹೊಗೆಯಾಡುವ ಸ್ನಾನದ ಮನೆ ಕಂಡರೆ ಸುಡುಸುಡು ನೀರನ್ನು ಒಂದೆರಡು ಕಡಾಯ ಮೈಮೇಲೆ ಸುರಿದುಕೊಳ್ಳುವ ಬಯಕೆ – ಹೊರಗಿನ ಕೆಲಸ ಮುಗಿಸಿ ಬಂದವರ ಮನಸ್ಸನ್ನು ಆಯಸ್ಕಾಂತದಂತೆ ಎಳೆಯುತ್ತಲೇ ಇರುತ್ತದೆ.
ಮಾನ್ಸೂನ್ ಕುರಿತು ಮಹಾಲಕ್ಷ್ಮೀ. ಕೆ. ಎನ್. ಬರಹ ನಿಮ್ಮ ಓದಿಗೆ
ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ
ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ
ಅಂತ್ಯವಿಲ್ಲದೊಂದು ಕತೆ: ನಿ”ಶಾಂತ” ಬರಹ
ಆಮೇಲೆ ಬರುಬರುತ್ತಾ ನಮ್ಮ ಭೇಟಿಯ ದಿನಗಳು ಕ್ಷೀಣಿಸಿದವು. ಆದರೂ ಯಾಕೋ ಆ ಕಾರಣಕ್ಕೆ ಇಬ್ಬರೂ ಜಗಳ ತೆಗೆಯುವುದನ್ನು ನಿಲ್ಲಿಸಿದ್ದೆವು. ಒಬ್ಬರು ಸಿಗ್ತಿಯಾ ಅಂದಾಗ, ಬೆಂಗಳೂರಿನ ಆ ತುದಿಯಲ್ಲಿದ್ದರೂ ಬಂದು ಭೇಟಿ ಮಾಡಿಹೋಗುತ್ತಿದ್ದೆವು. ಮತ್ತೆ ಮುಂದಿನ ಭೇಟಿ ಬಗ್ಗೆ ಮಾತೇ ಇಲ್ಲ… ಸುಮ್ಮನೇ ನಮ್ನಮ್ಮ ಕೆಲಸಗಳ ಕುರಿತು, ಮನೆಯ ಪರಿಸ್ಥಿತಿಗಳ ಕುರಿತ ಮಾತಷ್ಟೇ. ಅಲ್ಲಿ ಯಾವುದೇ ಕವಿತೆಗೂ, ಗಜಲ್ಗೂ ಅವಕಾಶವಿರುತ್ತಿರಲಿಲ್ಲ. ಅದು ಇಬ್ಬರಿಗೂ ಬೇಕಾಗೂ ಇರಲಿಲ್ಲವೆನ್ನಿಸುತ್ತೆ. ಹಾಗಾಗಿ ಮೂರು ವರ್ಷಗಳ ಒಡನಾಟದ ಸಲುವಾಗಿಯಾದರೂ ಒಂದು ಗುಡ್ಬೈ ಸಹ ಹೇಳದೇ ನಮ್ಮ ನಮ್ಮ ಬದುಕಿನ ಹಾದಿಯಲ್ಲಿ ಸಿಕ್ಕ ತಿರುವುಗಳಲ್ಲಿ ನಡೆದುಹೋಗಿಬಿಟ್ಟಿದ್ದೆವು.
“ದಡ ಸೇರದ ದೋಣಿ” ಹೊಸ ಸರಣಿಯಲ್ಲಿ ಅಂತ್ಯ ಸಿಕ್ಕದ ಪ್ರೇಮವೊಂದರ ಕುರಿತು ನಿ”ಶಾಂತ” ಬರಹ
ಎಲ್ಲ ಕಾಲದ ಮನುಷ್ಯರೂ ಒಂದೇ!: ರೂಪಶ್ರೀ ಕಲ್ಲಿಗನೂರ್ ಬರಹ
ಗಣಿತದಲ್ಲಿ ತಪ್ಪು ಲೆಕ್ಕ ಬರೆದ ಮಕ್ಕಳನ್ನು ಕರೆದು ಅಂಗೈ ಮುಂದೆ ಮಾಡಲು ಹೇಳಿ, ಗೆಣ್ಣಿಗೆ ಹೊಡೆಯುತ್ತಿದ್ದ ರೀತಿ ಇನ್ನೂ ಚೆನ್ನಾಗಿ ನೆನಪಿದೆ. ಒಮ್ಮೊಮ್ಮೆ ತೀರಾ ಸಿಟ್ಟಿನಲ್ಲಿ ರಪರಪ ಬಾರಿಸಿದ್ರೆ, ಇನ್ನೂ ಕೆಲವೊಮ್ಮೆ ಏನೋ ಮನಸ್ಸಿಲ್ಲದೇ, ತನ್ನ ಕರ್ತವ್ಯ ಪಾಲಿಸುವುದಕ್ಕಾಗಿ ಇಷ್ಟು ಜೋರಾಗಿ ಹೊಡಿತಿದ್ದೀನಿ ಅನ್ನುವಂತೆ ಮುಖ ಮಾಡಿಕೊಂಡು ಶಿಕ್ಷಿಸುತ್ತಿದ್ದರು. ಹಾಗವರು ಮೃಗೀಯವಾಗಿ ಹೊಡೆಯುವಾಗ, ಅವರ ಮಗು ಅಲ್ಲೇ ಪಕ್ಕದಲ್ಲಿ ತೊಟ್ಟಿಲಲ್ಲಿ ನೆಮ್ಮದಿಯಿಂದ ಮಲಗಿರುತ್ತಿತ್ತು. ಅಷ್ಟು ಚಿಕ್ಕ ಮಗುವಿನ ತಾಯಿಯೊಬ್ಬಳು, ಓದಿನಲ್ಲಿ ತಪ್ಪು ಮಾಡಿದ ಮಕ್ಕಳಿಗೆ ಹೇಗೆ ಅಷ್ಟು ಮನುಷ್ಯತ್ವವಿಲ್ಲದೇ ಶಿಕ್ಷಿಸಲು ಸಾಧ್ಯ?
ರೂಪಶ್ರೀ ಕಲ್ಲಿಗನೂರ್ ಬರಹ ನಿಮ್ಮ ಓದಿಗೆ
“ಹಳದಿ ಕೊಡೆ”: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್ ಬಾಂಡ್ ಬರಹ
ಅವನು ಸಾಮಾನ್ಯವಾಗಿ ನನ್ನನ್ನು ನನ್ನ ಆಫೀಸ್ನಲ್ಲಿ ಕಾಣುತ್ತಿದ್ದನು. ಇಲ್ಲವಾದರೆ ಕಿರಿದಾದ ಹೂವಿನ ತೋಟದಲ್ಲಿ ಸ್ನ್ಯಾಪ್ ಡ್ರ್ಯಾಗನ್ ಮತ್ತು ಪೆಟೋನಿಯಾಗಳನ್ನು ಬೆಳೆಸಲೆತ್ನಿಸುವಾಗ ಕಾಣುವನು. ಬಿಸಿಲಿನ ದಿನಗಳಲ್ಲಿ ಬಾಯಾರಿಕೆ ಆರಿಸಲು ನೀರನ್ನು ಕುಡಿದು ಬಾಯಾರಿಕೆ ನಿವಾರಿಸಿಕೊಂಡ ಮೇಲೆ ಅವನು ತಗ್ಗಿದ ತೋಟದ ಗೋಡೆಯ ಮೇಲೆ ಐದರಿಂದ ಹತ್ತುನಿಮಿಷ ಕುಳಿತು ಪೇಟೆಯಲ್ಲಿನ ಹೊಸಹೊಸ ಸುದ್ದಿಗಳನ್ನೆಲ್ಲ ನನಗೆ ತಿಳಿಸುತ್ತಿದ್ದನು.
ರಸ್ಕಿನ್ ಬಾಂಡ್ ಬರೆದ “ಯೆಲ್ಲೋ ಅಂಬ್ರೆಲ್ಲಾ” ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ









