Advertisement

ಸಂಪಿಗೆ ಸ್ಪೆಷಲ್

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

ಕೆ. ಎಸ್.ನ ಅವರ ಕವಿತೆಗಳಲ್ಲಿ ಮಣ್ಣಿನ ಹಾಡು

‘ನಿನ್ನ ಕಾಣದೆಯೆ ಬೆಳೆದೆ, ನಾ ಕಂಡಿಹೆ ತಾಯ ಸಂಪ್ರೀತಿಯನು ಚೆಲುವನು’ ಎನ್ನುವ ನಿರೂಪಕನಿಗೆ ತಂದೆ ಇಲ್ಲಿ ಅದೃಶ್ಯ ವ್ಯಕ್ತಿ ಅಥವಾ ಯಾವಾಗಲಾದರೊಮ್ಮೆ ಕಂಡರೂ, ಮಗ ‘ಕೈಬೀಸಿ ಕರೆದರೂ ರಾಜಾಧಿರಾಜನೆನ್ನುವ ಸೊಕ್ಕಿನಿಂದ’ ಮಗನ ಮೈಮುಟ್ಟದೆಯೇ ನಡೆವನು. ಆದರೆ ತಾಯಿಯಾದರೋ ‘ಮರುಭೂಮಿಯಲಿ ಮುಗಿಲ ತೊಟ್ಟಿಲ ಕಟ್ಟಿ, ಹಿಮ ಬೆಂಕಿ ಬಿರುಗಾಳಿ’ ಯ ವಿಕೋಪದ ನಡುವೆಯೂ ಹರುಷದಿಂದ ಅಮೃತವನ್ನೇ ಸೋಸಿ ಪೊರೆದವಳು.
ಇಂದು ಕವಿ ಕೆ.ಎಸ್. ನರಸಿಂಹಸ್ವಾಮಿಯವರ ಕವಿತೆಗಳ ಕುರಿತು ಗಿರಿಜಾ ಶಾಸ್ತ್ರಿ ಬರಹ

read more
ಟೆಂಟ್ ಸಿನಿಮಾನೂ ಮತ್ತು ಪೊರಕೆ ನ್ಯೂಸೂ

ಟೆಂಟ್ ಸಿನಿಮಾನೂ ಮತ್ತು ಪೊರಕೆ ನ್ಯೂಸೂ

ಮಲ್ಲೇಶ್ವರದ ಹದಿನೆಂಟನೇ ಕ್ರಾಸಿನಲ್ಲಿ ಅವರ ಮನೆಗೆ ಯಾವುದೋ ಸಮಾರಂಭಕ್ಕೆ ಹೋದ ನೆನಪಿದೆ. ಅಲ್ಲಿ ಅಪ್ಪ ಮಡಿಯಲ್ಲಿ ಪುಟ್ಟ ಪಂಚೆ ಕಚ್ಚೆ ಹಾಕಿಕೊಂಡು ಊಟ ಬಡಿಸಿದ ನೆನಪು; ಅಲ್ಲಿ ಮೊಟ್ಟ ಮೊದಲಬಾರಿಗೆ ಊಟದ ಎಲೆಗೆ ಹಳದಿ ಕೆಂಪು ಮಿಶ್ರಣದ ದೊಡ್ಡದಾಗಿ ಹೆಚ್ಚಿದ ಮಾವಿನ ಹಣ್ಣಿನ ಸಿಪ್ಪೆ ಇಲ್ಲದ ಹೋಳು ಬಡಿಸಿದ್ದು, ಅದನ್ನು ನಾನು ಗಬಗಬಾ ತಿಂದಿದ್ದು, ಎದುರು ಕೂತ ರೇಷ್ಮೆ ಸೀರೆ ಉಟ್ಟಿದ್ದ ಚಿಕ್ಕಮ್ಮನ ಹಾಗೆ ಕಾಣಿಸುತ್ತಿದ್ದ ದಪ್ಪನೆ ಹೆಂಗಸರೊಬ್ಬರು ಬಡಿಸುವವರನ್ನು ಕರೆದು ಮಗೂಗೆ ಇನ್ನೊಂದು ಸ್ವಲ್ಪ ಹಣ್ಣು ಬಡಿಸಿ ಅಂತ ಹೇಳಿದ್ದು…. ಎಚ್. ಗೋಪಾಲಕೃಷ್ಣ ಬರಹ

read more
ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

read more
ಚೊಕ್ಕಾಡಿಯ ಹಕ್ಕಿ

ಚೊಕ್ಕಾಡಿಯ ಹಕ್ಕಿ

ಅವರ ಓರಗೆಯ ಹಿರಿಯ ಲೇಖಕರಿರಲಿ, ಇತ್ತೀಚಿನ ಹೊಸ ಕವಿ ಲೇಖಕರಿರಲಿ ಚೊಕ್ಕಾಡಿಯವರು ಕಾಮನ್ ಫ್ಯಾಕ್ಟರ್ ಹಾಗೆ. ಅವರಿಗೆ ಹಳತು ಹೊನ್ನಿನ ಸಮುದ್ರವೂ ಗೊತ್ತು. ಹೊಸ ಹರಿವಿನ ಹಳ್ಳದೊರತೆಗಳೂ ಗೊತ್ತು. ವಿಮರ್ಶಿಸುವಾಗ ಸ್ಪಷ್ಟ ಮಾತುಗಳನ್ನು ಹೇಳುವ ನೇರವಂತಿಕೆ, ಹಾಗೆಂದು ಬರೆದವರ ಮನಸ್ಸು ಕುಗ್ಗಿಸದ ಹಾಗೆ ಆ ಬರಹದಲ್ಲಿನ ಒಳಿತನ್ನು ಮತ್ತೆ ಹುಡುಕಿ ಹೇಳಿ ಮುಂದಿನ ದಾರಿಗೊಂದು ಬೆಳಕು ಚೆಲ್ಲುವ ಹೃದಯವಂತಿಕೆ ಇವೆರಡೂ ಚೊಕ್ಕಾಡಿಯವರದ್ದು.
ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹದ ಕುರಿತು ಸಿಂಧುರಾವ್‌ ಟಿ. ಬರಹ

read more
ಶಾಲಾ ಕಾಲೇಜು ದಿನಗಳ ಮೆಲುಕು

ಶಾಲಾ ಕಾಲೇಜು ದಿನಗಳ ಮೆಲುಕು

ತರಗತಿಯಲ್ಲಿ ಹೆಚ್ಚು ಅಂಕ ತೆಗೆಯುವ ಹಾಗೂ ಅತಿ ಕಡಿಮೆ ಅಂಕ ತೆಗೆಯುವ ವಿದ್ಯಾರ್ಥಿ ಇವರಿಗೆ ಸಮಾನ ಪ್ರೀತಿಪಾತ್ರರು. ನಾನು ಎರಡನೇ ಗುಂಪಿನ ಖಾಯಂ ಸದಸ್ಯ. ಶಾಲೆಯಿಂದ ಹೊರಗೆ ಸಿಕ್ಕಾಗ ಬಾರೋ ಅಂತ ಕೂಗುವರು. ಎಷ್ಟು ಸೋಶಿಯಲ್ ಸ್ಟಡಿಸ್‌ನಲ್ಲಿ ಈ ಸಲ…. ಅಂತ ಕೇಳುವರು. ನೂರಕ್ಕೆ ಹನ್ನೆರೆಡು ಸಾರ್ ಅನ್ನುತ್ತಿದ್ದೆ. ಹೇಗೆ ಓದುವೆ, ಯಾವ ಹೊತ್ತಿನಲ್ಲಿ ಓದುವುದು…. ಹೀಗೆ ವಿಷಯ ತಿಳಿದು ಅದರ ಪರಿಷ್ಕರಣೆ ಮಾಡುತ್ತಿದ್ದರು.
ಶಾಲಾ ಕಾಲೇಜು ಮೇಷ್ಟರೊಟ್ಟಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ ಎಚ್. ಗೋಪಾಲಕೃಷ್ಣ

read more
ಸಂಬಂಧಗಳನ್ನು ಏಕೆ ತೊರೆಯಬೇಕು?

ಸಂಬಂಧಗಳನ್ನು ಏಕೆ ತೊರೆಯಬೇಕು?

ಕೆಲವು ಸಂಬಂಧಗಳು ಅಪ್ರಜ್ಞಾಪೂರ್ವಕವಾಗಿ ಕಳೆದುಹೋಗಬಹುದು. ಇನ್ನು ಕೆಲವು ಅಸಹಾಯಕತೆಯಿಂದ ಕಳೆದುಹೋಗುಬಹುದು. ಆದರೆ ಕೆಲವು ಸಂಬಂಧಗಳನ್ನು ನಾವೇ ಪ್ರಜ್ಞಾಪೂರ್ವಕವಾಗಿ ಮುರಿಯಬೇಕಾಗುತ್ತದೆ. ಒಬ್ಬ ಗೆಳೆಯ ನನ್ನಿಂದ ಅನೇಕ ರೀತಿಯಲ್ಲಿ ಉಪಕೃತನಾಗಿದ್ದ, ಸ್ನೇಹಶೀಲವಾಗಿಯೂ ಇದ್ದ. ಆದರೆ ನನಗೆ ಏನೂ ಗೊತ್ತಾಗುತ್ತಿಲ್ಲ ಎನ್ನುವ ಭ್ರಮೆಯಲ್ಲಿ ನನ್ನ ವಿರುದ್ಧವಾಗಿ ಹಿಂದುಗಡೆ ಕೆಲಸ ಮಾಡುತ್ತಿದ್ದ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ನಾಲ್ಕನೆಯ ಪ್ರಬಂಧ ನಿಮ್ಮ ಓದಿಗೆ

read more
ನೆರಿಗೆಬಿದ್ದ ನವಿಲುಗರಿ

ನೆರಿಗೆಬಿದ್ದ ನವಿಲುಗರಿ

ಮಲೆನಾಡಿಗೆ ಬಂದು ಬದುಕ ಕಟ್ಟಿಕೊಂಡ ಗಟ್ಟಿಗಿತ್ತಿ. ಇದೇ ಕಾರಣಕ್ಕೋ ಏನೋ ಕೆಲವೊಂದು ಭಾವ ಹೇಳದೆಯೂ ಅರ್ಥ ಮಾಡಿಕೊಂಡು ನಾನಿದ್ದೇನೆ ಎಂಬ ಗಟ್ಟಿ ಭಾವವನ್ನು ಬಿಗಿಯುತ್ತಿದ್ದಳು. ವಯಸ್ಸಿದ್ದಾಗ ಮನೆಗೆ ಬಂದವರನ್ನೆಲ್ಲಾ ಕೈಲಾದಷ್ಟು ಸತ್ಕರಿಸಿ, ಕೈಲಾಗದ ಇಳಿ ಮುಪ್ಪಲ್ಲಿಯೂ ಕಂಡವರನ್ನೆಲ್ಲ ಕರೆದು ಮಾತನಾಡಿಸಿ ಊರವರಿಗೆಲ್ಲರಿಗೂ ಹತ್ತಿರವಾಗಿದ್ದಳು. ಅಜ್ಜಿಯ ಈ ಅಂತಃಕರಣದ ಅಂತಃಶಕ್ತಿ ಅರಿವಾದದ್ದೇ ಅವಳು ಹೋದಾಗ.
ಹಿರಿಯರೊಟ್ಟಿಗಿನ ಮಾತುಗಳಲ್ಲಿ ಸಿಕ್ಕುವ ಜೀವನ ದರ್ಶನದ ಕುರಿತು ಬರೆದಿದ್ದಾರೆ ಶುಭಶ್ರೀ ಭಟ್ಟ

read more
ಮುನ್ನೂರ ಅರವತ್ತೈದು ದಿನಗಳ ಹೊಸ ತಃಖ್ತೆ!

ಮುನ್ನೂರ ಅರವತ್ತೈದು ದಿನಗಳ ಹೊಸ ತಃಖ್ತೆ!

ಹೊಸದಿನಗಳಲ್ಲಿ ನೀವು ಬರೆಯುವ ದಿನಾಂಕದಲ್ಲಿ ಹಳೆ ಇಸ್ವಿ ಇಣುಕುತ್ತದೆ. ಮತ್ತೆ ಮತ್ತೆ ಹಳೆಯದನ್ನೇ ಬರೆದು ಛೇ ಎಂದು ತಿದ್ದುತ್ತೇವೆ. ಹೊಸದಕ್ಕೆ ಹೊಂದುಕೊಳ್ಳುವುದಕ್ಕೆ ಸಮಯಬೇಕು. ಹಳೆಯದನ್ನು ಬಿಡುವುದಕ್ಕೆ ಸಮಯ ಬೇಕು. ಈ ಹಳೆಯದು ಮತ್ತು ಹೊಸದರ ಸಂಬಂಧ ‘ನ್ಯೂ ಇಯರ್’ ದಿನ ಕೇಕ್ ಕತ್ತರಿಸಿ ತೆಗೆದಂತೆ ಅಲ್ಲ. ಹೊಸದರೊಳಗೆ ಹಳೆಯದು ಸೇರಿಕೊಳ್ಳಬೇಕು. ಹಳೆಯದರ ಒಡಲಿನಲ್ಲಿ ಹೊಸತರ ಗುಟ್ಟಿರಬೇಕು.
ಸದಾಶಿವ ಸೊರಟೂರು ಪ್ರಬಂಧ

read more
ನನ್ನ ಉಂಡೆ ಪಂಚಮಿ ಕತೆ!

ನನ್ನ ಉಂಡೆ ಪಂಚಮಿ ಕತೆ!

ಪಾಕ ಹದಕ್ಕೆ ಬಂದಂತೆನಿಸಿತು. ಅಷ್ಟೂ ಸಾಮಾಗ್ರಿ ಸುರುವಿ ಗೊಟ.. ಗೊಟ.. ಗೊಟಾಯಿಸಿ ಪರಾತಕ್ಕೆ ಸುರುವಿದೆ. ಈಗಲೆ ಕಟ್ಟುವದೋ.. ಆರಿದ ನಂತರವೋ..? ಮತ್ತೆ ಓವರ್ ಟು ಅವ್ವಾ.. ತಲೆ ಇದ್ದಲ್ಲಿಂದಲೆ ಓಡಿತು. ಆರಿದ ಮೇಲೆ ಉಂಡೆಯಾಗುವದಿಲ್ಲವೋ ಮಂಕೆ. ಉಂಡೆ ಬಂಡೆಯಾಗುತ್ತದೆ.. ಅವ್ವ ತಿಳಿ ಹೇಳಿದಂತಾಯಿತು. ಅಂಗೈಗೆ ಎಣ್ಣೆ ನೀರು ಸವರಿಕೊಂಡು ಸುಡು ಸುಡುವದನ್ನೆ ಎಳೆದುಕೊಂಡೆ. ಬರೆ ಕೊಟ್ಟಂತಾಯಿತು. ಹಾ.. ಎಂದಿತು ಜೀವ. ಅದು ನೋವೋ ಸುಖವೋ ಅಂತೂ ಉಂಡೆಗಳೆಂಬ ಗುಂಡುಗಳು ತಯಾರಾದವು.
ಲಿಂಗರಾಜ ಸೊಟ್ಟಪ್ಪನವರ್ ಬರೆದ ಪ್ರಬಂಧ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ