ಚಿನ್ನದ ಗಣಿಯಲ್ಲಿ ಭಯಾನಕ ದಿನಗಳು
ಹತ್ತುವರ್ಷಗಳ ಕಾಲ ಕೆಲಸ ಮಾಡುವ ಕರಾರು ಮುಕ್ತಾಯವಾಗುತ್ತಲೇ ಗಣಿಯಿಂದ ಒಬ್ಬೊಬ್ಬರೇ ಹೊರಡತೊಡಗಿದರು. ಇದಿನಬ್ಬ ಕೂಡ, ಸಂಬಳ ಕೊಡುವ ಕಂಪೆನಿಯ ಮ್ಯಾನೇಜರ್ ಬಳಿ ಬಂದು ವಿನಮ್ರನಾಗಿ ನಿಂತು,’ಸರ್, ನಾನು ಊರಿಗೆ ಹೋಗುತ್ತೇನೆ’ ಎಂದ. ಹೋಗಬಹುದು ಎಂದು ಮ್ಯಾನೇಜರ್ ಒಪ್ಪಿದ. ನನ್ನ ಸಂಬಳ ಕೊಟ್ಟುಬಿಡಿ ಎಂದು ಮನವಿ ಮಾಡಿದಾಗ, ಅಧಿಕಾರಿ ಅಚ್ಚರಿಯಿಂದ, ‘ಯಾವ ಸಂಬಳ ? ಅದನ್ನು ಸಿಲೋನಿನಲ್ಲೇ ಕೊಟ್ಟಾಗಿದೆಯಲ್ಲಾ..’ ಎಂದು ಹೇಳಿದ. ಈ ಮಾತು ಕೇಳಿದ ಇದಿನಬ್ಬ ಕುಸಿದು ಕುಳಿತುಬಿಟ್ಟ. ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹತ್ತನೇ ಕಂತು.
ದಾರಿ ಯಾವುದಯ್ಯಾ….
ಎಷ್ಟೋ ದಿನಗಳ ನಂತರ ಮೊದಲ ಬಾರಿಗೆ ‘ಮನಸ್ಸು ಸ್ವಸ್ಥವಾಗಿದೆ,’ ಅನ್ನಿಸುತಿತ್ತು. ‘ಏನು ಆಗತ್ತೋ ಆಗಲಿ, ಸ್ವಿದ್ರಿಗೈಲೋವ್ ವಿಚಾರ ಮುಗಿಸಬೇಕು, ಎಷ್ಟು ಬೇಗ ಆಗತ್ತೋ ಅಷ್ಟು ಬೇಗ. ಅವನೂ ಕೂಡ ನನಗಾಗಿ ಕಾಯತಾ ಇದಾನೆ ಅನಿಸತ್ತೆ,’ ಅಂದುಕೊಂಡ. ಆ ಕ್ಷಣದಲ್ಲಿ, ಅವನ ದಣಿದ ಮನಸಿನಲ್ಲಿ ಎಷ್ಟು ದ್ವೇಷ ಹುಟ್ಟಿತೆಂದರೆ ಸ್ವಿದ್ರಿಗೈಲೋವ್ ಅಥವಾ ಪೋರ್ಫಿರಿ ಇಬ್ಬರಲ್ಲಿ ಒಬ್ಬರನ್ನಾದರೂ ಕೊಲ್ಲಬೇಕು ಅನಿಸಿತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.
ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ
ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”
ಹಾಥಿ ಮತ್ತು ಚೂನಿ ಎಂಬ ಎರಡು ನತದೃಷ್ಟ ಆನೆಗಳ ಕಥೆ
ಒಂದೆಡೆ ಚೂನಿಯ ಸಾವಿನ ಬಗೆಗೆ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ, ಆನೆಯ ಮಾಂಸದ ರುಚಿಯ ಅನುಭವ ಹೇಗಿರಬಹುದೆಂಬ ಮಾತುಗಳೂ ಕೇಳಿ ಬಂದವು. ಆನೆ ಮಾಂಸದ ತಿನುಸುಗಳ ರೆಸಿಪಿಗಳೂ ಪ್ರಕಟವಾದವು. ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ಹಿಟ್ಲರ್ನ ಜರ್ಮನ್ ವಿಮಾನಗಳು ಲಂಡನ್ ಮೇಲೆ ಬಾಂಬ್ ದಾಳಿ ಮಾಡಿದಾಗ, ಚೂನಿಯ ಅಸ್ತಿ ಪಂಜರ ಚೂರು ಚೂರಾಗಿ ಲಂಡನ್ನಿನ ಮಣ್ಣಿನೊಳಗೆ ಬೆರೆಯಿತು.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿ.
ʻದ ಮಿಲ್ಕ್ ಆಫ್ ಸಾರೋʼ: ವಿಷಾದದ ಹನಿಗಳು
ಈ ಚಿತ್ರದಲ್ಲಿ ಮೊದಲ ಹಾಡಿನ ಭಾವದ ನೆಲೆಯಲ್ಲಿಯೇ ಚಿತ್ರದ ಕಥನವಿದೆ. ಚಿತ್ರ ತೆರೆದುಕೊಳ್ಳುತ್ತಿದ್ದಂತೆ ಈ ವಿಷಾದ ಭಾವವನ್ನು ಇನ್ನೊಂದು ರೀತಿಯಲ್ಲಿ ಸ್ಥಿರಪಡಿಸುತ್ತಾಳೆ ನಿರ್ದೇಶಕಿ. ಮದುವೆಗೆ ಸಿದ್ಧವಾಗುತ್ತಿರುವ ಮ್ಯಾಕ್ಸಿಮಾ ತನ್ನ ಸ್ಕರ್ಟಿನ ಸೊಂಟಕ್ಕಿರುವ ಬಟ್ಟೆಯ ಉದ್ದ ಸಾಲದೆಂದು ಕೂಗಾಡುವಾಗ ಮೆಲ್ಲನೆ ಹೆಜ್ಜೆ ಇಟ್ಟು ಬರುತ್ತಾಳೆ ಫಾಸ್ಟಾ. ಅವಳಿಗೆ ಎದುರಾಗುತ್ತದೆ ಮದುವೆಗೆ ಸಂಬಂಧಪಟ್ಟ ವಿಷಯ. ಮದುವೆ! ಅವಳಿಗೆ ಅಷ್ಟೇ ಸಾಕಾಗುತ್ತದೆ. ಗಂಡು-ಹೆಣ್ಣಿಗೆ ಸಂಬಂಧಿಸಿದ, ಅವರಿಬ್ಬರ ಸಮಾಗಮಕ್ಕೆ ಅನುವುಮಾಡಿಕೊಡುವ ವಿಷಯ!
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಪೆರು ದೇಶದ ʻದ ಮಿಲ್ಕ್ ಆಫ್ ಸಾರೋʼ
ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು
ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”
ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ
ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.
ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು
ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು. ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು, ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ.
ಗಂಟಲೊಳಗೆ ಇಳಿಯಲೊಲ್ಲದ ಗುಲ್ಜಾರ್ ಖಾನ್ ಕಟ್ಟಿದ ಮುದ್ದೆಗಳು
ಡಬ್ಬಿಯಲ್ಲಿದ್ದ ತಿಂಡಿ ಕಳವಾಗುತ್ತಿರುವುದನ್ನು ನೋಡಿದ ‘ಹಾರ್ಟ್ ವೀಕ್’ ಮಾರನೆ ಬೆಳಗ್ಗೆ ಊಟವಾದ ಮೇಲೆ ಒಂದು ಉಪಾಯ ಮಾಡಿದ, ತನ್ನ ಟ್ರಂಕಿನ ಮುಂದೆ ನಿಂತುಕೊಂಡು ಎಲ್ಲ ವಿದ್ಯಾರ್ಥಿಗಳನ್ನುದ್ದೇಶಿಸಿ ತನ್ನ ತಿಂಡಿಬಾಕ್ಸ್ ಮುಚ್ಚಳವನ್ನು ತೆಗೆದು ಎಲ್ಲರಿಗೂ ಕಾಣುವಂತೆ ‘ನೋಡ್ರಪ್ಪ ನಾನು ನನ್ನ ತಿಂಡಿಗೆ ಬಾಯಿ ತುಂಬ ಉಗಿತಾ ಇದಿನಿ, ಯಾರಾದರೂ ತಿಂದರೆ ನನ್ನ ಎಂಜಲು ತಿಂದಂತೆ’ ಎಂದು ಕ್ಯಾಕರಿಸಿ ಕ್ಯಾಕರಿಸಿ ಚೆನ್ನಾಗಿ ಉಗಿದು, ನಂತರ ಬಾಯಿ ಮುಚ್ಚಿ ಟ್ರಂಕಿಗಿಟ್ಟು ಸ್ಕೂಲಿಗೆ ಹೋದ. ಮಧ್ಯಾಹ್ನ ಬಂದು ನೋಡಿದಾಗ ಆತನ ತಿಂಡಿ ಹೇಗಿತ್ತೋ ಹಾಗೆಯೇ ಇತ್ತು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಮೂರನೆಯ ಕಂತು








