Advertisement

ಸಂಪಿಗೆ ಸ್ಪೆಷಲ್

ಸರಕು ಮತ್ತು ಸಂಪ್ರದಾಯ

ಸರಕು ಮತ್ತು ಸಂಪ್ರದಾಯ

ಎಲ್ಲವೂ ಸರಕಾಗುತ್ತಿರುವ ಸಮಾಜದಲ್ಲಿ ನಾವಿರುವಾಗ ಸಂಪ್ರದಾಯದ ಮೇಲೆ ಅದರ ಪರಿಣಾಮಗಳೇನು? ಸರ್ವವ್ಯಾಪಿಯಾದ ವ್ಯವಸ್ಥೆ ಸಂಪ್ರದಾಯವನ್ನು ಮುಟ್ಟದೇ ಇರುತ್ತದೆಯೇ? ಸಂಪ್ರದಾಯದ ಪ್ರತಿಕ್ರಿಯೆಯ ಸಮಸ್ಯೆಗಳೇನು ಎನ್ನುವುದನ್ನು ನೋಡೋಣ. ಸಂಪ್ರದಾಯವೆನ್ನುವುದು ಸರಳವಾಗಿ ಹೇಳುವುದಾದರೆ ನಮ್ಮ ಹಿರಿಯರಿಂದ ಬಂದಿದ್ದು. ಪೀಳಿಗೆಯಿಂದ ಪೀಳಿಗೆಗೆ ಬರುವಂತದ್ದು. ಹಿರಿಯರು, ಪೀಳಿಗೆ ಅಂದಾಗ ಅದು ಸಮುದಾಯವನ್ನು, ಕುಟುಂಬವನ್ನು ಒಳಗೊಂಡಿದೆ ಎನ್ನುವುದನ್ನು ಸೂಚಿಸುತ್ತದೆ. ಕೃತಿ ಪುರಪ್ಪೇಮನೆ ಬರೆಯುವ “ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಹೊಸ ಬರಹ

read more
ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

read more
ಅಕ್ಕಂದಿರೊಟ್ಟಿಗೆ ಆಗಸದ ಚುಕ್ಕಿ, ತಾರೆಗಳೆಣಿಸುತ್ತಾ..

ಅಕ್ಕಂದಿರೊಟ್ಟಿಗೆ ಆಗಸದ ಚುಕ್ಕಿ, ತಾರೆಗಳೆಣಿಸುತ್ತಾ..

ಬೆಳಗ್ಗೆ ಅಂಬಲಿಯೋ, ಬೆಣ್ಣೆ ಹಾಕಿದ ಬಿಸಿಬಿಸಿ ರೊಟ್ಟಿಯನ್ನೋ ತಿಂದು, ಅಡುಗೆ ಮನೆ ಕೆಲಸಗಳನ್ನು ಮಾಡಿ, ಜೊತೆಗೆ ಕೊಟ್ಟಿಗೆ ದನಕರುಗಳ ಕೆಲಸವಾದ ಮೇಲೆ, ಮಧ್ಯಾಹ್ನ ಊಟಕ್ಕಿಂತ ಮೊದಲು ಎಲ್ಲರೂ ಸ್ನಾನ ಮಾಡಿಕೊಳ್ಳುತ್ತಿದ್ದರು. ಅಲ್ಲೆಲ್ಲ ಮಧ್ಯಾಹ್ನದ ಹೊತ್ತಿಗೆ ರಣರಣ ಬಿಸಿಲು. ಹಾಗಾಗಿ ಆ ಹೊತ್ತಿನಲ್ಲಿ ಕೆಲಸ ಸಾಗುತ್ತಲೇ ಇರುತ್ತಿರಲಿಲ್ಲ. ಹಾಗಾಗಿ, ಬಹುತೇಕವಾಗಿ ಇಬ್ಬರು ಅಕ್ಕಂದಿರು, ಎಲ್ಲರ ಬಟ್ಟೆಗಳನ್ನೂ ಹಾಗೂ, ಪಾತ್ರೆಗಳನ್ನೂ ಒಂದೊಂದು ಬುಟ್ಟಿಗಳಲ್ಲಿ ಹಾಕಿಕೊಂಡು ಕೆರೆಗೆ ಹೋಗಿ ಅವನ್ನೆಲ್ಲ ತೊಳೆದುಕೊಂಡು ಬರುತ್ತಿದ್ದರು.
ರೂಪಶ್ರೀ ಕಲ್ಲಿಗನೂರ್‌ ಬರಹ ಇಂದಿನ ಓದಿಗಾಗಿ

read more
ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

read more
ಅಜ್ಜರಕಾಡು ಮತ್ತು ಅಜ್ಜ

ಅಜ್ಜರಕಾಡು ಮತ್ತು ಅಜ್ಜ

ಆಸ್ಪತ್ರೆಗೆ ಸೇರಿಸಿದ ಒಂಬತ್ತು ದಿನದವರೆಗೆ ಶೆಟ್ರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಅವರು ನಂಬಿಕೊಂಡು ಬಂದ ಮನೆ ದೈವವಾದ ಅಬ್ಬಗ-ದಾರಗೆಯ ದಿನನಿತ್ಯದ ಪೂಜೆ ಪುನಸ್ಕಾರ ಮಾತ್ರವಲ್ಲದೆ ವರ್ಷಾವಧಿ ಜಾತ್ರೆಯ ಎಲ್ಲ ವಿಧಿ ವಿಧಾನಗಳನ್ನು ನಿಷ್ಠೆಯಿಂದ ಮಾಡಿಕೊಂಡು ಬಂದವರು. ಈಗ ಆ ದೇವಾಲಯದ ಪೂಜೆ ಮಾಡುವ ಭಟ್ರು ವಿಠ್ಠಲಶೆಟ್ಟಿಗಾಗಿ ವಿಶೇಷ ಹೂವಿನ ಪೂಜೆಯನ್ನು ಮಾಡಿ ಅದರ ಗಂಧ ಪ್ರಸಾದವನ್ನು ಆಸ್ಪತ್ರೆಗೆ ತಂದು ವಿಠಲ ಶೆಟ್ರ ಹಣೆಗೆ ಹಚ್ಚಿದ ನಂತರ ಅವರ ದೇಹಸ್ಥಿತಿಯಲ್ಲಿ ತುಸು ತುಸುವೇ ಬದಲಾವಣೆ ಆಗಿ ಅವರು ಚೇತರಿಸತೊಡಗಿದ್ದರು.
ದೇವಿಕಾ ನಾಗೇಶ್‌ ಬರೆದ ಪ್ರಬಂಧ ನಿಮ್ಮ ಓದಿಗೆ

read more
ಸ್ತ್ರೀ ವೇಷ: ಕೆಲವು ಬಿಡಿ ಆಲೋಚನೆಗಳು

ಸ್ತ್ರೀ ವೇಷ: ಕೆಲವು ಬಿಡಿ ಆಲೋಚನೆಗಳು

ಶೈಲೀಕೃತ ಮಾಧ್ಯಮವಾದ ಯಕ್ಷಗಾನದಲ್ಲಿನ ಸ್ತ್ರಿ ಪಾತ್ರದ ಅತೀ ನಾಟಕೀಯತೆಯ ಶಕ್ತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ, ಅದು ನನಗೆ ಪ್ರತಿರೋಧದ ಮಾದರಿಯಾಗಿ ಕಾಣುವುದಕ್ಕೆ ಅಥವಾ ಹಲವು ಸಾಧ್ಯತೆಗಳಿವೆ ಎಂದು ಅನ್ನಿಸುವುದಕ್ಕೆ ಸ್ವಲ್ಪ ವಿವರಣೆ ಬೇಕಾಗಬಹುದು. ಪ್ರಸಂಗಗಳನ್ನು ನೋಡುವಾಗ ಸ್ತ್ರೀ ಪಾತ್ರಗಳ ಆಯಾಮ ಹೆಚ್ಚಾಗಿ ಹೇಗಿರುತ್ತದೆ ಎಂದರೆ ಮೇಲೆ ಹೇಳಿದ ಮೌಲ್ಯಗಳ ಪ್ರಸಾರ ಅಥವಾ ಬೋಧನೆ ರೂಪದಲ್ಲಿರುತ್ತದೆ. ಅಂದರೆ ಹೆಣ್ಣು ಹೇಗಿರಬೇಕೆಂದು ಉಪದೇಶ ಮುಗಿಸಿ, ಈಗ ಮುಂದಿನ ಕತೆಯೊ, ದೃಶ್ಯಕ್ಕೊ ಹೋಗುವುದು ಅನ್ನುವ ಹಾಗಿರುತ್ತದೆ.
ಕೃತಿ ಆರ್ ಪುರಪ್ಪೇಮನೆ ಬರೆಯುವ ಅಂಕಣ “ಯಕ್ಷಾರ್ಥ ಚಿಂತಾಮಣಿ”

read more
ಸ್ಪರ್ಧೆಗಳ ಗುಂಗಿನಲ್ಲೊಂದು ಕಥಾ ಕಾಲಕ್ಷೇಪ

ಸ್ಪರ್ಧೆಗಳ ಗುಂಗಿನಲ್ಲೊಂದು ಕಥಾ ಕಾಲಕ್ಷೇಪ

ಕಾವ್ಯ, ಪ್ರಬಂಧ, ನಾಟಕ, ಪದ್ಯ, ಕಂದ ಪದ್ಯಗಳು, ಚುಟುಕು, ಸುನೀತ ಎಂದೆಲ್ಲ ಹತ್ತಾರು ಪ್ರಕಾರಗಳನ್ನು ನಾವು ಸಾಹಿತ್ಯ ಲೋಕದಲ್ಲಿ ಗುರುತಿಸಿದರೂ, ಈ ಕತೆಯೆಂಬ ಮಾಯಾವಿ ಮಾತ್ರ ಈ ಎಲ್ಲ ಪ್ರಕಾರದೊಳಗೂ, ಹೂವೊಳಗೆ ಕಂಪು ಸೇರಿದಂತೆ ವ್ಯಾಪಿಸಿಕೊಂಡುಬಿಡುತ್ತದೆ. ಕಾವ್ಯದೊಳಗೊಂದು ಕತೆಯ ಛಾಯೆಯಿರುತ್ತದೆಯಲ್ಲವೇ. ಪ್ರಸ್ತುತ ಸಾಹಿತ್ಯ ಲೋಕದ ಸ್ಪರ್ಧೆಗಳನ್ನು ತೆಗೆದುಕೊಂಡರೂ, ಕಥಾ ಸ್ಪರ್ಧೆಗಳು ಸದ್ದು ಮಾಡಿದಷ್ಟು ಇತರ ಸ್ಪರ್ಧೆಗಳು ಸದ್ದು ಮಾಡುವುದು ಅಪರೂಪ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ಇಲ್ಲಿದೆ.

read more
ಸಹೃದಯರ ಅಂತರಂಗವನ್ನು ಘಾಸಿಗೊಳಿಸುವ ಕ್ಷಣಗಳಿವು

ಸಹೃದಯರ ಅಂತರಂಗವನ್ನು ಘಾಸಿಗೊಳಿಸುವ ಕ್ಷಣಗಳಿವು

ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳನ್ನು ಒಪ್ಪಿಕೊಳ್ಳುವ, ತಪ್ಪುಗಳನ್ನು ತಿದ್ದಿಕೊಳ್ಳುವ ಸುಂದರ ವಾತಾವರಣವು ಮಾಸಿ ಹೋಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಸಂದರ್ಭದಲ್ಲಿ ಬರಹಗಾರರು ಗೊಂದಲದ ಮನಸ್ಥಿತಿಯಲ್ಲಿದ್ದಾರೆ. ನಿಜವಾಗಿಯೂ ಸಾಹಿತ್ಯ ಕೃತಿಯೊಂದರ ಉದ್ದೇಶವೇನಪ್ಪಾ ಎಂಬ ಪ್ರಶ್ನೆಯೊಂದು ಧುತ್ತನೇ ನಮ್ಮೆದುರು ನಿಂತಿರುವಂತಿದೆ. ಈ ಹಿನ್ನೆಲೆಯಲ್ಲಿ ಕಾದಂಬರಿಕಾರ ಶ್ರೀಧರ ಬಳಗಾರ ಅವರೊಡನೆ ಕೋಡಿಬೆಟ್ಟು ರಾಜಲಕ್ಷ್ಮಿ ನಡೆಸಿದ ಮಾತುಕತೆಯ ತುಣುಕೊಂದು ಇಲ್ಲಿದೆ.

read more
ಚಹಾ ಎಂಬ ಖಾಸಾ ದೋಸ್ತನ ಕತಿಯಿದು

ಚಹಾ ಎಂಬ ಖಾಸಾ ದೋಸ್ತನ ಕತಿಯಿದು

ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಚಹದಷ್ಟು ಪ್ರಿಯವಾದ ಪಾನೀಯ ಮತ್ತೊಂದಿಲ್ಲ. ಪರೀಕ್ಷೆಗೆ ಸಿದ್ಧತೆ ನಡೆಸುವ ಸಂದರ್ಭದಲ್ಲಿ ಚಹದ ಬೇಡಿಕೆ ಮತ್ತು ಪೂರೈಕೆ ತುಂಬ ಹೆಚ್ಚಾಗಿರುತ್ತದೆ. ಅರ್ಧ ತಾಸಿಗೊಮ್ಮೆ ಚಹ ಕುಡಿಯದಿದ್ದರೆ ಓದಲು ಮನಸ್ಸೇ ಬರುವುದಿಲ್ಲ. ಪರೀಕ್ಷೆಯ ಸೀಜನ್ನು ಬಂದಾಗ ಧಾರವಾಡದಲ್ಲಿ ಅರ್ಧ ರಾತ್ರಿಯವರೆಗೂ ಚಹದಂಗಡಿಗಳು ತೆರೆದಿರುತ್ತವೆ.
ಉತ್ತರ ಕರ್ನಾಟಕದಲ್ಲಿ ಜನಜೀವನದ ಭಾಗವೇ ಆಗಿರುವ ಚಹ ಸೇವನೆಯ ಕುರಿತು ವಿಕಾಸ ಹೊಸಮನಿ ಬರೆದ ಪ್ರಬಂಧ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ