Advertisement

ಸಂಪಿಗೆ ಸ್ಪೆಷಲ್

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಕನ್ನಡವೆಂಬ ಮರೆಗುಳಿ ಮನಸು!: ದರ್ಶನ್‌ ಜಯಣ್ಣ ಬರಹ

ಮಧ್ಯ ಪ್ರದೇಶದಲ್ಲಿನ ಕೆಲವು ಬುಡಕಟ್ಟುಗಳು ಕನ್ನಡಕ್ಕೆ ಬಲು ಹತ್ತಿರದ ಭಾಷೆಗಳನ್ನು ಮಾತನಾಡುತ್ತಾರೆ. ಇತ್ತೀಚೆಗೆ ಅದರ ಮೂಲ ಕರ್ನಾಟಕ ಮತ್ತು ಅವರೆಲ್ಲಾ ಎಲ್ಲೆಡೆ ಹಬ್ಬಿದ್ದ ನಮ್ಮ ಸಾಮ್ರಾಜ್ಯಗಳ ಜೀವಂತ ಮನುಷ್ಯ ಉಳಿಕೆಗಳು ಎಂಬುದು ಕಂಡು ಬಂದಿದೆ. ಮಹಾರಾಷ್ಟ್ರದ ಮರಾಠಿಯ ಕೊಂಕಣಿಯ ಬೆಳವಣಿಗೆಯಲ್ಲಿ ಕನ್ನಡದ ಭಾಷೆಗಳ ಕೊಡುಗೆಯಿದೆ, ತೆಲುಗಿಗೆ ತಮಿಳಿಗೆ ಎಷ್ಟೋ ಕೊಡು-ಕೊಳ್ಳುವ ಪ್ರಕ್ರಿಯೆಗಳಾಗಿವೆ. ಅದು ನಾವು ಉಪಯೋಗಿಸುವ ಎಷ್ಟೋ ಪದಗಳಲ್ಲಿ, ಅಕ್ಷರಗಳಲ್ಲಿ ತೋರುತ್ತದೆ.
ಕನ್ನಡ ಭಾಷೆ ಮತ್ತು ಅದರ ಬಳಕೆಯ ಕುರಿತು ದರ್ಶನ್‌ ಜಯಣ್ಣ ಬರಹ

read more
ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬಿದ್ದಿತ್ತು. ಹೆಂಡತಿಗೆ ಕರೆದು ತೋರಿಸಿದೆ. ‘ಎಲ್ಲಿ ಸಾಯಲಿಕ್ಕೆ ಬಂದಿದೆಯೆನೋ’ ಎಂದು ಉತ್ತರಿಸಿ ಮನೆಗೆಲಸದಲ್ಲಿ ತೊಡಗಿಸಿಕೊಂಡಳು. ನಮಗೆ ಮೀನನ್ನು ಸಂಭಾಳಿಸುವುದಕ್ಕಿಂತ ಮಕ್ಕಳನ್ನು ನಿಯಂತ್ರಿಸುವುದೇ ಕಷ್ಟಕರವಾಗಿತ್ತು. ಎಲ್ಲಿ ಬೌಲನ್ನು ಬಿಳಿಸುತ್ತಾರೋ…. ಎಂಬ ಭಯ..! ಮಗಳು ಕಿಡ್ಡಿಯಂತೂ “ಹತ್ರ ಹೋಗಬೇಡ ಬಾಂಬಿ ಮೀನು ಕಚ್ಚುತ್ತೆ” ಎಂದು ತನ್ನ ತೊದಲು ನುಡಿಯಲ್ಲಿ ಅಣ್ಣನಿಗೆ ಉಪದೇಶ ನೀಡಿ ತಾನೆ ಬೌಲ್‌ನ ಮುಂದೆ ಮೀನುಗಳು ಭಯ ಬೀಳುವಂತೆ ಹಲ್ಲು ಕಿರಿದುಕೊಂಡು ನಿಲ್ಲುತ್ತಿದ್ದಳು.
ಮಯೂರ ಬಿ ಮಸೂತಿ ಬರಹ ನಿಮ್ಮ ಓದಿಗೆ

read more
ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ಕೊರೋನಾ ಕೊರೋನಾ: ರಂಜಾನ್ ದರ್ಗಾ ಸರಣಿ

ರಾತ್ರಿ ಮಾತ್ರ ಮಲಗುವುದು ಸಮಸ್ಯೆಯಾಗುತ್ತಿತ್ತು. ವೈದ್ಯಕೀಯ ಯಂತ್ರಗಳು ಹಗಲು ಹೊತ್ತು ಕೊಂಯ ಕೊಂಯ ಮಾಡುವುದನ್ನು ಸಹಿಸಿದರೂ ರಾತ್ರಿಯ ನೀರವ ವಾತಾವರಣದಲ್ಲಿ ಕಿರಿಕಿರಿ ಎನಿಸುತ್ತಿತ್ತು. ಅಂಥ ಪ್ರಸಂಗಗಳಲ್ಲಿ ರೋಗಿಗಳು ಅಸಹಾಯಕರಾಗಿ ಸಹನೆ ಕಳೆದುಕೊಳ್ಳುವ ಸ್ಥಿತಿಯಲ್ಲಿರುತ್ತಾರೆ. ಆಗ ನಾನೊಂದು ಉಪಾಯ ಹುಡುಕಿದೆ. ಫ್ಯಾನಿನ ತಂಗಾಳಿಯ ಕಡೆಗೆ ಮಾತ್ರ ಲಕ್ಷ್ಯಕೊಟ್ಟು ಬೇರೆ ಏನನ್ನೂ ಯೋಚಿಸದೆ ಅದನ್ನೇ ಆನಂದಿಸುತ್ತಿದ್ದೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 99ನೇ ಕಂತು ನಿಮ್ಮ ಓದಿಗೆ

read more
ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಏಕವ್ಯಕ್ತಿ ರಂಗಪ್ರಯೋಗದ ಸವಾಲು-ಸಾಧ್ಯತೆಗಳು: ರಾಜೇಂದ್ರಕುಮಾರ್ ಮುದ್ನಾಳ್‌ ಬರಹ

ಸಾಮೂಹಿಕವಾಗಿ ಇಂದು ನಾಟಕಗಳನ್ನು ಆಡಲು ಬಹಳ ಜನರು ಸೇರುತ್ತಿಲ್ಲ. ತಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಆ ಸಂದರ್ಭದ ರಂಗಭೂಮಿಯ ವೈಭವವೇ ಬೇರೆ. ಸಾಂಪ್ರದಾಯಿಕ ವೃತ್ತಿರಂಗಭೂಮಿಯ ನಾಟಕ ಕಂಪನಿಗಳು ಇಂದಿಗೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಹರ್ಷದಾಯಕ ಬೆಳವಣಿಗೆ. ಅದು ಅವರಿಗೆ ಅನಿವಾರ್ಯವೂ ಕೂಡ ಆಗಿದೆ. ಜನರ ಅಭಿರುಚಿ, ಅಭಿವೃದ್ಧಿಗೆ ತಕ್ಕಂತೆ ನಾಟಕಗಳು ತಮ್ಮ ಶೈಲಿ ಸಂಭಾಷಣೆ ಎಲ್ಲವನ್ನು ಮಾರ್ಪಡಿಸಿಕೊಂಡಿವೆ. ಬಹಳಷ್ಟು ಕಲಾವಿದರು ಸಾಮಾಜಿಕ ನಾಟಕ ಕಂಪನಿಗಳಿಂದ ಬದುಕುವವರಿದ್ದಾರೆ.
ಏಕವ್ಯಕ್ತಿ ರಂಗ ಪ್ರಯೋಗದ ಸವಾಲು ಮತ್ತು ಸಾಧ್ಯತೆಗಳ ಕುರಿತು ಡಾ. ರಾಜೇಂದ್ರಕುಮಾರ್‌ ಕೆ. ಮುದ್ನಾಳ್‌ ಬರಹ

read more
ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಮೂರ್ತದಿಂದ ಅಮೂರ್ತದೆಡೆಗೆ: ನಾರಾಯಣ ಯಾಜಿ ಬರಹ

ಪಾಶ್ಚಾತ್ಯವೇ ಇರಲಿ ಪೌರಾತ್ಯವೇ ಇರಲಿ ಈ ನಾಟಕ ಹೇಗೆ ಮತ್ತು ಯಾವಾಗ ವಿಕಸಗೊಂಡಿತು ಎನ್ನುವದನ್ನು ನಿಖರವಾಗಿ ತಿಳಿಸಲು ಸಾಧ್ಯವಾಗುವದಿಲ್ಲ. ಪ್ರಾಚೀನ ಗ್ರೀಸಿನ ಮೊದಲ ನಾಟಕಗಳು ಮೇಳಗೀತಗಳಿಂದ ಮೊದಲ ಅಭಿನಯ ಮತ್ತು ನಟನೆಗಳು ಹುಟ್ಟಿರಬಹುದೆನ್ನುವದನ್ನು ತತ್ವಜ್ಞಾನಿ ಅರಿಸ್ಟಾಟಲ್ ಹೇಳುತ್ತಾನೆ. ನಟನೆ ಎನ್ನುವುದು ಜೀವಿಗಳ ಕಲಿಕೆಯ ಮೊದಲ ಹಂತವೆನ್ನಬಹುದು.
ವಿಶ್ವರಂಗಭೂಮಿಯ ದಿನಾಚರಣೆಯ ಹೊತ್ತಿನಲ್ಲಿ ಭರತನ ನಾಟ್ಯಶಾಸ್ತ್ರದ ಪ್ರಸ್ತುತತೆಯ ಕುರಿತು ನಾರಾಯಣ ಯಾಜಿ ಬರಹ

read more
ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ಧರೆಯೂ ಮತ್ತು ಬದುಕೂ ಧಗಧಗನೆ ಉರಿಯಿತು…: ಗಿರಿಧರ್‌ ಗುಂಜಗೋಡು ಬರಹ

ನಾನು ಕೆಲಸದ ಸಲುವಾಗಿ ಆಗಾಗ ಮಾತನಾಡುತ್ತಿದ್ದ ಬಾಂಗ್ಲಾದೇಶ ಮೂಲದ ಸಹೋದ್ಯೋಗಿಯೊಬ್ಬರ ಮನೆ ಕೂಡಾ ಸಂಪೂರ್ಣವಾಗಿ ಸುಟ್ಟಿತ್ತು. ಪತಿ ಮತ್ತು ಮೂವರು ಮಕ್ಕಳೊಡನೆ ಮನೆ ಬಿಟ್ಟು ಬರುವಾಗ ಎರಡು ಮೂರು ಸೂಟ್‌ಕೇಸಿನಷ್ಟು ಬಟ್ಟೆ ಮತ್ತು ಅತೀ ಅವಶ್ಯಕವಾದ ವಸ್ತುಗಳನ್ನು ಮಾತ್ರ ತರಲು ಅವರಿಗೆ ಸಾಧ್ಯವಾಗಿದ್ದು. ವಿಮೆ ಕೂಡಾ ತಕ್ಕಮಟ್ಟಿಗೆ ಸಿಗಬಹುದು. ಕಳೆದುಕೊಂಡಿದ್ದನ್ನು ಸಂಪಾದಿಸಲೂಬಹುದು.
ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಮತ್ತು ಅದರ ಪರಿಣಾಮಗಳನ್ನು ಹತ್ತಿರದಿಂದ ಕಂಡ ಗಿರಿಧರ್‌ ಗುಂಜಗೋಡು ಬರಹ ನಿಮ್ಮ ಓದಿಗೆ

read more
ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

read more
ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

read more
ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಬ್ಯಾಗ್ ತೆರೆದಾಗ ಅದರೊಳಗೆ ಕಂಡ ಕಂತೆ ಕಂತೆ ನೋಟುಗಳು ಒಂದು ಕ್ಷಣಕ್ಕೆ ಯೂಸುಫ್‌ನ ಅಂತರಂಗದ ನೈತಿಕತೆಯ ಪರೀಕ್ಷಾರಂಗವಾಗುತ್ತದೆ. ಈ ಹಣವನ್ನಿಟ್ಟುಕೊಂಡು ಮಗಳ ಮದುವೆ ಮಾಡಿಮುಗಿಸಬಹುದು ಎಂಬ ಯೋಚನೆ ಬಂದರೂ ಅದನ್ನು ಹತ್ತಿಕ್ಕಿಕೊಂಡು ಬ್ಯಾಗನ್ನು ಆ ಶ್ರೀಮಂತನಿಗೆ ಹಿಂದಿರುಗಿಸುವ ನಿರ್ಧಾರ ಮಾಡುತ್ತಾನೆ ಯೂಸುಫ್. ಅಂತೆಯೇ ಸಿರಿವಂತನ ಮನೆಯನ್ನು ಹುಡುಕಿಹೋಗಿ ಆ ಬ್ಯಾಗನ್ನು ಕೊಟ್ಟುಬರುತ್ತಾನೆ.
ಬದುಕಿನ ಮೌಲ್ಯಗಳ ಸುತ್ತ ಹೆಣೆದ ಕತೆಗಳ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ