Advertisement

ಸಂಪಿಗೆ ಸ್ಪೆಷಲ್

ಗೋಡೆ ಮೇಲಿನ ಮಗಳ ಬರಹ ತರಲಾಗಲಿಲ್ಲ….

ಗೋಡೆ ಮೇಲಿನ ಮಗಳ ಬರಹ ತರಲಾಗಲಿಲ್ಲ….

ಈಗಷ್ಟೇ ಬರೆಯಲು ಕಲಿಯುವ ಮಗುವಿನ ಗೋಡೆಯ ಮೇಲಿನ ಬರಹದಂತೆ ವಕ್ರ ವಕ್ರ… ಕವಿ ತಿರುಮಲೇಶರು ಹೇಳಿದಂತೆ ಎಲ್ಲ ಆರಂಭಗಳೂ ಅನುಮಾನದಲ್ಲೇ! ಬಾಡಿಗೆ ಮನೆಯಲ್ಲಿದ್ದ ಕವಿಯೊಬ್ಬ ಮನೆ ಬದಲಿಸುವಾಗ ಎಲ್ಲಾ ಸಾಮಾನುಗಳನ್ನು ಹೊಸ ಮನೆಗೆ ಒಯ್ದರೂ ಗೋಡೆಯ ಮೇಲೆ ಈಗ ಬೆಳೆದು ದೊಡ್ಡವಳಾದ ಮಗಳ ಗೋಡೆಯ ಗೀರುಗಳನ್ನು ತರಲಾಗಲಿಲ್ಲವೆಂಬ ತಹ ತಹಿಕೆಯ ಕವಿತೆ ಇದೆ. ಕೇವಲ ಗೆರೆಗಳು ಮಾತ್ರವಲ್ಲ, ಸೊಟ್ಟು ಮೂತಿಯ ಪ್ರಾಣಿ, ರೆಕ್ಕೆಯಿಲ್ಲದ ಹಕ್ಕಿ, ಬೆಟ್ಟ…
ಕೈಬರಹದ ಕುರಿತು ಡಾ. ಲಕ್ಷ್ಮಣ ವಿ. ಎ. ಬರಹ ನಿಮ್ಮ ಓದಿಗೆ

read more
“ದೋಸೆ”ಯ ವೈಭೋಗ…..

“ದೋಸೆ”ಯ ವೈಭೋಗ…..

ಮಿಕ್ಸಿ ಇಲ್ಲದ ಕಾಲವಾದರೂ ವಾರದಲ್ಲಿ ನಾಲಕ್ಕೋ ಐದೋ ದಿನ ದೋಸೆಯೇ ಬೆಳಗಿನ ತಿಂಡಿಗೆ. ಅವಲಕ್ಕಿ, ಉಪ್ಪಿಟ್ಟು ಅಂದರೆ ಅದು ಸೋಮಾರಿಗಳ ತಿಂಡಿ ಎನ್ನುವ ಅಭಿಪ್ರಾಯವಿತ್ತು. ಒಮ್ಮೆ ಮನೆಯಲ್ಲಿ ಹೆಂಗಸರಿಲ್ಲದೆ, ಗಂಡಸು ತಿಂಡಿಮಾಡಿಕೊಳ್ಳುವ ಪ್ರಮೇಯ ಬಂದರೆ ಅಕ್ಕಪಕ್ಕದ ಮನೆಯ ಹೆಂಗಸರು `ಮನೇಲ್ಲಿ ಯಾರೂ ಹೆಂಗಸ್ರಿಲ್ಲೆ. ನಮ್ಮನೆಗೆ ತಿಂಡಿಗೆ ಬಾ, ದೋಸೆ ತಿನ್ನಲಕ್ಕು’ ಎಂದು ಕರೆಯುವುದಿತ್ತು.
ಚಂದ್ರಮತಿ ಸೋಂದಾ ಬರೆದ ದೋಸೆ ಕುರಿತ ಪ್ರಬಂಧ ನಿಮ್ಮ ಓದಿಗೆ

read more
ಗಾಢವಾಗಿ ಆವರಿಸಿಕೊಂಡ ಸಾವಿನ ಚಾದರದೊಳಗಿಂದ…

ಗಾಢವಾಗಿ ಆವರಿಸಿಕೊಂಡ ಸಾವಿನ ಚಾದರದೊಳಗಿಂದ…

ಸಾವೇ ಹಾಗೆ ಅದು ಉಂಟು ಮಾಡು ಪರಿಣಾಮವೂ ತೀವ್ರತರವಾದದ್ದು. ಹತ್ತಿರದವರ ಸಾವು ನಮ್ಮ ಬದುಕನ್ನು ಪಲ್ಲಟಗೊಳಿಸುವ ರೀತಿ ಎಂಥವರನ್ನೇ ಆಗಲಿ ಮಾನಸಿಕವಾಗಿ ಕುಗ್ಗಿಸಿಬಿಡುತ್ತದೆ. ಅದು ಸಹಜವಾದ ಸಾವಾದರೆ ಅದನ್ನು ಸಹಜವಾಗಿಯೇ ಸ್ವೀಕರಿಸಲು ಪ್ರಯತ್ನಿಸಬಹುದು. ಆದರೆ ಅದು ಕೊಲೆಯೋ, ಆತ್ಮಹತ್ಯೆಯೋ ಆಗಿದ್ದರೆ, ನಿಜಕ್ಕೂ ಅದನ್ನು ಮನಸ್ಸು ಒಪ್ಪಲು, ನಂಬಲು ಸಿದ್ಧವಿರುವುದೇ ಇಲ್ಲ.
ಅಕಾಲಿಕ ಸಮಯದಲ್ಲಿ ಸಾವಿನ ಬಾಗಿಲು ತಟ್ಟಿದ ಹಲವು ಲೇಖಕಿಯರ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

read more
ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಯುಗಾದಿಗೆ ಪರಿಸರದ ಕುರಿತ ಮಾತೇಕೆ? ಎಂದು ಪ್ರಶ್ನಿಸಬಹುದು ನೀವು!! ಚೈತ್ರಮಾಸದ ಪ್ರಾರಂಭದ ದಿನ ಯುಗಾದಿಯ ಆಚರಣೆ. ಪ್ರಕೃತಿಯ ಜೊತೆ ನಮ್ಮ ಸಂಬಂಧವನ್ನು ಆಚರಣೆಗಳ ಮುಖಾಂತರ ಗಟ್ಟಿಗೊಳಿಸಿಕೊಳ್ಳುತ್ತಾ ಬಂದ ದೇಶ ನಮ್ಮದು. ಪ್ರಕೃತಿ ಪೂಜೆಯೇ ನಮ್ಮ ಪೂರ್ವಿಕರ ನೈಜ ಆಚರಣೆಗಳಾಗಿದ್ದವು ಎಂಬುದು ನಮಗೆಲ್ಲ ತಿಳಿದ ಸಂಗತಿಯೇ..
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

read more
ಕಪ್ಪು ಬಿಳುಪಿನಾಚೆಯ…. ಇರಟ್ಟ

ಕಪ್ಪು ಬಿಳುಪಿನಾಚೆಯ…. ಇರಟ್ಟ

ಕೊನೆಗೂ ವಿನೋದ್ ಸತ್ತಿದ್ದು ಹೇಗೆ?! ಊರ ತುಂಬ ಶತ್ರುಗಳನ್ನು ಸಂಪಾದಿಸಿದ ಅವನನ್ನು ಅವನು ಕೆಲಸ ಮಾಡುವ ಸ್ಟೇಷನ್ನಿನಲ್ಲಿಯೇ ಸಾಯಿಸಿದವರು ಯಾರು?! ಎನ್ನುವುದು ಚಿತ್ರದ ಕಥಾ ಹಂದರ. ಚಿತ್ರವನ್ನು ಮತ್ತೆ ಮತ್ತೆ ನೋಡುತ್ತಾ, ಅದು ಹೇಳುತ್ತಿರುವ ವಿಷಯವನ್ನು ಬಗೆಯುತ್ತಾ ಹೋದರೆ ಪ್ರತಿ ಸಲವೂ ಹೊಸ ಹೊಸ ಆಯಾಮಗಳು ಹೊಳೆಯುತ್ತವೆ, ಮನುಷ್ಯನ ಎರಡು ವೈರುಧ್ಯಗಳನ್ನ ಯಾವ ಅವಸರವಿಲ್ಲದೆ ಬೆನ್ನಲ್ಲೊಂದು ಛಳುಕು ಹುಟ್ಟಿಸುತ್ತ ಸಾಗುತ್ತದೆ.
ಮಲಯಾಳಂನ “ಇರಟ್ಟ” ಸಿನೆಮಾದ ಕುರಿತು ಜಯರಾಮಚಾರಿ ಬರಹ ನಿಮ್ಮ ಓದಿಗೆ

read more
ಜನಗಣಮನ..

ಜನಗಣಮನ..

ಎಲ್ಲರೂ ತಮ್ಮಷ್ಟಕ್ಕೆ ತಾವು ಮರೆತು ಹೋದವರಂತೆ ಗಪ್ ಚುಪ್! ಪ್ರತಿದಿನದ ಸಂತೆಯಾದ್ದರಿಂದ ಅಲ್ಲಿ ಅವರಿಗೆ ಎಲ್ಲವೂ ಯಾಂತ್ರಿಕ. ಆಕಳಿಕೆ ಬಂದರೂ ಕಸುವಾಕಿ ಬಿಗಿ ಹಿಡಿಯುತ್ತಾರೆ. ನೊಣವೊಂದು ಮೊಣಕಾಲು ತುರಿಸಿದರೂ ಹಲ್ಲುಕಚ್ಚಿ ಹಿಡಿಯುತ್ತಾರೆ. ನೆಟ್ಟ ನಿಂತ ಕಾಲು, ಸೆಟೆದು ನಿಂತ ಭಂಗಿ ಊಹೂಂ ಅಲುಗುವಂತಿತ್ರಿಕೆಯೊಂದಿಗೆ ಮಾತು ನಿಲ್ಲಿಸಿದವಳನ್ನು ಗಮನಿಸಿದ ಹಿರೇಮಣಿ ಜೋರಾಗಿ ಗದರುವಂತೆ ಸವಧನ್ ಗದರಿಸುತ್ತಾನೆ. ಕಾಲುಗಳು ಪಕ್ಕಕ್ಕೆ ಬಡಿದುಕೊಳ್ಳುತ್ತವೆ.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

read more
ಬದುಕ ಬೆಳಗಿಸುವ ಸರಳ ಸೂತ್ರಗಳು

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

read more
ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

read more
ದಯೆಯೆಂಬ ಧರ್ಮದ ಮೂಲ….

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ