ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು
ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ
ಚುಕ್ಕೆ ರಾಟುವಾಳ, ನಾನು ಮತ್ತು ನಂಬಿಕೆ
ಬಹುಶಃ ಒಂದು ತಿಂಗಳಲ್ಲಿ ಅವುಗಳ ಗೂಡು ತಯಾರಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ೧೨-೧೩ ದಿನಗಳಲ್ಲಿ ಆ ಎರಡು ಲವ್ ಬರ್ಡ್ಸ್ ತಮ್ಮ ಗೂಡಿಗೆ ನಾಲ್ಕು ಹೊಸ ಅತಿಥಿಗಳ ಕೊಡುಗೆಯನ್ನು ಜಗತ್ತಿಗೆ ನೀಡಿದವು. ಕಿಟಗಿ ಹಿಂಭಾಗದಲ್ಲಿ ಅರೆ ಪಾರದರ್ಶಕ ಗಾಜಿನೊಳಗಿಂದ ಅವುಗಳನ್ನು ನೋಡುತ್ತಾ ಬಹಳ ಖುಷಿಯಾದೆ. ಅವುಗಳನ್ನು ಕಂಡು ಮಕ್ಕಳಂತೂ ಹಿಗ್ಗಿ ಕುಣಿದಾಡಿದರು. ಬೆಳಿಗ್ಗೆ ಎದ್ದೊಡನೆ ಅವುಗಳ ದರ್ಶನ..
ಚುಕ್ಕೆ ರಾಟುವಾಳ ಹಕ್ಕಿಯೊಂದಿಗಿನ ಪ್ರಸಂಗವನ್ನು ಬರೆದಿದ್ದಾರೆ ಮಹಮ್ಮದ್ ರಫೀಕ್ ಕೊಟ್ಟೂರು
ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…
ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್ ಬರಹ ಇಲ್ಲಿದೆ
ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು
ಸೈಕಲ್ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ
ಒಲವಿನ ಬೆಳಕು ಬೆಳಗುವ ದೀಪದ ಹಬ್ಬ…
ಹಿಂದೆಲ್ಲಾ ದೀಪಾವಳಿಯೆಂದರೆ ಹೊಸ ಬಟ್ಟೆಯ ಹಬ್ಬ. ವರುಷಕ್ಕೊಮ್ಮೆ ಹೊಸ ಬಟ್ಟೆ. ಅದು ದೀಕುಂಕುಮ ಅವಿಭಕ್ತ ಕುಟುಂಬ ಪರಂಪರೆಯ ಮನೆಗಳು. ದೂರದೂರಿನಲ್ಲಿರುವ ಬಂಧುಗಳು ದೀಪಾವಳಿ ಬರುತ್ತಿದ್ದಂತೆ ಮನೆಗೆ ಬರುತ್ತಿದ್ದರು. ಜೊತೆಗೆ ಮನೆ ಮಕ್ಕಳಿಗೆ ಹೊಸ ಬಟ್ಟೆ, ಅಂಗಿ… ಹೊಸತನದ ಘಮ…. ಮನೆಯ ತುಂಬೆಲ್ಲ ಪಸರಿಸುತ್ತಿತ್ತು. ತ್ರಯೋದಶಿ ಸಂಜೆ ಗಂಗಾ ಪೂಜೆ… ನೀರು ತುಂಬುವ ಹಬ್ಬ. ಬಚ್ಚಲುಮನೆ ಶುಚಿಗೊಳಿಸಿ, ಹಂಡೆ ತಿಕ್ಕಿ ತೊಳೆದು ಫಳಫಳ ಹೊಳೆದು ಬಳಪದಿಂದ ಗೆರೆ ಎಳೆದು ಹಂಡೆಯ ಕೊರಳಿಗೆ ಗೊಂಡೆ ಹೂ(ಚೆಂಡು ಹೂ)ಗಳ ಮಾಲೆ ಹಾಕಿ….
ಬಾಲ್ಯಕಾಲದಲ್ಲಿ ದೀಪದ ಹಬ್ಬದ ಆಚರಣೆಗಳು ಹೇಗಿದ್ದವು.. ಅದರ ಮಹತ್ವವೇನು ಎಂಬುದರ ಕುರಿತು ಬರೆದಿದ್ದಾರೆ ಪೂರ್ಣಿಮಾ ಸುರೇಶ್
ಕಲಿಸುವಷ್ಟೇ, ಕಲಿಯುವುದೂ ಇದೆ…
ಈ ಪುಟ್ಟ ವೀಡಿಯೋ ಎತ್ತುವ ಪ್ರಶ್ನೆಗಳು ಅಸೀಮ. ನಾವು ಎಂಥ ವ್ಯವಸ್ಥೆ ಮತ್ತು ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ನೋವಾಗುತ್ತದೆ. ಆದರೆ ನೋಯುವುದಕ್ಕಿಂತ ಸಧ್ಯದ ಜರೂರತ್ತೆಂದರೆ ನಾವು ನಮ್ಮ ಹೆಣ್ಣುಮಕ್ಕಳ ಬ್ಯಾಗಿನಲ್ಲಿ ಕಸ್ಮೆಟಿಕ್ಸ್ ಗಳಿಗಿಂತಲೂ ಮುಖ್ಯವಾಗಿ ಒಂದು ಬ್ಲೇಡನ್ನೋ ಅಥವಾ ಪೆಪ್ಪರ್ ಸ್ಪ್ರೇಯನ್ನೋ ಇಟ್ಟುಕೊಳ್ಳುವ ಅಭ್ಯಾಸ ಮಾಡಿಸಬೇಕಿದೆ. ಮತ್ತದನ್ನು ಸರಿಯಾದ ಸಂದರ್ಭದಲ್ಲಿ ಸರಿಯಾಗಿ ಬಳಸುವುದನ್ನೂ ಕಲಿಸಬೇಕಿದೆ. ಯಾರೋ ಬಂದು ನಮ್ಮನ್ನು ಕಾಪಾಡುತ್ತಾರೆ ಎಂದು ಕಾಯುವ ಬದಲು, ನಮ್ಮನ್ನು ನಾವೇ ಕಾಪಾಡಿಕೊಳ್ಳುವುದು ಒಳಿತಲ್ಲವೇ…
ಆಶಾ ಜಗದೀಶ್ ಬರಹ ನಿಮ್ಮ ಓದಿಗೆ
ಕೈ ಹಿಡಿದು ಮುನ್ನಡೆಸುವ ಕತೆಗಳೆಂಬ ದೋಣಿಗಳು
ಸೂರ್ಯೋದಯದಲ್ಲೋ, ಸೂರ್ಯಾಸ್ತದಲ್ಲೋ ಆಗಸದಲ್ಲಿ ಚೆಲ್ಲಿ ಹೋದ ಬಣ್ಣಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಾ ಹೋದಂತೆ, ಗ್ರಹಿಕೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬದಲಾಗುತ್ತಲೇ ಇರುತ್ತವೆ. ಒಬ್ಬನೇ ವ್ಯಕ್ತಿಯು ಒಂದೊಂದು ಕಾಲದಲ್ಲಿ ಬದುಕನ್ನು ಗ್ರಹಿಸುವ ರೀತಿಯೂ ಬದಲಾಗಿರುತ್ತದೆಯಲ್ಲವೇ. ಹಾಗೆಯೇ ಈ ಕತೆಗಳು ಕೂಡ ಎಂದೆನಿಸುತ್ತದೆ. ಹಾಗೆ ನೋಡಿದರೆ ಎಷ್ಟೊಂದು ಕಲಾತ್ಮಕವಾದ ಕತೆಗಳನ್ನು ಬರೆದರೂ ʻಕತೆಗಾರರುʼ ರೂಪುಗೊಳ್ಳುವುದು ಓದುಗರ ಮನಸ್ಸಿನಲ್ಲಿ ಅಲ್ಲವೇ.
ಕತೆಗಳ ಜಾಡು ಹಿಡಿದ ಬರಹವೊಂದನ್ನು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.
ರಂಗಸ್ಥಳದಲ್ಲೀಗ ಸಮಯಮಿತಿಯ ವಾಗ್ವಿಲಾಸ
1985 ಕ್ಕಿಂತ ಮುಂಚೆಯೇ ಇಡಗುಂಜಿ ಮೇಳ ವಿವಿಧ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಕಾಲಮಿತಿಯ ಯಕ್ಷಗಾನ ಪ್ರದರ್ಶನವನ್ನು ಆರಂಭಿಸಿತ್ತು. 1968 ರಲ್ಲಿ ಮತ್ತು 1971ರಲ್ಲಿ ದೆಹಲಿಯಲ್ಲಿ ಜರಾಸಂಧವಧೆ, ಕರ್ಣಪರ್ವ ಮುಂತಾದ ಪ್ರಸಂಗಗಳನ್ನು ಕಾಲಮಿತಿಯಲ್ಲಿ ಪ್ರದರ್ಶಿಸಿತ್ತು. ಆ ಸಂದರ್ಭದಲ್ಲಿ ಜನರ ಮನಸ್ಸು ಇನ್ನು ಸಮಯಮಿತಿಗೆ ಒಗ್ಗಿಕೊಳ್ಳದ ಸಂದರ್ಭವಾದರೂ, ಸುಮಾರು 75ಕ್ಕೂ ಮಿಕ್ಕಿ ಪ್ರದರ್ಶನ ನಡೆಯಿತು. ಹಾಗೆ ನೋಡಿದರೆ ಜಗತ್ತಿನ ಯಾವ ರಂಗಭೂಮಿಗೊ, ನಾಟ್ಯಪ್ರಕಾರಕ್ಕೋ ʻಕಾಲಮಿತಿʼ ಎಂಬುದು ಒಂದು ಚರ್ಚಿಸಬೇಕಾದ ವಿಷಯವೇ ಅಲ್ಲ ಎನ್ನುವ ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಅವರು ಮೇಳವನ್ನು ನಡೆಸುವವರೂ ಹೌದು. ಹಿರಿಯ ಕಲಾವಿದರೂ ಹೌದು. ಅವರು ಬರೆದ ಲೇಖನ ಇಂದಿನ ಓದಿಗಾಗಿ.
‘ಸುದರ್ಶನ’: ಧ್ಯೇಯ ಆದರ್ಶಗಳ ದರ್ಶನ
ಸುದರ್ಶನನು ದೀನಾನಂದನಾಗಿ ಗಳಿಸಿದ ಜನಪ್ರಿಯತೆ, ಯಶಸ್ಸು, ನಿರ್ಲಿಪ್ತತೆ ಮತ್ತು ನೈತಿಕ ಕಟ್ಟುಪಾಡುಗಳಿಗೆ ಒಗ್ಗಿದ ಬದುಕಿನ ಕಡೆಗೆ ಕಾದಂಬರಿಯು ಗಮನವನ್ನು ಹರಿಸಿದ್ದರೂ ಇದನ್ನು ಕೇವಲ ಸುದರ್ಶನನ್ನು ಕುರಿತ ಕಾದಂಬರಿಯನ್ನಾಗಿ ಓದಲಾಗದು. ಆತನು ಕಾದಂಬರಿಯ ಪ್ರಧಾನ ಪಾತ್ರವಾದರೂ ಇವನೊಂದಿಗೆ ವೈದೃಶ್ಯದಲ್ಲಿ ನಿಲ್ಲಬಲ್ಲ ಹಲವು ಪಾತ್ರಗಳು ಇವೆ. ಆ ಪಾತ್ರಗಳು ಸೂಚಿಸುವ ಬಹುಮುಖೀ ನೆಲೆಗಳ ಒಟ್ಟು ವಿನ್ಯಾಸದಲ್ಲಿ ಕಾದಂಬರಿಯನ್ನು ಗ್ರಹಿಸಬೇಕಾಗುತ್ತದೆ. ಆನಂದಕಂದರ ‘ಸುದರ್ಶನ’ ಕಾದಂಬರಿಯ ಕುರಿತು ಡಾ. ಸುಭಾಷ್ ಪಟ್ಟಾಜೆ ಬರಹ ನಿಮ್ಮ ಓದಿಗೆ









