Advertisement

ಸರಣಿ

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

read more
ಹಾಥಿ ಮತ್ತು ಚೂನಿ ಎಂಬ ಎರಡು ನತದೃಷ್ಟ ಆನೆಗಳ ಕಥೆ

ಹಾಥಿ ಮತ್ತು ಚೂನಿ ಎಂಬ ಎರಡು ನತದೃಷ್ಟ ಆನೆಗಳ ಕಥೆ

ಒಂದೆಡೆ ಚೂನಿಯ ಸಾವಿನ ಬಗೆಗೆ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ, ಆನೆಯ ಮಾಂಸದ ರುಚಿಯ ಅನುಭವ ಹೇಗಿರಬಹುದೆಂಬ ಮಾತುಗಳೂ ಕೇಳಿ ಬಂದವು. ಆನೆ ಮಾಂಸದ ತಿನುಸುಗಳ ರೆಸಿಪಿಗಳೂ ಪ್ರಕಟವಾದವು. ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ಹಿಟ್ಲರ್‌ನ ಜರ್ಮನ್ ವಿಮಾನಗಳು ಲಂಡನ್ ಮೇಲೆ ಬಾಂಬ್ ದಾಳಿ ಮಾಡಿದಾಗ, ಚೂನಿಯ ಅಸ್ತಿ ಪಂಜರ ಚೂರು ಚೂರಾಗಿ ಲಂಡನ್ನಿನ ಮಣ್ಣಿನೊಳಗೆ ಬೆರೆಯಿತು.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿ.

read more
ʻದ ಮಿಲ್ಕ್ ಆಫ್‌ ಸಾರೋʼ: ವಿಷಾದದ ಹನಿಗಳು

ʻದ ಮಿಲ್ಕ್ ಆಫ್‌ ಸಾರೋʼ: ವಿಷಾದದ ಹನಿಗಳು

ಈ ಚಿತ್ರದಲ್ಲಿ ಮೊದಲ ಹಾಡಿನ ಭಾವದ ನೆಲೆಯಲ್ಲಿಯೇ ಚಿತ್ರದ ಕಥನವಿದೆ. ಚಿತ್ರ ತೆರೆದುಕೊಳ್ಳುತ್ತಿದ್ದಂತೆ ಈ ವಿಷಾದ ಭಾವವನ್ನು ಇನ್ನೊಂದು ರೀತಿಯಲ್ಲಿ ಸ್ಥಿರಪಡಿಸುತ್ತಾಳೆ ನಿರ್ದೇಶಕಿ. ಮದುವೆಗೆ ಸಿದ್ಧವಾಗುತ್ತಿರುವ ಮ್ಯಾಕ್ಸಿಮಾ ತನ್ನ ಸ್ಕರ್ಟಿನ ಸೊಂಟಕ್ಕಿರುವ ಬಟ್ಟೆಯ ಉದ್ದ ಸಾಲದೆಂದು ಕೂಗಾಡುವಾಗ ಮೆಲ್ಲನೆ ಹೆಜ್ಜೆ ಇಟ್ಟು ಬರುತ್ತಾಳೆ ಫಾಸ್ಟಾ. ಅವಳಿಗೆ ಎದುರಾಗುತ್ತದೆ ಮದುವೆಗೆ ಸಂಬಂಧಪಟ್ಟ ವಿಷಯ. ಮದುವೆ! ಅವಳಿಗೆ ಅಷ್ಟೇ ಸಾಕಾಗುತ್ತದೆ. ಗಂಡು-ಹೆಣ್ಣಿಗೆ ಸಂಬಂಧಿಸಿದ, ಅವರಿಬ್ಬರ ಸಮಾಗಮಕ್ಕೆ ಅನುವುಮಾಡಿಕೊಡುವ ವಿಷಯ!
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಪೆರು ದೇಶದ ʻದ ಮಿಲ್ಕ್ ಆಫ್‌ ಸಾರೋʼ

read more
ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಏನೋ ಲೆಕ್ಕಹಾಕಿ ಶಾಲೆಗೆ ಹೆಸರು ಹಚ್ಚಿದ ಮಾಸ್ತರರು

ಅದಾವುದೊ ಸ್ಥಾನಕ್ಕೆ ಆಯ್ಕೆಯಾದ ಗಣ್ಯವ್ಯಕ್ತಿಯೊಬ್ಬರಿಗೆ ಸನ್ಮಾನಿಸುವ ಮತ್ತು ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡುವ ಕಾರ್ಯಕ್ರಮವೊಂದು ನಡೆಯಿತು. ಸ್ವಲ್ಪ ಸಮಯದ ನಂತರ ಬಂದ ಆ ಗಣ್ಯವ್ಯಕ್ತಿ ಶರಣಯ್ಯ ವಸ್ತ್ರದ ಎಂಬುದು ತಿಳಿಯಿತು. ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು.”

read more
ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

read more
ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ನವೋದಯದ ಶ್ರೇಷ್ಠಕವಿ ಕಡೆಂಗೋಡ್ಲು

ಕನ್ನಡ ಸಾಹಿತ್ಯ ಲೋಕದಲ್ಲಿ  ತಮ್ಮ ಕಾವ್ಯ ಪ್ರತಿಭೆಯ ಮೂಲಕ ಕಂಡೆಂಗೋಡ್ಲು ಶಂಕರ ಭಟ್ಟರು ಪ್ರಧಾನವಾಗಿ ಗುರುತಿಸಿಕೊಂಡಿದ್ದರೂ, ಅವರ ಜೀವನ ಪಥ ಬಹುಮುಖಿಯಾಗಿತ್ತು.  ಸ್ವಾತಂತ್ರ್ಯ ಚಳವಳಿಯಲ್ಲಿ ಅವರು ಎಷ್ಟೊಂದು ಸಕ್ರಿಯರಾಗಿದ್ದರು ಎಂಬುದಕ್ಕೆ ಅವರು 1921ರಲ್ಲಿ ಬರೆದ ‘ವಸ್ತ್ರಾಪಹರಣ’ ಖಂಡಕಾವ್ಯವೇ ಸಾಕ್ಷಿ. ಖಾದಿ ಮಾರಾಟ, ಮದ್ಯ ಮಾರಾಟ ವಿರೋಧ, ಸ್ತ್ರೀಪರ ಧ್ವನಿ, ಶೋಷಿತರ ಪರ ನಿಲುವುಗಳೊಂದಿಗೆ ತಮ್ಮ ಸಾಹಿತ್ಯ ಪ್ರಯಾಣವನ್ನು ಶ್ರೀಮಂತವಾಗಿಸಿಕೊಂಡಿದ್ದರು. ಡಾ.ಬಿ. ಜನಾರ್ದನ ಭಟ್ ಅವರು,  ಅಡಿಗರಿಗಿಂತ ಹಿಂದಿನ ಯುಗದ ಶ್ರೇಷ್ಠ ಕವಿ ಅಂದರೆ ಕಡೆಂಗೋಡ್ಲು ಶಂಕರ ಭಟ್ಟರ ಕುರಿತು ಬರೆದಿದ್ದಾರೆ. 

read more
ಗಂಟಲೊಳಗೆ ಇಳಿಯಲೊಲ್ಲದ ಗುಲ್ಜಾರ್ ಖಾನ್ ಕಟ್ಟಿದ ಮುದ್ದೆಗಳು

ಗಂಟಲೊಳಗೆ ಇಳಿಯಲೊಲ್ಲದ ಗುಲ್ಜಾರ್ ಖಾನ್ ಕಟ್ಟಿದ ಮುದ್ದೆಗಳು

ಡಬ್ಬಿಯಲ್ಲಿದ್ದ ತಿಂಡಿ ಕಳವಾಗುತ್ತಿರುವುದನ್ನು ನೋಡಿದ ‘ಹಾರ್ಟ್ ವೀಕ್’ ಮಾರನೆ ಬೆಳಗ್ಗೆ ಊಟವಾದ ಮೇಲೆ ಒಂದು ಉಪಾಯ ಮಾಡಿದ, ತನ್ನ ಟ್ರಂಕಿನ ಮುಂದೆ ನಿಂತುಕೊಂಡು ಎಲ್ಲ ವಿದ್ಯಾರ್ಥಿಗಳನ್ನುದ್ದೇಶಿಸಿ ತನ್ನ ತಿಂಡಿಬಾಕ್ಸ್ ಮುಚ್ಚಳವನ್ನು ತೆಗೆದು ಎಲ್ಲರಿಗೂ ಕಾಣುವಂತೆ ‘ನೋಡ್ರಪ್ಪ ನಾನು ನನ್ನ ತಿಂಡಿಗೆ ಬಾಯಿ ತುಂಬ ಉಗಿತಾ ಇದಿನಿ, ಯಾರಾದರೂ ತಿಂದರೆ ನನ್ನ ಎಂಜಲು ತಿಂದಂತೆ’ ಎಂದು ಕ್ಯಾಕರಿಸಿ ಕ್ಯಾಕರಿಸಿ ಚೆನ್ನಾಗಿ ಉಗಿದು, ನಂತರ ಬಾಯಿ ಮುಚ್ಚಿ ಟ್ರಂಕಿಗಿಟ್ಟು ಸ್ಕೂಲಿಗೆ ಹೋದ. ಮಧ್ಯಾಹ್ನ ಬಂದು ನೋಡಿದಾಗ ಆತನ ತಿಂಡಿ ಹೇಗಿತ್ತೋ ಹಾಗೆಯೇ ಇತ್ತು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ‘ಟ್ರಂಕು-ತಟ್ಟೆ’ ಸರಣಿಯ ಮೂರನೆಯ ಕಂತು

read more
ಸೀತೆ ನಡೆದ ‘ಪರ್ಯಾಯ ದಾರಿ’

ಸೀತೆ ನಡೆದ ‘ಪರ್ಯಾಯ ದಾರಿ’

ಅಪ್ಪ ತನ್ನ ಮಗಳನ್ನು ಗಡಂಗಿಗೆ ಪ್ಯಾಕೆಟ್ ತರಲು ಕಳುಹಿಸಲು ಶುರು ಮಾಡಿದ್ದು ಸೀತುವಿನ ಮನಸಿಗೆ ತುಂಬಾ ಕಸಿವಿಸಿಯನ್ನು ಉಂಟು ಮಾಡಿತ್ತು. ದಿನ ಕಳೆದಂತೆ ಗಡಂಗಿನಲ್ಲಿ ಚೋಮನ ದೋಸ್ತುಗಳ ಕಾಟವೂ ಹೆಚ್ಚತೊಡಗಿತು. ದಿನಾ ಸಾರಾಯಿಗೆ ಬರುತ್ತಿದ್ದ ಬೆಳ್ಳಿಯನ್ನು ಚುಡಾಯಿಸುವವರ ಸಂಖ್ಯೆ ಹೆಚ್ಚಿದಾಗ ಸೀತುವಿನ ಮನಸ್ಸು ಅಲ್ಲೋಲ ಕಲ್ಲೋಲವಾಗವಾಗ ತೊಡಗಿತ್ತು. ಸಂಜೆ ಬರುವಾಗಲೇ ಬೊಬ್ಬೆ ಹೊಡೆಯುತ್ತಿದ್ದ ಚೋಮ ಹೇಳದ ಮಾತಿಲ್ಲ. ಎಲ್ಲರೆದುರು ತನ್ನ ಹೆಂಡತಿ, ಮಗಳನ್ನು ತುಚ್ಚವಾಗಿ ಆಡುತ್ತಿದ್ದ ಚೋಮ ಮನೆಗೆ ಬಂದನೆಂದರೆ ಮಕ್ಕಳಾದ ತುಕ್ರ, ತನಿಯ ಓಡಿ ಮೂಲೆ ಸೇರುತ್ತಿದ್ದರು.”

read more
ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಸಾತ್ವಿಕ ಜೀವನವಿಧಾನವೇ ಬಹುದೊಡ್ಡ ಆಸ್ತಿ

ಒಂದು ಸಲ ಮಳೆಗಾಲದಲ್ಲಿ ರಾತ್ರಿ ಹೀಗೆ ಸಿಕ್ಕಿಹಾಕಿಕೊಂಡು ನಾವು ಮಕ್ಕಳು ಮತ್ತು ಹಿರಿಯರೆಲ್ಲ ಬಹಳ ಹಸಿದು ಆ ಹಾಸ್ಟೆಲ್ ಕೋಣೆಯಲ್ಲಿ ಕುಳಿತಿದ್ದೆವು. ಅಷ್ಟೊತ್ತಿಗೆ ಜಂಬಗಿಯವರು ರಾತ್ರಿ ಒಂಬತ್ತು ಗಂಟೆ ಹೊತ್ತಿಗೆ ಯಾವುದೋ ಖಾನಾವಳಿಯಿಂದ ನಮಗೆಲ್ಲ ಸಾಕಾಗುವಷ್ಟು ಬಿಸಿ ಅನ್ನ ಮತ್ತು ಸಾರು ತೆಗೆದುಕೊಂಡು ಬಂದರು. ಅವೆರಡೂ ರುಚಿ ಶುಚಿಯಾಗಿದ್ದವು. ಆ ಚಳಿ, ಆ ಹಸಿವು, ಆ ಬಿಸಿ ಬಿಸಿ ಅನ್ನ ಮತ್ತು ಸಾರಿನ ರುಚಿ ಎಂದೂ ಮರೆಯಲು ಸಾಧ್ಯವಿಲ್ಲ. ನಾನು ದೊಡ್ಡವನಾದ ಮೇಲೆ ಜಂಬಗಿಯವರನ್ನು ಹುಡುಕಲು ಯತ್ನಿಸಿ ವಿಫಲನಾದೆ.”

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ