ಹಿಮಾಲಯದಲ್ಲಿ ಹಕ್ಕಿಗಳ ಚಿಲಿಪಿಲಿ: ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿತ ರಸ್ಕಿನ್ ಬಾಂಡ್ ಬರಹ
ಈ ಹಾಡು ನನ್ನನ್ನು ಯಾವಾಗಲೂ ಮರುಳುಗೊಳಿಸುತ್ತದೆ. ಈ ಪಕ್ಷಿಯು ಅನುಮಾನದಿಂದ ಕೂಗಿ, ಸರಿಯಾದ ರಾಗವನ್ನು ಪ್ರಯತ್ನಿಸುವಂತೆ, ಅನಂತರ ಆತ್ಮವಿಶ್ವಾಸದಿಂದ ಇಂಪಾಗಿ ಪೂರಾ ಹಾಡನ್ನು ಲಯ ಬದ್ಧವಾಗಿ ಬೆಟ್ಟದ ಸುತ್ತಲೂ ಕೇಳುವಂತೆ ಹಾಡಿತು. ಇದ್ದಕ್ಕಿದ್ದಹಾಗೇ ಸಂಗೀತವು ನಿಲ್ಲುವುದು, ಸ್ವರ ಆರೋಹಣದ ಮಧ್ಯೆ; ಮತ್ತು ನಾನು ಆಶ್ಚರ್ಯದಿಂದ ಹಕ್ಕಿ ಹಾಡುವುದನ್ನು ನಿಲ್ಲಿಸುವುದಕ್ಕೆ ಏನಾಗಿರಬಹುದು ಎಂಬುದಾಗಿ ಚಿಂತಿಸಿದೆ.
ಡಾ. ಖಂಡಿಗೆ ಮಹಾಲಿಂಗ ಭಟ್ ಅನುವಾದಿಸಿದ ರಸ್ಕಿನ್ ಬಾಂಡ್ ಅವರ “ರೇನ್ ಇನ್ ದ ಮೌಂಟೇನ್ಸ್” ಕೃತಿಯ ಒಂದು ಬರಹ ನಿಮ್ಮ ಓದಿಗೆ
‘ದಿ ಫೈಯರ್’….: ಡಾ. ಶ್ರೀಪಾದ ಭಟ್ ಬರಹ
ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್ ಬರಹ
ಶಾಲೆ ಕಳ್ಳ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ಎಷ್ಟೋ ಸಲ ಗೇಟ್ ಹತ್ತಿರ ಹೋಗುವಾಗಲೇ ಶಾಲೆಯ ಪ್ರಾರ್ಥನೆ ಶುರುವಾಗುತ್ತಿತ್ತು. ಪ್ರಾರ್ಥನೆ ಹೇಳುವ ಮಕ್ಕಳ ಸಮೂಹ ಗಾಯನದಲ್ಲಿ, “ಮಂಗಳವನು ಕರೆಯುತಿರುವ ದೇವ ಶುಭವ ನೀಡಲಿ…” ಅಂತ ಕೇಳುವಾಗಲೇ ಅಳು ಉಕ್ಕಿ ಉಕ್ಕಿ ಬರುತ್ತಿತ್ತು. ತಡ ಆಯ್ತು, ಇನ್ನು ಟೀಚರ್ ಹೊಡಿತಾರೆ, ಅಮ್ಮ ಬಿಟ್ಟು ಹೋದ್ರು ಅನ್ನೋದು ಮಾತ್ರವಲ್ಲದೇ ಎದೆಯಲ್ಲಿ ಯಾವುದೋ ಏಕಾಂಗಿ ಭಾವ ಉಕ್ಕಿ ದುಃಖ ಉಮ್ಮಳಿಸಿ ಬರುತ್ತಿತ್ತು. ಅದು ಆ ಪ್ರಾರ್ಥನೆಯ ರಾಗದಿಂದ ಹಾಗಾಗುತ್ತಿತ್ತೋ ಅಥವಾ ಬೇರಾವುದರಿಂದಲೋ ಗೊತ್ತಾಗುತ್ತಿರಲಿಲ್ಲ. ನಿಂತಲ್ಲಿಯೇ ಜೋರಾಗಿ ಅತ್ತು ಬಿಡುತ್ತಿದ್ದೆ.
ಶಾಲೆಗೆ ಹೋಗುವುದನ್ನು ತಪ್ಪಿಸಲು ನೋಡುವ ಶಾಲೆ ಕಳ್ಳರ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರಹ
ನಮ್ಮ ಭೂಮಿಗೆ ಈ ಪುಟ್ಟ ಕಾಣಿಕೆಯನ್ನಾದರೂ ಕೊಡೋಣ..: ಬಿ.ಸಂ.ಸುವರ್ಚಲಾ ಬರಹ
ಹೆಚ್ಚಿನವರ ಕೈಯಲ್ಲಿ ಇಂದು ದುಡ್ಡು ಸುಲಭವಾಗಿ ಓಡಾಡುತ್ತಿದೆ. ಅದಕ್ಕೆ ತಕ್ಕನಾಗಿ ಆಸ್ತಿ, ಅಂತಸ್ತುಗಳು, ಬಳಸುವ ವಸ್ತುಗಳು ಇರಬೇಕೆಂದು ಬಯಸುವವರೇ ಹೆಚ್ಚು. ಪಟ್ಟಣಗಳು, ಮಾಲ್ ಸಂಸ್ಕೃತಿಗಳು ಜನರ ಕೊಳ್ಳುಬಾಕತನವನ್ನು ಇನ್ನಷ್ಟು ಉತ್ತೇಜಿಸುತ್ತಿವೆ. ಇತರರಿಂದ ಪ್ರಭಾವಕ್ಕೊಳಗಾಗುವ ಅನೇಕರು ಇತರರಂತೆ ನಾವೂ ಇರಬೇಕೆನ್ನುತ್ತಾ ತಮ್ಮ ಅಗತ್ಯಕ್ಕಿಂತ ಹೆಚ್ಚಿನ ವಸ್ತುಗಳನ್ನು ಕೊಳ್ಳುತ್ತಾ ಜೀವನ ಸವೆಸುತ್ತಿದ್ದಾರೆ. ಹೊಸವರ್ಷದ ಹೊಸ್ತಿಲಲ್ಲಿ ನಾವೀಗ ಇದ್ದೇವೆ. ಇನ್ನಾದರೂ ನಾವು ಎಚ್ಚೆತ್ತುಕೊಂಡರೆ, ಒಂದಷ್ಟು ನಮ್ಮ ಅಗತ್ಯತೆ, ಅನಗತ್ಯತೆಗಳನ್ನು ಅರ್ಥ ಮಾಡಿಕೊಂಡರೆ, ಸಹಜ-ಸರಳವಾಗಿ, ಪರಿಸರಕ್ಕೆ ಪೂರಕವಾಗಿ, ಸುಸ್ಥಿರ ಜೀವನ ನಡೆಸಲು ಖಂಡಿತಾ ಸಾಧ್ಯವಿದೆ.
ಪರಿಸರ ಕಾಳಜಿಯ ಕುರಿತು ಬಿ.ಸಂ.ಸುವರ್ಚಲಾ ಬರಹ
ವ್ಯಕ್ತಮಧ್ಯದ ಬಿಂದುವೊಂದರಲ್ಲಿ ನಿಂತು…: ಡಾ. ವಿಶ್ವನಾಥ ಎನ್ ನೇರಳಕಟ್ಟೆ
ಮೇ ತಿಂಗಳ ಹದಿನೇಳನೇ ತಾರೀಖು ನನ್ನ ಬಹುಕಾಲದ ಕನಸು ನನಸಾದ ದಿನ. ಪಿಎಚ್.ಡಿ. ವಿದ್ಯಾರ್ಥಿ ಎಂದೆನಿಸಿಕೊಂಡು ಅದಾಗಲೇ ಏಳು ವರ್ಷ ಕಳೆದಿತ್ತು. ಮಹಾಪ್ರಬಂಧ ಸಿದ್ಧಪಡಿಸಿ, ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ವರ್ಷ ಒಂದಾಗಿತ್ತು. ನನ್ನ ಸಂಶೋಧನೆಗೆ ಅರ್ಥಪೂರ್ಣ ಮುಕ್ತಾಯವೊಂದು ದೊರಕುವುದಿಲ್ಲವೋ ಏನೋ ಎಂಬ ಆತಂಕ ಹೃದಯವನ್ನೊತ್ತಿ ನಿಂತಿತ್ತು. ಆ ಕ್ಷಣದಲ್ಲಿಯೇ ಮುಕ್ತ ಮೌಖಿಕ ಪರೀಕ್ಷೆಗೆ ಕರೆಬಂದದ್ದು. ಮೇ ಹದಿನೇಳರಂದು ನಾನು ಮೌಖಿಕ ಪರೀಕ್ಷೆಯನ್ನು ಎದುರಿಸಬೇಕಿತ್ತು. ಅದಕ್ಕೂ ಎರಡು ದಿನ ಮೊದಲು ಅಮ್ಮನ ಆರೋಗ್ಯ ಹದಗೆಟ್ಟು ಬೆಳ್ಳಂಬೆಳಗ್ಗೆಯೇ ಆಸ್ಪತ್ರೆ ಸೇರಿಕೊಳ್ಳುವಂತಾಯಿತು. ಒಂದು ವಾರ ಆಸ್ಪತ್ರೆಯಲ್ಲಿಯೇ ಇರದೆ ಬೇರೆ ದಾರಿಯಿರಲಿಲ್ಲ.
ಹೊಸ ವರ್ಷಕ್ಕೆ ಹಳೆಯ ನೆನಕೆಗಳೊಂದಿಗೆ ಡಾ. ವಿಶ್ವನಾಥ ನೇರಳಕಟ್ಟೆ ಬರಹ
ಒಂದೊಂದ್ಲೆ ಒಂದು…!: ಕ್ಷಮಾ ವಿ ಭಾನುಪ್ರಕಾಶ್ ಬರಹ
ವೈಜ್ಞಾನಿಕ ತಳಹದಿಯೇ ಇಲ್ದೇ, ಯಾವುದೋ ಬಂಜರು ಭೂಮಿಯಲ್ಲಿ ಸುಲಭವಾಗಿ ಸಿಕ್ಕ ಯಾವುದೋ ಪ್ರಭೇದದ ಸಸಿಗಳನ್ನ ನೆಟ್ಟು, ಪರಿಸರ ದಿನ ಆಚರಿಸೋದು ಅತ್ಯಂತ ಅರ್ಥಹೀನ; ಮರಗಳನ್ನು ನೆಟ್ಟು ಎಲ್ಲೆಂದರಲ್ಲಿ ಕಾಡು ಮಾಡಿಬಿಡ್ತೀವಿ ಅಂದ್ರೆ ಹೇಗೆ? ಅಲ್ಲಿ ಯಾವ ಜೀವರಾಶಿಯಿತ್ತು? ಅಲ್ಲಿನ ಆಹಾರ ಸರಪಳಿಯ ಕಥೆಯೇನು? ಅಲ್ಲಿನ ಅಜೈವಿಕ ಹಾಗೂ ಜೈವಿಕ ಅಂಶಗಳ ನಡುವಿನ ಸಮತೋಲನದ ಕಥೆಯೇನು?
ಈ ಹೊಸ ವರ್ಷದಿಂದ ಸ್ವಲ್ಪವಾದರೂ ನಾವು ನಿಂತಿರುವ ಈ ಭೂಮಿಯ ಕುರಿತು ಯಾವೆಲ್ಲ ರೀತಿಯಲ್ಲಿ ಕಾಳಜಿ ವಹಿಸಬಹುದು ಎನ್ನುವುದರ ಕುರಿತು ಕ್ಷಮಾ ವಿ. ಭಾನುಪ್ರಕಾಶ್ ಬರಹ
ವರ್ತಮಾನದ ಬೆಂಕಿಯಲ್ಲಿ ಅರಳಿದ ಹೂವು ಮೈ ಫ್ಯಾಮಿಲಿ: ಎಚ್. ಆರ್. ರಮೇಶ ಬರಹ
ಈ ನಾಟಕದ ಮತ್ತೊಂದು ವೈಶಿಷ್ಟ್ಯತೆಯೆಂದರೆ, ಇಂದಿನ ತಂತ್ರಜ್ಞಾನ ಮತ್ತು ಅದರ ಪರಿಣಾಮದ ಸೋ ಕಾಲ್ಡ್ ಆನ್ ಲೈನ್ ಸಾಮಾಜಿಕ ಜಾಲ ತಾಣಗಳು ಮನುಷ್ಯ ಸಂಬಂಧಗಳನ್ನು ಸಡಿಲಗೊಳಿಸುತ್ತ, ಒಂಟಿತನಗಳನ್ನು ಹುಟ್ಟುಹಾಕುತ್ತ ಮನುಷ್ಯರನ್ನು ಭಾವನಾರಹಿತರನ್ನಾಗಿಸುತ್ತಿರುವುದನ್ನು, ಇಡೀ ಮನುಕುಲವೇ ಅನುಭವಿಸುತ್ತಿರುವುದನ್ನು, ಭಾರತೀಯ ಸಂದರ್ಭದಲ್ಲಿ ಇಟ್ಟು ನೋಡಿರುವುದು. ಇದಕ್ಕೆ ಪುರಾಣ, ಇತಿಹಾಸ, ಮತ್ತು ಜ್ವಲಂತ ಸಂಗತಿಗಳು ರೂಪಕವಾಗಿ ಮೈದಾಳಿ ಬಂದಿವೆ.
ಕುಮಾರಿ ಗೌತಮಿ ಕತೆಯಾಧಾರಿತ ಮೈಸೂರಿನ ರಂಗಾಯಣದ ರೆಪರ್ಟರಿ ಕಲಾವಿದರು ಅಭಿನಯಿಸಿದ “ಮೈ ಫ್ಯಾಮಿಲಿ” ನಾಟಕದ ಕುರಿತು ಎಚ್.ಆರ್. ರಮೇಶ್ ಬರಹ
ಹಿಂಗೊಂದಿತ್ತು ಕಾಲ…: ವಸಂತಕುಮಾರ್ ಕಲ್ಯಾಣಿ ಬರಹ
ತರಕಾರಿ ಗುಣಮಟ್ಟ ನೋಡುವುದು, ಚೌಕಾಶಿ ಮಾಡುವುದು ಮೊದಲಾದರಲ್ಲಿ ತೊಡಗಿಕೊಂಡರೆ, ಈ ಸಮೂಹದಲ್ಲಿದ್ದ ರಾಮಕ್ಕ, ಚೆನ್ನಮ್ಮಕ್ಕ, ಜೊತೆ ಇನ್ನೊಬ್ಬರು ಇದ್ದರು -ಒಂದು ಹೂವಿನ ಹೆಸರು ಅವರದು- ಯಾವ ಮಾಯದಲ್ಲೋ ಎರಡು ಬದನೆಕಾಯಿಯನ್ನೋ, ಒಂದು ಮಾವಿನ ಹಣ್ಣನ್ನೋ ‘ಅಬೇಸ್’ ಮಾಡಿ ಸೆರಗಿನಲ್ಲಿ ಮುಚ್ಚಿಟ್ಟುಕೊಂಡು ಗಾಡಿ ಹೋದ ನಂತರ ಉಳಿದವರಿಗೆ ತಮ್ಮ ಕೈಚಳಕದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವುದೂ, ಉಳಿದವರು ಅದಕ್ಕೆ ಕೊಂಕಿನ, ಮೆಚ್ಚುಗೆಯ ಮಾತಾಡುತ್ತಾ ಒಂದಷ್ಟು ಸಮಯ ಕಳೆಯುತ್ತಿದ್ದರೆ, ನಮ್ಮಮ್ಮ ಪಾಪ ಭೀರು, “ಪಾಪ ಯಾಕೆ ಹಾಗೆ ಮಾಡಿದೆ, ಈ ಬಿಸಿಲಿನಲ್ಲಿ ಸುತ್ತುವ ಅವನಿಗೆ ನಷ್ಟವಾಯಿತಲ್ಲ” ಎಂದು ಕೊರಗುತಿದ್ದರು.
ವಸಂತಕುಮಾರ್ ಕಲ್ಯಾಣಿ ಬರಹ ನಿಮ್ಮ ಓದಿಗೆ
ಮಹಾರಾಜಾ ಕಾಲೇಜಿನ ಮಧುರ ನೆನಪು ……: ಮೂರ್ತಿ ದೇರಾಜೆ ಬರಹ
ಮೈಸೂರಿಗೆ ಬಂದು ಮಹಾರಾಜಾ ಕಾಲೇಜು ನೋಡಿ ನಾವು ಮಾತ್ರ ಅಲ್ಲ…. ನನ್ನ ಅಪ್ಪನೂ ಕಂಗಾಲು. ಕಾಲೇಜು ಕಛೇರಿಯಲ್ಲಿ, “ಮಾರ್ಕ್ಸ್ ಎಷ್ಟಿದೆ…? ಬೇಕಾದ ಸಬ್ಜೆಕ್ಟ್ ಅಷ್ಟು ಸುಲಭದಲ್ಲೆಲ್ಲಾ ಸಿಗಲ್ಲ….” ಅಂತೆಲ್ಲ ಸ್ವಲ್ಪ ಹೆಚ್ಚೇ ಹೆದರಿಸಿದರೂ…… ಸೀಟಂತೂ ಸಿಕ್ಕಿತು. ನಮ್ಮ ಪೂರ್ವಜನ್ಮದ ಪುಣ್ಯ ಅಂತ ಭಾವಿಸಿದ್ದೆವು…… ಆಗ ನಮಗೇನು ಗೊತ್ತು….!! ವರ್ಷ ಕಳೆಯುವಾಗ ಗೊತ್ತಾಯ್ತು, ಇಲ್ಲಿ ಮಾರ್ಕ್ಸ್ ವಿಷಯ ಬಿಡಿ…. ! ೪-೫ ಭಾರಿ ಫೈಲ್ ಆದವರಿಗೂ ಎಡ್ಮಿಶನ್ ಕಷ್ಟವಿಲ್ಲ ಅಂತ.
ಮೈಸೂರಿನ ಮಹಾರಾಜಾ ಕಾಲೇಜು ದಿನಗಳ ಕುರಿತು ಮೂರ್ತಿ ದೇರಾಜೆ ಬರಹ ನಿಮ್ಮ ಓದಿಗೆ









