ಪುಸ್ತಕ ಲೋಕಾರ್ಪಣೆ ಮತ್ತು ಮಾರಾಟ: ಎಚ್. ಗೋಪಾಲಕೃಷ್ಣ ಸರಣಿ
ಯಾರೋ ನನ್ನನ್ನು ಗಮನಿಸುತ್ತಾ ಇದ್ದಾರೆ ಎಂದೂ ಅನಿಸಬೇಕೇ..? ನರಸಿಂಹಯ್ಯನವರ ಕಾದಂಬರಿ ಓದಿ ಬೆಳೆದವರಿಗೆ ಈ ಸನ್ನಿವೇಶ ಒಟ್ಟಿಗೇ ಎಂಟೋ ಹತ್ತೋ ಭಯಾನಕ ಭೂತಗಳು, ನಡು ಹಗಲಿನಲ್ಲಿ ಮೋಹಿನಿಯ ಕಾಟ, ಮಟಮಟ ಮಧ್ಯಾಹ್ನ ಕಾಡಿತ್ತು ಕರಿ ಮೋಹಿನಿ… ಮೊದಲಾದ ಆಕರ್ಷಕ ಶೀರ್ಷಿಕೆಗಳು ಇರುವ ಹಲವಾರು ಪತ್ತೇದಾರಿ ಕಾದಂಬರಿಗಳನ್ನು ಬರೆಯಲು ಮತ್ತು ಬರಹದಲ್ಲಿ ತಾನೇ ಸೆಂಟರ್ ಫಿಗರ್ ಆಗಿ ಮಿಂಚುವ ಅವಕಾಶಗಳೂ ಸಹ ಹೇರಳವಾಗಿದ್ದವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೭ನೇ ಬರಹ ನಿಮ್ಮ ಓದಿಗೆ
ಸುಂದರ ಕಾಡಿನ ರೋಚಕ ಕಥೆಗಳು-೭: ರೂಪಾ ರವೀಂದ್ರ ಜೋಶಿ ಸರಣಿ
ಆ ಎಮ್ಮೆಗಳೇನಾದರೂ ಅದನ್ನು ಓಡಿಸಿರದಿದ್ದರೆ ಆಯಿಯ ಗತಿ ಏನಾಗುತ್ತಿತ್ತೋ ಏನೋ. ನೆನೆಸಿಕೊಂಡರೆ, ಈಗಲೂ ಮೈ ಅದುರುತ್ತದೆ. ಆಯಿ ಯಾವಾಗಲೂ ಎಮ್ಮೆ, ದನಗಳನ್ನು ಅಷ್ಟು ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಳು. “ಆಯಿಗೆ ನಮಗಿಂತಲೂ ಎಮ್ಮೆಯ ಮೇಲೆ ಹೆಚ್ಚು ಪ್ರೀತಿ” ಎಂದು ನಾವು ಯಾವಾಗಲೂ ತಮಾಷೆ ಮಾಡಿದರೆ, ಆಯಿ “ಹೌದು, ಅವು ಮೂಕ ಪ್ರಾಣಿಗಳು. ನಿಮ್ಮಂತೆ ಬಾಯಿ ಬಿಟ್ಟು ಬೇಕಾದ್ದನ್ನು ಕೇಳಲಿಕ್ಕೆ ಆಗೋದಿಲ್ಲ. ನಾವೇ ತಿಳಿದು ಕೊಟ್ಟರೆ ತಿಂತಾವೆ ಪಾಪ” ಎನ್ನುತ್ತಿದ್ದಳು. ಹೀಗೆ ಮಕ್ಕಳಿಗಿಂತಲೂ ಹೆಚ್ಚು ಪ್ರೀತಿಯಿಂದ ಎಮ್ಮೆಗಳನ್ನು ಸಾಕಿದ್ದಕ್ಕೂ ಸಾರ್ಥಕವಾಯ್ತು ಎನ್ನುವಂತೇ ಅವತ್ತು ಅವು ಆಯಿಯ ಪ್ರಾಣ ಕಾಪಾಡಿದ್ದವು.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನಾರನೆಯ ಕಂತು
ಸಾಲಿಯಂದ್ರ ಕಣ್ಣಾಗ ಕಾಮನಬಿಲ್ಲು…: ಸುವರ್ಣ ಚೆಳ್ಳೂರು ಸರಣಿ
ಮುಂಜೆನೆದ್ದಿದ್ದ ಹಿಂಗ ಅವ್ವ ಬುತ್ತಿ ಕಟ್ಟಿಗ್ಯಂಡು ಹೊಂಟ್ಲಂದ್ರ, ಮನಿಯೆಲ್ಲಾ ನನ್ನ ಮ್ಯಾಗ ಬಿದ್ದೈತೆನೊ ಅನ್ನಿಸ್ತಿತ್ತು. ಬಟ್ಟಿ, ಮುಸುರಿ, ಕಸ, ಅಡಿಗಿ ಎಲ್ಲಾನೂ ನನ್ನ ನೋಡಿ ನಕ್ಕಂಗಾಗ್ತಿತ್ತು. ಅದರ್ ನಡುವು ಮನಿಗೆ ಬಂದಾರೆಲ್ಲ ಅಪ್ಪನ್ನ ನೋಡಿ ‘ಮಗಳ್ ಮನಿ ಕೆಲ್ಸ ಎಲ್ಲಾ ಕಲ್ತಾಳ ಬುಡಪ, ದೊಡ್ಡಾಕ್ಯಾಗ್ಯಾಳನು?’ ಅಂತ ಕೇಳಿದಾಗೆಲ್ಲ, ಒಲ್ಯಾಗಿನ ಬೂದಿ ಅವರ ಮಾರಿಗೆ ಒಗಿಬೊಕು ಅನ್ನಿಸಿದ್ರು, ಒಳಾಗ ಅಡಗಿ ಮನಿಯೊಳಾಗ ಕಂಬಕ್ಕ ಕುಂತಗಂಡು ಚಚ್ಚೌಕ ಇದ್ದ ಕಿಡಕಿ ಮತ್ತ ಅದರ ನಡುವ ನಿಧಾನವಾಗಿ ತೂಗ್ಯಾಡಿದಂಗ ಕಾಣತಿದ್ದ ನೆಲುವು ನೋಡಿಕ್ಯಂತ ಕುಂದ್ರತಿದ್ದೆ.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿ
ಹಕ್ಕಿಗಳ ಗೂಡು: ಡಾ. ಎಸ್.ವಿ. ನರಸಿಂಹನ್ ಸರಣಿ
ಹಲವಾರು ಹಕ್ಕಿಗಳು ಒಟ್ಟಿಗೆ, ಸಮೂಹವಾಗಿ ಕಾಲೊನಿಯನ್ನು ಕಟ್ಟಿಕೊಳ್ಳುವುದೂ ಉಂಟು. ಒಗ್ಗಟ್ಟಿನಲ್ಲಿ ಬಲವಿದೆ ಎಂಬುದನ್ನು ಇದು ಸಾಬೀತು ಪಡಿಸುತ್ತದೆ. ಹೀಗೆ ಸಾಮಾನ್ಯವಾಗಿ ಎಲ್ಲ ಹಕ್ಕಿಗಳು ತಮ್ಮ ಗೂಡನ್ನು ತಾವೇ ಕಟ್ಟಿಕೊಳ್ಳುತ್ತವೆ. ಗೂಡುಕಟ್ಟುವ ಕ್ರಿಯೆಯಲ್ಲಾಗಲಿ, ಮೊಟ್ಟೆಗಳಿಗೆ ಕಾವು ಕೊಟ್ಟು, ಮರಿಗಳಿಗೆ ಗುಟುಕು ನೀಡಿ ಬೆಳೆಸುವ ಕಾರ್ಯದಲ್ಲಿಯೇ ಆಗಲಿ ಸಾಮಾನ್ಯವಾಗಿ ಎರಡೂ ಹಕ್ಕಿಗಳು ಕೆಲಸವನ್ನು ಹಂಚಿಕೊಳ್ಳುವುದನ್ನು ಕಾಣುತ್ತೇವೆ. ಸಾಮಾನ್ಯವಾಗಿ ಹೆಣ್ಣುಹಕ್ಕಿ ಗೂಡು ಕಟ್ಟುವ ಕಾರ್ಯ ಮಾಡಿದರೆ, ಗಂಡುಹಕ್ಕಿ ಅಗತ್ಯ ಸಾಮಗ್ರಿಗಳನ್ನು ತಂದು ಪೂರೈಸುವ ಕೆಲಸ ವಹಿಸಿಕೊಳ್ಳುತ್ತದೆ. ಅಪವಾದಗಳು ಇಲ್ಲದಿಲ್ಲ.
ಡಾ. ಎಸ್.ವಿ. ನರಸಿಂಹನ್ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಹಕ್ಕಿಗಳ ಗೂಡು, ಅವುಗಳ ಕಟ್ಟುವಿಕೆಯ ಕುರಿತ ಬರಹ ಇಲ್ಲಿದೆ
ಆಪ್ತವಾಗಿದ್ದ ಆಪ್ತರಂಗ ಪ್ರಯೋಗಗಳು: ಚಿತ್ರಾ ವೆಂಕಟರಾಜು ಸರಣಿ
ಮೂರನೇ ಬೆಲ್ ಆದ ತಕ್ಷಣ ನಟ ನಿಧಾನವಾಗಿ ಪ್ರೇಕ್ಷಕರ ಕೈಹಿಡಿದು ಬೇರೆಯದೇ ಲೋಕಕ್ಕೆ ಕರೆದುಕೊಂಡು ಹೋಗುತ್ತಾನೆ. ನಟ ಪಾತ್ರದಲ್ಲಿ ಇಳಿಯುತ್ತಿದ್ದಂತೆ ಪ್ರೇಕ್ಷಕನೂ ತನ್ನನ್ನು ಮರೆಯುತ್ತಾನೆ. ನಟರೊಂದಿಗೆ – ನಿರ್ದೇಶಕರು ತಮ್ಮ ತಮ್ಮ ಕಲ್ಪನೆಯಲ್ಲಿ ಇಷ್ಟು ತಿಂಗಳೂ ಕಟ್ಟಿದ ನಾಟಕ ಪ್ರೇಕ್ಷಕರೊಂದಿಗೆ ಸಂವಾದಕ್ಕಿಳಿಯುತ್ತದೆ. ನೋಡಿದ ನಾಟಕಗಳಲ್ಲಿ ಕೆಲವೇ ಕೆಲವು ಪ್ರಯೋಗಗಳು ನಾಟಕ ಮುಗಿದ ಎಷ್ಟೋ ವರ್ಷಗಳ ನಂತರವೂ ನೆನಪಿನ ಭಾಗವಾಗಿ ಭದ್ರವಾಗಿರುತ್ತದೆ ಎಂದರೆ ಆ ಮಾಧ್ಯಮಕ್ಕಿರುವ ಶಕ್ತಿ ಅಂಥದ್ದು! ಆ ಪ್ರಯೋಗಗಳು ಹೇಗಿತ್ತು ಎಂದರೆ ಹೇಳಲು ಬರುವುದಿಲ್ಲ…
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ
ಹರ್ಷದ ಕೂಳನ್ನು ನೆಚ್ಚಿಕೊಂಡು ವರ್ಷದ ಕೂಳನ್ನು ಕಳೆದುಕೊಳ್ಳಬಾರದಂತೆ!!: ಬಸವನಗೌಡ ಹೆಬ್ಬಳಗೆರೆ ಸರಣಿ
ನನಗೆ ತೊಂದರೆ ಆಗುತ್ತಿದ್ದುದು ನನ್ನ ಸಂಬಂಧಿಕರ ಮನೆಯಿಂದ ಬರುತ್ತಿದ್ದ 3 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಕರೆದುಕೊಂಡು ಹೋಗಲು ತುಂಬಾ ತಡವಾಗಿ ಬರುತ್ತಿದ್ದರು. ಇದರಿಂದ ನನಗೆ ಅವರು ಹೋಗುವವರೆಗೂ ಅಡುಗೆ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ನಾನು ಮಾಡಿದ್ದ ರೂಮಿನಲ್ಲಿ ಒಂದೇ ಹಾಲ್ ಇದ್ದುದ್ದರಿಂದ ಮಕ್ಕಳ ಎದುರಿಗೆ ಹೋಗಿ ಅಡುಗೆ ಮಾಡಿಕೊಳ್ಳಲು ಸಾಧ್ಯವಿಲ್ಲದಂತಾಗಿ ಅವರು ಹೋಗುವವರೆಗೂ ಕಾಯಬೇಕಾಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ನಾಲ್ಕನೆಯ ಕಂತು ನಿಮ್ಮ ಓದಿಗೆ
ಪುಸ್ತಕ ಪ್ರಕಟಣೆಯ ಪ್ರಸಂಗಗಳು: ಎಚ್. ಗೋಪಾಲಕೃಷ್ಣ ಸರಣಿ
ಪುಸ್ತಕಕ್ಕೆ ಹೆಸರು ಇಡಬೇಕಿತ್ತಲ್ಲ. ಮುಖಪುಟ ಬರೆದಾಗ ಪುಸ್ತಕದ ಹೆಸರೂ ಕೊಟ್ಟರೆ ಕಲರ್ ಕಾಂಬಿನೇಷನ್ಗೆ ಉತ್ತಮ ಎನ್ನುವ ಅಭಿಪ್ರಾಯ ಬಂದಿತ್ತು. ನನ್ನ ಕತೆಗಳ ಹಸ್ತಪ್ರತಿಯ ಒಂದು ಕತೆ ಹೆಸರು ವೈಶಾಖ ಎಂದು. ಈಗಾಗಲೇ ಚದುರಂಗ ಅವರು ವೈಶಾಖ ಎನ್ನುವ ಕಾದಂಬರಿ ಬರೆದು ಅದು ಪ್ರಖ್ಯಾತವಾಗಿತ್ತು. ನನ್ನ ಸಂಕಲನಕ್ಕೂ ವೈಶಾಖ ಹೆಸರು ಇಟ್ಟರೆ ಓದುಗರು ಕನ್ಫ್ಯೂಸ್ ಮಾಡಿಕೊಳ್ಳುವ ಸಂಭವ ಹೆಚ್ಚಿರುತ್ತೆ ಅನಿಸಿತು. ಆದರೂ ಚದುರಂಗರ ವೈಶಾಖ ಕಾದಂಬರಿಯು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೬ನೇ ಬರಹ ನಿಮ್ಮ ಓದಿಗೆ
ಸುಂದರ ಕಾಡಿನ ರೋಚಕ ಕಥೆಗಳು (೬): ರೂಪಾ ರವೀಂದ್ರ ಜೋಶಿ ಸರಣಿ
ಬೆಟ್ಟದ ಬಲಬದಿಯ ಕಿರುದಾರಿ ಹಿಡಿದು ಸಾಗಿದರೆ, ಅಲ್ಲೊಂದು ನೆಲ್ಲಿ ಮರ. ಅದರ ಬುಡದಲ್ಲಿ ನಮ್ಮ ನಾಯಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದುಕೊಂಡಿದೆ. ನಾನು ಗಾಬರಿಯಿಂದ ಜೋರಾಗಿ ಅಳತೊಡಗಿದೆ. ಯಾರೋ ರಾತ್ರಿ ಅಲ್ಲಿರುವ ಪೊದೆಯಲ್ಲಿ ನಾಡ ಬಾಂಬು ಇಟ್ಟಿದ್ದಾರೆ! ಮಾಂಸದ ವಾಸನೆಗೆ ಮರುಳಾಗಿ, ಅದು ಆ ಬಾಂಬನ್ನು ಬಯಲಲ್ಲಿ ತಂದಿಟ್ಟುಕೊಂಡು ಇಡಿದಾಗಿ ಕಚ್ಚದೆ, ಮೆಲ್ಲಗೆ ಒಂದು ಮೂಲೆಯನ್ನು ಬಿಡಿಸಿದೆ. ಅದಕ್ಕೇ ಸ್ವಲ್ಪಭಾಗ ಸಿಡಿದು, ಅದರ ಮೇಲ್ದವಡೆ ಸ್ವಲ್ಪ ಸೀಳಿತ್ತು. ಬಾಯೆಲ್ಲ ರಕ್ತ ಸಿಕ್ತ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹದಿನೈದನೆಯ ಕಂತು
ಹೆಣ್ಣಂದ್ರ ರಕ್ತ ಬಸೀಬೇಕು….: ಸುವರ್ಣ ಚೆಳ್ಳೂರು ಸರಣಿ
ಹಿಂಗ ಒಮ್ಮಿ ನಾನು ನಿಮ್ಮವ್ವ ಆ ದೊಡ್ಡ ಹೊಲಕ್ಕ ರಾಶಿ ಮಾಡಕಂತ ಹೋಗಿದ್ವಿ, ಹೊಲದ್ ದಗದಾ ಅಂದ್ರ ತುಸಾss ಇರತೈತ್ಯನು ಮೈ ಬಗ್ಗಿಸಿ ದುಡದ್ರಷ್ಟss ನೀಗತೈತಿ. ಅವತ್ತು ಮಟ ಮಟ ಮಧ್ಯಾಹ್ನದಾಗ ನಾನು ನಿಮ್ಮವ್ವ ಈ ಮ್ಯಾಗಳಮನಿ ಗಂಗಪ್ಪನ ಹೊಲಕ್ಕ ಆರತಾಸಿನ ದಗದಕ್ಕ ಹೋಗಿದ್ವಿ, ಆಕಿ ಕೂಡ ಅದಾ ನೆಲ್ಲು ಕೊಯ್ಯಾ ಕೆಲಸಕ್ಕಂತ ನಮ್ಮ್ ಜೋಡಿ ಬಂದಿದ್ಲು, ಗಂಗಪ್ಪನ ಹೊಲ ಆ ಮ್ಯಾಗಡಿ ಕಡಿ ಐತ್ಯಲಾ ಆ ದುರ್ಗಮ್ಮನ ಗುಡಿತಾಕ ಅಲ್ಲೆ ಒಂದು ಸಣ್ಣ್ ಹಳ್ಳ ಹರಿತೈತಿ ಅಲಾ ಆ ಹೊಲಕ್ಕೊಗಿದ್ವಿ.
ಸುವರ್ಣ ಚೆಳ್ಳೂರು ಬರೆಯುವ “ಆಕಿ” ಸರಣಿ








