Advertisement

ಸಂಪಿಗೆ ಸ್ಪೆಷಲ್

ಔದಾರ್ಯದ ಉರುಳಲ್ಲಿ ಚಿಕ್ಕೋಳೂ ಹಿರಿದಿಮ್ಮಿ

ಔದಾರ್ಯದ ಉರುಳಲ್ಲಿ ಚಿಕ್ಕೋಳೂ ಹಿರಿದಿಮ್ಮಿ

ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕೆಂಬುದು ನಿಜವಾದರೂ, ಔದಾರ್ಯವು, ನೀಡುವವನ ಬದುಕನ್ನೆ ಕಸಿದುಕೊಳ್ಳುವಷ್ಟು ಅತಿಯಾಗಿ ಇರಬಾರದೇನೋ. ಜನಪದ ಕಥನ ಕಾವ್ಯವಾದ ‘ಚಿಕ್ಕೋಳು ಹಿರಿದಿಮ್ಮಿ’ಯಲ್ಲಿ ಮನುಷ್ಯರ ಔದಾರ್ಯ, ಪ್ರಾಣಿಗಳ ಪ್ರಾಮಾಣಿಕತೆಯ ಉತ್ತುಂಗದ ಪರಿಚಯವಾದಂತೆಯೇ, ಮನುಷ್ಯರು ಮೃಗಕ್ಕಿಂತಲೂ ಕೀಳಾಗಿ ವರ್ತಿಸುವ ಮತ್ತೊಂದು ಪಾತ್ರದ ಪರಿಚಯವೂ ಆಗುತ್ತದೆ. ಈ ಖಂಡ ಕಾವ್ಯದ ಕತೆಯನ್ನು ಹೇಳಿದ್ದಾರೆ ಲೇಖಕಿ ಸುಮಾವೀಣಾ.

read more
ತಪ್ಪು ಮಾಡುವುದಿಲ್ಲವೆಂದು ಎಷ್ಟೇ ನಿರ್ಣಯಿಸಿದರೂ…

ತಪ್ಪು ಮಾಡುವುದಿಲ್ಲವೆಂದು ಎಷ್ಟೇ ನಿರ್ಣಯಿಸಿದರೂ…

ತಾಯಿಯ ಗರ್ಭದಲ್ಲಿರುವ ಭ್ರೂಣವೊಂದು ಹಿಂದಿನ ಜನ್ಮದಲ್ಲಿ ತಾನು ಮಾಡಿದ ತಪ್ಪುಗಳನ್ನೆಲ್ಲ ನೆನಪಿಸಿಕೊಳ್ಳುತ್ತದೆ. ಮುಂದಿನ ಜನ್ಮದಲ್ಲಿ ಅಂತಹ ತಪ್ಪುಗಳನ್ನು ಖಂಡಿತಾ ಮಾಡುವುದಿಲ್ಲವೆಂದು ನಿಕ್ಕಿ ಮಾಡಿಕೊಳ್ಳುತ್ತದೆ. ಯಾವುದು ಆ ತಪ್ಪುಗಳು ಎಂದು ಸಿಂಹಾವಲೋಕನ ಮಾಡಿದರೆ -ಅವುಗಳೇ ಜೀವನದ ಹತ್ತು ಅವಸ್ಥೆಗಳು. ಗುರುಗ್ರಂಥದಲ್ಲಿರುವ ‘ಗುರುಬನಿ’ಯೊಂದನ್ನುಆಯ್ದುಕೊಂಡು ಪ್ರಸಿದ್ಧ ಭರತನಾಟ್ಯ ಕಲಾವಿದೆ ರಮಾವೈದ್ಯನಾಥನ್ ಅವರು ಅದನ್ನು ರಸಿಕವರ್ಗಕ್ಕೆ ಉಣಬಡಿಸಿದ ನೃತ್ಯರೂಪಕವೇ ಜೀವದಶಾವಸ್ಥಾ. ಈ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಲೇಖನವೊಂದು ಇಂದಿನ ಓದಿಗಾಗಿ.

read more
ಪೂರಂ ಎಂಬ ಸಂಭ್ರಮವೂ ಆನೆಗಳ ಗಾಂಭೀರ್ಯವೂ

ಪೂರಂ ಎಂಬ ಸಂಭ್ರಮವೂ ಆನೆಗಳ ಗಾಂಭೀರ್ಯವೂ

ನಾವು ಅಲ್ಲಿಗೆ ಹೋಗಿ ತಾಸು ಹೊತ್ತಿನ ಮೇಲೆ ಒಂದೊಂದೇ ಆನೆಗಳು ಮೆಲ್ಲಗೆ ತಮ್ಮ ಮೇಲೆ ನಿಂತಿದ್ದ ಎರಡು-ಮೂರು ಜನ ಹಾಗೂ ಮಾವುತರೊಟ್ಟಿಗೆ, ದೇವಸ್ಥಾನದ ಒಳಗೆ ಹೊರಡಲಾರಂಭಿಸಿದವು. ನಮಗೆ ಮೂರ್ನಾಲ್ಕು ಆನೆಗಳನ್ನು ಹತ್ತಿರದಿಂದಲೇ ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಇನ್ನೇನು ಆ ಕಾರ್ಯಕ್ರಮ ಮುಗಿಯುವ ಹಂತಕ್ಕೆ ಬಂದಾಗ, ನಾವು ಮೆಲ್ಲನೆ ಅಲ್ಲಿಂದ ಹೊರಟು, ಕಾಂಪೌಂಡ್‌ನ ಇನ್ನೊಂದು ಬದಿಗೆ ಬಂದು, ಆನೆಗಳ ಸಾಲು ನಿಂತಿದ್ದಲ್ಲಿಗೆ ಹೋದಾಗ, ಅಲ್ಲಿ ಆಗಲೇ ಜನರ ಗುಂಪು ಮೆಲ್ಲನೆ ಕರಗಲಾರಂಭಿಸಿದ ಕಾರಣ, ಅಲ್ಲಿ ಇನ್ನೊಂದಷ್ಟು ಹತ್ತಿರದಿಂದ ಆನೆಗಳನ್ನು ಕಾಣಲು ಸಿಕ್ಕಿತು.
ಕೇರಳದ ತ್ರಿಶ್ಶೂರ್‌ ಪೂರ ಕುರಿತು ತಮ್ಮ ಅನುಭವಗಳನ್ನು ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

read more
ಹಾಗಾದರೆ ನಾನು ನಿಮಗೆ ಬೇಡವಾ.. ಮಳೆಯದ್ದೊಂದು ಪ್ರಶ್ನೆ

ಹಾಗಾದರೆ ನಾನು ನಿಮಗೆ ಬೇಡವಾ.. ಮಳೆಯದ್ದೊಂದು ಪ್ರಶ್ನೆ

ಈ ಮಳೆಯೋ ಜೀವ ಸಂಕುಲವನ್ನು ಉಳಿಸಲೆಂದೇ ದೇವರು ಬಂದಂತೆ ಪ್ರತೀ ವರ್ಷ ನಮ್ಮ ಮೇಲೆ ನಂಬಿಕೆಯಿಟ್ಟು ಬರುತ್ತದೆ. ಅದು ಕೊಡುವ ಖುಷಿಯಿಂದ ಕವನವೊಂದು ಮೊಳಕೆಯೊಡೆದರೆ ಆ ಸಾಲುಗಳನ್ನು ಯಾರೊಡನೆ ಹಂಚಿಕೊಳ್ಳಬೇಕು ಎಂದು ತಿಳಿಯದೇ ಮನಸ್ಸು ತಬ್ಬಿಬ್ಬಾಗುತ್ತದೆ. ಎಲ್ಲಿಯೂ ಹರಿದು ಹೋಗಲು ಒಂದಿಷ್ಟು ಜಾಗವಿಲ್ಲದೇ, ಬಂಧಿಯಾದಂತೆ ಚಡಪಡಿಸುವ ಮಳೆನೀರಿಗೆ ‘ಪ್ರವಾಹ’ವೆಂಬ ನಾಮಕರಣವಾಗಿದೆ. ಆದರೂ ಈ ಮಳೆಯೋ ನಿಸ್ವಾರ್ಥಿ ಪ್ರೇಮಿಯಂತೆ ನಮ್ಮನ್ನು ಹಚ್ಚಿಕೊಂಡು, ಮುದ್ದಿಸುತ್ತ ಸುಮ್ಮನೇ ಸುರಿಯುತ್ತಿದೆ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಇಂದಿನ ಓದಿಗಾಗಿ.

read more
ಪುರಸ್ಕಾರ ದೊಡ್ಡದೋ ನಗದು ದೊಡ್ಡದೋ: ಒಂದು ಸಾಹಿತ್ಯಿಕ ಜಿಜ್ಞಾಸೆ

ಪುರಸ್ಕಾರ ದೊಡ್ಡದೋ ನಗದು ದೊಡ್ಡದೋ: ಒಂದು ಸಾಹಿತ್ಯಿಕ ಜಿಜ್ಞಾಸೆ

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನೇಕ ರೀತಿಯ ಪ್ರಶಸ್ತಿಗಳಿವೆ. ಕನ್ನಡ ಸಾಹಿತ್ಯ ಕ್ಷೇತ್ರವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅನೇಕ ಮಂದಿ ಹಿರಿಯರು, ಪೂರ್ವಿಕರು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಪ್ರಶಸ್ತಿಗಳನ್ನು ನೀಡಲು ದತ್ತಿನಿಧಿಗಳನ್ನು ಸ್ಥಾಪಿಸಿದ್ದಾರೆ. ಆದರೆ ಆ ದತ್ತಿನಿಧಿಯ ಬಡ್ಡಿ ಮೊತ್ತ ಕಿರಿದಾಗುತ್ತಿರುವುದರಿಂದ, ಪ್ರಸ್ತುತ ಪ್ರಶಸ್ತಿಯ ಜೊತೆಗಿರುವ ನಗದು ಬಹುಮಾನವು ತೀರಾ ಕಿರಿದಾಗಿದೆ. ಅದನ್ನು ಹೆಚ್ಚಿಸುವ ಅಥವಾ ಪ್ರಶಸ್ತಿಯ ವಿಧಾನವನ್ನು ಪರಿಷ್ಕರಿಸುವ ಪ್ರಯತ್ನಗಳಾಗಬೇಕು ಎಂಬ ನಿಟ್ಟಿನಲ್ಲಿ ಲೇಖನವೊಂದನ್ನು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿದ್ದಾರೆ.

read more
ತನ್ನ ಪಾಡಿಗೆ ಬೆಳಗನ್ನು ಆನಂದಿಸುತ್ತಿದ್ದ ಕವಿಮನೆ

ತನ್ನ ಪಾಡಿಗೆ ಬೆಳಗನ್ನು ಆನಂದಿಸುತ್ತಿದ್ದ ಕವಿಮನೆ

ಕವಿಶೈಲಕ್ಕೆ ಎಷ್ಟೊಂದು ಜನರು  ಪ್ರವಾಸಿಗರಾಗಿ ಬಂದಿದ್ದರು !  ಬಂದಷ್ಟು ಜನರಲ್ಲಿ ಕೇವಲ ಒಂದು ಪರ್ಸೆಂಟ್‌ ನಷ್ಟು ಮಾತ್ರದವರು ಕೆಲಕಾಲ ಸುಮ್ಮನೆ ಇದ್ದು ಹೋದರು. ಬಹುತೇಕರು ಎಲ್ಲಿ ನಿಂತುಕೊಂಡರೆ ಫೋಟೋ ಚೆನ್ನಾಗಿ ಬರಬಹುದು? ರೀಲ್ಸ್‌ಗೆ ಯಾವ ಜಾಗ ಸೂಕ್ತ? ಅನ್ನುವ ಯೋಚನೆಯಲ್ಲಿದ್ದವರೇ. ಸುತ್ತಲಿನ ಮೌನವನ್ನು ಸವಿಯುವುದಕ್ಕೆ ಮುಂಜಾನೆ  ಮಂಜಿನಲ್ಲಿ ಕುಪ್ಪಳಿಯ ಕವಿಮನೆ ಮತ್ತು ಕವಿಶೈಲಕ್ಕೆ ಭೇಟಿ ನೀಡಿದ ಒಂದು ಅನುಭವವನ್ನು ಪ್ರಸ್ತುತಪಡಿಸಿದ್ದಾರೆ ರೂಪಶ್ರೀ ಕಲ್ಲಿಗನೂರು.

read more
ಸರಳ ಸತ್ಯಗಳ ಮರೆತು ಹಸಿರ ಹರಿಯುವ ನಾವು..

ಸರಳ ಸತ್ಯಗಳ ಮರೆತು ಹಸಿರ ಹರಿಯುವ ನಾವು..

ಕಾಡನ್ನೇ ಆಶ್ರಯಿಸಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಆದಿವಾಸಿ ಸಮುದಾಯಗಳು ಅರಣ್ಯ ಪರಿಸರದ ವಿಶಿಷ್ಟತೆಯನ್ನು ಕಾಪಿಟ್ಟುಕೊಳ್ಳುವಲ್ಲಿ ಮಹತ್ತರ ಪಾತ್ರವನ್ನು ಹೊಂದಿವೆ. ಔಪಚಾರಿಕ ಶಿಕ್ಷಣವನ್ನು ಪಡೆಯದೆಯೂ ಇಂತಹ ಸಮುದಾಯಗಳ ಜನರು ಹೊಂದಿರುವ ಜ್ಞಾನ ವಿಸ್ತಾರವಾದುದು. ಅವರಿಗೆ ದೊರೆತ  ತಿಳಿವಳಿಕೆಯು ಅರಣ್ಯಜನ್ಯವಾದುದು.  ಈ ಸಮುದಾಯಗಳ ಆಚರಣೆ- ನಂಬಿಕೆಗಳು ಅರಣ್ಯಕೇಂದ್ರಿತವಾಗಿವೆ ಮತ್ತು ಅರಣ್ಯಪರವಾಗಿವೆ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಪರಿಸರ ಕುರಿತ ಬರಹ

read more
ಉಪದ್ರವಿ ಸಾಹಿತಿಗಳು ಬೇಕಾಗಿದ್ದಾರೆ: ಕುಂ. ವೀರಭದ್ರಪ್ಪ

ಉಪದ್ರವಿ ಸಾಹಿತಿಗಳು ಬೇಕಾಗಿದ್ದಾರೆ: ಕುಂ. ವೀರಭದ್ರಪ್ಪ

ಬಳ್ಳಾರಿಯ ಕಡಕ್ ಭಾಷೆಯಲ್ಲಿ ಮಾತನಾಡುವ ಸಾಹಿತಿ ಕುಂ.ವೀರಭದ್ರಪ್ಪ ಅವರು, ಪ್ರತಿಭಟನೆ, ಪ್ರಶ್ನಿಸುವ ಮನೋಭಾವವನ್ನು ಇಷ್ಟಪಡುವವರು. ಸ್ವಭಾವಕ್ಕೆ ತಕ್ಕಂತೆ ಬಂಡಾಯವನ್ನು ಮೆಚ್ಚಿಕೊಂಡು ಸಾಹಿತ್ಯ ಕೃಷಿ ಮಾಡಿದ ಅವರು ಬರೆದ ‘ಅರಮನೆ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಸಂದಿದೆ. ಇತ್ತೀಚೆಗೆ ಅವರಿಗೆ ಜೀವಬೆದರಿಕೆಯ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಅವರೊಡನೆ ಒಂದಿಷ್ಟು ಹೊತ್ತು ಮಾತನಾಡಿದಾಗ ಕನ್ನಡ ಸಾಹಿತ್ಯ ಲೋಕದ ಕುರಿತು ಅನೇಕ ವಿಷಯಗಳನ್ನು ಹಂಚಿಕೊಂಡರು.

read more
ಸೀರೆ ಎಂಬ ಮಾಯಾವಿನಿ

ಸೀರೆ ಎಂಬ ಮಾಯಾವಿನಿ

ಸೀರೆ ಎಂಬ ಈ ವಿಚಿತ್ರ. ವಿಶಿಷ್ಟ ಉಡುಪು ಯಾಕೆ ಮತ್ತು ಹೇಗೆ ರೂಪು ತಳೆದಿರಬಹುದು ಎಂದು ಯೋಚಿಸುತ್ತ ಹೋದ ಹಾಗೂ ಇದು ಪುರುಷ ಪ್ರಧಾನ ವ್ಯವಸ್ಥೆಯ ರಾಜಕಾರಣದ ಒಂದು ಭಾಗವಾಗಿ ಬೆಳೆದಿದೆ ಅನ್ನಿಸಿದೆ. ಸಂಸ್ಕೃತಿ, ಸಂಪ್ರದಾಯಗಳ ಹೆಸರಿನಲ್ಲಿ ನಮ್ಮ ದೇಶದ ಕೆಲಭಾಗಗಳ ಮಹಿಳೆಗೆ ಸೀರೆ ಉಡುವುದನ್ನು ಕಡ್ಡಾಯ ಮಾಡಲಾಗಿದೆ! ಕೆಲವು ಪ್ರದೇಶಗಳಲ್ಲಿ ಸೀರೆಯ ಸೆರಗನ್ನು ತಲೆಗೆ ಹೊದೆಯುವುದೂ ಕಡ್ಡಾಯ. ವಿಜಯಶ್ರೀ ಹಾಲಾಡಿ ಬರೆದ ಪ್ರಬಂಧ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ