ಮತ್ತೆ ಸಿಗುವ ಆಶಯದ ಪಯಣ: ಚಂದ್ರಮತಿ ಸೋಂದಾ ಸರಣಿ
ಮನೆಯ ಜನರೆಲ್ಲರಿಗೂ ʻಹೋಗಿ ಬರ್ತೇನೆʼ ಎನ್ನುತ್ತ ಅವರು ಎಲ್ಲಿದ್ದಾರೋ ಅಲ್ಲಿಗೆ ಹೋಗಿ ಹೇಳುವುದು, ಅಲ್ಲಿಂದ ನಡುಮನೆಯಲ್ಲಿ ಕೆಲಹೊತ್ತು ಮಾತನಾಡುತ್ತ ನಿಲ್ಲುವುದು, ಅಲ್ಲಿಂದ ಜಗಲಿಗೆ, ಅನಂತರ ಹೆಬ್ಬಾಗಿಲಲ್ಲಿ ತುಸುಹೊತ್ತು ಮಾತನಾಡುತ್ತ ನಿಂತರೆ, ಹೊರಡಲು ಮುಂದಾದವರು ʻಇನ್ನೂ ಮಾತು ಮುಗಿದಿಲ್ವಾ?ʼ ಎಂದು ಕೇಳುತ್ತಲೇ ʻಬಂದೆʼ ಎಂದು ಬಾಯಲ್ಲಿ ಹೇಳಿದರೂ ಅಂಗಳದ ತುದಿಯಲ್ಲಿ ಒಂದು ಗಳಿಗೆಯ ಮಾತುಕತೆ. ಹೀಗೆ ಸಾಗುವ ವಿದಾಯದ ಕ್ಷಣ ನೆನಪಿಡುವಂಥದು. ಕೆಲವೊಮ್ಮೆ ಮನೆಗೆ ಬಂದ ಅಣ್ಣ-ತಮ್ಮಂದಿರು, ಅಥವಾ ಅಕ್ಕ-ತಂಗಿಯರನ್ನು ಕಳುಹಿಸಲು ಊರಬಾಗಿಲತನಕ ಹೋಗುವುದಿದೆ. ಎಲ್ಲರ ಎದುರಿನಲ್ಲಿ ಹಂಚಿಕೊಳ್ಳಲು ಆಗದ ಅದೆಷ್ಟೋ ಸಂಗತಿಗಳು ಅಲ್ಲಿ ವಿನಿಮಯಗೊಳ್ಳುತ್ತಿದ್ದವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಕೊನೆಯ ಕಂತು
ದೂರದೂರಲ್ಲಿ ಸಿಕ್ಕನು ಅಣ್ಣ: ಗುರುಪ್ರಸಾದ ಕುರ್ತಕೋಟಿ ಸರಣಿ
ಅದೇನು ಅದೃಷ್ಟವೋ ಕೂಡಲೇ ಉತ್ತರಿಸಿದ. ಬಾ ಅಂತ ಆಹ್ವಾನಿಸಿದ ಕೂಡ. ಪುಣ್ಯಕ್ಕೆ ಲ್ಯಾಂಡ್ ಲೈನ್ನಿಂದ ಕರೆ ಕೂಡ ಮಾಡಿದ. ಅವನ ಜೊತೆಗೆ ನಾನು ಬಹುಶಃ ಪ್ರಥಮ ಬಾರಿಗೆ ಮಾತಾಡಿದ್ದೆ! ನಾನು ಹುಟ್ಟುವುದಕ್ಕಿಂತ ಮೊದಲೆಯೇ ಅವನು ಭಾರತ ಬಿಟ್ಟು ಬಂದಿದ್ದ ಕಾರಣ ನಾನು ಅವನ ಜೊತೆಗೆ ಈಗಾಗಲೇ ಮಾತಾಡಬಹುದಾದ ಅವಕಾಶಗಳು ತೀರಾ ಕಡಿಮೆ ಇದ್ದವು. ಅವನು ಮಾತಾಡುವ ಶೈಲಿ ನನ್ನ ಅಪ್ಪನ ತರಹವೇ ಅನಿಸಿತು. ಬಹಳ ಖುಷಿ ಆಯ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೈದನೆಯ ಬರಹ
ಗದಗ ನನ್ನ ಹೃದಯಕ್ಕೆ ಬಹು ಹತ್ತಿರದ ಊರು. ಅಲ್ಲಿ ನಾನು ಹುಟ್ಟಿದ್ದು ಅಷ್ಟೇ ಆದರೂ ಅಲ್ಲಿ ಕಳೆದ ಕೆಲವೇ ಕೆಲವು
ಚಿಕ್ಕ್ಮಾಲೂರಿನ ದೊಡ್ಮನೆ: ಸುಮಾ ಸತೀಶ್ ಸರಣಿ
ಮೈಗೆ ಲೈಫ಼್ ಬಾಯ್ ಸೋಪು. ಮಕಕ್ಕೆ ಮೈಸೂರು ಸ್ಯಾಂಡಲ್ ಸೋಪು. ಮನೆ ಮಂದೀಗೆಲ್ಲಾ ಒಂದೆ ಸೋಪು. ಅದ್ಯಾಕೋ ಗೊತ್ತಿಲ್ಲಪ್ಪ ಮೈಸೂರು ಸ್ಯಾಂಡ್ಲು ಮಕಕ್ಕೆ ಮಾತ್ರ. ಮೈಗೆಲ್ಲ ಲೈಫ್ ಬಾಯಿ. ಮಕ ಬೆಳ್ಳಕಾದ್ರೆ ಸಾಕು ಅಂತ್ಲೋ ಏನೋ! ನಾನು ಚಿಕ್ಕೋಳಾಗಿದ್ದಾಗಿಂದ ಮದ್ವೆ ಆಗಾತಂಕ ಅದೇ ಎರ್ಡು ಸೋಪುಗಳ ರೂಡಿ ಬಂದಿತ್ತು. ಹಲ್ಲಿಗೆ ನಂಜನಗೂಡು ಹಲ್ಲಿನಪುಡಿ. ಒಂದೇ ಕಿತ ಹಲ್ಲುಜ್ಜೋದು. ರಾತ್ರಿ ಉಜ್ಜೋ ಇಸ್ಯವೇ ಗೊತ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಚಿಕ್ಮಾಲೂರಿನ ಮನೆ-ಮನೆಯ ಜನಗಳ
ಸಹಪಾಠಿಗಳ ಸಾಧನೆ ಹಾಗೂ ಕೊಂಡಜ್ಜಿ ಕ್ಯಾಂಪ್: ಬಸವನಗೌಡ ಹೆಬ್ಬಳಗೆರೆ ಸರಣಿ
ಈ ಕ್ಯಾಂಪಿನಿಂದ ಬಂದು ವಾಪಸ್ಸು ಹೋದಾಗಲೇ ನನಗೆ ತಿಳಿದದ್ದು ಈ ಸಮಯದಲ್ಲಿ ಹಲವಾರು ಪಾಠಗಳನ್ನು ನಮ್ಮ ಮೇಷ್ಟ್ರು ಮುಗಿಸಿದ್ದಾರೆ ಎಂಬುದು. 8 ರಲ್ಲಿ ಮೂರನೇ ರ್ಯಾಂಕು, 9 ರಲ್ಲಿ ಎರಡನೇ ರ್ಯಾಂಕು ಬಂದಿದ್ದವನು 10 ನೇ ತರಗತಿಯಲ್ಲಿ ಮೊದಲ ರ್ಯಾಂಕನ್ನು ಗಳಿಸುತ್ತಾನೆ ಎಂಬ ಹಲವರ ನಿರೀಕ್ಷೆ ಸುಳ್ಳಾಗಲು ಇದೂ ಒಂದು ಕಾರಣವಾಗಿತ್ತು. ಎಷ್ಟೇ ಪ್ರಯತ್ನ ಪಟ್ಟರೂ ಪಾಠದ ವಿಷಯದಲ್ಲಿ ನನಗೆ ರೀಟೇಕ್ ಆಗಲು ಸಾಧ್ಯವಾಗಲೇ ಇಲ್ಲ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ದಿನಗೂಲಿ ನೌಕರರ ಮಹಾತ್ಮ: ರಂಜಾನ್ ದರ್ಗಾ ಸರಣಿ
‘ನ್ಯಾಯನಿಷ್ಠುರಿ, ಲೋಕವಿರೋಧಿ, ಶರಣನಾರಿಗೂ ಅಂಜುವವನಲ್ಲʼ ಎಂಬಂಥ ವ್ಯಕ್ತಿತ್ವ ಅವರದು. ಹೀಗೆ ಮಾತನಾಡಿದರೆ ಆಡಳಿತ ವರ್ಗಕ್ಕಾಗಲೀ ರಾಜ್ಯಶಕ್ತಿಗಾಗಲೀ ತಮ್ಮ ಬಗ್ಗೆ ಯಾವ ಭಾವನೆ ಮೂಡಬಹುದು; ಅದರಿಂದ ತಮಗೆ ಯಾವ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವನ್ನು ಅವರು ಎಂದೂ ಹಾಕಿದವರಲ್ಲ. ಮನುಷ್ಯರ ಬಗ್ಗೆ ಇರುವ ಅವರ ಕಾಳಜಿಯೆ ಅಂಥದ್ದು. ಆ ಕಾಲದಲ್ಲಿ ಅವರು ಒಂದು ರೀತಿಯ ಏಕಾಂಗವೀರರಾಗಿದ್ದರು. ಸದಾ ಕ್ರಿಯಾಶೀಲವಾಗಿರುವ ಅವರ ವ್ಯಕ್ತಿತ್ವ ನನ್ನಂಥವರ ಮೇಲೆ ಆಳವಾದ ಪರಿಣಾಮ ಬೀರಿತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ
ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್ಫೆಲ್ಡ್ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ
ಅಪ್ಪನಿಗೇ ನನ್ನನ್ನು ಪರಿಚಯ ಮಾಡಿಕೊಂಡಿದ್ದೆ!: ಎಚ್. ಗೋಪಾಲಕೃಷ್ಣ ಸರಣಿ
ನಮ್ಮ ಅಪ್ಪಂಗೆ ಅವರ ಮಕ್ಕಳ ಪರಿಚಯವೇ ಇಲ್ಲ ಅಂತ ಅಮ್ಮ ಆಗಾಗ ಮನೆಗೆ ಬಂದವರೆಲ್ಲರ ಮುಂದೆ ಹೇಳುತ್ತಿದ್ದಳು. ಅಪ್ಪ ನನ್ನ ಗುರುತು ಹಿಡಿತಾನೋ ಇಲ್ಲವೋ ಅಂತ ನನ್ನ ತಲೆಗೆ ಆಗ ಹೊಳಿಬೇಕಾ..? ಅಪ್ಪ ನನ್ನನ್ನು ನೋಡಿದ್ರಾ, ಮುಂದೆ ಸರಿದೆ. ಅಪ್ಪಾ, ನಾನು ಗೋಪಿ ನಿಮ್ಮ ಕೊನೇ ಮಗ.. ಅಂತ ವಿವರಿಸಲು ಹೊರಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಕೂರಾಪುರಾಣ ೬: ಪರಚುವ ಉಗುರುಗಳು ಮತ್ತು ಮೊಂಡು ನಾಯಿಗಳು
ನಾಯಿಗಳ ಸಲೂನಿನಲ್ಲಿ ಉಗುರುಗಳನ್ನು ಕತ್ತರಿಸುತ್ತಾರೆಂದು ಗೊತ್ತಾಗಿ ಅಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಅವನ ಯಾವ ತಂತ್ರಗಳು ನಡೆಯದೇ, ಆಕೆಗಿರುವ ಅನುಭವದಿಂದ ಉಗುರುಗಳನ್ನು ಕತ್ತರಿಸಿಯೇ ತೀರುತ್ತಾಳೆ ಎಂದು ನಾವು ಮನಸ್ಸಿನಲ್ಲಿ ಮಂಡಿಗೆ ಮೆಲ್ಲುತ್ತ ಹೊರಗೆ ಕಾಯುತ್ತಿದ್ದೆವು. ಸ್ವಲ್ಪ ಹೊತ್ತಿನ ನಂತರ ಹೊರಗೆ ಬಂದ ಆಕೆಯನ್ನು ನೋಡಿ ಬೆಟ್ಟದ ಚಾಮುಂಡಿದೇವಿಯೇ ದರ್ಶನ ಕೊಟ್ಟಂತಾಯಿತು. ಆದರೆ.. ಅವಳು ಸಹ ತನಗೆ ಆಗಲಿಲ್ಲ ಎಂದು ಕೂರಾನನ್ನು ಕರೆತಂದು ಕೊಟ್ಟು ಬಿಟ್ಟಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಆರನೆಯ ಕಂತು
‘ಕಂಪ್ಯೂಟರ್’ಗೇ ಪಾಠ ಕಲಿಸಿದ ‘ಮೃತ್ಯು!’: ಪೂರ್ಣೇಶ್ ಮತ್ತಾವರ ಸರಣಿ
ಇನ್ನೂ ಕಂಪ್ಯೂಟರ್ ಸರ್ರ ವರ್ಣನೆಯನ್ನೆಲ್ಲಾ ಕೇಳಿ ಅವರೆಂದೂ ನಗು ಮೊಗದಿಂದ ಪಾಠ ಮಾಡಲೇ ಇಲ್ಲವೆಂದು ತಿಳಿಯಬೇಡಿ. ನಮ್ಮ ಕಂಪ್ಯೂಟರ್ ಸರ್ರಂತಹ ಕಂಪ್ಯೂಟರ್ ಸರ್ ಕೂಡ ನಗು ಮೊಗದೊಂದಿಗೆ ಪಾಠ ಹೇಳಿ ಕೊಡುವ ರಸ ಗಳಿಗೆಗಳಿಗೆ ನಾವು ಸಾಕ್ಷೀಭೂತರಾಗಿದ್ದೆವು. ಆದರೆ, ಆ ಅದೃಷ್ಟ ಇದ್ದದ್ದು ಮಾತ್ರ ನಮಗಲ್ಲ. ಬದಲಿಗೆ, ಕೆಲದಿನಗಳ ಮಟ್ಟಿಗೆ ಪಕ್ಕದ ಶೃಂಗೇರಿಯಿಂದ ಬರುತ್ತಿದ್ದ, ನೋಡಲು ಸುರಸುಂದರಿಯಂತಿದ್ದ ಅತಿಥಿ ಶಿಕ್ಷಕಿಯೊಬ್ಬರಿಗೆ ಮಾತ್ರ!
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎರಡನೆಯ ಬರಹ









