ಸರ್ಕೀಟ್: ದಿಕ್ಕು ತೋಚದ ಬದುಕಿನ ಸಿಕ್ಕುಗಳು: ಶರೀಫ್ ಕಾಡುಮಠ ಬರಹ
ಒಂದು ಮಗುವಿನ ವರ್ತನೆ ಅಸಹಜವಾಗಿ ಕಾಣಿಸುವಂತೆ, ಪುಟ್ಟ ಹುಡುಗನೊಬ್ಬ ಈ ಪರಿ ನಟಿಸುವುದು ಖಂಡಿತ ಸಾಮಾನ್ಯ ಸಂಗತಿಯಲ್ಲ. ಚಿತ್ರದುದ್ದಕ್ಕೂ ಜೆಫ್ರನ್ ಎಷ್ಟು ತೀವ್ರವಾಗಿ ಕಾಡುತ್ತಾನೆ ಎಂದರೆ, ಆತನ ಚೇಷ್ಟೆ, ಅಕ್ವೇರಿಯಂ ಒಡೆದು ಹಾಕುವ ದೃಶ್ಯ, ಟ್ರೇ ಪೂರ್ತಿ ಮೊಟ್ಟೆ ಎತ್ತಿಕೊಂಡು ಹೋಗಿ ಟೆರೇಸ್ ಮೇಲೆ ಕೂತು ಹಾಯಾಗಿ ಕೆಳಗೆ ಎಸೆಯುವ ದೃಶ್ಯ, ತಾನಿಚ್ಛಿಸಿದ್ದು ಈ ಕ್ಷಣವೇ ಬೇಕು ಎಂದು ಬಿಡದೇ ಹಠ ಮಾಡಿ ಕೂಗಾಡುವ ದೃಶ್ಯ, ಅವನ ಮಿತಿಯಿಲ್ಲದ ತರಲೆಗಳೆಲ್ಲವೂ ನಮ್ಮ ಸಹನೆಯನ್ನೂ ಮೀರಿಸುವಷ್ಟು.
ಮಲಯಾಳಂನ “ಸರ್ಕೀಟ್” ಚಿತ್ರದ ಕುರಿತು ಶರೀಫ್ ಕಾಡುಮಠ ಬರಹ
‘ಕಾಲ ನದಿಯಲಿ ನಮ್ಮ ಬಾಳ ದೋಣಿ’: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ಈ ಮೇಲು ಕೀಳುಗಳ ಕೀಲುಗೊಂಬೆ ಆಟದಲಿ ಜೊತೆಗಿದ್ದು ಬದುಕನ್ನು ಸಹ್ಯ ಮಾಡಿದ್ದಕ್ಕೆ ದಾರಿಯ ಪ್ರಯಾಣದ ಸಂಭ್ರಮವನ್ನು ಹೆಚ್ಚಿಸಿದ್ದಕ್ಕೆ ಯಾರಿಗೋ ಧನ್ಯವಾದ ಹೇಳಬೇಕು. ನನ್ನ ಅಹಂಗಳಲ್ಲಿ ಕುಳಿತು ಯಾರಿಗೋ ಚುಚ್ಚಿ ಮಾತಾಡಿದ್ದ ನೆನಪಾಗಿ ಸಾರಿ ಕೇಳಬೇಕು. ಸುಮ್ಮನೆ ಇಲ್ಲದ ಅವಸರವನ್ನು ಆರೋಪಿಸಿಕೊಂಡು ಬೇರುಗಳನ್ನು ಮರೆತಿದ್ದೇನೆ. ಹತ್ತಿರ ಕೂತು ಆ ಜೀವದ ಹೃದಯದ ಮಾತುಗಳನ್ನು ಕೇಳಿಸಿಕೊಳ್ಳುವುದಿತ್ತು. ಸಂಜೆಗಣ್ಣಿನ ನಿರೀಕ್ಷೆಯ ನೋಟದ ಅಪ್ಪ ಅಮ್ಮ ಇನ್ನೂ ಊರಿನ ಮನೆಯಲ್ಲಿದ್ದಾರೆ. ಹೇಗಾದರೂ ಮಾಡಿ ಈ ಸಲವಾದರೂ ಜೊತೆಗೆ ಕರೆದುಕೊಂಡು ಬರಬೇಕಿತ್ತು…
ಹೊಸ ವರ್ಷದ ಆಚರಣೆಯ ಈ ಹೊತ್ತಿಗೆ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ ನಿಮ್ಮ ಓದಿಗೆ
ಕನ್ನಡ ಕಾವ್ಯದಲ್ಲಿ ಸಮಾಧಾನದ ಪ್ರಭು ಯೇಸುವಿನ ಆರಾಧನೆ: ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ
ಯಾರು ಏನೇ ಅಂದರೂ ಯಾರು ಏನೇ ತಿಳಿದುಕೊಂಡರು ನಾವು ನಂಬಿರುವ ಪರಿಶುದ್ಧ ಮೌಲ್ಯಗಳೊಂದಿಗೆ ಜೀವಿಸಿದರೆ ಸಕಲವೂ ಸಾಧ್ಯ ಎಂಬುದನ್ನು ಮಹಾತ್ಮರು ತಿಳಿಸಿದ್ದಾರೆ. ಮೌಲ್ಯಗಳು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕುಸಿಯುತ್ತಿವೆ. ಅದನ್ನು ಹೇಗೆ ಕಾಪಾಡಿಕೊಳ್ಳಬೇಕು, ಸುಧಾರಿಸಿಕೊಳ್ಳಬೇಕು ಹೇಗೆ ಪುನರ್ ಸ್ಥಾಪಿಸಿಕೊಳ್ಳಬೇಕೆಂಬ ಗೊಂದಲದಲ್ಲಿದ್ದೇವೆ. ಮೌಲ್ಯಗಳು ಇಂದು ಬರಿ ಬಾಯಿ ಮಾತಾಗಿವೆ ಹೊರತು ಪ್ರಾಯೋಗಿಕವಾಗಿ ಮೌನವಾಗಿವೆ ಎಂಬ ಅಳಲು ಕವಿತೆಯದು.
ಕನ್ನಡ ಕಾವ್ಯದಲ್ಲಿ ಯೇಸುವಿನ ಕುರಿತ ಬರೆಯಲ್ಪಟ್ಟ ಕವಿತೆಗಳ ಕುರಿತು ಡಾ. ರಾಜೇಂದ್ರಕುಮಾರ್ ಮುದ್ನಾಳ್ ಬರಹ
ಭಾವವಿರೇಚನಗೊಳಿಸುವ ದೃಶ್ಯಕಾವ್ಯ ‘ಬಂಧಮುಕ್ತ’: ಡಾ. ಪ್ರಭು ಗಂಜಿಹಾಳ ಬರಹ
`ಬಂಧಮುಕ್ತ’ ಚಿತ್ರ ಇಂದಿನ ಕಾಲಘಟ್ಟದಲ್ಲಿ ಯಾಕೆ ವಿಶೇಷವಾದದ್ದು ಎಂಬುದರ ಕುರಿತು ವಿವರಿಸುವುದಾದರೆ; ಮೊದಲನೇಯದಾಗಿ ಈ ಚಿತ್ರದ ಶೀರ್ಷಿಕೆಯೇ ಒಂದು ಸಕಾರಾತ್ಮಕ ಸಂದೇಶ ನೀಡುವಂತಹದು. ಮನುಷ್ಯ ಹುಟ್ಟಿನಿಂದ ಸಾವಿನವರೆಗೆ ಯಾವುದಾದರೊಂದು ಹಿಡಿತಕ್ಕೆ ಸಿಲುಕಿ ಅದರಿಂದ ಹೊರ ಬರಲು ಹೆಣಗಾಡುತ್ತಿರುತ್ತಾನೆ. ಸಾವು ಮಾತ್ರ ಮನುಷ್ಯನ ನಿಜವಾದ ಬಿಡುಗಡೆ ಎಂದು ಹೇಳಬಹುದಾದರೂ ಸಾವಿಗೂ ಮುನ್ನವೇ ಬಂಧನಗಳಿಂದ ಮುಕ್ತವಾಗುವ ಮನಸ್ಥಿತಿಯೇ ಬಿಡುಗಡೆಯ ಮಾರ್ಗ ಎಂದು ವಾಖ್ಯಾನಿಸಬಹುದು. ಇದು ಮನೋವಿಜ್ಞಾನ ಮತ್ತು ಆಧ್ಯಾತ್ಮಿಕ ತತ್ವವನ್ನು ತಿಳಿಸುವ ವಿಚಾರ.
ಕುಮಾರ ಬೇಂದ್ರೆ ನಿರ್ದೇಶನದ “ಬಂಧಮುಕ್ತ” ಸಿನಿಮಾದ ಕುರಿತು ಡಾ. ಪ್ರಭು ಗಂಜಿಹಾಳ ಬರಹ
‘ಡಿಸೆಂಬರ್ ಬಂದಿತು, ಚಳಿಯಾಕೆ ಬಂದಳು’: ಮಹಾಲಕ್ಷ್ಮೀ ಕೆ.ಎನ್. ಬರಹ
ಈ ಬೆಟ್ಟಕ್ಕೆ, ಆ ಮರಕ್ಕೆ, ಹೆಂಚಿನ ಪುಟ್ಟ ಮನೆಗೆ ಹಿಮದ ಹೊದಿಕೆ ಬಂದುಬಿಡುತ್ತೆ. ನಮ್ಮನ್ನೂ ಆ ಹೊದಿಕೆ ಆವರಿಸಿಬಿಡುತ್ತದೆ. ವಿಸ್ಮೃತ ದೃಶ್ಯವನ್ನು ತಂದಿಟ್ಟುಬಿಡುತ್ತದೆ. ಹೆಜ್ಜೆ ಇಟ್ಟಲ್ಲೆಲ್ಲಾ ಹಿಮಮಣಿ ಕಾಲಿಗೆ ಮುತ್ತಿಡುತ್ತದೆ. ಎಳೆಕೂಸಿನ ಕೈ ಕಾಲುಗಳ ಮೆತ್ತಗೆ ಹಿಡಿದು ತೊಳೆಯುವಂತೆ ನಮ್ಮನ್ನು ತಣ್ಣಗೆ ಸೋಕಿ ತೊಳೆಯುತ್ತದೆ ಮಂಜು. ಹಿಮವು ನೆಲದ ಮೇಲೆ ಆವರಿಸಿದಾಗ ಧ್ವನಿ ಹೀರಿಕೊಳ್ಳುವ ಸಾಧನವಾಗಿ ಕಾರ್ಯನಿರ್ವಹಿಸುವುದರಿಂದ ಇಷ್ಟು ದಿನದ ಸದ್ದು ಸಪ್ಪಳ ಸುಮ್ಮನಾಗುತ್ತದೆ.
ಡಿಸೆಂಬರ್ ಚಳಿಯ ಕುರಿತು ಮಹಾಲಕ್ಷ್ಮೀ ಕೆ.ಎನ್. ಬರಹ
ಒಮ್ಮೆ ಹಚ್ಚಿಕೊಂಡರೆ….: ಮಾಲಾ ಮ. ಅಕ್ಕಿಶೆಟ್ಟಿ ಬರಹ
ಎರಡು ದಿನದ ವಸ್ತಿಯ ನಂತರ ಮನೆಗೆ ತಲುಪುವವರೆಗೂ ಮನಸ್ಸು ನಿಯಂತ್ರಣದಲ್ಲಿರಲಿಲ್ಲ. ಯಾವ ಗಿಡಗಳು ಹೋದವು? ಆಕೆಯಂತೂ ಎಲ್ಲವೂ ಅಂದಳು, ಕೆಲವಾದರೂ ಉಳಿಯಬಾರದೇ ಎಂದು ಮನಸ್ಸು ಪ್ರಾರ್ಥಿಸುತ್ತಿತ್ತು. ಅಂದು ಮನೆಯ ತಲುಪುವ ಹಾದಿಗುಂಟ ಬರುವಾಗ ನೋಡಿದರೆ ಎಲ್ಲವೂ ಬಟಾ ಬಯಲು, ಎರಡೂ ಕಡೆ ಎಲ್ಲ ಗಿಡಗಳನ್ನು ಕಿತ್ತಿದ್ದಾರೆ. ಇನ್ನು ನಮ್ಮದೇನು ಎನ್ನುತ್ತಾ ನಮ್ಮ ಮನೆಯ ಮುಂದೆ ಬಂದಾಗ ಎಲ್ಲ ಗಿಡಗಳು ಹೋಗಿ ಕೇವಲ ಎರಡು ಗಿಡ ಉಳಿದಿದ್ದವು.
ಮಾಲಾ ಮ. ಅಕ್ಕಿಶೆಟ್ಟಿ ಬರಹ ನಿಮ್ಮ ಓದಿಗೆ
ರಾಜ್ಕುಮಾರ್ ಅಂದ್ರ ಏನಂದ್ಕಂಡೆ?: ಎಂ. ಜವರಾಜ್ ಹೊಸ ಕಾದಂಬರಿಯ ಆಯ್ದ ಭಾಗ
ಪಂಚಾಯ್ತಿ ಆಫೀಸ್ ಮಗ್ಗುಲು ಬೀದಿಲಿದ್ದ ಕುಂಟ ಸಿದ್ದಪ್ಪನ ಮನೆಯ ಅಂಗಳದಲ್ಲಿ ಒಂದಷ್ಟು ಜನ ಮಾತಾಡ್ತ ನಿಂತಿದ್ದರು. ಅಲ್ಲಿಗೆ ನಾಕಾರು ಪೇಪರು ಬರುತ್ತಿದ್ದವು. ಕುಂಟ ಸಿದ್ದಪ್ಪ ಬಿಳಿಪಂಚೆ ಬಿಳಿ ಶರ್ಟು ಹಾಕೊಂಡು ಕ್ರಾಪ್ ತಲೆ ಬಾಚ್ಕೊಂಡು ಕಾಲಿನ ಮೇಲೆ ಕಾಲು ಹಾಕಿಕೊಂಡು “ಇದು ಗೋಕಾಕ್ ಚಳುವಳಿ ಅಂತ. ಅವ್ರೊಬ್ಬ ದೊಡ್ ಕವಿ. ಅವ್ರು ಸರ್ಕಾರಕ್ಕೆ ಬರ್ದ ಪತ್ರನ ಇಟ್ಕೊಂಡು ನಡಿತಿರ ಹೋರಾಟ ಇದು. ಏಯ್ ನೋಡ್ರಪ್ಪ, ಬಾಯಿಲ್ಲಿ” ಅಂತ ಕರೆದು, “ನೀನು ಐದ್ನೆ ಕ್ಲಾಸಾ? ನಾಕ್ನೆ ಕ್ಲಾಸಾ?” ಅಂದ. ನಾನು, ʼಹುʼ” ಎನ್ನುವವನಂತೆ ತಲೆದೂಗಿದೆ. “ಹೌದಾ? ಹೋಗು, ಇನ್ಮೇಲ ಇಂಗ್ಲಿಸ್ ಗಿಂಗ್ಲಿಸ್ ಓದಂಗಿಲ್ಲ, ಬರೀ ಕನ್ನಡ. ನಿನ್ತವು ಇಂಗ್ಲಿಸ್ ಬುಕ್ಸ್ ಇದ್ರ ತೂದು ಬಿಸಾಕಿ ಕನ್ನಡ ಇಟ್ಗ” ಅಂದ. ಅಲ್ಲೊಬ್ಬ ಕೇಳ್ತಿದ್ದವನು “ಇದ್ಕ ರಾಜ್ಕುಮಾರ್ ಯಾಕ್ ಮದ್ಯಕ್ ಬಂದ?” ಅಂತ ಕೇಳಿದ.
ಎಂ. ಜವರಾಜ್ ಹೊಸ ಕಾದಂಬರಿ “ಪೋಸ್ಟ್ಮ್ಯಾನ್ ಗಂಗಣ್ಣ” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ
ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು ಅಥವಾ ಮನೆಯ ಜಂತಿ ಕಾಣುತ್ತ ಸುಮ್ಮನಿರುತ್ತಿದ್ದಳು....
Getting started with:Ledger Live application:on desktop
Automatic Updates for Ledger Live Explained Understanding the Process of Automatic Updates in Ledger Live for Secure Management To keep your Ledger Live application running smoothly, always enable automatic updates. This feature ensures you receive the latest security...




