ಮಹನೀಯ ಮದ್ಲೆಗಾರರ ಪ್ರಭಾವಲಯ
ಯಕ್ಷಗಾನ ಭಾಗವತಿಕೆಯಲ್ಲಿ ಮದ್ದಳೆಯದ್ದು ಪ್ರಧಾನ ಪಾತ್ರ. ಬಲಿಪ ನಾರಾಯಣ ಭಾಗವತರಿಗೆ ಭಾಗವತಿಕೆ ಕಲಿಯುವುದಕ್ಕೆ ನೆರವಾದ ಮದ್ದಳೆಗಾರರು ಪ್ರಮುಖರೇ. ಮದ್ದಳೆಗಾರರಾದ ದಿವಂಗತ ಕುದುರೆಕೋಡ್ಲು ರಾಮ ಭಟ್ಟರು ಮತ್ತು ದಿವಂಗತ ಕೆಮ್ಮಣ್ಣು ನಾರ್ಣಪ್ಪಯ್ಯ ಅವರ ಪ್ರೋತ್ಸಾಹ, ತಿದ್ದುವಿಕೆಯು ಬಲಿಪರ ಭಾಗವತಿಕೆ ಶೈಲಿಯ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಪ್ರಸ್ತುತ ಸರಣಿಯಲ್ಲಿ ಆ ಬಗ್ಗೆ ಬಲಿಪರು ಹೇಳಿಕೊಂಡಿದ್ದಾರೆ. ‘ಬಲಿಪ ಮಾರ್ಗ’ದಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರಹ ಇಲ್ಲಿದೆ.
ಸುದ್ದಿಗಾರ ಕೆಂಪಣ್ಣ…
ಕೆಂಪಣ್ಣ ಭಜನೆಗೆ ನನ್ನನ್ನು ಕರೆದುಕೊಂಡು ಹೋಗುತ್ತಿದ್ದ. ಅವನ ಭಜನೆಯ ಬೈಠಕ್ ಒಂದು ರೀತಿ ಮತ್ತೇರಿಸುತ್ತಿತ್ತು. ಅವನು ಹಾಡಲು ಸುರುಮಾಡಿದರೆ ಹಿಮ್ಮೇಳದವರು ತಲಿ ಕೆರೆದುಕೊಳ್ಳುತ್ತಿದ್ದರು. ಏಕೆಂದರೆ ಅವನು ಹೇಳಿದ ಪದಗಳನ್ನು ಹಾಡುವುದು ಅಷ್ಟು ಸುಲಭವಾಗಿರಲಿಲ್ಲ. ಅವನ ಪದಗಳೋ ರೈಲು ಬಂಡಿಯಂತೆ ಉದ್ದವಾಗಿರುತ್ತಿದ್ದವು. ‘ಬೆಳ್ಳನೇ ಎರೆಡೆತ್ತು ಬೆಳ್ಳಿಯ ಬಾರುಕೋಲು ಕೇರಿಯ ದಂಡಿಯ ಹೊಲಕ್ಕೆ… ಕೆರೆಯ ದಂಡೆಯ ಹೊಲಕ್ಕೆ… ‘ ಎಂದು ಚೆಂದವಾಗಿ ಪದ ಹಾಡಹತ್ತಿದರೆ ಬಸವಣ್ಣನ ಗುಡಿಯೊಳಗಿನ ಕಲ್ಲಿನ ಬಸವನು ಕೂಡಾ “ಕೆಂಪಣ್ಣ ಹೊಲಕ್ಕೆ ನಾನು ಬರ್ತೀನಿ” ಅಂತಾ ಜೊತೆಯಾಗುತ್ತಿತ್ತು.
ಅಳುವ ಕಡಲಿನ ನಗೆಯ ದೋಣಿ
ಕರ್ನೊ ಕಂಪೆನಿ ಒದಗಿಸಿದ ಅವಕಾಶ ಚಾಪ್ಲಿನ್ ನ ಬದುಕಿಗೆ ದೊಡ್ಡ ತಿರುವು ಆಧಾರ ನೀಡಿತು. ಲಂಡನ್ನಿನ ಲಾಂಬೆತ್ ಪ್ರದೇಶದ “ಗ್ಲೇನ್ ಷಾ ಮ್ಯಾನ್ಷನ್ಸ್” ಎನ್ನುವ ಬಹುಮಹಡಿ ವಸತಿಯ 15 ನೆಯ ನಂಬ್ರದ ಫ್ಲಾಟ್ ಮೊದಲ ಸ್ವಂತದ ಬಿಡಾರವಾಯಿತು. ಚಾರ್ಲಿಯ ತಾಯಿಯ ಮೊದಲ ಸಂಗಾತಿಯ ಮಗ ಸಿಡ್ನಿ ಹಾಗು ಚಾರ್ಲಿ ಇಲ್ಲಿ ಜೊತೆಗೆ ಇರಲಾರಂಭಿಸಿದರು. ಮೂರನೆಯ ಮಹಡಿಯಲ್ಲಿದ್ದ ಈ ಮನೆಯನ್ನು “ಬದುಕಿನುದ್ದಕ್ಕೂ ಮೆಲುಕುಹಾಕುವ ಸ್ವರ್ಗ” ಎಂದು ಚಾರ್ಲಿ ಚಾಪ್ಲಿನ್ ಹೇಳಿಕೊಂಡದ್ದಿದೆ.
ಜಗಳ ನಮ್ಮ ಮನೆದೇವರು
ಜಗಳಗಳೆಂದರೆ ಎಲ್ಲರಿಗೂ ಪ್ರತ್ಯಕ್ಷವಲ್ಲದಿದ್ದರೂ ಪರೋಕ್ಷವಾಗಿಯಾದರೂ ಇಷ್ಟವಾಗುತ್ತದೆ. ಹಸಿವು ನಿದ್ದೆಯ ಅಗತ್ಯವಿದ್ದಂತೆ, ಮನಸ್ಸಿಗೆ ಒಂದಿಷ್ಟು ಜಗಳದ ಅವಶ್ಯಕತೆಯೂ ಇದೆಯೇನೋ. ಆದರೆ ಅದು ಮನುಷ್ಯನ ಬದುಕಿಗೇ ಕುತ್ತು ತಂದಾಗ ಸಮಸ್ಯೆಗಳು ಬೆಳೆಯಲಾರಂಭಿಸುತ್ತವೆ. ಗುಬ್ಬಿಯನ್ನು ಕಂಡರೆ ಅಕ್ಕರೆ ಮೂಡಿದಂತೆ, ಬೆಕ್ಕುಗಳನ್ನು ಕಂಡರೆ ಮುದ್ದು ಬಂದಂತೆ, ಜಗಳಗಳಿಗೂ ಸಾಮಾನ್ಯವಾದುದೊಂದು ಕಾರಣವಿದೆಯೇ.. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ
ನಿಂತ ಶಹನಾಯಿಯ ನಾದ: ಕಣವಿಯವರ ಕವಿತೆಯೊಂದರ ಕುರಿತು
ಸೃಷ್ಟಿಯ ನಿಗೂಢತೆಯ ಬಗ್ಗೆ ಸದಾ ವಿಸ್ಮಯವನ್ನು, ಕುತೂಹಲವನ್ನೂ ಹೊಂದಿದ್ದ, ಆ ವಿಸ್ಮಯವನ್ನು ಕಾವ್ಯಸಾಲುಗಳಲ್ಲಿ ಪ್ರತಿಬಿಂಬಿಸುತ್ತಿದ್ದ, ಹಿರಿಯ ಕವಿ ಚೆನ್ನವೀರಣ ಕಣವಿ ತೀರಿಕೊಂಡಿದ್ದಾರೆ. ಚೆಂಬೆಳಕಿನ ಕವಿ, ಸುನೀತಗಳ ಸಾಮ್ರಾಟ, ನಾಡೋಜ ಮುಂತಾದ ಅನೇಕ ಬಿರುದುಗಳು ಅವರಿಗೆ ಸಂದಿದ್ದರೂ ಅವರು, ಕನ್ನಡ ಭಾವಗೀತೆ ಪರಂಪರೆಯ ಶ್ರೇಷ್ಟ ಕವಿಗಳಲ್ಲಿ ಒಬ್ಬರು. ಅವರ ಕಾವ್ಯದಲ್ಲಿ ಭಾವತೀವ್ರತೆಗೇ ಆದ್ಯತೆ.
‘ಪೃಥ್ವಿ ತೂಗಿದೆ ಸೂರ್ಯಚಂದ್ರರಿಗೂ ಜೋಕಾಲಿ’ ಎಂದು ಬರೆದ ಕವಿ ಅವರು. ಅವರು ಬರೆದ ‘ಬಿಸ್ಮಿಲ್ಲಾರ ಶಹನಾಯಿ ವಾದನ ಕೇಳಿ’ ಕವಿತೆಯ ಕುರಿತು ಲೇಖಕಿ…
ನಮ್ಮೂರ ಆಸ್ಪತ್ರೆಯ ನೆನಪುಗಳು
ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.
ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!
ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ
‘ದೆವ್ವವಿದೆ ಎಂದು ಸಾಬೀತು ಮಾಡಲಾಗದು, ಇಲ್ಲವೆಂದೂ ಹೇಳಲಾಗದು’
ಮೊಲದ ಕಾಲನ್ನು ಜೇಬಿನಲ್ಲಿಟ್ಟುಕೊಂಡು ಓಡಾಡಿಕೊಂಡಿದ್ದರೆ ಒಳ್ಳೆಯ ಕತೆ ಬರೆಯಲಾಗುವುದಿಲ್ಲ ಎನ್ನುವ ಲೇಖಕ ಐಸಾಕ್ ಬಾಷೆವಿಸ್ ಸಿಂಗರ್ ಬರೆದಿದ್ದು ಯಿದ್ದಿಷ್ ಭಾಷೆಯಲ್ಲಿ. ಜಗತ್ತಿನಲ್ಲಿ ಅತೀ ಕಡಿಮೆ ಜನರು ಮಾತನಾಡುವ ಭಾಷೆಯಿದು. ಆದರೆ ಇದೇ ಭಾಷೆಯಲ್ಲಿ ಅವನು ಸೃಷ್ಟಿಸಿದ ಸಾಹಿತ್ಯ ಜಗತ್ತಿನ ಅನೇಕ ಭಾಷೆಗಳಿಗೆ ಅನುವಾದಗೊಂಡಿತು. ಅನುವಾದದ ಮೂಲಕವೇ ಬಹುದೊಡ್ಡ ಓದುಗ ಸಮುದಾಯ ಅವನಿಗೆ ಒಲಿಯಿತು. ನೊಬೆಲ್ ಪ್ರಶಸ್ತಿಯೂ ಬಂತು. 1968ರಲ್ಲಿ ಮತ್ತೊಬ್ಬ ಲೇಖಕ ಹೆರಾಲ್ಡ್ ಪ್ಲೆಂಡರ್ ‘ಪ್ಯಾರಿಸ್ ರಿವ್ಯೂ’ ಪತ್ರಿಕೆಗಾಗಿ ನಡೆಸಿದ ಸಂದರ್ಶನದಲ್ಲಿ ಸಿಂಗರ್…
ನಡಿಗೆಯ ದಾರಿ ಕರುಣಿಸಿದ ದುಪ್ಪಟ್ಟು ಖುಷಿ
ಕಾಲಚಕ್ರದ ಉರುಳುವಿಕೆಯಡಿ ಸಿಲುಕಿ ಇಂದು ವಾತಾವರಣದಲ್ಲಿ ಬದಲಾವಣೆಗಳಾಗಿವೆ. ಮುಂಜಾನೆಯ ನೀರವತೆಗೆ ಭಂಗ ತರುವ ವಾಹನಗಳ ಓಡಾಟ ಆರಂಭವಾಗಿರುತ್ತದೆ. ವಿಶಾಲ ಭತ್ತದ ಗದ್ದೆಗಳೆಲ್ಲ ಸೈಟುಗಳಾಗಿ ಪರಿವರ್ತಿತವಾಗಿ ಇಂದು ಅಲ್ಲಿ ಕಟ್ಟಡಗಳು ಮೇಲೆದ್ದಿವೆ. ಸೇತುವೆ ಮೇಲಿನ ಮುದ್ದು ಪಾರಿವಾಳಗಳು ಗುಬ್ಬಚ್ಚಿಗಳು ಎಲ್ಲಿ ಹೋದವೋ. ರಸ್ತೆ ಅಗಲೀಕರಣಕ್ಕಾಗಿ ಇಕ್ಕೆಲದ ಮರಗಳ ಬಲಿಯಾಗಿದೆ. ಇಷ್ಟಾದರೂ ಇಲ್ಲಿ ಅರಸುವ ಕಣ್ಣುಗಳಿಗೆ ಬರವಿಲ್ಲದಂತೆ ಪ್ರಕೃತಿ ತನ್ನ ಸೊಬಗನ್ನು ಕಣ್ತುಂಬಿ ಮನವನ್ನು ಸಂತೈಸುವಷ್ಟು ಉದಾರಿ.









