ದಿನಗೂಲಿ ನೌಕರರ ಮಹಾತ್ಮ: ರಂಜಾನ್ ದರ್ಗಾ ಸರಣಿ
‘ನ್ಯಾಯನಿಷ್ಠುರಿ, ಲೋಕವಿರೋಧಿ, ಶರಣನಾರಿಗೂ ಅಂಜುವವನಲ್ಲʼ ಎಂಬಂಥ ವ್ಯಕ್ತಿತ್ವ ಅವರದು. ಹೀಗೆ ಮಾತನಾಡಿದರೆ ಆಡಳಿತ ವರ್ಗಕ್ಕಾಗಲೀ ರಾಜ್ಯಶಕ್ತಿಗಾಗಲೀ ತಮ್ಮ ಬಗ್ಗೆ ಯಾವ ಭಾವನೆ ಮೂಡಬಹುದು; ಅದರಿಂದ ತಮಗೆ ಯಾವ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವನ್ನು ಅವರು ಎಂದೂ ಹಾಕಿದವರಲ್ಲ. ಮನುಷ್ಯರ ಬಗ್ಗೆ ಇರುವ ಅವರ ಕಾಳಜಿಯೆ ಅಂಥದ್ದು. ಆ ಕಾಲದಲ್ಲಿ ಅವರು ಒಂದು ರೀತಿಯ ಏಕಾಂಗವೀರರಾಗಿದ್ದರು. ಸದಾ ಕ್ರಿಯಾಶೀಲವಾಗಿರುವ ಅವರ ವ್ಯಕ್ತಿತ್ವ ನನ್ನಂಥವರ ಮೇಲೆ ಆಳವಾದ ಪರಿಣಾಮ ಬೀರಿತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ
ಭಯೋತ್ಪಾದಕರ ಕೈಯಲ್ಲಿ ಕ್ರೀಡಾಪಟುಗಳು!: ಕಾರ್ತಿಕ್ ಕೃಷ್ಣ ಸರಣಿ
ಇಸ್ರೇಲಿ ಕ್ರೀಡಾಪಟುಗಳನ್ನು ಹೇಗಾದರೂ ರಕ್ಷಿಸಬೇಕೆಂದು ಜರ್ಮನ್ ಅಧಿಕಾರಿಗಳು ಫರ್ಸ್ಟೆನ್ಫೆಲ್ಡ್ಬ್ರಕ್ ವಾಯುನೆಲೆಯಲ್ಲಿ ಒಂದು ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿದರು. ಭಯೋತ್ಪಾದಕರು ಮತ್ತು ಒತ್ತೆಯಾಳುಗಳನ್ನು ಆ ವಾಯುನೆಲೆಯಿಂದ ಹೆಲಿಕಾಪ್ಟರ್ ಮೂಲಕ ಸಾಗಿಸುವುದು ಆ ಯೋಜನೆಯ ಭಾಗವಾಗಿತ್ತು. ಆಗ ನಡೆಯಿತು ನೋಡಿ ಮತ್ತೊಂದು ದುರಂತ! ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೂ, ರಕ್ಷಣಾ ಪ್ರಯತ್ನವು ಕಳಪೆಯಾಗಿ ಕಾರ್ಯಗತಗೊಂಡಿತ್ತು. ಜರ್ಮನ್ ಪೊಲೀಸರು ಅಂತಹ ಕಾರ್ಯಾಚರಣೆಯನ್ನು ನಿಭಾಯಿಸಲು ಶಕ್ತರಾಗಿರಲಿಲ್ಲ.
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ
ಅಪ್ಪನಿಗೇ ನನ್ನನ್ನು ಪರಿಚಯ ಮಾಡಿಕೊಂಡಿದ್ದೆ!: ಎಚ್. ಗೋಪಾಲಕೃಷ್ಣ ಸರಣಿ
ನಮ್ಮ ಅಪ್ಪಂಗೆ ಅವರ ಮಕ್ಕಳ ಪರಿಚಯವೇ ಇಲ್ಲ ಅಂತ ಅಮ್ಮ ಆಗಾಗ ಮನೆಗೆ ಬಂದವರೆಲ್ಲರ ಮುಂದೆ ಹೇಳುತ್ತಿದ್ದಳು. ಅಪ್ಪ ನನ್ನ ಗುರುತು ಹಿಡಿತಾನೋ ಇಲ್ಲವೋ ಅಂತ ನನ್ನ ತಲೆಗೆ ಆಗ ಹೊಳಿಬೇಕಾ..? ಅಪ್ಪ ನನ್ನನ್ನು ನೋಡಿದ್ರಾ, ಮುಂದೆ ಸರಿದೆ. ಅಪ್ಪಾ, ನಾನು ಗೋಪಿ ನಿಮ್ಮ ಕೊನೇ ಮಗ.. ಅಂತ ವಿವರಿಸಲು ಹೊರಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ
ಕೂರಾಪುರಾಣ ೬: ಪರಚುವ ಉಗುರುಗಳು ಮತ್ತು ಮೊಂಡು ನಾಯಿಗಳು
ನಾಯಿಗಳ ಸಲೂನಿನಲ್ಲಿ ಉಗುರುಗಳನ್ನು ಕತ್ತರಿಸುತ್ತಾರೆಂದು ಗೊತ್ತಾಗಿ ಅಲ್ಲಿಗೆ ಕರೆದುಕೊಂಡು ಹೋದೆವು. ಅಲ್ಲಿ ಅವನ ಯಾವ ತಂತ್ರಗಳು ನಡೆಯದೇ, ಆಕೆಗಿರುವ ಅನುಭವದಿಂದ ಉಗುರುಗಳನ್ನು ಕತ್ತರಿಸಿಯೇ ತೀರುತ್ತಾಳೆ ಎಂದು ನಾವು ಮನಸ್ಸಿನಲ್ಲಿ ಮಂಡಿಗೆ ಮೆಲ್ಲುತ್ತ ಹೊರಗೆ ಕಾಯುತ್ತಿದ್ದೆವು. ಸ್ವಲ್ಪ ಹೊತ್ತಿನ ನಂತರ ಹೊರಗೆ ಬಂದ ಆಕೆಯನ್ನು ನೋಡಿ ಬೆಟ್ಟದ ಚಾಮುಂಡಿದೇವಿಯೇ ದರ್ಶನ ಕೊಟ್ಟಂತಾಯಿತು. ಆದರೆ.. ಅವಳು ಸಹ ತನಗೆ ಆಗಲಿಲ್ಲ ಎಂದು ಕೂರಾನನ್ನು ಕರೆತಂದು ಕೊಟ್ಟು ಬಿಟ್ಟಳು!
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ಆರನೆಯ ಕಂತು
‘ಕಂಪ್ಯೂಟರ್’ಗೇ ಪಾಠ ಕಲಿಸಿದ ‘ಮೃತ್ಯು!’: ಪೂರ್ಣೇಶ್ ಮತ್ತಾವರ ಸರಣಿ
ಇನ್ನೂ ಕಂಪ್ಯೂಟರ್ ಸರ್ರ ವರ್ಣನೆಯನ್ನೆಲ್ಲಾ ಕೇಳಿ ಅವರೆಂದೂ ನಗು ಮೊಗದಿಂದ ಪಾಠ ಮಾಡಲೇ ಇಲ್ಲವೆಂದು ತಿಳಿಯಬೇಡಿ. ನಮ್ಮ ಕಂಪ್ಯೂಟರ್ ಸರ್ರಂತಹ ಕಂಪ್ಯೂಟರ್ ಸರ್ ಕೂಡ ನಗು ಮೊಗದೊಂದಿಗೆ ಪಾಠ ಹೇಳಿ ಕೊಡುವ ರಸ ಗಳಿಗೆಗಳಿಗೆ ನಾವು ಸಾಕ್ಷೀಭೂತರಾಗಿದ್ದೆವು. ಆದರೆ, ಆ ಅದೃಷ್ಟ ಇದ್ದದ್ದು ಮಾತ್ರ ನಮಗಲ್ಲ. ಬದಲಿಗೆ, ಕೆಲದಿನಗಳ ಮಟ್ಟಿಗೆ ಪಕ್ಕದ ಶೃಂಗೇರಿಯಿಂದ ಬರುತ್ತಿದ್ದ, ನೋಡಲು ಸುರಸುಂದರಿಯಂತಿದ್ದ ಅತಿಥಿ ಶಿಕ್ಷಕಿಯೊಬ್ಬರಿಗೆ ಮಾತ್ರ!
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎರಡನೆಯ ಬರಹ
ನಮ್ಮೂರಿನ ಕತೆಗಳು: ಸುಮಾ ಸತೀಶ್ ಸರಣಿ
ಅವರ ಮನ್ಯಾಗೆ ಲೆಟ್ರಿನ್ ಇತ್ತು. ಇಲ್ಲಿ ಬಯಲಿಗೆ ಹೋಗೋಕೆ ಸುತ್ರಾಂ ಒಪ್ತಿಲ್ಲ. ಚೊಂಬು ಹಿಡಿಯಾಕಿಲ್ಲ ಅಂದ್ಲು. ಕೊನೀಗೆ ಸಣ್ಣ ಹುಡ್ಗಿ ಅಂತ ನನ್ನ ಅವಳ ಹಿಂದೆ ಚೊಂಬು ಹಿಡ್ಕೊಂಡು ಮೆರವಣಿಗೆ ಕಳಿಸಿದ್ರು. ಥೋ, ನಂಗೋ ಕೋಪ. ಅವಳ ಹಿಂದೆ ಹೋಗಿ, ಚೊಂಬು ಕೊಟ್ಟೆ. ಆ ನೀರು ಸಾಲಲಿಲ್ಲ ಅಂತ ಅಲ್ಲೇ ಕುಂತ್ಲು. ಇನ್ನೊಂದು ಚೊಂಬು ತರಾಣಿ ಅಂತ ಹೊಂಟ್ರೇ, ಚೊಂಬು ಸಾಲಾಕಿಲ್ಲ, ಬಿಂದಿಗೇಲಿ ತತ್ತಾ ಅಂತ ಹಠ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮೂರಿನ ಕುರಿತ ಬರಹ
ತಿಳಿವಳಿಕೆಯ ಚಳುವಳಿಗಳಿಂದ ಅರಳಿನಿಂತ ಫ್ರಾನ್ಸ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ
ಫ್ರಾನ್ಸ್ ಕಲಾವಲಯದ ಕುರಿತ ವಿವರಣೆಯು ಪ್ಯಾಬ್ಲೋ ಪಿಕಾಸೊ ಅವರ ಪ್ರಸ್ತಾಪವಿಲ್ಲದೆ ಪೂರ್ಣವಾಗಲಾರದು. ಶಿಲ್ಪಕಲೆಯನ್ನು ಪ್ರಧಾನವಾಗಿಸಿಕೊಂಡು ಇತರ ಕಲೆಗಳಲ್ಲಿಯೂ ತೊಡಗಿಸಿಕೊಂಡ ಇವರು ಸ್ಪೇನ್ ಮೂಲದವರು. ಇಪ್ಪತ್ತನೇ ಶತಮಾನದ ಫ್ರಾನ್ಸ್ ಶಿಲ್ಪಕಲೆಯ ಮೊದಲ ಅರ್ಧಭಾಗ ಪಿಕಾಸೊ ಅವರಿಗೆ ಮೀಸಲಾಗಿದೆ. ‘ಮ್ಯಾನ್ ವಿದ್ ಅ ಲ್ಯಾಂಬ್’ ಎನ್ನುವ ಅವರ ಶಿಲ್ಪಕಲಾ ಕೆತ್ತನೆಯಲ್ಲಿ ಮಾನವೀಯತೆ ಅಭಿವ್ಯಕ್ತಗೊಂಡಿದ್ದರೆ, ‘ಡೆತ್ಸ್ ಹೆಡ್’ ಎನ್ನುವ ಕೆತ್ತನೆಯು ಯುದ್ಧದ ಭೀಕರತೆಯನ್ನು ಮನದಟ್ಟು ಮಾಡಿಕೊಡುವಂತಿದೆ.
ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ
ಸಿಸಿಇ-ಹೊಸ ಮೌಲ್ಯಮಾಪನ ಪದ್ಧತಿ…: ಅನುಸೂಯ ಯತೀಶ್ ಸರಣಿ
ಇನ್ನು ಪರೀಕ್ಷೆ ಮುಗಿಯುವವರೆಗೂ ಪುಸ್ತಕ ಕೆಳಗೆ ಇಡುವಂತಿಲ್ಲ. ಸದಾ ಕಾಲ ಪುಸ್ತಕವನ್ನು ಕೈಯಲ್ಲೇ ಹಿಡಿದಿರಬೇಕು” ಎಂದಿದ್ದೆ. ನನ್ನ ಮಾತಿನ ಸೂಕ್ಷ್ಮಾರ್ಥವನ್ನು ಗ್ರಹಿಸದ ಆ ಮಗು ಕೇವಲ ಪುಸ್ತಕವನ್ನು ಕೈಯಲ್ಲಿ ಹಿಡಿದು ನನ್ನ ಮಾತಿನ ಪರಿಪಾಲನೆ ಮಾಡಿದ್ದನು. ನನಗಾಗ ಅರ್ಥವಾಯಿತು. ಯಾವುದೇ ವಿಷಯವನ್ನು ಮಕ್ಕಳಿಗೆ ಮಾರ್ಮಿಕವಾಗಿ, ಗೂಡಾರ್ಥದಲ್ಲಿ ಅಸ್ವಷ್ಟವಾಗಿ ಹೇಳಬಾರದು ಎಂದು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
“ಧಂ”ಪತಿ ಮುಯ್ಯಿ: ಸುಮಾವೀಣಾ ಸರಣಿ
‘ಧಂ’ ಅಂದರೆ ಧೈರ್ಯ ಉಸಿರು ಎನ್ನುವ ಅರ್ಥವೂ ಇದೆ. ಹೊಸ ಮನೆ ಕಟ್ಟುವಾಗ ಮನೆ ಕಟ್ಟುವವರಿಗೆ, ಪಕ್ಕದ ಸೈಟವರಿಗೆ ಕಾಂಪೌಂಡ್ಗೆ ಜಾಗ ಬಿಡುವ ವಿಚಾರದಲ್ಲಿ ತಕರಾರು ಇದ್ದೇ ಇರುತ್ತದೆ. ಆಗ ಪರಸ್ಪರೂ ‘ಧಮ್’ ಇದ್ದರೆ ಕಟ್ಟು ನೋಡೋಣ ಅಂದರೆ ಪ್ರತಿಯಾಗಿ ಇನ್ನೊಬ್ಬ ‘ಧಮ್’ ಇದ್ದರೆ ನಿಲ್ಲಿಸು ನೋಡೋಣ ಎನ್ನುವ ಸವಾಲುಗಳು ಪ್ರತಿ ಸವಾಲುಗಳನ್ನು ಹಾಕಿಯೇ ಇರುತ್ತಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಎರಡನೆಯ ಬರಹ










