ಕಾಡುವ ಪ್ರಶ್ನೆಗಳ ಕಾಡಿನಲ್ಲಿ ನೀಲಿ: ಸುಧಾ ಆಡುಕಳ ಅಂಕಣ
ಸೀತಜ್ಜಿ, ಗೌರಜ್ಜಿ, ಅಮ್ಮಣ್ಣೆಜ್ಜಿ ಇವರ ಕತೆಗಳೂ ಇದಕ್ಕಿಂತ ಬೇರೆಯೇನಿರಲಿಲ್ಲ. ಅವರೆಲ್ಲರೂ ತಮ್ಮ ಮದುವೆಯ ಕತೆಯನ್ನು ಯಾವುದೇ ವಿಷಾದಗಳಿಲ್ಲದೇ ಹೇಳಿಕೊಳ್ಳುತ್ತಿದ್ದರು. ಆದರೆ ಇವರ ನಂತರದ ತರುವಾಯದವರಾದ ಕೆಂಪಿ, ಗಣಪಿ, ನಾಗವೇಣಿಯರು ತಮ್ಮ ಮದುವೆಯ ಕತೆಯನ್ನು ಇಷ್ಟು ತಣ್ಣಗೆ ಹೇಳುತ್ತಿರಲಿಲ್ಲ. ಅವರ ಮಾತುಗಳಲ್ಲಿ ಕಹಿ, ಸಿಟ್ಟು, ಹತಾಶೆ ಎಲ್ಲವೂ ಮಡುಗಟ್ಟಿದ್ದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೆಂಟನೆಯ ಕಂತು ನಿಮ್ಮ ಓದಿಗೆ
ಬೇರು – ಬಿಳಲು: ಸುಮಾ ಸತೀಶ್ ಸರಣಿ
ಹೊಸ್ದಾಗಿ ಮದ್ವೆ ಆಗಿದ್ದ ಅಳಿಯ ಅತ್ತೆ ಮನೇಗೆ ಬಂದ್ನಂತೆ. ಅತ್ತೆ ಕಡುಬು ಮಾಡಿದ್ರು. ತೆಳ್ಳಗೆ, ಸಣ್ಣವು. ಹೊಸ ಅಳಿಯನಿಗೇಂತ ಕಷ್ಟ ಪಟ್ಟು ಸಣ್ಣ ಸಣ್ಣಕೆ ಮಾಡಿದ್ರು. ಅಳಿಯನ ತಟ್ಟೇಗೆ ಬಡಿಸಿದ್ರು. ಅವ್ನು ಒನೊಂದು ಸತೀಗೆ ಒಂದು ಗುಳುಂ ಮಾಡ್ತಿದ್ದ. ಅಳಿಯನ ಅಪ್ಪ ಥೋ ನಮ್ ಮರ್ವಾದೆ ತೆಗೀತಾವ್ನೆ ಅಂತ ಮೆಲ್ಲಕೆ ಮೂಗ್ಸನ್ನೆ ಮಾಡೀರು. ಒಂದು ಮುರಿದು ಎರ್ಡು ಭಾಗ ಮಾಡಿ ತಿನ್ನಾಕೆ ಸೈಗು (ಸನ್ನೆ) ಮಾಡಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಚಿಕ್ಮಾಲೂರಿನ ಅಜ್ಜ-ಅಜ್ಜಿಯರ ಕುರಿತ ಬರಹ ಇಲ್ಲಿದೆ
ದ ಗ್ರೇಟ್ ನೋಟ್ ಬುಕ್ ರಾಬರಿ!: ಪೂರ್ಣೇಶ್ ಮತ್ತಾವರ ಸರಣಿ
ಜೋಗಿ ಕಿಂದರಿ ಬಾರಿಸತೊಡಗಿದೊಡನೆ ಜಗತ್ತನ್ನೇ ಮೋಹಿಸುವ ಅದರ ನಾದಕ್ಕೆ ಇಲಿಗಳು ಅನ್ನದ ಮಡಕೆಯನ್ನು ಆಗಲಿ, ಟೋಪಿಯ ಗೂಡನ್ನು ತ್ಯಜಿಸಿ, ಅಂಗಿಯ ಜೇಬು, ಕಾಲು ಚೀಲಗಳನ್ನೆಲ್ಲಾ ಬಿಟ್ಟು ಹಾರುತ್ತಾ, ಓಡುತ್ತಾ, ನೆಗೆದು ಬಂದು ಅವನನ್ನೇ ಹಿಂಬಾಲಿಸಿ ಹೋಗುವಂತೆ ಹೌಸ್ ಮಾಸ್ಟರ್ರ ಹುಣಸೆ ಬರಲಿನ ಬಾರಿಸುವಿಕೆಗೆ ನಮ್ಮ ಗೆಳೆಯರು ಟ್ರಂಕ್ ಕಪಾಟುಗಳ ಒಳಗಿನಿಂದ, ಹಾಸಿಗೆ ದಿಂಬುಗಳ ಕೆಳಗಿನಿಂದ, ವೆಂಟಿಲೇಟರ್ ಸಂದಿಯಿಂದ, ಫ್ಯಾನ್ ರೆಕ್ಕೆಯ ಮೇಲಿನಿಂದ, ಟಾಯ್ಲೆಟ್ ರೂಮಿನ ಹೆಂಚಿನ ತಳದಿಂದ, ಮರ ಗಿಡಗಳ ಮರೆಯಿಂದ ನೋಟ್ ಬುಕ್ಗಳನ್ನು ಎತ್ತಿ ತರಲಾರಂಭಿಸಿದ್ದರು.
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ
ಕೂರಾಪುರಾಣ ೭: ಏನ್ರೀ ಸಂಜಮ್ಮಾ ನಿಮ್ದು ಯಾವ ಜಾತಿಯ ನಾಯಿ?
ನನ್ನಂತೆಯೇ ಹಲವರಿದ್ದಾರೆ, ಈಗಲೂ ಅವರಿಗೆ ನಾಯಿಗಳ ಬಗ್ಗೆ ಹೆಚ್ಚಿನದ್ದೇನೂ ಗೊತ್ತಿಲ್ಲ ಎಂಬ ಕಾರಣಕ್ಕಾಗಿಯೇ ಕೂರಾಪುರಾಣ ಶುರು ಮಾಡಿದ್ದು. ಥಿಯರಿ ಓದಿದರೆ ಪ್ರಾಕ್ಟಿಕಲ್ ಮಾಡಲು ಸ್ವಲ್ಪ ಧೈರ್ಯ ಹುಟ್ಟಬಹುದು ಎಂಬ ಕಾರಣಕ್ಕೆ. ಯಾಕೆಂದರೆ ನಾಯಿಗಳೊಡನೆ ಹುಟ್ಟಿಕೊಳ್ಳುವ ನಂಟು, ಅವುಗಳ ಸ್ನೇಹಕ್ಕೆ ಭಾಜನರಾಗುವ ಯೋಗ್ಯತೆ, ಮುಗ್ಧ ಪ್ರೀತಿಯನ್ನು ಅನುಭವಿಸುವ ಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂಬುದೇ ನನ್ನ ಆಸೆ.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಏಳನೆಯ ಕಂತು
ಉತ್ತರ ಕೊರಿಯಾ, ಇದು ಸರಿಯಾ?: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ
ಉತ್ತರ ಕೊರಿಯಾದಲ್ಲಿ ಕಲೆ, ಸಂಸ್ಕೃತಿ ಇವೆಲ್ಲವೂ ಕೂಡಾ ಬೆಳವಣಿಗೆ ಕಾಣುತ್ತಿರುವುದು ರಾಷ್ಟ್ರೀಯತೆಯ ಹೆಸರಿನಲ್ಲಿ. ಎಲ್ಲಾ ರೀತಿಯ ಕಲಾಕೃತಿಗಳ, ಪ್ರದರ್ಶನ ಕಲೆಗಳ ಅಂತಿಮ ಉದ್ದೇಶ ರಾಷ್ಟ್ರದ ಪ್ರಗತಿ ಮತ್ತು ರಾಷ್ಟ್ರಕ್ಕೆ ಸಾಂಸ್ಕೃತಿಕ ಅಸ್ಮಿತೆಯನ್ನು ಒದಗಿಸಿಕೊಡುವುದು ಎಂಬ ಭಾವನೆಯನ್ನು ಬಲವಾಗಿ ರೂಪಿಸಲಾಗುತ್ತಿದೆ. ಉತ್ತರ ಕೊರಿಯಾದ ಪ್ರಮುಖ ಶಿಲ್ಪಕಲಾಕೃತಿಗಳು ಯಾವುವು ಎಂದು ಗಮನಹರಿಸಿದಾಗ ಕಿಮ್ ಇಲ್ ಸುಂಗ್ ಅವರ ಪ್ರತಿಮೆಗಳು ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತವೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ
ಕನ್ನಡಿಗೆ ಗೊತ್ತಿಲ್ಲ. ಕಡಲಿಗೆ ಗೊತ್ತು: ಎಸ್. ಜಯಶ್ರೀನಿವಾಸ ರಾವ್ ಸರಣಿ
ಅವರು ರಮಣೀಯ ದೃಶ್ಯಗಳನ್ನು ಕಲ್ಪಿಸಿಕೊಳ್ಳುವುದಿಲ್ಲ; ಬದಲಿಗೆ ದಿನನಿತ್ಯದ ವಿದ್ಯಮಾನಗಳ ಜತೆಗೆ ನಗರ ಮತ್ತು ಅದರ ನಿವಾಸಿಗಳ ಜತೆ ಜರಗಿದ ಮಾತುಕತೆಗಳಲ್ಲಿ ಅವರು ಪಡೆದ ಸಂತೋಷಕ್ಕೆ ಒತ್ತು ನೀಡುತ್ತಾರೆ. ಈ ಕವಿತೆಗಳ ವಿಶಿಷ್ಟ ಛಾಪು ಕವಿಯ ಮೌಖಿಕ ವಾಕ್ಚಾತುರ್ಯವೂ ಆಗಿದೆ; ಲಯ ಮತ್ತು ಮನವಿ ಜತೆಯಾಗಿರುವ ಕವಿತೆಗಳಿವು, ಮತ್ತು ಈ ಕವನಗಳು ವೋಲ್ಡ್ ಅವರಿಗೆ ವಿಶಾಲವಾದ ಮತ್ತು ನಿಷ್ಠಾವಂತ ಓದುಗರ ಸಮೂಹವನ್ನು ತಂದುಕೊಟ್ಟಿತ್ತು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ನೋರ್ವೇ (Norway) ದೇಶದ ಕವಿ ಯಾನ್ ಎರಿಕ್ ವೊಲ್ಡ್-ರ (Jan Erik Vold) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ಕೀರು ಟೇಸ್ಟ್: ಸುಮಾವೀಣಾ ಸರಣಿ
ಇನ್ನು ದೊಡ್ಡವರು ತಪ್ಪು ಬರೆಯುವುದಿಲ್ಲವೆ… ಅವರೂ ಬರೆಯುವರು ಚನ್ನೇಗೌಡ ಬರೆಯಲು ಚೆನ್ನೈಗೌಡ ಎಂದೊಮ್ಮೆ ಕೈ ತಪ್ಪಿನಿಂದ ಬಂದಿತ್ತು. ಒಮ್ಮೆ ಹೀಗೆ…. ಹಿತೈಷಿಗಳೊಬ್ಬರು ಬಹಳ ಸಂತೋಷದಿಂದ ವಾಟ್ಸ್ಆಪ್ಲ್ಲಿ ಸಂದೇಶಿಸುತ್ತಿದ್ದರು ಕಡೆಗೆ ಆದಷ್ಟು ಬೇಗ ಆಗಲಿ ಎಂದು ಟೈಪಿಸುವುದರ ಬದಲು ಆದಷ್ಟು ಬೇಗ ಅಗಲಿ ಎಂದಿದ್ದನ್ನು ನೋಡಿ ಕಣ್ ಕಣ್ ಬಿಟ್ಟಹಾಗೆ ಇನ್ನೊಬ್ಬರು ನಿಮ್ಮ ಬರಹ ಸತ್ವಯುತವಾಗಿದೆ ಎನ್ನುವ ಬದಲು ಸತ್ತಂತಿದೆ ಎಂದಿದ್ದರು…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಮೂರನೆಯ ಬರಹ
ಅಮಾನುಷ ಮನಸ್ಥಿತಿಗಳ ಮಧ್ಯೆ ಮನುಷ್ಯತ್ವದ ತಲಾಶು: ರಾಮ್ ಪ್ರಕಾಶ್ ರೈ ಕೆ. ಸರಣಿ
ನಾಪತ್ತೆಯಾಗಿದ್ದಾರೆ ಎಂಬ ನೋಟಿಸುಗಳು ಇನ್ನೂ ವಿಲೇವಾರಿಯಾಗದೆ ಕಚೇರಿ ಫಲಕದಲ್ಲಿ ಕುಳಿತುಕೊಂಡಿರುವುದೇ ಆ ಮನುಷ್ಯನ ಸ್ವಭಾವಕ್ಕೆ ಹಿಡಿದ ಕನ್ನಡಿ. ಅವನ ಸರಹದ್ದಿನಲ್ಲಿ ಸ್ಲಮ್ಮಿನ ಭಾರವಾದ ಉಸಿರುಗಳೇ ಹೆಚ್ಚಿದ್ದರಿಂದ, ಆ ಜೀವಗಳಿಗೆ ಅಲ್ಲಿ ಬೆಲೆ ಇರುತ್ತಿರಲಿಲ್ಲ. ಮಾನವೀಯತೆಯ ಬಗ್ಗೆ ಪುಟಗಟ್ಟಲೆ ಮಾತುಗಳು ಕೇಳಿಬಂದರೂ ನಮ್ಮ ಸುತ್ತಮುತ್ತಲೇ ಇರುವ ಖಾಲಿ ಕಿಸೆಯ ಜನರ ಜೀವ-ಜೀವನ ಸದಾ ಅನಾಥವಲ್ಲವೇ
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಹಿಂದಿಯ ‘ಸೆಕ್ಟರ್ -36’ ಸಿನಿಮಾದ ವಿಶ್ಲೇಷಣೆ
ಏಕೆ ಇಷ್ಟೊಂದು ದ್ವೇಷ!: ಕೆ. ಸತ್ಯನಾರಾಯಣ ಪ್ರವಾಸ ಸರಣಿ
ಇವರೆಲ್ಲ ಎಷ್ಟು ಸುಖವಾಗಿದ್ದಾರೆ, ಆರಾಮವಾಗಿದ್ದಾರೆ, ಯಾವುದೇ ಗೊಂದಲವಿಲ್ಲ, ತಳಮಳವಿಲ್ಲ. ಮುಖದಲ್ಲಿ ಅದೆಷ್ಟು ಜೀವಂತಿಕೆ, ಆರೋಗ್ಯ, ಉಲ್ಲಾಸ. ಯಾವುದರಲ್ಲೂ ಆತುರವಿಲ್ಲ, ಧಾವಂತವಿಲ್ಲ. ಪ್ರತಿ ಕ್ಷಣವನ್ನೂ ವಿವರವಾಗಿ, ವಿರಾಮವಾಗಿ ಅನುಭವಿಸುತ್ತಿದ್ದಾರೆ. ವಾಯುವಿಹಾರದ ಸಮಯದಲ್ಲಿ. ಟ್ರಾಮ್ ಒಳಗಡೆ ಕುಳಿತಾಗ, ಮಾರ್ಕೆಟ್ನಲ್ಲಿ ವ್ಯಾಪಾರ ಮಾಡುವಾಗ, ಸ್ಕೂಲ್ ಬಳಿ ಮಕ್ಕಳನ್ನು ಬಿಡಲು ಬರುವಾಗ ನೋಡಿದ್ದೇನೆ. ಎಲ್ಲರೂ ಬಿಳಿ ಬಣ್ಣದವರು, ಕೆಂಪು ಬಣ್ಣದವರು. ತುಂಬಾ ಸುಖವಾಗಿದ್ದಾರೆ, ಸಂತೃಪ್ತಿಯಿಂದಿದ್ದಾರೆ ಎಂಬ ಭಾವನೆ. ಸರಿ, ಅವರು ಸಂತೋಷವಾಗಿದ್ದರೆ, ಸುಖವಾಗಿದ್ದರೆ ನನಗೇಕೆ ಈ ರೀತಿಯ ಅಸೂಯೆ, ದ್ವೇಷ?
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್ಲ್ಯಾಂಡ್ಸ್ ಬಾಣಂತನ” ಸರಣಿ









