Advertisement

ಸರಣಿ

ಪೆಟ್ಟಿಗೆ ಅಂಗ್ಡೀಲಿ ಪೈಸಾ ಲೆಕ್ಕ: ಸುಮಾ ಸತೀಶ್ ಸರಣಿ

ಪೆಟ್ಟಿಗೆ ಅಂಗ್ಡೀಲಿ ಪೈಸಾ ಲೆಕ್ಕ: ಸುಮಾ ಸತೀಶ್ ಸರಣಿ

ಮಾರೋನು ವಾರಕ್ಕೊಂದು ದಪ ಇಸ್ಕೂಲ್ ತಾವ ಬತ್ತಿದ್ದ. ಅದು ಎಲ್ಡು ತರ ಇರ್ತಿತ್ತು. ಒಂದು ಈಗ್ಲೂ ಸಿಗ್ತೈತೆ. ಅದೇ ಮೊಳಕೈ ಉದ್ದುದ್ದು ಕಡ್ಡೀಗೆ ರೋಜಾ(ಗುಲಾಬಿ) ಬಣ್ಣುದ್ದು ಹತ್ತಿ ತರ ಸುತ್ತಿರ್ತಾರಲ್ಲ. ಕೈಗೂ ಬಾಯ್ಗೂ ಅಂಟ್ರುಸ್ತೈತಲ್ಲ ಅದು. ಇನ್ನೊಂದು ರಬ್ಬ್ರು(ರಬ್ಬರ್) ತರ ನಾರಿನಂಗೆ ಇರ್ತಿತ್ತು. ಎಳುದ್ರೆ ಸಾಗ್ತಾನೆ(ಹಿಗ್ಗುವ) ಇರಾ ದಾರ. ಅದುನ್ನ ಕೈಗೆ ವಾಚೋ, ಇಮಾನವೋ, ಸೈಕಲ್ಲೋ, ಕಾರೋ ಮಾಡಿ ಹಾಕೋನು. ಬೇಸಾಗಿ ಮಾಡ್ತಿದ್ದ. ಕಾಸು ಕಮ್ಮಿ ಇದ್ರೆ ಬೆಟ್ಟಿಗೆ ಉಂಗುರ ಮಾತ್ರ ಸಿಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

read more
ಗಣಿತ ಟ್ಯೂಷನ್ನಿನ ಹಾಸ್ಯ ಪ್ರಸಂಗಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ಗಣಿತ ಟ್ಯೂಷನ್ನಿನ ಹಾಸ್ಯ ಪ್ರಸಂಗಗಳು… ಬಸವನಗೌಡ ಹೆಬ್ಬಳಗೆರೆ ಸರಣಿ

ಸುಧಾಕರನ ಅಣ್ಣನ ದಿನಚರಿಯೇ ವಿಶೇಷ ಎನಿಸುತ್ತಿತ್ತು. ಅವರು ಮಿತ ಭಾಷಿ, ಏಕಾಂಗಿಯಾಗಿರ್ತಾ ಇದ್ರು. ರಾತ್ರಿ 10 ಕ್ಕೆ ಓದಲು ಕುಳಿತರೆ ಬೆಳಗಿನ ಜಾವ 5 ಗಂಟೆಯವರೆಗೂ ಓದೋದು. ಮತ್ತೆ 5 ಕ್ಕೆ ಮಲಗಿ 10 ಗಂಟೆಗೆ ಎದ್ದು ಕಾಲೇಜಿಗೆ ಹೋಗೋರು. ಇದೇ ರೀತಿಯಾಗಿ ನಮ್ಮ ಹಾಸ್ಟೆಲ್ಲಿನ ಎಂಜಿನಿಯರಿಂಗ್ ಹುಡುಗರು ಓದ್ತಾ ಇದ್ರು. ಈ ರೀತಿ ರಾತ್ರಿಯಿಡೀ ಓದೋಕೆ ‘ನೈಟ್ ಔಟ್ ಮಾಡೋದು’ ಎಂಬ ಪದ ಬಳಸ್ತಾ ಇದ್ರು. ಹಾಸ್ಟೆಲ್ಲಿನ ಮಧ್ಯಭಾಗದಲ್ಲಿದ್ದ ಫೀಲ್ಡಿನಲ್ಲಿ ಸ್ಟಡಿ ಚೇರ್ ಹಾಕ್ಕೊಂಡು ಕುಳಿತು ಓದೋಕೆ ಶುರು ಮಾಡ್ತಿದ್ರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

read more
ಕನಸು ಬಿತ್ತಿ ನನಸಾಗಿಸಿದ ಕುಸುಮಕ್ಕ: ರಂಜಾನ್‌ ದರ್ಗಾ ಸರಣಿ

ಕನಸು ಬಿತ್ತಿ ನನಸಾಗಿಸಿದ ಕುಸುಮಕ್ಕ: ರಂಜಾನ್‌ ದರ್ಗಾ ಸರಣಿ

ಅವರು ಉತ್ತರ ಕನ್ನಡದ ಎಲ್ಲೆಂದರಲ್ಲಿ ಹೋರಾಟದ ಮುಂಚೂಣಿಯಲ್ಲಿರುತ್ತಿದ್ದರು. ಒಂದು ಕಡೆ ಮಹಿಳೆಯರ ಸಂಘಟನೆ. ಇನ್ನೊಂದು ಕಡೆ ಸಾಕ್ಷರತಾ ಸಭೆ, ಮತ್ತೊಂದು ಕಡೆ ದೇಶೀಯ ಔಷಧಿಗಳ ಮಹತ್ವದ ಕುರಿತು ಮಾತನಾಡುವುದು, ಇನ್ನೊಂದು ಕಡೆ ಸರಳ ಜೀವನ ವಿಧಾನದ ಬಗ್ಗೆ ತಿಳಿ ಹೇಳುವುದು. ಹೀಗೆ ನಮ್ಮ ಕುಸುಮಕ್ಕನ ಅವತಾರಗಳು ಬಹಳವಾಗಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 91ನೇ ಕಂತು ನಿಮ್ಮ ಓದಿಗೆ

read more
ದೊಡ್ಡಬೊಮ್ಮಸಂದ್ರ ಪುರ ಪ್ರವೇಶ: ಎಚ್. ಗೋಪಾಲಕೃಷ್ಣ ಸರಣಿ

ದೊಡ್ಡಬೊಮ್ಮಸಂದ್ರ ಪುರ ಪ್ರವೇಶ: ಎಚ್. ಗೋಪಾಲಕೃಷ್ಣ ಸರಣಿ

ಅಲ್ಲೊಂದು ಮೂಲೆಯಲ್ಲಿ ತೆಂಗಿನ ತಡಿಕೆ, ಸೊಂಟದಷ್ಟು ಎತ್ತರ. ಒಳಗಡೆ ಒಂದು ಗಂಡಸು. ಉರಿಯುತ್ತಿರುವ ಸೀಮೆ ಎಣ್ಣೆ ಸ್ಟೋವು. ಆಗ ಒಂದು ಕಡೆ ಸೀಮೆ ಎಣ್ಣೆ ತುಂಬಲು ಒಂದು ಸಿಲಿಂಡರ್ ಆಕಾರದ ಡಬ್ಬ ಮತ್ತು ಅದಕ್ಕೆ ಅಂಟಿದ ಹಾಗೆ ಸೀಮೆ ಎಣ್ಣೆ ಉರಿಯ ಬರ್ನರ್ ಇರುವ ಒಲೆ ತುಂಬಾ ಪಾಪ್ಯುಲರ್. ಅದರ ಮೇಲೆ ಒಂದು ಬಾಂಡಲಿ ಮತ್ತು ಕುದಿ ಎಣ್ಣೆ ಒಳಗೆ ಬೋಂಡಾ. ಒಬ್ಬ ಸ್ಟೋವಿನ ಆಕಡೆ ಕೂತು ಕೈಯಲ್ಲಿ ಪುಟ್ಟ ಜಾಲರಿ ಸೌಟು ಹಿಡಿದು ಕೂತು ಬೋಂಡಾ ಕರೀತಾ ಕೂತಿದ್ದಾನೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

read more
ಫ್ರೂಟ್ ಕಟರ್ ಕರುಣಿಸಿದ ದಾನಿ ಪಟ್ಟ!: ಪೂರ್ಣೇಶ್‌ ಮತ್ತಾವರ ಸರಣಿ

ಫ್ರೂಟ್ ಕಟರ್ ಕರುಣಿಸಿದ ದಾನಿ ಪಟ್ಟ!: ಪೂರ್ಣೇಶ್‌ ಮತ್ತಾವರ ಸರಣಿ

ಕೆಲವರು ಕಬ್ಬಿಣದ ರಾಡ್‌ನ ಒಂದು‌ ತುದಿಗೆ ವೈರ್ ಕಟ್ಟಿ ಮತ್ತೊಂದು ತುದಿಯನ್ನು ನೀರಲ್ಲಿ ಬಿಟ್ಟು ಪರ್ಯಾಯ ವಾಟರ್ ಹೀಟರ್ ಮಾಡಿಕೊಂಡರೆ ಮತ್ತೆ ಕೆಲವರು ಪೆನ್ಸಿಲ್‌ನ ತುದಿಗೆ ಸೂಪರ್ ಮ್ಯಾಕ್ಸ್ ಬ್ಲೇಡ್ ಸಿಕ್ಕಿಸಿ ಪರ್ಯಾಯ ರೆಡಿ ಶೇವರ್ ಮಾಡಿಕೊಂಡು ಬಿಡುತ್ತಿದ್ದರು. ಮುಂದುವರೆದು, ಐರನ್ ಬಾಕ್ಸನ್ನು ಕಾಯಿಸಿ ಅದರ ಮೇಲೆ ಮೊಟ್ಟೆ ಹೊಯ್ದು ಅದನ್ನು ಪರ್ಯಾಯ ಆಮ್ಲೆಟ್ ಪ್ಯಾನ್ ಮಾಡ ಹೊರಟ ಮಹನೀಯರೂ ಇದ್ದರು.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಏಳನೆಯ ಬರಹ

read more
ನಾಲ್ಗೆ ಚಪ್ಲ ತೀರಿಸ್ತಿದ್ದ ತಿಂಡಿಗ್ಳು: ಸುಮಾ ಸತೀಶ್ ಸರಣಿ

ನಾಲ್ಗೆ ಚಪ್ಲ ತೀರಿಸ್ತಿದ್ದ ತಿಂಡಿಗ್ಳು: ಸುಮಾ ಸತೀಶ್ ಸರಣಿ

ಹಬ್ದಾಗೆ ಒಬ್ಬಟ್ಟು‌ ಮಾಡ್ದಾಗೆಲ್ಲಾ‌ ಒಬ್ಬಟ್ಟಿನ್ ಸಾರೂ ಮಾಡ್ತಿದ್ರು. ಒಬ್ಬಟ್ ಎಂಗೆ ಪಿರೂತೀನೋ ಆ ಸಾರೂ ಆಟೇಯಾ. ಒಬ್ಬಟ್ಟು ಸೀಗಿರ್ತಿತ್ತಲ್ಲ, ಅದುಕ್ಕೆ ನಮ್ಮನ್ಯಾಗೆ ಎಲ್ರೂವೇ ಸಾರು ಹಾಕ್ಕಂಡು ತಿನ್ನಾರು.‌ ನಂಗೇ ಮಾತ್ರ ಅದು‌ ಹಿಡುಸ್ತಿರ್ಲಿಲ್ಲ. ನಾನು ಹಾಲೂ ತುಪ್ಪ ಹಾಕ್ಕಂಡೇ ತಿಂಬ್ತಿದ್ದೆ.‌‌
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಆಗಿನ ಕಾಲದ ತಿಂಡಿಗಳ ಕುರಿತ ಬರಹ ನಿಮ್ಮ ಓದಿಗೆ

read more
ವಿಭಜನೆ, ಅಸ್ತಿತ್ವವಾದ ಮತ್ತು ಪೋಲಂಡ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ವಿಭಜನೆ, ಅಸ್ತಿತ್ವವಾದ ಮತ್ತು ಪೋಲಂಡ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಈಗಿನ ಕಾಲಘಟ್ಟದಲ್ಲಿ ಪೋಲಂಡ್‌ನ ಸಾಂಸ್ಕೃತಿಕ ಬಹುತ್ವ ಕ್ಷೀಣಿಸತೊಡಗಿದೆ. ನಗರಕೇಂದ್ರಿತವಾದ ಸಂಸ್ಕೃತಿಯೇ ಪ್ರಾಬಲ್ಯ ಮೆರೆಯುತ್ತಾ, ಎಲ್ಲರ ಜೀವನ ವಿಧಾನವನ್ನು ಅದೇ ಬಗೆಯಲ್ಲಿ ರೂಪಿಸತೊಡಗಿದೆ. ಪೋಲಂಡ್‌ನ ಆಧುನಿಕ ಮಾಧ್ಯಮಗಳೂ ಸಹ ಏಕರೂಪದ ಸಂಸ್ಕೃತಿಯೆಡೆಗೆ ಒತ್ತು ನೀಡುತ್ತಿವೆ. ಪೋಲಂಡ್‌ನ ಪರಂಪರೆಯನ್ನು ಸಂರಕ್ಷಿಸಬೇಕೆಂಬ ಮನೋಭಾವದ ಕೆಲವರು ಜಾನಪದ ಸಂಸ್ಕೃತಿಯಲ್ಲಿ ಕಂಡುಬರುವ ಧಾರ್ಮಿಕ ಸಂಗತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಪೋಲಂಡ್‌ ದೇಶದ ಕುರಿತ ಬರಹ ನಿಮ್ಮ ಓದಿಗೆ

read more
‘ಮೈಕ್ರೊಗ್ರಾಮ್’ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

‘ಮೈಕ್ರೊಗ್ರಾಮ್’ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಚಲಿಸುವ ಹಿಮದಂತೆ ಕಾಣುವ ಫ್ಲೆಮಿಂಗೊ ಪಕ್ಷಿಯ ಉತ್ಸಾಹ, ಕಳ್ಳಿಗಿಡದ ಸಸ್ಯಜನ್ಯ ಮಾನವದ್ವೇಷ, ಮರದಲ್ಲಿ ಕಂಬಳಿಹುಳಗಳು ನಡೆಸುವ ಗುಪ್ತಕಾರ್ಯ – ಇವೆಲ್ಲ ನನ್ನನ್ನು ಪಕ್ಷಿಗಳ ವರ್ಣಮಾಲೆಯನ್ನು ಅರ್ಥಮಾಡಿಕೊಳ್ಳಲು ಬ್ರಹ್ಮಾಂಡದ ಏಣಿಯ ಮೇಲೆ ಏರಲು ಕರೆದೊಯ್ದವು; ಇವು ಈ ಗ್ರಹದ ಆಧ್ಯಾತ್ಮಿಕ ಕ್ರಮವನ್ನು ಕಾಪಾಡುವ ಉಚ್ಛ ಸಂಕೇತಗಳಾಗಿವೆ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

read more
ಸಾದೃಶಾಭಾಸ ಪದಗಳೊಂದಿಗೆ ಸೆಣಸಾಟ: ಸುಮಾವೀಣಾ ಸರಣಿ

ಸಾದೃಶಾಭಾಸ ಪದಗಳೊಂದಿಗೆ ಸೆಣಸಾಟ: ಸುಮಾವೀಣಾ ಸರಣಿ

ಮಕ್ಕಳಿಗೆ ಕನ್ನಡ ಪುಸ್ತಕವನ್ನು ಓದುವುದೆಂದರೆ ಬಹಳ ತ್ರಾಸಿನ ಕೆಲಸ. ಕಾರ್ಟೂನನ್ನು ನೋಡಿದ ಗುಂಗಿನಲ್ಲಿ ಇದ್ದ ಮಗುವೊಂದು ಸಭಾಸದ ಎಂದೋದಲು ಸಬಾಸ್ಟಿಯನ್ ಎಂದು ಓದಿದ್ದು ನೆನಪಾಗುತ್ತದೆ. ಎಲೆ ಅಡಿಕೆ ಮೆಲ್ಲುತ್ತಿದ್ದ ಎಂದು ಓದಬೇಕಾದ್ದನ್ನು ಎಲೆ ಅಡಿಕೆ ಮೇಯುತ್ತಿದ್ದ ಎಂದರೆ ಆಭಾಸವೇ ತಾನೆ! ರಂಗ ನಾಯಕಿ > ಲಂಗನಾಯಕಿ, ಆಸ್ಥಾನದ ದಾಸಿ ಹಾಸನದ ಆಶ ಆಂದರೆ ರಕ್ಷಿಸ ಬೇಕು ಎನ್ನಲು ಹೋಗಿ ರಸ್ಕ್ ಬೇಕು ಎಂದರೆ ಎಲ್ಲಿಕೊಡಕ್ಕಾಗುತ್ತೆ?
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಏಳನೆಯ ಬರಹ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ