ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ
ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ
ಅನುರೂಪ ವಸ್ತುಗಳ ಸಂಚಯನ ಎಲೆ ಅಡಿಕೆ ಚೀಲ: ಸುಮಾವೀಣಾ ಸರಣಿ
ನಮ್ಮ ಮೊಬೈಲ್ಗೆ ಈಗ ಫಿಂಗರ್ ಪ್ರಿಂಟ್ಸ್ ಲಾಕ್ ಇದೆಯಲ್ಲಾ ಹಾಗೆ ಅಜ್ಜಿ ತನ್ನ ಚೀಲಕ್ಕೆ ಹಾಕುತ್ತಿದ್ದ ನ್ನಾಟಿ ನ್ನಾಟ್ ಅನ್ನು ಯಾರಿಗು ಬಿಚ್ಚಲಾಗುತ್ತಿರಲಿಲ್ಲ. ಮುರಿದ ಆಭರಣದ ಚೂರುಗಳು ಬೆಳ್ಳಿಯ ಚೂರುಗಳನ್ನು ಚಿಕ್ಕ ಪ್ಲಾಸ್ಟಿಕ್ನಲ್ಲಿ ಹಾಕಿ ಚೀಲದ ಒಳ ಪದರದ ಒಳ ಪದರದಲ್ಲಿ ಇಡುವುದು, ಅವರ ಇವರ ತೋಟಕ್ಕೆ ಹೋದಾಗ ಅಪರೂಪದ ತರಕಾರಿ ಬೀಜ ಸಿಕ್ಕರೆ ಅದನ್ನು ಅದರಲ್ಲೆ ಇಡುವುದು, ಅಲ್ಲೇ ಬಿಡಿಸಿ ಅಲ್ಲೇ ಮುಡಿದುಕೊಳ್ಳಲು ಹೂ ಕಟ್ಟುವ ದಾರವೂ ಅಲ್ಲೇ ಇರುತ್ತಿತ್ತು. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದ, ಗಂಧ ಅದರಲ್ಲೇ ಇಡುವುದು. ತಲೆಸುತ್ತುವಿಕೆಗೆ, ಅಜೀರ್ಣಕ್ಕೆ, ಬಾಯಿ ವಾಸನೆ ಬರದಂತೆ ತಡೆಯಲು, ಹಲ್ಲು ನೋವಿಗೆ, ಶೀತಕ್ಕೆ ನಶ್ಯ ಎಲ್ಲಾ ಅದರಲ್ಲೇ ಇರುತ್ತಿತ್ತು.ಸುಮಾವೀಣಾ ಬರೆಯುವ “ಮಾತು ಖ್ಯಾತೆ” ಸರಣಿ ಸರಣಿ
ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ
ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ
ಟ್ರಿನಿಡಾಡ್ ಎಂಡ್ ಟೊಬೇಗೊ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ: ಎಸ್. ಜಯಶ್ರೀನಿವಾಸ ರಾವ್ ಸರಣಿ
“ಬೂಡೂ-ಫೋರ್ಚುನೆ ಅವರ ಸಾಲುಗಳು ಸರಳತೆ ಮತ್ತು ಕ್ರೂರತೆಗೆ ಸಮಾನವಾಗಿ ಆದ್ಯತೆ ನೀಡುತ್ತದೆ, ಮೀನುಗಾರರ ಅರ್ಧ ಮುಳುಗಿದ ಲೋಕಗಳನ್ನು, ಸಮಾಧಿ ಮಾಡಿದ ಮೂಳೆಗಳಲ್ಲಿ ಕಲಕುವ ಭರವಸೆಗಳನ್ನು, ಹೆಣ್ಣುಮಕ್ಕಳನ್ನು ಪ್ರೀತಿಸುವ ತಾಯಂದಿರ ಮತ್ತು ಎಲ್ಲಾ ರೀತಿಯ ತಿಳಿಯಲಾಗದ, ನಿಗೂಢ ಆತ್ಮಗಳನ್ನು ಹಿಡಿದಿಟ್ಟುಕೊಳ್ಳುತ್ತವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಟ್ರಿನಿಡಾಡ್ ಎಂಡ್ ಟೊಬೇಗೊ (Trinidad and Tobago) ದೇಶದ ಯುವ ಕವಿ ಡಾನಿಯೇಲ್ ಬೂಡೂ-ಫೋರ್ಚುನೆ-ರವರ (Danielle Boodoo-Fortuné, 1986) ಕಾವ್ಯದ ಕುರಿತ ಬರಹ
ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ
ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಭೂಮಿ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ಹಬ್ಬ: ಭವ್ಯ ಟಿ.ಎಸ್. ಸರಣಿ
ಆಶ್ವಯುಜ ಮಾಸದಲ್ಲಿ ಬರುವ ಭೂಮಿ ಹುಣ್ಣಿಮೆಯ ಕುರಿತು ಹೇಳುತ್ತಿದ್ದೇನೆ. ಮಲೆನಾಡಿಗರ ಭಾಷೆಯಲ್ಲಿ ಇದು ಭೂಮಣಿ ಹಬ್ಬ. ಭೂಮಿಹುಣ್ಣಿಮೆ ಎಂದ ಕೂಡಲೇ ನನ್ನ ಮನ ನಿಲ್ಲದೆ ತೀರ್ಥಹಳ್ಳಿಯ ಸಮೀಪದ ನನ್ನ ಅಜ್ಜಿ ಮನೆಯೆಡೆಗೆ ಓಡುತ್ತದೆ. ನಮ್ಮ ಅಜ್ಜಿ ಈ ಹಬ್ಬವನ್ನು ತುಂಬಾ ಶ್ರದ್ಧೆಯಿಂದ ಆಚರಿಸುತ್ತಿದ್ದರು. ಹಬ್ಬದ ಮುನ್ನಾ ದಿನ ಗದ್ದೆಯ ಅಂಚಿನ ಒಂದು ಭಾಗವನ್ನು ಶುಚಿಗೊಳಿಸಿ, ಸಗಣಿ ಸಾರಿಸಿ, ಬಾಳೆಕಂಬ, ತೋರಣಗಳಿಂದ ಅಲಂಕರಿಸಿ ಬರುತ್ತಾರೆ. ಅಂದು ಮನೆಯ ಮಕ್ಕಳು ಒಂದು ಬುಟ್ಟಿ ಹಿಡಿದು ಸುತ್ತಮುತ್ತ ತಿರುಗಿ ಬಗೆಬಗೆಯ ಸೊಪ್ಪುಗಳನ್ನು ಆಯ್ದು ತರಬೇಕು.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ ನಿಮ್ಮ ಓದಿಗೆ
ಆಟೋ ಕರೆಕ್ಷನ್: ಸುಮಾವೀಣಾ ಸರಣಿ
ಇಂಥ ಅದೆಷ್ಟೋ ಸನ್ನಿವೇಶಗಳನ್ನು ನೀವುಗಳೂ ಕೇಳಿರಬಹುದು. ಆಟೋಗಳಲ್ಲಿ, ಸಿಟಿ ಬಸ್ಗಳಲ್ಲಿ ಓಡಾಡುವಾಗ ಇಂಥ ಕೆಲವು ತುಣುಕುಗಳು ಯಾವುದೋ ಸಿನೆಮಾ ಟೀಸರ್ಗಳಂತೆ ನಮ್ಮ ಕಣ್ಣೆದುರು ಹಾದು ಹೋಗಬಹುದು. ತರಹೇವಾರಿ ಸಿನೆಮಾಗಳು ಬಂದಂತೆ ಪ್ರಯಾಣದ ಸನ್ನಿವೇಶಗಳೂ ಕೂಡ ಬಂದು ಬಂದು ಹೋಗುತ್ತವೆ. ಕೊರೊನಾ ನಂತರ ಥಿಯೇಟರಿನಲ್ಲಿ ಸಿನೆಮಾಗಳನ್ನು ನೋಡುವವರ ಸಂಖ್ಯೆ ಈಗ ಕುಸಿದಿದೆ. ಎಲ್ಲಾ ಓಟಿಟಿಯಲ್ಲಿ ನೋಡಿಬಿಡ್ತಾರೆ. ಈಗಂತೂ ‘ಡೌನ್ ಪೇಮೆಂಟೋ, ಇಲ್ಲಾ ಸೆಕೆಂಡ್ ಹ್ಯಾಂಡೋ ಮನೆಗ್ ಒಂದ್ ಕಾರ್ ಇರ್ಲಿ’ ಎಂದು ದುಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಆದರೂ ಸ್ವಂತ ವಾಹನ ಹೊಂದಿದ ಬದಲಾವಣೆಯಾಗಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ
ಅವಳಿ ನಗರಗಳ ದರ್ಶನ: ದರ್ಶನ್ ಜಯಣ್ಣ ಸರಣಿ
ಇದೆಲ್ಲಕ್ಕೆ ಶಿಕರಪ್ರಾಯದಂತೆ ಇದ್ದುದು ಅಲ್ಲಿನ ಆಲ್ ಕರಾ ಗುಹೆ. ನೋಡಲಿಕ್ಕೆ ನಮ್ಮ ಬದಾಮಿಯ ಗುಹೆಯ ಬಣ್ಣವಿರುವ ಇದು ಸಾವಿರಾರು ವರ್ಷಗಳ ಹಿಂದೆ ಇಲ್ಲಿದ್ದ ಸಮುದ್ರದಿಂದ ರೂಪುಗೊಂಡಿರುವುದಾಗಿಯೂ ಅದರ ಒಳಮೈಯಲ್ಲಿ ಕ್ಯಾಲ್ಸಿಯಂ ಕಾರ್ಬೊನೇಟ್ ಇರುವುದಾಗಿಯೂ ಅಲ್ಲಿನ ಗೈಡ್ ನಮಗೆ ಹೇಳಿದರು. ಅದರ ಎತ್ತರ ಆಕೃತಿ ನಮ್ಮ ಶಿರಸಿಯ ಯಾಣದಂತಿದೆಯಾದರೂ ಒಂದು ಲಾವಾದ ಪರಿಣಾಮದಿಂದ ಮತ್ತೊಂದು ಮರಳುಗಾಡಿನಲ್ಲಿ ಯಾವಾಗಲೋ ಬಿದ್ದ ಬೀಳುತ್ತಿದ್ದ ಮಳೆಯಿಂದ ಆಗಿರಬಹುದೆಂದು ನಂತರ ನಾನು ತಿಳಿದುಕೊಂಡೆ.
ಮಾಘಿಯ ಚಳಿಯಲ್ಲಿ, ಆಲೆಮನೆಯ ಘಮಲಲ್ಲಿ…: ರೂಪಾ ರವೀಂದ್ರ ಜೋಶಿ ಸರಣಿ
ಅಪ್ಪಯ್ಯ “ಯೇ ಹುಡುಗ್ರೇ ಏಳ್ರೇ. ಆಲೇಮನೀಗೆ ಹೋಗಿ ಹಾಲು ಕುಡೀರೇ.” ಎಂದು ಏಳಿಸುತ್ತಿದ್ದರು. ಹಸಿದ ಹೊಟ್ಟೆಗೆ ಕಬ್ಬಿನ ಹಾಲು ಕುಡಿದರೆ ಅದೆಲ್ಲ ರಕ್ತವೇ ಆಗಿಬಿಡುತ್ತದೆಯಂತೆ ಎಂದು ಅಪ್ಪಯ್ಯ ಯಾವಾಗಲೂ ಹೇಳುತ್ತಿದ್ದರು. ಅಪ್ಪಯ್ಯನ ದನಿಗೆ, ನಾವು ಹೊದಿಕೆ ಕಿತ್ತೊಗೆದು, ಮುಖ ತೊಳೆದ ಶಾಸ್ತ್ರಮಾಡಿ, ಆಲೆಮನೆಯತ್ತ ಓಡುತ್ತಿದ್ದೆವು. ಅಷ್ಟರಲ್ಲಿ ಅಪ್ಪಯ್ಯ ಒಳ್ಳೆಯ ಕಬ್ಬು ಹುಡುಕಿ, ಗಾಣಕ್ಕೆ ಕೊಡಿಸಿ, ನಮಗೆ ಕುಡಿಯಲು ಸವಿಯಾದ ಐಸ್ ಕೋಲ್ಡ್ ಹಾಲು ಹಿಡಿದು ಇಟ್ಟಿರುತ್ತಿದ್ದರು. ಮೊದಲೇ ಮಾಘ ಮಾಸದ ಛಳಿ. ಆ ಥಣ್ಣನೆಯ ಹಾಲು ಹೊಟ್ಟೆಗಿಳಿಯುತ್ತಿದ್ದಂತೆಯೇ, ದಂತ ಪಂಕ್ತಿಗಳು, ಮಸೆದುಕೊಳ್ಳುತ್ತ, ಕಟ ಕಟನೆ ಸಪ್ಪಳ ಮಾಡತೊಡಗುತ್ತಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ







