ಸುಮಾವೀಣಾ ಹೊಸ ಸರಣಿ “ಮಾತು-ಕ್ಯಾತೆ” ಆರಂಭ
ಮಕ್ಕಳಲ್ಲಿ ಜ್ಞಾನದ ಮಟ್ಟ ಹೆಚ್ಚಿದ್ದರೂ ಅದನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗುವುದಿಲ್ಲ. ಕಾರಣ ಶಬ್ದಗಳ ಕೊರತೆ. ಮನಸ್ಸಿನಲ್ಲಿ ಭಾವನೆಗಳಿರುತ್ತವೆ….! ಇನ್ನೇನೋ ವಿಶೇಷವಾಗಿರುವುದನ್ನು ಹೇಳಬೇಕು…! ನಾನೂ ಮಾತನಾಡಬೇಕು….! ಎಂದಾಗ ಆ ಭಾವನೆಗಳಿಗೆ ಆತ ಶಬ್ದರೂಪವನ್ನು ಕೊಡಲು ಸಾಧ್ಯವಾಗುವುದಿಲ್ಲ.
ಪದ ಪ್ರಯೋಗಗಳ ಕುರಿತು ಸುಮಾವೀಣಾ ಬರೆಯುವ ಹೊಸ ಸರಣಿ “ಮಾತು-ಕ್ಯಾತೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ
ನವಿರಾದ ಹಾಸ್ಯದೊಳಗಿನ ಗಂಭೀರ ಕಾವ್ಯ…: ಎಸ್. ಜಯಶ್ರೀನಿವಾಸ ರಾವ್ ಸರಣಿ
ಅವರ ಕವನಗಳಲ್ಲಿ ಬೈಬಲ್ ಹಾಗೂ ಗ್ರೀಕ್ ಪುರಾಣಗಳ ಉಲ್ಲೇಖಗಳೂ ಇವೆ. ಈ ಪುರಾಣಗಳ ಪ್ರಯೋಗದಿಂದ ಹೆರ್ಬೆರ್ತರು ಸಮಕಾಲೀನ ಅನುಭವಗಳ ತೀಕ್ಷ್ಣ ಝಳಪನ್ನು ಸ್ವಲ್ಪ ಮಟ್ಟಿಗೆ ಮೃದುಗೊಳಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಪೋಲಂಡ್ ದೇಶದ ಖ್ಯಾತ ಕವಿ ಜ಼್ಬಿಗ್ನಿಎಫ಼್ ಹೆರ್ಬೆರ್ತ್-ರವರ (Zbigniew Herbert, 1924 – 1998) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
ಛಲದ ಮುಂದೆ ನ್ಯೂನತೆಗಳು ನಿಲ್ಲೋಲ್ಲ: ಕಾರ್ತಿಕ್ ಕೃಷ್ಣ ಸರಣಿ
ನನಗೆ ಎಲ್ಲಕ್ಕಿಂತ ಇಷ್ಟವಾದದ್ದು ಲೈಲ್ಸ್ನ ಖತರ್ನಾಕ್ ಎಂಟ್ರಿ. ಅವನು ಟ್ರ್ಯಾಕ್ಗೆ ಬರುವ ಕಾನ್ಫಿಡೆನ್ಸನ್ನು ನೀವೊಮ್ಮೆ ನೋಡಬೇಕು. ಆ ಕಾಂಫಿಡೆನ್ಸಿನಿಂದಲೇ ಅವನು ಅರ್ಧ ಪಂದ್ಯವನ್ನು ಗೆಲ್ಲುತ್ತಾನೆ ಎಂದು ನನಗನ್ನಿಸುತ್ತದೆ. ಹೆಸರು ಕೂಗಿದೊಡನೆ ವೇಗವಾಗಿ ಓಡಿ ಬಂದು, ಕುದುರೆಯಂತೆ ನೆಗೆದು ಇಡೀ ಪ್ರಪಂಚದ ಗಮನವನ್ನು ತನ್ನತ್ತ ಸೆಳೆಯುವ ಅವನ ಆತ್ಮವಿಶ್ವಾಸ ಎಂತವರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ನೂತನ ಒಲಿಂಪಿಕ್ ಚಾಂಪಿಯನ್ ನೋಅ ಲೈಲ್ಸ್ ನಮ್ಮ ಆತ್ಮವಿಶ್ವಾಸವನ್ನೂ ಒಂದಷ್ಟು ಹೆಚ್ಚಿಸಲಿ ಅಲ್ಲವೇ?
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ
ಮಧ್ಯಮ ವರ್ಗ ಮತ್ತು ಬೆಲೆಬಾಳುವ ಕಾಗದದ ಚೂರುಗಳು: ರಾಮ್ ಪ್ರಕಾಶ್ ರೈ ಕೆ. ಸರಣಿ
‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಬ್ಬ ಕಳ್ಳನಿದ್ದಾನೆ’ ಎಂಬ ವಾಕ್ಯ, ‘ಪ್ರತಿಯೊಬ್ಬ ಮನುಷ್ಯನಲ್ಲಿಯೂ ಒಂದು ಮಗುವಿದೆ’ ಎಂದು ಕೋಟಿಯ ಕೈಗಳಲ್ಲಿ ಬದಲಾಗುವುದೇ ಆತನ ವ್ಯಕ್ತಿತ್ವದ ಹೆಚ್ಚುಗಾರಿಕೆಯ ಸಂಕೇತ. ಚಿತ್ರದ ತುಂಬೆಲ್ಲಾ ರೂಪಕಗಳ ಬಳಕೆ ಹೇರಳವಾಗಿದೆ. ಕೋಟಿಯೆಂಬ ಹೆಸರು ಅದರಲ್ಲೊಂದು. ಇಲ್ಲಿ ಎಲ್ಲರೂ ಸಾಗುತ್ತಲೇ ಇರುತ್ತಾರೆ. ಥೇಟು ಪಟ್ಟಣದ ಯಾಂತ್ರಿಕ ಬದುಕಿನಂತೆ. ಆದರೆ ಆ ಪಯಣಕ್ಕೊಂದು ವೇಗ ನಿಯಂತ್ರಕ ಎದುರಾದಾಗ, ಹೇಗೆ ಉತ್ತರಿಸುತ್ತೇವೆ ಎನ್ನುವುದರ ಮೇಲೆ ಬದುಕು ನಿರ್ಧರಿತವಾಗುತ್ತದೆ ಎಂಬುದನ್ನು ನಿರೂಪಿಸಲಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ
ಇರುವಲ್ಲೇ ಖುಷಿ ಕಾಣುವ ಪಾಠ: ಗುರುಪ್ರಸಾದ ಕುರ್ತಕೋಟಿ ಸರಣಿ
ಅಲ್ಲಿ ಇರೋದೇ ಬೇಡ, ನನ್ನ ದೇಶವೇ ನನಗೆ ಚಂದ, ಅಲ್ಲಿಯೇ ಸುಖ ಇದೆ, ವಾಪಸ್ಸು ಹೋಗಿಯೇ ತೀರುತ್ತೇನೆ ಅಂತೆಲ್ಲ ಬಡಬಡಿಸುತ್ತಿದ್ದ ನನಗೆ, ನಲವತ್ತು ವರ್ಷಗಳಿಗಿಂತ ಹೆಚ್ಚು ಕಾಲ ಅಲ್ಲಿದ್ದು, ತಾವು ಅಲ್ಲಿ ಸುಖವಾಗಿ ಇದ್ದೇವೆ, ಯಾವುದೇ ವಿಷಾದ ಇಲ್ಲ ಅಂತ ಮಾತು ಹಾಗೂ ಕೃತಿಯಿಂದ ತೋರಿಸಿದ ನನ್ನ ಅಕ್ಕ ಬೆರಗು ಮೂಡಿಸಿದ್ದಳು! ಆ ಕ್ಷಣದಿಂದ ಬೇರೆಯವರಿಗೆ, ನೀವ್ಯಾಕೆ ಅಮೆರಿಕೆಯಲ್ಲಿಯೇ ಇರಲು ಬಯಸುತ್ತೀರಿ…?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ಮೂರನೆಯ ಬರಹ
ಕದಿರಪ್ಪನ ಪರಿಷೆ: ಸುಮಾ ಸತೀಶ್ ಸರಣಿ
ಸ್ಯಾನೆ ವಿಸೇಸವಾದ್ದು ಅಂದ್ರೆ ಆಟುದ್ ಸಾಮಾನಿನ ಬುಟ್ಟಿಗ್ಳು. ಕಾರು ಬೈಕು ಅಲ್ಲ ಬುಡಿ. ಆ ಬುಟ್ಟಿಗ್ಳಾಗೆ ಬುಡಿಗೆಗಳು ಇರ್ತಿದ್ವು. ಎಲ್ಡು-ಮೂರು ಬೆಟ್ಟಿನ ಗಾತ್ರದ ಮಣ್ಣಿನ ಮಡಿಕೆ ಕುಡಿಕೆಗಳು, ಒಲೆ, ಬಟ್ಟಲು, ಮುಚ್ಚಳ, ಸೌಟು, ಹಂಚು ಇಂತಾ ಅಡ್ಗೆ ಮನೆ ಸಾಮಾನು. ಹುಡುಗೀರೆಲ್ಲಾ ಅಲ್ಲೇ ಸೇರ್ಕಂಡು ಒಬ್ಬಳು ಬಟ್ಟಲು ತಕಂಡ್ರೆ, ಇನ್ನೊಬ್ಬಳು ಒಲೆ ತಕಣಾದು. ಐದು ಪೈಸೆ, ಹತ್ತು ಪೈಸೆ, ಜಾಸ್ತಿ ಅಂದ್ರೆ ನಾಕಾಣೆ ಇರ್ತಿದ್ವು. ನಮ್ಗೋ ತಲಾಕೈವತ್ತು ಪೈಸೇ ಸಿಕ್ತಿದ್ರೆ ಹೆಚ್ಚು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ
ನಾವೆಂದೂ ಮರೆಯಲಾಗದ ಹಾಸ್ಟೆಲ್ ಕಲಿಸಿದ ಪಾಠ…: ಬಸವನಗೌಡ ಹೆಬ್ಬಳಗೆರೆ ಸರಣಿ
ಶನಿವಾರ ಶಾಲೆ ಬಿಟ್ಟಾಗಿನಿಂದ ಹಿಡಿದು ಸಂಜೆ 5;30 ವರೆಗೂ ನಾವು ವಿಶ್ರಾಂತಿ ತೆಗೆದುಕೊಳ್ಳದೆ ಕ್ಲೀನ್ ಮಾಡಿದರೆ ಮಾತ್ರ ಎಲ್ಲಾ ತೊಟ್ಟಿಗಳು ಕ್ಲೀನ್ ಮಾಡೋಕೆ ಸಾಧ್ಯ ಆಗ್ತಾ ಇತ್ತು. ಆ ನಂತರ ಸ್ನಾನ ಮಾಡಿ ನಮಗೆ ಸಿಕ್ಕ ಮೆಸ್ಸಿನಲ್ಲಿ ರಾತ್ರಿ ಊಟ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ತಾ ಇದ್ವಿ!! ‘ಭೂತಯ್ಯನ ಮಗ ಅಯ್ಯ’ ಫಿಲಮ್ಮಿನಲ್ಲಿ ಬರೋ ಸೀನಿನ ತರಹ ಕೆಲವರು ಸಾಕಷ್ಟು ಬಡಿಸಿಕೊಂಡು ತಿನ್ತಾ ಇದ್ರು. ನಮಗೆ ತುಂಬಾ ಖುಷಿ ಆಗ್ತಾ ಇತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ
ಬರಲು ಹೇಳಿ ಭೇಟಿಯಾಗದೆ ಹೋದರು!: ರಂಜಾನ್ ದರ್ಗಾ ಸರಣಿ
ಅವರು ಏನೇ ಆದರೂ ನನ್ನ ಜೊತೆಗಿನ ಸಂಪರ್ಕವನ್ನು ಎಂದೂ ಕಳೆದುಕೊಳ್ಳಲಿಲ್ಲ. ಸುಬ್ಬಯ್ಯಶೆಟ್ಟಿ ಅವರು ಮೊದಲು ಮಾಡಿ ಆ ಕಾಲದ ಎಲ್ಲ ಹಿರಿಯ ಕಿರಿಯ ಗೆಳೆಯರು ಇಂದಿಗೂ ಸಂಪರ್ಕದಲ್ಲಿದ್ದಾರೆ. ಈ ಕಾರಣದಿಂದಲೇ ಮೊಹಿದ್ದೀನ್ ಅವರು ನಿಧನರಾಗುವ ಮೂರು ದಿನಗಳ ಮುಂಚೆ ಫೋನ್ ಮಾಡಿದ್ದು. ನಾವು ಸಮಯ ಸಿಕ್ಕಾಗಲೆಲ್ಲ ಭೇಟಿಯಾಗುತ್ತಲೇ ಇದ್ದೆವು. ನಡೆದಾಡಲಿಕ್ಕಾಗದೆ ಬಹಳ ನೋವು ಅನುಭವಿಸಿದರು. ಅವರಿಗೆ ತಮ್ಮ ಅನಾರೋಗ್ಯದ ಬಗ್ಗೆ ಬಹಳ ಬೇಸರವಾಗಿತ್ತು. ಏಕೆಂದರೆ ಸದಾ ಚಟುವಟಿಕೆಯಿಂದ ಇರಬೇಕೆನ್ನುವ ಸೇವಾ ಮನೋಭಾವದ ಗಂಭೀರ ವ್ಯಕ್ತಿ ಅವರಾಗಿದ್ದರು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಗೋ ಮಾಂಡೋ…. ಗೋ…!!: ಕಾರ್ತಿಕ್ ಕೃಷ್ಣ ಸರಣಿ
ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ









