ಅನ್ನ, ನೀರಿಗೇಕೆ ಅನಾದರ ತೋರುವಿರಿ?: ಬಸವನಗೌಡ ಹೆಬ್ಬಳಗೆರೆ ಸರಣಿ
ದಿನಪತ್ರಿಕೆಯಲ್ಲಿ ಪ್ರಕಟವಾದ ಮಾಹಿತಿಯೊಂದರ ಪ್ರಕಾರ 2019 ರಲ್ಲಿ ಜಗತ್ತಿನಾದ್ಯಂತ 93.1 ಕೋಟಿ ಟನ್ನಷ್ಟು ಆಹಾರ ಪೋಲಾಗಿದೆ! ಇದೇ ವರ್ಷ 69 ಕೋಟಿ ಜನರು ಆಹಾರದ ಕೊರತೆ ಎದುರಿಸಿದ್ದಾರೆ!! ಇದರಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣವೇ ಹೆಚ್ಚು ಎಂಬ ವರದಿಯಿದೆ. ಭಾರತದಲ್ಲಿ ಮನೆಗಳಲ್ಲಿ ಪೋಲಾಗುವ ಆಹಾರದ ಪ್ರಮಾಣ ವಾರ್ಷಿಕ ತಲಾವಾರು 50 ಕೆಜಿಯಷ್ಟು ಎಂದು ಅಂದಾಜಿಸಲಾಗಿದೆಯಂತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ
ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಹೇಳಿದ್ದರೆ ಬದುಕು ಬದಲಾಗುತ್ತಿತ್ತಾ?: “ದಡ ಸೇರದ ದೋಣಿ” ಸರಣಿಯಲ್ಲಿ ಮಮತಾ ಅರಸೀಕೆರೆ ಬರಹ
ಇದು ಕೇವಲ ನನ್ನ ಆಲೋಚನೆಯಾದರೆ ಮಾತ್ರ ಸಾಕೆ. ಆ ಬದಿಯಲ್ಲೂ ನನ್ನ ಜೊತೆಯ ಬಾಂಧವ್ಯ ಘನತೆಯದೆಂದು ಅನಿಸಬೇಕಲ್ಲ, ನಂಬಿಕೆ ಬರಬೇಕಲ್ಲ ಎಂಬ ವಿಷಯ ಮಾರ್ದನಿಸುವಾಗ ಇದೆಲ್ಲಾ ಆಗದ ವಿಷಯ, ಗೊಂದಲ, ಸಿಕ್ಕು, ವಿಪರೀತ ಚಿಂತನೆಗಳಲ್ಲಿ ಮುಳುಗಿಹೋಗಿದ್ದಿದೆ. ಒಟ್ಟಿನಲ್ಲಿ ಈ ಅಭಿಪ್ರಾಯದ ವೈಪರೀತ್ಯ ಜಾಲದ ಮಧ್ಯೆ ಸಿಲುಕಿ ಕೊನೆಗೊಮ್ಮೆ ಏನೂ ಬೇಡವೆನಿಸಿ ತೆಪ್ಪಗಾಗುವುದು ಸೂಕ್ತವೇನೊ. ಬುದ್ಧಿ ಹಾಗೂ ಸ್ವಾಭಿಮಾನದ ಮಾತನ್ನು ನೆನಪಿಸಿಕೊಳ್ಳುತ್ತಾ ಶರಣಾಗತಿಯ ಮಾತು, ವ್ಯಕ್ತಪಡಿಸುವಿಕೆ ಅಸಹಜವೆಂದುಕೊಳ್ಳುವುದೂ ಅದೇ ವೇಳೆಗೆ ಪ್ರೇಮ, ಸ್ನೇಹವೇ ಬದುಕಿನ ಆತ್ಯಂತಿಕ ಉದ್ದೇಶ, ಅದಿಲ್ಲದೆ ಬದುಕು ಬರಡಾದೀತು ಅಂತಲೂ ಅನಿಸುವುದಿದೆ.
“ದಡ ಸೇರದ ದೋಣಿ” ಸರಣಿಯಲ್ಲಿ ಬಿ.ಎ. ಮಮತಾ ಅರಸೀಕೆರೆ ಬರಹ
ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ
ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ
ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ
ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ
ಉಪವಾಸ ವ್ರತದ ಅನುಭವಗಳು: ದರ್ಶನ್ ಜಯಣ್ಣ ಸರಣಿ
ನನ್ನ ಹೆಂಡತಿಯನ್ನು ತೋರಿಸಿ “ಆಕೆ ಕ್ಯಾರಿಯಿಂಗ್” ಅಂದೆ. ಆಕೆಯ ಮುಖ ಪೆಚ್ಚಾಯಿತು! ಅವಳ ಸೂಪರ್ವೈಸರ್ಗೆ ಫೋನಾಯಿಸಿ ಕೇಳಿದಳು. ಒಂದಷ್ಟು ಮಾತೂ ಕಥೆಯಾದಮೇಲೆ ಕೊಟ್ಟಳು. ನಾನು ಧನ್ಯವಾದ ಹೇಳಿ ಅದನ್ನು ಪಡೆದು ಕ್ಯಾಪ್ ತೆಗೆಯುವಾಗ “ಸರ್ ಮ್ಯಾಡಂ ಪ್ಲೀಸ್ ಅದನ್ನು ಇಲ್ಲಿ ಕುಡಿಯಬೇಡಿ” ಅಂದಳು. ನಾನು “ಇದು ಕ್ಯಾಂಟೀನ್, ಇಲ್ಲಿ ಬೇಡ ಎಂದರೆ ಹೊರಗೆ ಸಾಧ್ಯವೇ ಇಲ್ಲ” ಎಂದು ನನ್ನ ಅಸಹಾಯಕತೆ ತೋರಿದೆ. ಅದಕ್ಕವಳು ನನ್ನ ಹೆಂಡತಿಯನ್ನು ಕುರಿತು “ಮ್ಯಾಡಂ ನೀವು ಅದನ್ನು ನಿಮ್ಮ ವ್ಯಾನಿಟಿ ಬಾಗ್ನಲ್ಲಿ ಇಟ್ಟುಕೊಂಡು, ಟಾಯ್ಲೆಟ್ನ ಒಳಗೆ ಹೋಗಿ ಕುಡಿದು ಬನ್ನಿ ಪ್ಲೀಸ್!” ಅಂದಳು.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಆರನೆಯ ಕಂತು
ಮೌನ ಮಾತಾಡಿದಾಗ ಹೊತ್ತಾಗಿತ್ತು: “ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ
ಇದ್ದಕ್ಕಿದ್ದಂತೆ ರಾಮಕೃಷ್ಣ ನನ್ನನ್ನು ಹುಡುಕಿಕೊಂಡು ಬಂದ, ಅಳುತ್ತಿದ್ದ, ಏನಾಯ್ತು ಎಂದರೆ “ಸುಮಾಳ ಮದುವೆ ಫಿಕ್ಸ್ ಆಯಿತು.. ಹುಡುಗ ದೆಹಲಿಯಲ್ಲಿದ್ದಾನೆ. ಸಿಕ್ಕಾಪಟ್ಟೆ ದೊಡ್ಡ ಉದ್ಯೋಗವಂತೆ” ಎಂದವನೇ “ನನ್ನನ್ನು ಕ್ಷಮಿಸು, ನಿನಗೂ ಅನ್ಯಾಯ ಮಾಡಿದೆ. ನಿನಗೆ ಅಶ್ವಿನಿಯ ಮೇಲೆ ಮನಸ್ಸಾದರೆ ಸುಮಾ ನನ್ನನ್ನು ಒಲಿಯಬಹುದು ಅಂದುಕೊಂಡೆ” ಎಂದವನೇ ಅಪ್ಪಿ ಅಳತೊಡಗಿದ. ನಾನು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಮದುವೆಗೆ ಆಮಂತ್ರಣವೂ ಬರಲಿಲ್ಲ. ಮುಕೇಶ್ ನೆನಪಾದ. ಹಾಡಬೇಕೆಂದರೆ ಕೇಳುವವರು ಯಾರು ಎಂದೆನಿಸಿತು.
“ದಡ ಸೇರದ ದೋಣಿ” ಸರಣಿಯಲ್ಲಿ ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ
ಮಲೆನಾಡ ಸಂಪತ್ತು, ಗೋ ಸಂಪತ್ತು: ರೂಪಾ ರವೀಂದ್ರ ಜೋಶಿ ಸರಣಿ
ನಮಗೆಲ್ಲ ಮನುಷ್ಯರಿಗಿಂತ ಕೊಟ್ಟಿಗೆಯಲ್ಲಿರುತ್ತಿದ್ದ ದನ ಕರುಗಳ ಜೊತೆಗೇ ಹೆಚ್ಚು ಸ್ನೇಹ. ನಮ್ಮ ಕೊಟ್ಟಿಗೆಯಲ್ಲಿ ಸುಮಾರು ಹತ್ತು ಹದಿನೈದು ದನಗಳಿದ್ದವು. ಅವೆಲ್ಲವಕ್ಕೂ ಒಂದೊಂದು ಹೆಸರು. ಆಯಿ ಕೊಟ್ಟಿಗೆಯ ಹೊರಗೆ ನಿಂತು, ಅವುಗಳಲ್ಲಿ ಯಾವುದಾದರೂ ಒಂದರ ಹೆಸರು ಹಿಡಿದು ಕರೆದರೆ ಸಾಕು. ಅವು ತಕ್ಷಣ “ಅಂಬಾ” ಎಂದು ದನಿಯೆತ್ತಿ ಓಗುಡುತ್ತಿದ್ದವು. ನಮ್ಮಲ್ಲಿ ಆಕಳು ಕರು ಹಾಕಿತೆಂದರೆ, ನಮಗೆ ಎಲ್ಲಿಲ್ಲದ ಸಂಭ್ರಮ. ಮೊದಲು ಅದಕ್ಕೊಂದು ಚಂದವಾದ ಹೆಸರಿಡುವುದು. ಅದು ಬೆಳಗ್ಗೆ ಹೊಟ್ಟೆ ತುಂಬ ಹಾಲು ಕುಡಿದು ಇಡೀ ಕೊಟ್ಟಿಗೆ ತುಂಬ ಮರಿ ಜಿಂಕೆಯಂತೇ ಜಿಗಿಯುತ್ತ ಓಡುವುದನ್ನು ನೋಡುವುದೇ ಒಂದು ಸಂಭ್ರಮ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ನಾಲ್ಕನೆಯ ಕಂತು
ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ
ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ









