ಬಣ್ಣವೆಂದರೆ…. ಕಲರ್ ಎಂದಷ್ಟೇ ಅಲ್ಲ!: ಸುಮಾವೀಣಾ ಸರಣಿ
ಪೂರ್ವಾಂಗನೆ ಪಶ್ಚಿಮಾಂಗನೆಗೆ ಬಣ್ಣಗಳ ಕುರಿತು ಕವಿ ಜಿ.ಎಸ್ ಎಸ್ ಹೇಳುತ್ತಾರಲ್ಲ… ಕಣ್ಣಿನಲ್ಲಿ ಕಪ್ಪು ವರ್ಣದ ಭಾಗ ಇಲ್ಲದೆ ಇದ್ದಿದ್ದರೆ ಹತ್ತಿಯ ನಡುವೆ ಕಪ್ಪು ಬೀಜಗಳು ಇಲ್ಲದೆ ಇದ್ದಿದ್ದರೆ, ಕಪ್ಪಾದ ಕತ್ತಲು ಇಲ್ಲದೆ ಇದ್ದಿದ್ದರೆ, ಕಪ್ಪು ಮೋಡ ಕವಿದು ಮಳೆ ಬಾರದೆ ಇದ್ದಿದ್ದರೆ ಮನುಷ್ಯ ಸುಖವಾಗಿ ಎಲ್ಲಿರುತ್ತಿದ್ದ? ಕಪ್ಪು ಕೇಶರಾಶಿ ಇಲ್ಲದೆ ಇದ್ದರೆ ಹೇಗೆ ಸುಂದರವಾಗಿ ಕಾಣುತ್ತಿದ್ದ? ಕಪ್ಪು ಬಣ್ಣವನ್ನು ವ್ಯಕ್ತಿತ್ವ ಗುರುತಿಸುವಲ್ಲಿ ಇರಬೇಕೇ ಹೊರತು ಬದುಕಿನ ಪರಿಭಾಷೆಗಳಲ್ಲಿ ಒಡಮೂಡುವ ಪರಿಪ್ರೇಕ್ಷಗಳಿಂದಲ್ಲ ಎನ್ನುವುದೆ ನನ್ನ ಅನಿಸಿಕೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನಾಲ್ಕನೆಯ ಬರಹ ನಿಮ್ಮ ಓದಿಗೆ
ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ
ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು
ಭವ್ಯ ಟಿ.ಎಸ್. ಹೊಸ ಸರಣಿ “ಮಲೆನಾಡಿನ ಹಾಡು-ಪಾಡು” ಶುರು
ದಟ್ಟವಾಗಿ ಹಬ್ಬಿರುವ ಕಾಡಿನ ಹಸಿರ ನಡುವೆ ಸಂಚರಿಸುತ್ತಿರುವಾಗ ಏನೋ ಶಬ್ದ ಕೇಳಿ ಬೆಚ್ಚಿದಳು. ಅಲ್ವೇ…ಇಲ್ಲಿ ಕಾಡುಪ್ರಾಣಿಗಳಿರೋದಿಲ್ವ?? ಆಶ್ಚರ್ಯದಿಂದ ಕೇಳಿದಳು. ಇವೆ. ಆದರೆ ಅಷ್ಟೊಂದೇನೂ ಇಲ್ಲ ಅಂದೆ. ಆದರೂ ಅವಳಿಗೆ ಭಯ. ಅದು ಹೇಗೆ ನೀವೆಲ್ಲಾ ಈ ಒಂಟಿಮನೆಗಳಲ್ಲಿ ನಿರ್ಭೀತಿಯಿಂದ ಇರುತ್ತೀರಿ. ನಮ್ಮ ಕಡೆ ಮನೆಗಳೆಲ್ಲಾ ಒತ್ತೊತ್ತಾಗಿರುತ್ತವೆ. ಸುತ್ತಮುತ್ತ ಜನರಿರುತ್ತಾರೆ. ನಿಮ್ಮ ಕಡೆ ಜನ ತುಂಬಾ ಧೈರ್ಯವಂತರು.. ಅಂತ ಮೆಚ್ಚುಗೆ ವ್ಯಕ್ತಪಡಿಸಿದಳು. ನಾನು ಏನಾದರೂ ಇಲ್ಲಿ ಇದ್ದಿದ್ದರೆ ಎಲ್ಲಿ ಹುಲಿ ಬಂತೋ, ಕರಡಿ ಬಂತೋ ಎಂದು ಹೆದರಿ ಹೆದರಿ ಸಾಯುತ್ತಿದ್ದೆ… ಅಂದಳು. ಇಬ್ಬರೂ ನಗುತ್ತಾ ಸಾಗಿದೆವು.
ಭವ್ಯ ಟಿ.ಎಸ್. ಹೊಸ ಸರಣಿ “ಮಲೆನಾಡಿನ ಹಾಡು-ಪಾಡು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ
ನಗುವಿನ ನಾಡು ಥೈಲ್ಯಾಂಡ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ
ಆನೆಯನ್ನು ಕೇವಲ ಒಂದು ಪ್ರಾಣಿಯಾಗಿ ಪರಿಭಾವಿಸಿಕೊಳ್ಳದೆ ಅದನ್ನು ಪೂಜನೀಯ ರೀತಿಯಲ್ಲಿ ಕಂಡ ದೇಶ ಥೈಲ್ಯಾಂಡ್. ಇಲ್ಲಿನ ಸಂಸ್ಕೃತಿ ಸಂಪ್ರದಾಯಗಳಲ್ಲಿ ಆನೆಗೆ ವಿಶೇಷವಾದ ಮಹತ್ವವಿದೆ. ಆನೆ ಇಲ್ಲಿನ ರಾಷ್ಟ್ರೀಯ ಪ್ರಾಣಿ ಎನಿಸಿಕೊಂಡಿದೆ. ಆನೆಗಳನ್ನು ಪೂಜಿಸುವ ವಿಶಿಷ್ಟ ಸಂಪ್ರದಾಯ ಇಲ್ಲಿಯದ್ದು. ಆನೆಯ ಅನೇಕ ಚಿತ್ರಗಳನ್ನು, ಕಲಾಕೃತಿಗಳನ್ನು ಇಲ್ಲಿ ಕಾಣಬಹುದು. 1917ನೇ ಇಸವಿಯವರೆಗೆ ಥೈಲ್ಯಾಂಡ್ನ ರಾಷ್ಟ್ರಧ್ವಜದಲ್ಲಿಯೂ ಸಹ ಆನೆಯ ಚಿತ್ರವನ್ನು ಕಾಣಬಹುದಾಗಿತ್ತು. ಉಳಿದೆಲ್ಲಾ ಆನೆಗಳಿಗಿಂತಲೂ ಶ್ವೇತವರ್ಣದ ಆನೆಗೆ ಇಲ್ಲಿ ಹೆಚ್ಚಿನ ಆದ್ಯತೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಥೈಲ್ಯಾಂಡ್ ದೇಶದ ಕುರಿತ ಬರಹ ನಿಮ್ಮ ಓದಿಗೆ
ಮರೆಯಲಾಗದ ರಾಜನೀತಿಜ್ಞ ಬಿ. ಸುಬ್ಬಯ್ಯ ಶೆಟ್ಟಿ: ರಂಜಾನ್ ದರ್ಗಾ ಸರಣಿ
ಬಾಕ್ರಬೈಲು ಸುಬ್ಬಯ್ಯ ಶೆಟ್ಟಿ ಅವರು 1972-1977 ಮತ್ತು 1978-1983 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿದ್ದರು. ದೇವರಾಜ ಅರಸು ಅವರ ಮಂತ್ರಿಮಂಡಲದಲ್ಲಿ ಭೂಸುಧಾರಣಾ ಸಚಿವರಾದ ನಂತರ ವಾರ್ತಾ, ಇಂಧನ ಮತ್ತು ಶಿಕ್ಷಣ ಸಚಿವರಾಗಿ ಸೇವೆಸಲ್ಲಿಸಿದರು. ಶಿಕ್ಷಣದಲ್ಲಿಯೂ ಸುಧಾರಣೆ ತಂದರು. ರಾಜ್ಯದಲ್ಲಿ ಇಷ್ಟೊಂದು ಎಂಜಿನಿಯರಿಂಗ್ ಕಾಲೇಜುಗಳಾಗಲಿಕ್ಕೂ ಅವರೇ ಕಾರಣರು. ಕರ್ನಾಟಕದ ಎಲ್ಲ ಹೈಸ್ಕೂಲ್ಗಳಲ್ಲಿ ಮಹಿಳಾ ಕರಾಟೆ ಪಟುಗಳ ಮೂಲಕ ಹೆಣ್ಣುಮಕ್ಕಳಿಗೆ ಕರಾಟೆ ಕಲಿಸುವ ಕನಸನ್ನು ಹೊಂದಿದ್ದ ಅವರು ಆ ಕುರಿತು ಯೋಜನೆ ರೂಪಿಸಿದ್ದರು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಸಾವಕಾಶವಾಗಿ ಎಲ್ಲವನ್ನೂ ಹತ್ತಿರದಿಂದ ನೋಡುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ
ವರ್ತಮಾನದ ಕಾಲದೊಳಗೆ ಇಣುಕಿ ನೋಡುವ, ಜೀವನದ ಜಾಲದಲ್ಲಿ ತನ್ನ ಸ್ಥಾನವನ್ನು ನಿರ್ಧರಿಸಿಕೊಳ್ಳುವಂತಹ ತನ್ನ ಸರಳ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಆತುರಪಡದೆ ಸಾವಕಾಶವಾಗಿ ಎಲ್ಲವನ್ನೂ ಹತ್ತಿರದಿಂದ ನೋಡುತ್ತಾರೆ, ವಸ್ತುಗಳು, ಪರಿಕಲ್ಪನೆಗಳು, ಘಟನೆಗಳನ್ನು ಸೂಕ್ಷ್ಮವಾಗಿ ಆಲಿಸುತ್ತಾರೆ ಮತ್ತು ಪ್ರತಿಯೊಂದೂ ತನ್ನ ಜ್ಞಾನವನ್ನು ತನಗೆ ಬಹಿರಂಗಪಡಿಸಲು ಅವಕಾಶ ಮಾಡಿಕೊಡುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಬಲ್ಗೇರಿಯಾ ದೇಶದ ಕವಿ ಎಕ್ಯಾಟರೀನಾ ಯೊಸಿಫೋವಾ-ರವರ
(Ekaterina Yosifova) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ಬದುಕಿಗೆ ಪರಿಧಿಯ ಬರೆವ ಕರ್ಮಫಲವೆಂಬ ಕೈವಾರ: ರಾಮ್ ಪ್ರಕಾಶ್ ರೈ ಕೆ ಸರಣಿ
ಸುಜಿಗೆ ಒಳ್ಳೆಯ ಬದುಕಿತ್ತು. ಮಧುವಿನ ಪತ್ನಿಗೂ. ಆದರೆ, ಅವಳಲ್ಲಿನ ಖಾಲಿತನವನ್ನು ತುಂಬಲು ಆಕೆ ಹೊರಟಳು. ಸುಜಿ ಆ ಅವಕಾಶವನ್ನು ಬಳಸಿ ಆಕೆಯ ನಂಬಿಕೆ, ಆತ್ಮಾಭಿಮಾನದ ಜೊತೆಗೆ ಆಟವಾಡಿಬಿಟ್ಟ. ಇವೆಲ್ಲವೂ ನಡೆದಾಗ ಮಧು ಮೂಕ ಪ್ರೇಕ್ಷನಾಗಿದ್ದ. ಆದರೆ ಪತ್ನಿಯ ಮೇಲಿನ ಆತನ ಅಸ್ಖಲಿತ ಪ್ರೇಮ, ಗೌರವಕ್ಕೆ ಧಕ್ಕೆಯಾದಾಗ ಆತ ಹಿಂಸೆಯ ದಾರಿಯ ಹಿಡಿದ. ಸರಿ ತಪ್ಪುಗಳಾಚೆ ಇಂತಹ ಅದೆಷ್ಟೋ ಕ್ರಿಮಿಗಳಿಗೆ ‘ಸಾವು ಮಲಗಿರುತ್ತೆ ನಿನ್ನ ಪಕ್ಕದಲ್ಲೇ, ಗೊತ್ತಾಗೋದು ಎದ್ದಾಗಲೇ’ ಎಂದು ಪಾಠವಾಯಿತು ಆತನ ನಡೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಇಲಾ ವಿಳಾ ಪೂಂಚಿರಾ’ ಸಿನಿಮಾದ ವಿಶ್ಲೇಷಣೆ
ಮದುವೆಮನೇನೋ ಸಂತೆಕಟ್ಟೇನೋ: ಸುಮಾ ಸತೀಶ್ ಸರಣಿ
ಇಂತಾ ಜೋರಿನ ಅತ್ತೇ ಒಂದು ಪುಂಡ ಹಸಾನ ಪಳಗಿಸಿದ್ಲು. ಆ ಹಸು ಎಷ್ಟು ಜೋರು ಅಂದ್ರೇ ಯಾರಿಗೂ ಹಾಲು ಕರೆಯೋಕೇ ಬಿಡ್ತಿರಲಿಲ್ಲ. ನಮ್ಮತ್ತೇನೂ ಜೋರಲ್ವಾ. ಅದೂ ಜೋರು. ಇಬ್ರಲ್ಲೂ ಬಲು ಸ್ನೇಹ. ನಮ್ಮತ್ತೆ ಹಾಲು ಕರೆದರೆ ಕಮಕ್ ಕಿಮಕ್ ಅಂತಿರಲಿಲ್ಲ ತುಡುಗು ಮುಂಡೇದು. ಕೊನೇಗೆ ಮದುವೇ ದಿನ ಹಸೆಮಣೇ ಮೇಲಿದ್ದಾರೆ. ಈ ಹಸಾ ಹಾಲು ಕೊಡಲಿಲ್ಲ ಅಂತಾ ಹೇಳಿದ್ದಾರೆ. ನಮ್ಮತ್ತೆ ಹಸೇಮಣೇ ಮೇಲಿಂದ ಎದ್ದು ಹೋಗಿ ಹಾಲು ಕರೆದುಕೊಟ್ಟು ಬಂದಿದ್ದಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮದುವೆ ಮನೆಯ ಮತ್ತಷ್ಟು ವಿಷಯಗಳ ಕುರಿತ ಬರಹ ನಿಮ್ಮ ಓದಿಗೆ
ಹೋಳಿಗೆ ಕೊಡಿಸಿದ ಯುಗಾದಿ ಚಂದಿರ..: ಪೂರ್ಣೇಶ್ ಮತ್ತಾವರ ಸರಣಿ
ಹಬ್ಬದ ಹಿಂದಿನ ಸಂಜೆ “ನಾಳೆ ರಜಾ, ಕೋಳಿ ಮಜಾ..” ಎನ್ನುತ್ತಾ ರಜೆಯ ಸಡಗರವನ್ನು ಅನುಭವಿಸಿ, ಹಗಲಿಡೀ ಆಟವಾಡಿ, ಮಧ್ಯಾಹ್ನ ಸಿಹಿ ತಿಂದು ಖುಷಿಪಟ್ಟವರು ಸಂಜೆಯಾಗುತ್ತಲೇ ನಮಗೆ ತಿಳಿಯದಲೇ ಬೇಸರಿಸಿಕೊಂಡು ಬಿಡುತ್ತಿದ್ದೆವು. “ಹೋಂ ಸಿಕ್ ನೆಸ್” ಎಂಬುದು ನಮಗರಿವಿಲ್ಲದಲೇ ಹಬ್ಬದ ದಿನಗಳಲ್ಲೇ ಹೆಚ್ಚಾಗಿ ನಮ್ಮನ್ನು ಆವರಿಸಿಕೊಂಡು ಬಿಡುತ್ತಿತ್ತು. ಕೊಟ್ಟ ಹೋಂ ವರ್ಕ್ “ನಾಳೆ ಮಾಡಿದರಾಯ್ತು” ಎಂದು ಮುಂದೂಡಿ ಈಗ ಮಾಡಬೇಕಿರುವುದೂ ನಮ್ಮ ದುಃಖವನ್ನು ಮತ್ತಷ್ಟು ಹೆಚ್ಚಿಸಿ ಬಿಡುತ್ತಿತ್ತು.
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹನ್ನೆರಡನೆಯ ಬರಹ










