Advertisement

ಸರಣಿ

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ಪ್ರಾಣಿಲೋಕದ ಪ್ರೀತಿಸುಧೆಯ ನೆನಪುಗಳು

ನನ್ನ ತಂದೆ ಹಾವು ಹೊಡೆಯುವುದನ್ನು ಕೂಡ ಸಹಿಸಿಕೊಳ್ಳುತ್ತಿರಲಿಲ್ಲ. ಆದರೆ ಕಂದೂರಿ ಒಂದು ಶ್ರದ್ಧೆಯಾಗಿದ್ದರಿಂದ ಮನೆತನದಲ್ಲಿ ತಲೆತಲಾಂತರದಿಂದ ಬಂದ, ಅವರದೇ ನಂಬಿಕೆಯಿಂದ ಕೂಡಿದ ಧಾರ್ಮಿಕ ಕರ್ತವ್ಯ ನಿರ್ವಹಣೆಯನ್ನು ನಿಷ್ಠೆಯಿಂದ ಮಾಡುತ್ತಿದ್ದರು. ನನ್ನ ದಲಿತ ಮಿತ್ರ ತುಕಾರಾಮ ನನಗಿಂತ ಆರುವರ್ಷ ದೊಡ್ಡವರಿದ್ದರು. ನಾನು ನಾಲ್ಕನೆಯ ಇಯತ್ತೆ ಓದುವಾಗ ಅವರು ಮ್ಯಾಟ್ರಿಕ್ ಇದ್ದರು. ನಮ್ಮ ಮನೆಯ ಹತ್ತಿರದ ಹರಿಜನ ಬೋರ್ಡಿಂಗ್‌ನಲ್ಲಿ ಇದ್ದು ಓದುತ್ತಿದ್ದರು.

read more
ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

read more
ತಿಪಟೂರು ಕೆಡಿಸಿ ಬಂದವರು…!

ತಿಪಟೂರು ಕೆಡಿಸಿ ಬಂದವರು…!

ಚಿಕ್ಕನಾಯಕನಹಳ್ಳಿಯ ಸಾರ್ವಜನಿಕ ಹಾಸ್ಟೆಲ್ ವಿಚಿತ್ರ ಅನುಭವ ಕೊಡತೊಡಗಿತು. ಇಲ್ಲಿ ಬೆಳಗ್ಗೆ ಆರಕ್ಕೆ ಕಡ್ಡಾಯವಾಗಿ ಏಳಬೇಕಿತ್ತು. ಎದ್ದು ಓದಿಕೊಳ್ಳುವುದು ಒತ್ತಟ್ಟಿಗಿರಲಿ ಪ್ರತಿಯೊಬ್ಬರೂ ಭಟ್ಟರು ನೇಮಿಸಿದ ಕೆಲಸಗಳನ್ನ ಮಾಡಬೇಕಿತ್ತು. ಕುಳ್ಳಗೆ ದಪ್ಪಗೆ ಮೀಸೆಬಿಟ್ಟಿದ್ದ ಹನುಮಂತನೆಂಬ ಭಟ್ಟನಿದ್ದ. ಹೇಳಿದ ಕೆಲಸ ಮಾಡದವರನ್ನ ಆತ ಅಟ್ಟಾಡಿಸಿಕೊಂಡು ಹೊಡೆಯುತ್ತಿದ್ದ. ಬೆಳಗಿನ ಊಟಕ್ಕೆ ಮುಂಚೆ ಯಾರ್ಯಾರು ಏನೇನು ತಪ್ಪು ಮಾಡಿದರೆಂದು ವಿಚಾರಣೆ ನಡೆಸಿ, ಮೂಲೆಯಲ್ಲಿ ಸದಾ ನಿಂತಿರುತ್ತಿದ್ದ ಉದ್ದನೆಯ ಸಿದ್ದರಾಮಣ್ಣನನ್ನು(ಕೋಲನ್ನ) ತೆಗೆದುಕೊಂಡು ದನಕ್ಕೆ ಬಡಿಯುವಂತೆ ಬಡಿಯುತ್ತಿದ್ದ.
‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನದ ಒಂಭತ್ತನೆಯ ಕಂತು.

read more
ಕುಂಡೆಹಬ್ಬ ತಂದ ಮಂಡೆಬಿಸಿ

ಕುಂಡೆಹಬ್ಬ ತಂದ ಮಂಡೆಬಿಸಿ

ಕೊಡಗಿನ ಬುಡಕಟ್ಟು ಜನರ ಒಂದು ವಿಶಿಷ್ಟವಾದ ಹಬ್ಬ ‘ಬೋಡ್ ನಮ್ಮೆ’  ಅಥವಾ ‘ಕುಂಡೆ’ ಹಬ್ಬ. ಈ ಹಬ್ಬದಲ್ಲಿ ಇವರು ವಿಚಿತ್ರ ವೇಷ ಭೂಷಣಗಳನ್ನು ಧರಿಸುತ್ತಾರೆ. ಕೆಲವರು ಮೈಯ್ಯನ್ನು ಸೊಪ್ಪಿನಿಂದ ಮುಚ್ಚಿ, ಇನ್ನು ಕೆಲವರು ನವೀನ ಪೋಷಾಕುಗಳ ಜೊತೆಗೆ, ಕಪ್ಪು ಕನ್ನಡಕ, ತಲೆಗೆ ಚಿತ್ರ ವಿಚಿತ್ರವಾದ ಟೋಪಿಗಳನ್ನು ಹಾಕಿಕೊಂಡು ವೇಷ ಕಟ್ಟುತ್ತಾರೆ. ಹಬ್ಬವೆಂದ ಮೇಲೆ ಕುಡಿತ ಕುಣಿತ, ತಿನಿಸುಗಳಿರಬೇಕಲ್ಲವೇ. ಆದರೆ ಈ ಹಬ್ಬಕ್ಕೆ ಸಂಬಂಧಿಸಿದ ಘಟನೆಯೊಂದು ನನ್ನ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಕೊಂಡಿದೆ. ಅಷ್ಟೇನೂ ಒಳ್ಳೆಯ ಘಟನೆಯಲ್ಲ ಅದು. ಹಬ್ಬ ತಂದಿಟ್ಟ ದುರಂತವು ಅನಾವರಣಗೊಳಿಸಿದ ಸತ್ಯಗಳನ್ನು  ಡಾ. ಕೆ.ಬಿ. ಸೂರ್ಯಕುಮಾರ್ ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ಪ್ರಸ್ತುತಪಡಿಸಿದ್ದಾರೆ. 

read more
‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

‘ಭಕ್ತರಿಗೆ ಭಾಗ್ಯ ಕೊಡು. ಮಕ್ಕಳಿಗೆ ಬಡತನ ಕೊಡು’

ಒಬ್ಬ ವ್ಯಕ್ತಿ ಹೀಗೆ ದೇವನಾಗಲು ಹೇಗೆ ಸಾಧ್ಯ ಎಂದು ವಿಚಾರವಾದಿಗಳಿಗೆ ಅನಿಸದೆ ಇರದು. ಜನಸಮುದಾಯಗಳ ಬಗ್ಗೆ ಅತೀವ ಕಾಳಜಿಯುಳ್ಳ ಸಾಮಾಜಿಕ ಮನುಷ್ಯ ಜನಪದರ ಕಣ್ಣಲ್ಲಿ ದೇವರಾಗಿ ಕಾಣುತ್ತಾನೆ. ತಮ್ಮ ಮೇಲೆ ನಿಷ್ಕಾಮ ಪ್ರೀತಿಯ ಮಳೆಗೆರೆಯುವವನನ್ನು ಜನಸಾಮಾನ್ಯರು ಹೀಗೆ ದೇವರಾಗಿಸುತ್ತಾರೆ. ಅಮೋಘಸಿದ್ಧನಂಥ ಅಖಂಡ ಪ್ರೀತಿಯೇ ದೈವೀ ಗುಣ. ಅಂಥ ಗುಣವುಳ್ಳವರೇ ದೇವರು. ಅದ್ದರಿಂದ ಇಂಥ ಸಿದ್ಧರ ಕುರಿತ ಡೊಳ್ಳಿನ ಪದಗಳೆಲ್ಲ “ನಮ್ಮಯ ದೇವರು ಬಂದಾರ ಬನ್ನಿರೇ” ಎಂದೇ ಪ್ರಾರಂಭವಾಗುತ್ತವೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

read more
ಅಪರಾಧ ಮತ್ತು ಶಿಕ್ಷೆ:  ನಾನೆಲ್ಲಿರುವೆ….!

ಅಪರಾಧ ಮತ್ತು ಶಿಕ್ಷೆ: ನಾನೆಲ್ಲಿರುವೆ….!

ರಾಸ್ಕೋಲ್ನಿಕೋವ್ ಬಲ ಮೊಳಕೈಯನ್ನು ಟೇಬಲ್ಲಿನ ಮೇಲೆ ಆರಾಮವಾಗಿರಿಸಿ, ಎಡ ಮೊಳಕೈಯನ್ನು ಊರಿ ಅಂಗೈಯಲ್ಲಿ ಮುಖ ಇರಿಸಿ ಸ್ವಿದ್ರಿಗೈಲೋವ್‍ನನ್ನು ದಿಟ್ಟಿಸಿದ. ಒಂದು ನಿಮಿಷದಷ್ಟು ಹೊತ್ತು ಅವನ ಮುಖ ನೋಡುತ್ತಲೇ ಇದ್ದ. ಯಾಕೋ ಅದು ವಿಚಿತ್ರವಾದ ಮುಖ, ಮುಖವಾಡದಂಥ ಮುಖ, ಕೆಂಪು ತುಟಿ, ಬಿಳಿಯ ಮುಖ, ನಸುಗೆಂಪು ಕೆನ್ನೆ, ದಟ್ಟವಾದ ಹೊಂಬಣ್ಣದ ಕೂದಲು, ಗಂಭೀರವಾದ ನೀಲಿ ಕಣ್ಣು, ಭಾರ ಅನಿಸುವ ನಿಶ್ಚಲ ದೃಷ್ಟಿ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

read more
ತಗಡಿನ ಸಂದಿಯಿಂದಲೇ ರಂಗೇರಿಸುತ್ತಿದ್ದ ವಸ್ತು ಪ್ರದರ್ಶನ

ತಗಡಿನ ಸಂದಿಯಿಂದಲೇ ರಂಗೇರಿಸುತ್ತಿದ್ದ ವಸ್ತು ಪ್ರದರ್ಶನ

ನಮಗೂ ಒಂದು ದಿನ ಅದೃಷ್ಟ ಖುಲಾಯಿಸಿ ಬಿಟ್ಟಿತು. ಸೆಕ್ಯುರಿಟಿಯ ಮನಕರಗಿ ಓನರ್ ಇಲ್ಲದ ಸಮಯ ನೋಡಿ ನಮ್ಮನ್ನು ಒಳ ಬಿಟ್ಟಿದ್ದ. ಆ ಸೌಂಡು, ಜಗಮಗ, ರಾಟೆ, ಆಟಗಳು, ಸರ್ಕಸ್‍ನ ಪ್ರಾಣಿಗಳ ಸದ್ದು, ನಗರಿಗರು ಅಲ್ಲಲ್ಲೆ ನಿಂತು ತಿನ್ನುತ್ತಿದ್ದ ತಿನಿಸುಗಳು, ಇವೆಲ್ಲ ಅತ್ಯಾಕರ್ಷಕವಾಗಿದ್ದವು. ಅವನ್ನೆಲ್ಲ ಅನುಭವಿಸಲು ದುಡ್ಡಿಲ್ಲದ ನಾವು ನೋಡಿಯೇ ಹೆಚ್ಚು ಥ್ರಿಲ್ ಆಗುತ್ತಿದ್ದೆವು. ಈಗ ಅವೆಲ್ಲ ಕೈಗೆಟುಕುವಂತೆಯೇ ಇದ್ದರೂ, ಅವನ್ನೆಲ್ಲ ಆಡುವ ಧೈರ್ಯವನ್ನು, ಮನಸ್ಸನ್ನು ಕಳೆದುಕೊಂಡಿದ್ದೇವೆ. ‘ಟ್ರಂಕು ತಟ್ಟೆ’ ಸರಣಿಯಲ್ಲಿ ಗುರುಪ್ರಸಾದ್ ಕಂಟಲಗೆರೆ ಅನುಭವ ಕಥನ.

read more
ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್‌ನ ʻದ ಆರ್ಟಿಸ್ಟ್‌ʼ

ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್‌ನ ʻದ ಆರ್ಟಿಸ್ಟ್‌ʼ

ಮೂಕಿ ಚಿತ್ರವೊಂದು ಈಗ ಸವಾಲುಗಳನ್ನು ಎದುರಿಸಿ ಗೆಲ್ಲುವ ಸಾಧ್ಯತೆ ಇಲ್ಲ ಎನ್ನುವ ತೀವ್ರವಾದ ಅನಿಸಿಕೆಯಿದೆ. ಆದರೆ ಎಲ್ಲರ ಪೂರ್ವಗ್ರಹ, ಅನುಮಾನಗಳನ್ನು ಸಾರಾಸಗಟಾಗಿ ನೆಲಸಮ ಮಾಡಿ, ಅಷ್ಟೆತ್ತರಕ್ಕೆ ಪತಾಕೆ ಹಾರಿಸಿದ ಚಿತ್ರ ʻದ ಆರ್ಟಿಸ್ಟ್‌ʼ. ಹಳೆಯ ದಾರಿಗಳನ್ನು ಹೊಸದಾರಿಗಳನ್ನು ಅನ್ವೇಷಿಸುವಂತೆ ಸಂದೇಶ ನೀಡುವ ಫ್ರಾನ್ಸ್ ನ ಚಿತ್ರವಿದು. ಈ ಚಿತ್ರದ ಆಶಯವೇನು ಎಂಬ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. 2011ರಲ್ಲಿ ತೆರೆಕಂಡ ಚಿತ್ರವಿದು. ಹಾಗಾಗಿ ಅದರ ಪ್ರಭಾವ, ಮಹತ್ವಗಳ ಪೂರ್ಣ ಅರಿವು ದೊರೆಯಬೇಕಾದರೆ ಇನ್ನಷ್ಟು ಕಾಲ ಸರಿಯಬೇಕು. ಲೋಕಸಿನಿಮಾ ಟಾಕೀಸ್ ನಲ್ಲಿ ಎ.ಎನ್. ಪ್ರಸನ್ನ ಬರಹ ನಿಮ್ಮ ಓದಿಗಾಗಿ. 

read more
ಅಪ್ಪನ ಕೌಟುಂಬಿಕ ಅರ್ಥಶಾಸ್ತ್ರ

ಅಪ್ಪನ ಕೌಟುಂಬಿಕ ಅರ್ಥಶಾಸ್ತ್ರ

ನಮಗೆ ಒಂದು ಗೇಣು ಭೂಮಿಯೂ ಇರಲಿಲ್ಲ. ಆದರೆ ತಂದೆಗೆ ಕೃಷಿಕನಾಗುವ ಹುಚ್ಚು ಬಹಳವಿತ್ತು. ಬೆಳದಿಂಗಳ ರಾತ್ರಿಯಲ್ಲಿ ಕೂಡ ಅವರು ಆ ಭೂಮಿಯಲ್ಲಿ ದುಡಿಯುತ್ತಿದ್ದರು. ಅವರಿಗೆ ದುಡಿತದ ಆನಂದವೇ ಆನಂದ. ದುಡಿದು ದುಡಿದು ಕಲ್ಲುಗಳಿಂದ ತುಂಬಿದ ಆ ಹಾಳು ಭೂಮಿಯನ್ನು ಸಮೃದ್ಧಗೊಳಿಸಿದರು. ಬಾಳೆಯ ಸಸಿ ನೆಟ್ಟರು. ಹಳೆಯ ಡೀಸಲ್ ಎಂಜಿನ್ ಕೊಂಡು ನೀರು ಉಣಿಸುತ್ತ ಚಿಕ್ಕ ಬಾಳೆಯ ಬನವನ್ನೇ ಸೃಷ್ಟಿಸಿದರು.
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನೈದನೇ ಕಂತು ಇಲ್ಲಿದೆ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ