ವಾರಂಟ್ ಎಂಬ ಮಾಯಾ ಬಜಾರ್
ಆಗ ರಸ್ತೆಗಳು ಅಷ್ಟು ಸರಿ ಇಲ್ಲದ್ದರಿಂದ ಮಡಿಕೇರಿಯಿಂದ ಬೆಂಗಳೂರಿಗೆ ಸಾಧಾರಣ ಏಳರಿಂದ ಎಂಟು ಗಂಟೆ ಸಮಯ ಬೇಕಿತ್ತು. ನಮ್ಮ ಸರಕಾರಿ ಕೆಂಪು ಬಸ್ಸಿನ ಪ್ರಯಾಣ ನಿಮಗೆಲ್ಲರಿಗೂ ಖಂಡಿತ ತಿಳಿದೇ ಇರುತ್ತದೆ. ಸೊಂಟ ಕುಲುಕಿಸಿಕೊಂಡು, ರಸ್ತೆಯ ಗುಂಡಿಗಳಲ್ಲಿ ಏಳುತ್ತಾ ಬೀಳುತ್ತಾ ಮುಂದೆ ಸಾಗಿದ ಬಸ್ಸನ್ನು ಮಂಡ್ಯದಲ್ಲಿ ತಿಂಡಿಗೆಂದು ನಿಲ್ಲಿಸಿದರು. ನಾನು ಕೆಳಗೆ ಇಳಿದು ಬಂದೆ. ಚಂದ್ರಶೇಖರನು ನನ್ನ ಜೊತೆಯಲ್ಲಿ ಬಂದು ನನ್ನ ಪಕ್ಕದಲ್ಲೇ ನಿಂತ.
ಅಮ್ಮನ ನಂಬಿಕೆ, ಔಷಧಿಗಳ ಮಹಿಮೆಯಲ್ಲಿ ಕಳೆದ ಬಾಲ್ಯ
ಬಡ ಗಿರಾಕಿಗಳಿಂದ ಹಿಡಿದು ಶ್ರೀಮಂತ ಗಿರಾಕಿಗಳವರೆಗೆ ಅವರ ಶಕ್ತ್ಯನುಸಾರ ಹಣ್ಣುಗಳನ್ನು ಕೊಳ್ಳುತ್ತಿದ್ದರು. ಹಣ್ಣುಗಳನ್ನು ಕೊಳ್ಳುವಾಗ ರೇಟಿಗೆ ಸಂಬಂಧಿಸಿದ ಕೊಸರಾಟ ಮಜಾ ಅನಿಸುತ್ತಿತ್ತು. ಗಿರಾಕಿಗಳು ತಮ್ಮ ಎಲ್ಲ ತರ್ಕ ಉಪಯೋಗಿಸಿ ಕಡಿಮೆ ಬೆಲೆಗೆ ಕೇಳುತ್ತಿದ್ದರು. ಆ ಹಣ್ಣುಗಳನ್ನು ತರುವ ಕಷ್ಟ, ಅದಕ್ಕಾಗಿ ಮಾಡಿದ ಖರ್ಚು, ಗಿರಾಕಿಗಳು ಕೇಳುವ ಬೆಲೆಗಿಂತ ಹೆಚ್ಚಾಗಿದೆ ಎಂಬುದನ್ನು ಅಜ್ಜಿ ವಿವರಿಸುತ್ತಿದ್ದಳು. ಇಷ್ಟಕ್ಕಾದರೆ ಕೊಡು ಎಂದು ಹೇಳುತ್ತ ಗಿರಾಕಿಗಳು ಮುಂದೆ ಹೋದಂತೆ ಮಾಡುತ್ತಿದ್ದರು. ಅಜ್ಜಿ ಕರೆಯದೆ ಇದ್ದಾಗ ಮತ್ತೆ ವಾಪಸ್ ಬರುತ್ತಿದ್ದರು.
ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ
ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ. ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ. ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು. ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.
ಅಳುಕು… ಹುಳುಕು.. ತಳುಕು…
ಸ್ವಿದ್ರಿಗೈಲೋವ್ನನ್ನು ಭೇಟಿ ಮಾಡಲು ಧಾವಿಸುತ್ತಿದ್ದ ಅವನಿಂದ ಹೊಸದೇನನ್ನಾದರೂ ನಿರೀಕ್ಷೆ ಮಾಡಿದ್ದನೋ? ತಪ್ಪಿಸಿಕೊಳ್ಳುವ ಹೊಸ ದಿಕ್ಕು, ದಾರಿ? ಮುಳುಗುತ್ತಿರುವಾಗ ಹುಲ್ಲುಕಡ್ಡಿಯನ್ನೂ ಗಟ್ಟಿಯಾಗಿ ಹಿಡಿಯುತ್ತಾರೆ! ವಿಧಿಯೋ ಮತ್ತೇನೋ ಅವರಿಬ್ಬರನ್ನೂ ಒಟ್ಟಿಗೆ ತರುತ್ತಿತ್ತೋ? ಬರೀ ದಣಿವು, ಹತಾಶೆ ಇರಬಹುದು; ಸ್ವಿದ್ರಿಗೈಲೋವ್ ಅಲ್ಲದೆ ಬೇರೆ ಇನ್ಯಾರೋ ಅವನಿಗೆ ಬೇಕಾಗಿದ್ದು, ಈ ಕ್ಷಣದಲ್ಲಿ ಸ್ವಿದ್ರಿಗೈಲೋವ್ ಅಲ್ಲಿದ್ದಿರಬಹುದು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.
ಲುಪ್ತವಾಗಿ ಹೋದ ‘ಪ್ರಸಂಗ ಕಥಾಸಾರ’ ಕುರಿತ ವಿಚಾರಗಳು
ಹಿಂದಿನ ಕಾಲದಲ್ಲಿ ಭಾಗವತರು ಪ್ರಸಂಗದ ಮೊದಲಿನಿಂದ ಕೊನೆಯವರೆಗಿನ ಪದ್ಯಗಳನ್ನು ಬಾಯಿಪಾಠ ಮಾಡಿಕೊಂಡೇ ತಯಾರಾಗಿರಬೇಕಾಗಿತ್ತು. ಇಂತಹಾ ಆದಿಯ ಪದ್ಯಗಳಿಗೆ ಕಥಾಸಾರ ಎಂಬ ಹೆಸರು. ಇದನ್ನು ಕಥಾನುಸಾರವೆಂದೂ ಕರೆಯುತ್ತಿದ್ದರು. ಅಜ್ಜ ಬಲಿಪ ನಾರಾಯಣ ಭಾಗವತರ ಕಾಲ ಮತ್ತು ಅದಕ್ಕೂ ಮೊದಲು ಪ್ರಸಂಗದ ಕಥಾಸಾರವನ್ನು ಪ್ರದರ್ಶನದ ವೇಳೆ ಕೈ ಬಿಡುವ ಪದ್ಧತಿ ಇರಲಿಲ್ಲ.ಸದ್ಯದ ಸಂದರ್ಭ ಕಥಾಸಾರ ಅಂದರೇನೆಂಬುದೇ ಅರಿವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ನಿಮ್ಮಪ್ಪ ನಿಂಗೆ ಬೇರೆ ಪ್ಯಾಂಟ್ ಕೊಡ್ಸಿಲ್ವಾ?
ಹಾಸ್ಟೆಲ್ನಲ್ಲಿ ನಮಗೆ ಪ್ರತಿ ತಿಂಗಳು ಸ್ನಾನಕ್ಕೆ ಮೈಸೋಪು, ತಲೆಗೆ ಎಣ್ಣೆ, ಬಟ್ಟೆ ತೊಳೆಯಲು ಹರಸನ್ ಸೋಪು ಕೊಡುತ್ತಿದ್ದರು. ವಾರ್ಡನ್ ನಿರಂಜನಾಚಾರಿ ಕೆಲವೊಮ್ಮೆ ತಿಂಗಳ ಪ್ರಾರಂಭದಲ್ಲೆ ಎಲ್ಲ ಸಾಮಗ್ರಿಗಳನ್ನ ತಂದು ಗೋಡೊನ್ ತುಂಬಿಸಿರುತ್ತಿದ್ದರು. ಆದರೆ ಎರಡು ಮೂರು ತಿಂಗಳಾದರೂ ಅವು ನಮ್ಮ ಕೈಸೇರುತ್ತಿರಲಿಲ್ಲ. ಕೊಂಡು ತರಲು ಹಾಸ್ಟೆಲ್ನ ಯಾವ ಹುಡುಗರ ಹತ್ತಿರವೂ ಬಿಡಿಗಾಸೂ ಇರುತ್ತಿರಲಿಲ್ಲ. ಬಟ್ಟೆಗಳಂತೂ ಮಾಸಿ ಚುಮ್ಮಟವಾಗಿರುತ್ತಿದ್ದವು.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನದ ಹತ್ತನೆಯ ಕಂತು.
ಆನೆಗಳ ಭಾವ ಪ್ರಪಂಚದ ಚಿತ್ರಗಳು
ಆನೆಗಳಿಗೆ ಕೈಗಳಿಲ್ಲದಿರಬಹುದು. ಆದರೆ, ಸೊಂಡಿಲು ಇದೆ. ನಾವು ಕೈಗಳಿಂದ ಮಾಡುವ ಎಷ್ಟೋ ಕಾರ್ಯಗಳನ್ನು ಆನೆಗಳು ತಮ್ಮ ಸೊಂಡಿಲ ಮೂಲಕ ಮಾಡುತ್ತವೆ. ಅವುಗಳಲ್ಲಿ ಚಿತ್ರರಚನೆಯೂ ಒಂದು. ಸರ್ಕಸ್ಗಳಲ್ಲಿ, ಯೂಟ್ಯೂಬ್ ವಿಡಿಯೋಗಳಲ್ಲಿ ಆನೆಗಳು ಪೇಂಟ್ ಬ್ರಶ್ ಹಿಡಿದು ಚಿತ್ರ ಬರೆಯುವುದನ್ನು ನಾವು ನೋಡಬಹುದು. ಆದರೆ, ಇದನ್ನು, ಬಹು ಮಟ್ಟಿಗೆ ಕಲಾ ಸೃಷ್ಟಿ ಎನ್ನಲಾಗದು. ಅದರಲ್ಲಿರುವುದು, ನಿರಂತರ ತರಬೇತಿನಿಂದ ನಿರ್ಮಿತವಾಗಿರುವ ಯಾಂತ್ರೀಕತೆ ಮಾತ್ರ. ‘ಇಂತಹ ಗೆರೆಗಳನ್ನೆಳೆದರೆ ಬಾಳೆಯ ಗೊನೆ ಸಿಗುತ್ತದೆ; ಇಲ್ಲದಿದ್ದರೆ, ಅಂಕುಶದಿಂದ ತಿವಿತ ಸಿಗುತ್ತದೆ’ ಎಂಬ ಪ್ರೋತ್ಸಾಹ-ಶಿಕ್ಷೆಗಳ ಪರಿಣಾಮವಷ್ಟೇ ಅದು.
ಪ್ರೇಮ ಮತ್ತು ವೇದನೆಯ ಸುತ್ತ ಸಾಗುವ ಆಸ್ಟ್ರಿಯಾದ ʻಅಮೋರ್ʼ ಚಿತ್ರ
ಆನ್ಳ ಆರೋಗ್ಯ ಹೆಚ್ಚು ಸೂಕ್ಷ್ಮವಾಗುವ ಹಂತ ಬೇಗನೇ ತಲುಪಿಬಿಡುತ್ತದೆ. ಚಿತ್ರದ ಬಹುಪಾಲು ಜಾರ್ಜ್ ಆನ್ಗೆ ಮಾಡುವ ಸೇವಾಕ್ರಿಯೆಗಳನ್ನು ವಿಸ್ತಾರವಾಗಿ ದಾಖಲಿಸುವುದನ್ನು ಮಾತ್ರ ಕಾಣುತ್ತೇವೆ. ತಿನಿಸುವುದು, ಕುಡಿಸುವುದು, ಹಾಸಿಗೆ, ಹೊದಿಕೆ ಸರಿಪಡಿಸುವುದು, ಡೈಪರ್ಗಳನ್ನು ಬದಲು ಮಾಡುವುದು, ಕಮೋಡ್ ಬಳಿಗೆ ಕರೆದೊಯ್ಯುವುದು ಮುಂತಾದವು. ಜಾರ್ಜ್ ಅವಳಿಗೆ ಆಹಾರ ತಿನ್ನಿಸುವ ಅಥವಾ ಕಮೋಡ್ ನಲ್ಲಿ ಕುಳಿತವಳನ್ನು ಎಬ್ಬಿಸಿ ತರುವುದೂ ಸೇರುತ್ತದೆ.
ಮರುಚಿಂತನೆಯ ಹೊರಪದರವೇ ಬದಲಾವಣೆ
ರಂಗಭೂಮಿಯಲ್ಲಿ ಪ್ರತಿಯೊಂದು ಅಂಗಗಳು ಒಂದೊಂದು ಮಜಲುಗಳಾಗಿ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಈ ಕ್ಷೇತ್ರದಲ್ಲಿ ಮರುಚಿಂತನೆಯ ಅಗತ್ಯವಿದೆ ಎನ್ನುವುದು ಒಪ್ಪತಕ್ಕ ಮಾತು. ಆದರೆ ಮರುಚಿಂತನೆಯ ಹೊಣೆಗಾರಿಕೆಯನ್ನು ಒಬ್ಬರು ಮತ್ತೊಬ್ಬರ ಹೆಗಲಿಗೆ ವರ್ಗಾಯಿಸುತ್ತ ಕೂರುವುದರಿಂದ ಪ್ರಯೋಜನವಿಲ್ಲ. ಮೂರು ದೃಷ್ಟಿಕೋನಗಳ ನಿಟ್ಟಿನಲ್ಲಿ ಮರುಚಿಂತನೆಯ ಅಗತ್ಯವಿದೆ. ರಂಗನಟ, ರಂಗತಂಡ ಮತ್ತು ರಂಗಕರ್ಮಿಗಳ ದೃಷ್ಟಿಕೋನಗಳನ್ನು ಇಲ್ಲಿ ಗಮನಿಸಬೇಕಾಗುತ್ತದೆ. -ಪ್ರಭಾಕರ ರಾವ್ ಬರಹ ಇಲ್ಲಿದೆ.










