Advertisement

ಸಂಪಿಗೆ ಸ್ಪೆಷಲ್

ಹುಬ್ಬಳ್ಳಿಗರ ಇಂಗ್ಲೀಷ್ ವ್ಯಾಮೋಹ: ರೂಪಾ ಜೋಶಿ ಬರೆದ ಲಲಿತ ಪ್ರಬಂಧ

ಹುಬ್ಬಳ್ಳಿಗರ ಇಂಗ್ಲೀಷ್ ವ್ಯಾಮೋಹ: ರೂಪಾ ಜೋಶಿ ಬರೆದ ಲಲಿತ ಪ್ರಬಂಧ

ಇಲ್ಲಿಯ ಭಾಷೆಯಲ್ಲಿ ಎಲ್ಲರಿಗೂ “ರೀ”…. ಎಂಬ ಅಕ್ಷರ ಹಚ್ಚಿಯೇ ಮಾತಾಡುವ ರೂಢಿಯಿದೆ. ಅಪ್ಪಾರು, ಅವ್ವಾರು, ಅಕ್ಕಾರು, ಮಾಮಾರು, ಅಣ್ಣಾರು, ಅಜ್ಜಾರು ಹೀಗೇ. ಎಲ್ಲರನ್ನೂ ಬಹುವಚನದಲ್ಲೇ ಹೆಸರಿಸುವ ಈ ಪದ್ಧತಿ ನಿಜಕ್ಕೂ ಒಳ್ಳೆಯದೇ. ಅದೇ ಕಾರಣಕ್ಕೆ ಆಂಗ್ಲ ಪದ ಬಳಕೆ ಮಾಡಿದಾಗಲೂ ಅವರು ಅದಕ್ಕೆ ಕನ್ನಡದ ‘ರೀ’ ಮತ್ತೂ ‘ರು’ ಪದ ಹಚ್ಚಿ, ” ಮೇಡಮ್ರಿ, ಸರ್ರೀ, ಮಮ್ಮೀರೀ…. ಡ್ಯಾಡಿರೀ, ಅಜ್ಜಾರ್ರೀ, ಅಂಕಲ್ರೀ ಅಂತ ರೂಪಾಂತರಿಸಿ, ಅದು ನಮ್ಮ ಕನ್ನಡದ್ದೇ ಅನ್ನುವಷ್ಟು ಸಲೀಸಾಗಿ ಬಳಸುವುದನ್ನು ನೋಡಿ, ನನಗೆ ಮೊದ ಮೊದಲು ತುಂಬಾ ವಿಸ್ಮಯವೆನ್ನಿಸುತ್ತಿತ್ತು.
ರೂಪಾ ರವೀಂದ್ರ ಜೋಷಿ ಬರೆದ ಪ್ರಬಂಧ

read more
ಪಿತೃಪ್ರಧಾನತ್ವದ ಗೋಚರ-ಅಗೋಚರ ಹೊರೆಗಳು: ನಮ್ರತಾ ಪೊದ್ದಾರ್ ಬರಹ

ಪಿತೃಪ್ರಧಾನತ್ವದ ಗೋಚರ-ಅಗೋಚರ ಹೊರೆಗಳು: ನಮ್ರತಾ ಪೊದ್ದಾರ್ ಬರಹ

ಪಿತೃಪ್ರಧಾನ ವ್ಯವಸ್ಥೆಯಿಂದ ಮಹಿಳೆಯರಿಗೆ ಹಾನಿಯಾಗುವಂತೆಯೇ ಪುರುಷರೂ ಇದರ ಹೊರೆಯನ್ನು ಅನುಭವಿಸುತ್ತಾರೆ. ಇಂದಿಗೂ ಕೂಡ ಹುಡುಗರು ಅಥವಾ ಪುರುಷರೆಂದರೆ ಭಾವನಾತ್ಮಕವಾಗಿ ಗಟ್ಟಿಯಾಗಿರಬೇಕು; ಭಾವನಾಜೀವಿಯಾಗುವುದು ಅಥವಾ ಬಹಿರಂಗವಾಗಿ ಅಳುವುದು ಇವೆಲ್ಲಾ ದೌರ್ಬಲ್ಯದ ಲಕ್ಷಣಗಳು ಎಂದೇ ಭಾವಿಸಲಾಗುತ್ತದೆ. ಇಂದು ಅನೇಕ ಹುಡುಗರಿಗೆ ಮದುವೆಯಾಗಲು ಹೆಣ್ಣುಗಳು ಸಿಗುತ್ತಿಲ್ಲ ಎನ್ನಲಾಗುತ್ತಿದೆ. ಹುಡುಗ ಎಂದರೆ ಅಷ್ಟೇ ದುಡಿಯಬೇಕು; ಇಷ್ಟೇ ದುಡಿಯಬೇಕು ಎನ್ನುವ ಅವಾಸ್ತವಿಕ ನಿರೀಕ್ಷೆಗಳನ್ನು ಪೋಷಿಸಿ ಮದುವೆಯನ್ನೇ ವ್ಯಾಪಾರದ ಸರಕನ್ನಾಗಿ ಪರಿವರ್ತಿಸಿರುವುದು ಪಿತೃಪ್ರಧಾನ ವ್ಯವಸ್ಥೆಯ ಚಿಂತನೆಯೇ!
ಮಹಿಳೆ ಮತ್ತು ಪುರುಷರ ಮೇಲಾಗುವ ಪಿತೃಪ್ರಧಾನ ವ್ಯವಸ್ಥೆಯ ಹೊರೆಗಳ ಕುರಿತು ನಮ್ರತಾ ಪೊದ್ದಾರ್‌ ಬರಹ ನಿಮ್ಮ ಓದಿಗೆ

read more
ಯೇಸುವಿನ ಪ್ರೀತಿ ಔದಾರ್ಯಕ್ಕೆ ಮಿಡಿದ ಕಾವ್ಯಲೋಕ: ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ

ಯೇಸುವಿನ ಪ್ರೀತಿ ಔದಾರ್ಯಕ್ಕೆ ಮಿಡಿದ ಕಾವ್ಯಲೋಕ: ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ

ವಾಕ್ಯವೇ ದೇವರು ಎನ್ನುವ ಕ್ರಿಸ್ತನ ಅನುಯಾಯಿಗಳು ವಾಕ್ಯದ ಮುಖಾಂತರ ನಡೆಯುತ್ತೇವೆ ಎಂಬ ಭ್ರಮೆಯಲ್ಲಿ ಇರುತ್ತಾರೆ ಅದು ಅವರ ಅರಿವಿಗೆ ಬರುವಷ್ಟರಲ್ಲಿ ಪಾಪದ ಕೊಡ ತುಂಬುತ್ತಲಿರುತ್ತದೆ. ಅಂದು ಏಸುವನ್ನು ದೈಹಿಕವಾಗಿ ಶಿಲುಬೆಗೆ ಏರಿಸಿದರೆ, ಇಂದಿನ ಅನುಯಾಯಿಗಳೆಂಬ ಅಂಧ ಭಕ್ತರ ದಂಡು ಮಾನಸಿಕವಾಗಿ ಯೇಸುವನ್ನು ಶಿಲುಬೆಗೇರಿಸಿದ್ದಾರೆ ಎಂಬ ಭಾವ ಕವಿತೆಯದ್ದಾಗಿದೆ. ವಚನಕಾರರು ಅಂತರಂಗ ಶುದ್ದಿ ಬಹಿರಂಗ ಶುದ್ದಿಯನ್ನು ಇಲ್ಲಿ ವಾಕ್ಯದ ಮೂಲಕ ನೆನಪಿಸಿಕೊಳ್ಳಬಹುದು.
ಕನ್ನಡ ಸಾಹಿತ್ಯದಲ್ಲಿ ಏಸು ಕ್ರಿಸ್ತನ ಬದುಕಿನ ಕುರಿತು ರಚಿತವಾದ ಕವಿತೆಗಳ ಕುರಿತು ಡಾ. ರಾಜೇಂದ್ರ ಕುಮಾರ್ ಕೆ ಮುದ್ನಾಳ್ ಬರಹ ನಿಮ್ಮ ಓದಿಗೆ

read more
ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗಳು ಕನ್ನಡಕ್ಕೆ ಬಲು ಹತ್ತಿರದ ಭಾಷೆಗಳನ್ನು ಮಾತನಾಡುತ್ತಾರೆ. ಇತ್ತೀಚೆಗೆ ಅದರ ಮೂಲ ಕರ್ನಾಟಕ ಮತ್ತು ಅವರೆಲ್ಲಾ ಎಲ್ಲೆಡೆ ಹಬ್ಬಿದ್ದ ನಮ್ಮ ಸಾಮ್ರಾಜ್ಯಗಳ ಜೀವಂತ ಮನುಷ್ಯ ಉಳಿಕೆಗಳು ಎಂಬುದು ಕಂಡು ಬಂದಿದೆ. ಮಹಾರಾಷ್ಟ್ರದ ಮರಾಠಿಯ ಕೊಂಕಣಿಯ ಬೆಳವಣಿಗೆಯಲ್ಲಿ ಕನ್ನಡದ ಭಾಷೆಗಳ ಕೊಡುಗೆಯಿದೆ, ತೆಲುಗಿಗೆ ತಮಿಳಿಗೆ ಎಷ್ಟೋ ಕೊಡು-ಕೊಳ್ಳುವ ಪ್ರಕ್ರಿಯೆಗಳಾಗಿವೆ. ಅದು ನಾವು ಉಪಯೋಗಿಸುವ ಎಷ್ಟೋ ಪದಗಳಲ್ಲಿ, ಅಕ್ಷರಗಳಲ್ಲಿ ತೋರುತ್ತದೆ.
ಕನ್ನಡ ಭಾಷೆ ಮತ್ತು ಅದರ ಬಳಕೆಯ ಕುರಿತು ದರ್ಶನ್‌ ಜಯಣ್ಣ ಬರಹ

read more
ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬಿದ್ದಿತ್ತು. ಹೆಂಡತಿಗೆ ಕರೆದು ತೋರಿಸಿದೆ. ‘ಎಲ್ಲಿ ಸಾಯಲಿಕ್ಕೆ ಬಂದಿದೆಯೆನೋ’ ಎಂದು ಉತ್ತರಿಸಿ ಮನೆಗೆಲಸದಲ್ಲಿ ತೊಡಗಿಸಿಕೊಂಡಳು. ನಮಗೆ ಮೀನನ್ನು ಸಂಭಾಳಿಸುವುದಕ್ಕಿಂತ ಮಕ್ಕಳನ್ನು ನಿಯಂತ್ರಿಸುವುದೇ ಕಷ್ಟಕರವಾಗಿತ್ತು. ಎಲ್ಲಿ ಬೌಲನ್ನು ಬಿಳಿಸುತ್ತಾರೋ…. ಎಂಬ ಭಯ..! ಮಗಳು ಕಿಡ್ಡಿಯಂತೂ “ಹತ್ರ ಹೋಗಬೇಡ ಬಾಂಬಿ ಮೀನು ಕಚ್ಚುತ್ತೆ” ಎಂದು ತನ್ನ ತೊದಲು ನುಡಿಯಲ್ಲಿ ಅಣ್ಣನಿಗೆ ಉಪದೇಶ ನೀಡಿ ತಾನೆ ಬೌಲ್‌ನ ಮುಂದೆ ಮೀನುಗಳು ಭಯ ಬೀಳುವಂತೆ ಹಲ್ಲು ಕಿರಿದುಕೊಂಡು ನಿಲ್ಲುತ್ತಿದ್ದಳು.
ಮಯೂರ ಬಿ ಮಸೂತಿ ಬರಹ ನಿಮ್ಮ ಓದಿಗೆ

read more
ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವುದನ್ನು ಸಹಿಸಿದರೂ ರಾತ್ರಿಯ ನೀರವ ವಾತಾವರಣದಲ್ಲಿ ಕಿರಿಕಿರಿ ಎನಿಸುತ್ತಿತ್ತು. ಅಂಥ ಪ್ರಸಂಗಗಳಲ್ಲಿ ರೋಗಿಗಳು ಅಸಹಾಯಕರಾಗಿ ಸಹನೆ ಕಳೆದುಕೊಳ್ಳುವ ಸ್ಥಿತಿಯಲ್ಲಿರುತ್ತಾರೆ. ಆಗ ನಾನೊಂದು ಉಪಾಯ ಹುಡುಕಿದೆ. ಫ್ಯಾನಿನ ತಂಗಾಳಿಯ ಕಡೆಗೆ ಮಾತ್ರ ಲಕ್ಷ್ಯಕೊಟ್ಟು ಬೇರೆ ಏನನ್ನೂ ಯೋಚಿಸದೆ ಅದನ್ನೇ ಆನಂದಿಸುತ್ತಿದ್ದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 99ನೇ ಕಂತು ನಿಮ್ಮ ಓದಿಗೆ

read more
ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಸಾಮೂಹಿಕವಾಗಿ ಇಂದು ನಾಟಕಗಳನ್ನು ಆಡಲು ಬಹಳ ಜನರು ಸೇರುತ್ತಿಲ್ಲ. ತಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಆ ಸಂದರ್ಭದ ರಂಗಭೂಮಿಯ ವೈಭವವೇ ಬೇರೆ. ಸಾಂಪ್ರದಾಯಿಕ ವೃತ್ತಿರಂಗಭೂಮಿಯ ನಾಟಕ ಕಂಪನಿಗಳು ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹರ್ಷದಾಯಕ ಬೆಳವಣಿಗೆ. ಅದು ಅವರಿಗೆ ಅನಿವಾರ್ಯವೂ ಕೂಡ ಆಗಿದೆ. ಜನರ ಅಭಿರುಚಿ, ಅಭಿವೃದ್ಧಿಗೆ ತಕ್ಕಂತೆ ನಾಟಕಗಳು ತಮ್ಮ ಶೈಲಿ ಸಂಭಾಷಣೆ ಎಲ್ಲವನ್ನು ಮಾರ್ಪಡಿಸಿಕೊಂಡಿವೆ. ಬಹಳಷ್ಟು ಕಲಾವಿದರು ಸಾಮಾಜಿಕ ನಾಟಕ ಕಂಪನಿಗಳಿಂದ ಬದುಕುವವರಿದ್ದಾರೆ.
ಏಕವ್ಯಕ್ತಿ ರಂಗ ಪ್ರಯೋಗದ ಸವಾಲು ಮತ್ತು ಸಾಧ್ಯತೆಗಳ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

read more
ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

read more
ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ನಾನು ಕೆಲಸದ ಸಲುವಾಗಿ ಆಗಾಗ ಮಾತನಾಡುತ್ತಿದ್ದ ಬಾಂಗ್ಲಾದೇಶ ಮೂಲದ ಸಹೋದ್ಯೋಗಿಯೊಬ್ಬರ ಮನೆ ಕೂಡಾ ಸಂಪೂರ್ಣವಾಗಿ ಸುಟ್ಟಿತ್ತು. ಪತಿ ಮತ್ತು ಮೂವರು ಮಕ್ಕಳೊಡನೆ ಮನೆ ಬಿಟ್ಟು ಬರುವಾಗ ಎರಡು ಮೂರು ಸೂಟ್‌ಕೇಸಿನಷ್ಟು ಬಟ್ಟೆ ಮತ್ತು ಅತೀ ಅವಶ್ಯಕವಾದ ವಸ್ತುಗಳನ್ನು ಮಾತ್ರ ತರಲು ಅವರಿಗೆ ಸಾಧ್ಯವಾಗಿದ್ದು. ವಿಮೆ ಕೂಡಾ ತಕ್ಕಮಟ್ಟಿಗೆ ಸಿಗಬಹುದು. ಕಳೆದುಕೊಂಡಿದ್ದನ್ನು ಸಂಪಾದಿಸಲೂಬಹುದು.
ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ಅದರ ಪರಿಣಾಮಗಳನ್ನು ಹತ್ತಿರದಿಂದ ಕಂಡ ಗಿರಿಧರ್‌ ಗುಂಜಗೋಡು ಬರಹ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ