Advertisement

ಸರಣಿ

ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್

ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್

ಕನ್ನಡದ ಆಧುನಿಕ ಕವಿಗಳನ್ನೆಲ್ಲ ಓದಿ, ಬರೆದುಕೊಂಡು, ತಾವು ಸ್ವತಃ ಕವನಗಳನ್ನು ಬರೆದು ತಮ್ಮನ್ನು ಸ್ವತಃ ತಿದ್ದಿಕೊಂಡು, ಗೋಕಾಕರಂಥ ವಿಮರ್ಶಕರ ಅಭಿಪ್ರಾಯವನ್ನು ಕೇಳಿ ಮುಕ್ತ ಮನಸ್ಸಿನಿಂದ ಸ್ವೀಕರಿಸಿ, ಅವರ ಸಾಹಿತ್ಯ ರಚನೆಯ ಬಗ್ಗೆ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹೇಳಿ ತಾನೂ ಬೆಳೆದ ಪೇಜಾವರ ಸದಾಶಿವರಾಯರು ತಮ್ಮೊಂದಿಗೆ ಇತರರನ್ನೂ ಬೆಳೆಸಿದ ಸಾಹಿತಿ. ಚಿತ್ರಕಲೆ ಟೆನಿಸ್ ಆಟ, ಸಿತಾರ್ ನುಡಿಸುವುದು, ಫೋಟೋಗ್ರಫಿ, ಅಂಚೆಚೀಟಿ ಸಂಗ್ರಹ, ಚಾರಣ, ಮೌಂಟೆನಿಯರಿಂಗ್  ಮುಂತಾದ ಆಸಕ್ತಿಗಳನ್ನು ಹೊಂದಿದ್ದ ಜೀವನ್ಮುಖಿ ಅವರಾಗಿದ್ದರು. 

read more
ಹೊಟ್ಟೆ ಮತ್ತು ಮನಸ್ಸು ತುಂಬಿದ ಭಾರೀ ಭೋಜನ…

ಹೊಟ್ಟೆ ಮತ್ತು ಮನಸ್ಸು ತುಂಬಿದ ಭಾರೀ ಭೋಜನ…

“ಅವರಿಗೆ ಸುಲಭವೆನಿಸಿದ ಲೆಕ್ಕವನ್ನು, ‘ಒಂದಲ್ಲ ನಾಲ್ಕು ಸಲ ಕೇಳಿ ಹೇಳಿ ಕೊಡ್ತಿನಿ’ ಎನ್ನುತ್ತಿದ್ದರು. ಅದೇ ಸಲುಗೆಯ ಮೇಲೆ ಹುಡುಗರೇನಾದರೂ ‘ಇದು ಅರ್ಥ ಆಗ್ಲಿಲ್ಲ ಯಂಗೆ ಸರ್’ ಎಂದು ಕೇಳಿದರೆ ಉಪಾಯವಾಗಿ ತಾವಿರುವಲ್ಲಿಯ ಬೋರ್ಡ್ ಹತ್ತಿರಕ್ಕೆ ಕರೆಸಿಕೊಂಡು. ‘ಇಂಥ ಸುಲಭದ್ದು ಅರ್ಥ ಆಗ್ಲಿಲ್ವ, ಹೇಳಿ ಕೊಡ್ಬೇಕಾದ್ರೆ ಯತ್ತಗೆ ನೋಡ್ತಿರ್ತಿರ, ಎಲ್ಲಾರ ದನ ಕಾಯದ ಬಿಟ್ಟು, ಸ್ಕೂಲಿಗೆ ಯಾಕೆ ಬತ್ತಿರ’ ಎಂದು ಒಂದೇ ಉಸಿರಿಗೆ ಬೈಯುತ್ತ ಕನಿಷ್ಠ ಎರೆಡು ಕೋಲು ಮುರಿಯುವವರೆಗೂ ಹೊಡೆಯುತ್ತಿದ್ದರು.”

read more
‘ಕೈ ಮದ್ದು’ ಹಾಕುವವರ ಮಧ್ಯೆ..

‘ಕೈ ಮದ್ದು’ ಹಾಕುವವರ ಮಧ್ಯೆ..

ಈ ಮದ್ದು ತೆಗೆಯುವುದು ಎಂದರೆ ಸಂತೆಯಲ್ಲಿ, ಜಾತ್ರೆಯಲ್ಲಿ, ಕಿವಿ, ಕಣ್ಣಿನಿಂದ ಕಲ್ಲು ತೆಗೆದಂತೆ. ತಮ್ಮ ಕೈಚಳಕದಿಂದ ತಾವೇ ಹಾಕಿದ್ದನ್ನು ರಾಶಿಗಟ್ಟಲೆ ತೆಗೆದು ತೋರುವವರಂತೆ ಇದು ಒಂದು ವೃತ್ತಿ. ಆದರೆ ಕೆಲವೊಮ್ಮೆ ಈ ರೀತಿಯ ಪ್ರಕ್ರಿಯೆಯ ನಂತರ ರೋಗ ಗುಣ ಆಗುವುದೂ ಉಂಟು. ಶರೀರಕ್ಕೆ ಬರುವ ಅನೇಕ ರೋಗಗಳು ಮನಸ್ಸಿಗೆ ಸಂಬಂಧಿಸಿದ್ದು. ಅದರಿಂದ ಅನೇಕ ಬಗೆಯ ಚಿಹ್ನೆಗಳು ಕಂಡು ಬರಬಹುದು. ಹೀಗಿರುವಾಗ ತನ್ನಲ್ಲಿದ್ದ “ಮದ್ದು” ಹೊರಬಿತ್ತು ಎಂಬ ನಂಬಿಕೆಯೂ ಅವರನ್ನು ಗುಣಪಡಿಸಲು ಸಾಕು.”

read more
ಸಲಕರಣೆಗಳನ್ನು ಅನ್ವೇಷಿಸುವ ಮನುಷ್ಯರ ಮನೋಲೋಕದ ಕತೆಯಿದು

ಸಲಕರಣೆಗಳನ್ನು ಅನ್ವೇಷಿಸುವ ಮನುಷ್ಯರ ಮನೋಲೋಕದ ಕತೆಯಿದು

ನ್ಯೂಯಾರ್ಕ್ ಸರ್ಕಾರ ಎ.ಸಿ. ವಿದ್ಯುತ್ ನ ಅಪಾಯದ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿ, ಎಂಜಿನಿಯರುಗಳು ಮತ್ತು ತಜ್ಞರಿಂದ ಮಾಹಿತಿ ಕಲೆ ಹಾಕಿತು. ವೆಸ್ಟಿಂಗ್‌ಹೌಸ್‌ನ ಪರವಿದ್ದ ಎಂಜಿನಿಯರುಗಳು ಅಪಾಯವನ್ನು ಅಲ್ಲಗೆಳೆದರೆ, ಎಡಿಸನ್ ಪರವಿದ್ದ ತಜ್ಞರು ಎ.ಸಿ. ವಿದ್ಯುತ್ ವ್ಯವಸ್ಥೆಯನ್ನು ಮಾನವರನ್ನು ಅರೆಗಳಿಗೆಯಲ್ಲೇ ಕೊಲ್ಲಬಲ್ಲ ರಕ್ಕಸ ಶಕ್ತಿಯೆಂಬಂತೆ ಬಿಂಬಿಸಿದರು. ವೆಸ್ಟಿಂಗ್‌ಹೌಸ್ ಮತ್ತು ಎಡಿಸನ್ ನಡುವಿನ ಈ ವ್ಯಾವಹಾರಿಕ ಕದನದಲ್ಲಿ, ತಾನು ನಿರ್ಲಿಪ್ತನೆಂದು ಘೋಷಿಸಿಕೊಂಡ ಹೆರಾಲ್ಡ್ ಬ್ರೌನ್, ಎ.ಸಿ. ವಿದ್ಯುತ್ತಿನ ವಿರುದ್ಧ..”

read more
ಬಾಲ್ಯದ ಆಟ..ಆ ಹುಡುಗಾಟ ಇನ್ನೂ ಮರೆತಿಲ್ಲಾ..

ಬಾಲ್ಯದ ಆಟ..ಆ ಹುಡುಗಾಟ ಇನ್ನೂ ಮರೆತಿಲ್ಲಾ..

“ಆಮೇಲೆ ನಾನು ಆ ಕೋಣೆಯ ಕಿಟಕಿಯ ಮುಂದೆ ಕುಳಿತು ಪಾಠ ಕೇಳುತ್ತಿದ್ದೆ. ಒಂದು ಸಲ ಕಪ್ಪು ಹಲಗೆಯ ಮೇಲೆ ಗಣಿತ ಸಮಸ್ಯೆಯೊಂದನ್ನು ಬರೆದು ಉತ್ತರ ಬರೆಯಲು ತಿಳಿಸಿದರು. ನಾನು ಮನದಲ್ಲೇ ಕೂಡಿಸಿ ಕಳೆದು ಭಾಗಿಸಿ ಥಟ್ಟನೆ ಉತ್ತರ ಹೇಳಿದೆ. ಹೀಗೆ ಹೇಳಲು ಕಾರಣವೂ ಇತ್ತು. ನನ್ನ ಬಳಿ ಕಚ್ಚಾ ನೋಟಬುಕ್ ಕೂಡ ಇರಲಿಲ್ಲ. ಹೀಗಾಗಿ ಮನದಲ್ಲೇ ಲೆಕ್ಕಾಚಾರ ಮಾಡುವುದು ಅನಿವಾರ್ಯವಾಗಿತ್ತು. ನನ್ನ ಉತ್ತರದಿಂದ ಮಾಸ್ತರರಿಗೆ ಖುಷಿಯಾಯಿತು. ನನಗೆ ಒಳಗೆ ಕರೆದರು.”
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನಾಲ್ಕನೇ ಕಂತು ಇಲ್ಲಿದೆ.

read more
ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು.  ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”

read more
ಬಿಟ್ಟೇನೆಂದರೂ ಬಿಡದೀ…..

ಬಿಟ್ಟೇನೆಂದರೂ ಬಿಡದೀ…..

ಅಪರಾಧ ಮಾಡಿದ್ದು ನಿಜವಾದರೆ ಖಂಡಿತ ಬರತಾನೆ. ಬೇರೆಯವರಾಗಿದ್ದರೆ ಬರತಿರಲಿಲ್ಲ, ಇವನು ಮಾತ್ರ, ತಪ್ಪು ಮಾಡಿದ್ದರೆ, ಬಂದೇ ಬರತಾನೆ, ಅಂದುಕೊಂಡೆ. ರಝುಮಿಖಿನ್ ಗುಟ್ಟು ರಟ್ಟು ಮಾಡುವುದರಲ್ಲಿದ್ದ, ಜ್ಞಾಪಕ ಇದೆಯಾ? ನಿನ್ನ ಕೆರಳಿಸಬೇಕು ಅಂತ ಸುದ್ದಿ ಹರಡಿದ್ದು ನಾವೇನೇ. ಆ ಸುದ್ದಿ ಕೇಳಿ ರಝುಮಿಖಿನ್ ನಿನಗೆ ಬಂದು ಹೇಳತಾನೆ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

read more
ನಾಟಕದ ಹೊಟ್ಟೆ ನೋವೂ ಮತ್ತು ತಪ್ಪಿದ ಹಾಜರಾತಿ

ನಾಟಕದ ಹೊಟ್ಟೆ ನೋವೂ ಮತ್ತು ತಪ್ಪಿದ ಹಾಜರಾತಿ

ನಮ್ಮ ಅಡುಗೆ ಭಟ್ಟರು, ಹಿರಿಯ ವಿದ್ಯಾರ್ಥಿಗಳು ಆಗಿಂದಾಗ್ಗೆ ಈ ಬಗ್ಗೆ ಆಡುತ್ತಿದ್ದ ಮಾತುಗಳನ್ನು ಕೇಳಿಸಿಕೊಂಡಿದ್ದೆವಾದರೂ ಹುಡುಗು ಬುದ್ಧಿಯ ನಮಗೆ ಇದೇನು ಮುಖ್ಯ ಎನಿಸಿರಲಿಲ್ಲ. ಅದುವರೆಗೆ ನಾವ್ಯಾರು ಅದನ್ನು ನೋಡಿರಲಿಲ್ಲ. ನೋಡಿರದ ನಮ್ಮಗಳ ಕಲ್ಪನೆಯಲ್ಲಿ ಹೊಸ ಹಾಸ್ಟೆಲ್ ‘ಹತ್ತಾರು ರೂಮುಗಳಿವೆಯಂತೆ! ತರಗತಿಗೊಂದೊಂದು ರೂಮು ಕೊಡುತ್ತಾರಂತೆ! ಸ್ನಾನಕ್ಕೆ ಕಕ್ಕಸ್ಸಿಗೆಲ್ಲ ಸಪರೇಟ್ ರೂಮುಗಳಿವೆಯಂತೆ! ಸದಾ ನೀರು ಬರುತ್ತಲೇ ಇರುತ್ತದಂತೆ! ದಿನಾ ಸ್ನಾನ ಮಾಡಬೇಕಂತೆ!”

read more
ಎರಡು ದಿನಗಳ ನಂತರ ಮಕ್ಕಳನ್ನು ನೋಡಿದ ಪಾಲಕರ ಕಣ್ಣು ತುಂಬಿತು

ಎರಡು ದಿನಗಳ ನಂತರ ಮಕ್ಕಳನ್ನು ನೋಡಿದ ಪಾಲಕರ ಕಣ್ಣು ತುಂಬಿತು

ಪರೀಕ್ಷೆ ಮುಗಿಸಿದ ಈಗಾಗಲೆ ಅಣಶಿಯಲ್ಲಿದ್ದ ಮಕ್ಕಳನ್ನು ಅವರವರ ಮನೆಗೆ ಮುಟ್ಟಿಸುವ ಜವಬ್ದಾರಿಯುತ ಕೆಲಸ ಶಿಕ್ಷಕರದ್ದಾಗಿತ್ತು. ಮಾರನೆಯ ದಿನ ಮಕ್ಕಳು ಮನೆಗೆ ತಲುಪಿದರು ಎಂಬ ತೃಪ್ತಿಯ ನಗು ಅವರಲ್ಲಿತ್ತು. ಆದರೆ ಶಿಕ್ಷಕರು ಮಕ್ಕಳನ್ನು ಮನೆಗೆ ಮುಟ್ಟಿಸುವ ಹೊತ್ತಲ್ಲಿ ಕೆಲವು ಮಕ್ಕಳ ಮನೆಗಳಿಗೆ ನೀರು ನುಗ್ಗಿ, ಕಷ್ಟ ಪಟ್ಟು ದುಡಿದ ಆಹಾರ ಧಾನ್ಯಗಳು, ಬಟ್ಟೆ, ಸಾಮಾನುಗಳೆಲ್ಲ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದವು.”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ