Advertisement

ಸರಣಿ

ಮೊಹಮ್ಮದ್ ಚಾಚಾ!: ದರ್ಶನ್‌ ಜಯಣ್ಣ ಸರಣಿ

ಮೊಹಮ್ಮದ್ ಚಾಚಾ!: ದರ್ಶನ್‌ ಜಯಣ್ಣ ಸರಣಿ

ಅವರು ಇಲ್ಲಿನ 45-50 ಡಿಗ್ರಿ ಉಷ್ಣಾಂಶವನ್ನ ಬಳಸಿಕೊಂಡು ಪ್ಲಾಸ್ಟಿಕ್‌ನ ಡಬ್ಬಿಯಲ್ಲಿ ತಾವು ತಂದ ಆಹಾರವನ್ನು ಬಿಸಿ ಮಾಡಿಕೊಳ್ಳುವುದನ್ನು ನೋಡಿ ಸಂಕಟವೂ ಆಯಿತು. ಏನಾದರೂ ಮಾಡಬೇಕಲ್ಲ ಎಂದು ಯೋಚಿಸುವಾಗ ಒಂದು ಹೊಸ tupperware ನ ಊಟದ ಡಬ್ಬಿಯನ್ನು ತಂದುಕೊಡುವುದು ಸೂಕ್ತ ಅಂತ ಅನ್ನಿಸಿತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಹನ್ನೊಂದನೆಯ ಕಂತು

read more
ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

read more
“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

read more
ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ಸುಂದರ, ಸಮೃದ್ಧ ಕಾಡಿನ ರೋಚಕ ಕಥೆಗಳು: ರೂಪಾ ರವೀಂದ್ರ ಜೋಶಿ ಸರಣಿ

ತುಂಬ ದಟ್ಟವಾದ ಎತ್ತರವಾದ ಮರಗಳಿಂದ ಕಂಗೊಳಿಸುವ ಕಾಡಿನಿಂದ ಆವೃತವಾದ ಆ ಗುಡ್ಡ ನೋಡುವುದೆಂದರೆ ಎಲ್ಲಿಲ್ಲದ ಖುಶಿ ನನಗೆ. ಅದರಲ್ಲಿ ಒಂದು ವಿಚಿತ್ರ ಆಕರ್ಷಣೆ ಇತ್ತು. ಹಗಲು ಅಷ್ಟು ಪ್ರೀತಿಯಿಂದ ನೋಡುವ ಗುಡ್ಡ, ರಾತ್ರಿ ಮಾತ್ರ ಭಯ ಹುಟ್ಟಿಸುತ್ತಿತ್ತು. ರಾತ್ರಿ ಊಟ ಮಾಡಿ ಕೈತೊಳೆಯಲು, ‘ವಂದ’ ಮಾಡಲು ಹೊರಗೆ ಬಂದಾಗಲೆಲ್ಲ ನಾವು ಅತ್ತ ದೃಷ್ಟಿ ಹರಿಸುವ ಸಾಹಸವನ್ನೇ ಮಾಡುತ್ತಿರಲಿಲ್ಲ. ಆಕಸ್ಮಿಕವಾಗಿ ಕಣ್ಣು ಅತ್ತ ಹೋದರೆ ಸಾಕು, ಕಾರ್ಗತ್ತಲೆಯಲ್ಲಿ ಮಸಿ ಬಳಿದಷ್ಟು ಕರ್ರಗೆ ಬೃಹದಾಕಾರವಾಗಿ ಕುಳಿತ ಅದು, ಭಯಂಕರವಾದ ಕಲ್ಪನೆ ಮೂಡಿಸಿ, ಎದೆಯ ನಗಾರಿ ಬಡಿತ ಏರುತ್ತಿತ್ತು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ

read more

ಹುಳಿ ಹಿಂಡುವವರ ಮಧ್ಯೆ ನಾವು ಹೇಗಿರಬೇಕು??: ಬಸವನಗೌಡ ಹೆಬ್ಬಳಗೆರೆ ಸರಣಿ

ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸಿ “ನೀನು ಹೇಗೆ ಕಿತ್ತ ಚೂರುಗಳನ್ನು ವಾಪಸ್ ತರಲು ಸಾಧ್ಯವಿಲ್ಲವೋ ಅದೇ ರೀತಿ ನೀನು ಮತ್ತೊಬ್ಬನ ಬಗ್ಗೆ ಹರಡಿದ ಸುಳ್ಳು ಸುದ್ದಿಯು ಹಲವರ ಕಿವಿ ತಲುಪಿ ಅವರು ಅದನ್ನೇ ಸತ್ಯವೆಂದು ನಂಬಿದ್ದಾರೆ. ಈ ರೀತಿ ನಂಬಿದವರೆಲ್ಲರಿಗೂ ಇದು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ ತಾನೇ?!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

read more

ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಗ್ಯೋರ್ಗಿ ಗೊಸ್ಪೊಡಿನೊವ್ ಅನೇಕ ವಿಧಗಳಲ್ಲಿ ಒಬ್ಬ ವಿಶಿಷ್ಟ ಬರಹಗಾರ. ನಾನು ಅವರ ಬರಹಗಳನ್ನು ಮೊದಲಿನಿಂದಲೂ ಓದುತ್ತಿದ್ದೇನೆ ಹಾಗೂ ಕುತೂಹಲಕಾರಿ ಪರಿಕಲ್ಪನೆ, ಅದ್ಭುತ ಕಲ್ಪನೆ ಮತ್ತು ನಿಖರವಾದ ಬರವಣಿಗೆಯ ತಂತ್ರವನ್ನು ಅವರ ಹಾಗೆ ಬೇರೆ ಯಾರಿಂದಲೂ ಸಂಯೋಜಿಸಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬಲ್ಗೇರಿಯಾ ದೇಶದ ಕವಿ ಗ್ಯೋರ್ಗಿ ಗೊಸ್ಪೊಡಿನೊವ್-ರವರ(Georgi Gospodinov) ಕಾವ್ಯದ ಕುರಿತ ಬರಹ

read more

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

read more

ಮನದಂಗಳದಲ್ಲಿ ಬೆಳಗುವ ಮಲೆನಾಡಿನ ದೀಪಾವಳಿ: ಭವ್ಯ ಟಿ.ಎಸ್. ಸರಣಿ

ಬೇರೆಲ್ಲ ಹಬ್ಬಗಳು ಒಂದು ಎರಡು ದಿನಗಳಲ್ಲಿ ಮುಗಿದುಹೋದರೆ, ದೀಪಾವಳಿ ಮಾತ್ರ ನಾಲ್ಕು ಐದು ದಿನ ಮನೆಗಳಲ್ಲಿ ಸಂಭ್ರಮ ತುಂಬಿಸುತ್ತದೆ. ಕಾರ್ತಿಕ ಮಾಸ ಪೂರ್ತಿ ದೇವಾಲಯಗಳಲ್ಲಿ ಮನೆಗಳಲ್ಲಿ ನಿರಂತರ ದೀಪೋತ್ಸವ ಜರಗುತ್ತದೆ. ದೀಪಾವಳಿ ಹಬ್ಬಕ್ಕೆ ಪೂರ್ವ ಸಿದ್ಧತೆ ಸಾಕಷ್ಟು ಬೇಕು. ಭೂರೆ ತುಂಬಿಸುವುದು ಎಂಬ ಪದ್ಧತಿಯಿಂದ ಶುರುವಾಗುವ ಈ ಹಬ್ಬ ಎಣ್ಣೆ ಸ್ನಾನ, ಗೋಪೂಜೆ ಲಕ್ಷ್ಮೀ ಪೂಜೆ, ನರಕ ಚತುರ್ದಶಿ, ಬಲಿಪಾಡ್ಯಮಿ, ಕರಿ ಎಂಬ ದಿನಗಳನ್ನು ಮುಗಿಸಿ ಹೊಸ ತೊಡಕುವಿನೊಂದಿಗೆ ಬೀಳ್ಕೊಡುತ್ತದೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ

read more

ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್‌ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ