Advertisement

ಸರಣಿ

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

read more
ಕೂರಾಪುರಾಣ ೪: ಸೂಜಿಗಳೆಂದರೆ ಸಂಕಷ್ಟವೇ…

ಕೂರಾಪುರಾಣ ೪: ಸೂಜಿಗಳೆಂದರೆ ಸಂಕಷ್ಟವೇ…

ಎರಡು ನಿಮಿಷಗಳ ಕಾಲ ಕೂರಾ ಅವಳನ್ನು ನಮ್ಮೊಡನೆ ಮಾತನಾಡಲು ಬಿಡಲೇ ಇಲ್ಲ. ಅವಳ ಮೇಲೆ ಹತ್ತುವುದು, ಅವಳ ಸುತ್ತ ಸುತ್ತುವುದು, ಅವಳ ಕೆನ್ನೆಯನ್ನು ನೆಕ್ಕುವುದು.. ಎಲ್ಲ ಮಾಡುತ್ತಿದ್ದ. ಒಳಗೆ ಬಂದಾಗ ಆಕೆ ಅವನಿಗೆ ಒಂದೆರಡು ಟ್ರೀಟಿನ ತುಂಡುಗಳನ್ನು ಕೊಟ್ಟಿದ್ದಳು. ಇದೆಲ್ಲ ಅವಳನ್ನು ಒಲಿಸಲಿಕ್ಕೆ ಮತ್ತು ಇನ್ನೆರಡು ತುಂಡುಗಳನ್ನು ಪಡೆಯಲಿಕ್ಕೆ ಎಂದು ನಮಗೆ ಗೊತ್ತಿತ್ತು. ನಿಧಾನವಾಗಿ ಆಕೆ ನಮ್ಮೊಡನೆ ಮಾತನಾಡುತ್ತ ನಾಯಿಗಳ ಆರೋಗ್ಯದ ಬಗ್ಗೆ ವಿವರಿಸತೊಡಗಿದಳು.
ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಸರಣಿಯ ನಾಲ್ಕನೆಯ ಕಂತು

read more
ಸಿಂಗಾಪುರವೆಂಬ ಶಿಸ್ತಿನ ಸಿಪಾಯಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ  ಸರಣಿ

ಸಿಂಗಾಪುರವೆಂಬ ಶಿಸ್ತಿನ ಸಿಪಾಯಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಿಂಗಾಪುರ ಶಿಸ್ತಿನ ದೇಶ ಎನ್ನುವುದನ್ನು ಸಮರ್ಥಿಸಬಲ್ಲಂತಹ ಅನೇಕ ವಿಚಾರಗಳಿವೆ. ಅತ್ಯಂತ ಸಣ್ಣ ಸಂಗತಿಗಳನ್ನೂ ನಿಯಮಗಳಿಗೆ ಒಳಪಡಿಸುವುದು ಸಿಂಗಾಪುರದ ಮೂಲಭೂತ ಗುಣ. ಇದಕ್ಕೆ ನಿದರ್ಶನವಾಗಿ ಕೆಲವು ಅಂಶಗಳನ್ನು ಗಮನಿಸಿಕೊಳ್ಳಬಹುದು. ಚ್ಯೂಯಿಂಗ್ ಗಮ್ ಅನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಷ್ಟ್ರ ಸಿಂಗಾಪುರ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಸಿಂಗಾಪುರ ದೇಶದ ಕುರಿತ ಬರಹ

read more
ಮಕ್ಕಳ ಮನಸ್ಸಿನ ಮೇಲೆ ಸಂಬಂಧಗಳ ಪ್ರಭಾವಗಳು…: ಅನುಸೂಯ ಯತೀಶ್ ಸರಣಿ

ಮಕ್ಕಳ ಮನಸ್ಸಿನ ಮೇಲೆ ಸಂಬಂಧಗಳ ಪ್ರಭಾವಗಳು…: ಅನುಸೂಯ ಯತೀಶ್ ಸರಣಿ

ಆ ಹುಡುಗನನ್ನು ಹತ್ತಿರ ಕರೆದು ನಿನಗೆ ಅಮ್ಮ ಇಲ್ಲದಿದ್ದರೇನು ನಾನು ನಿನ್ನ ಅಮ್ಮನಂತೆ, ನಾನು ನಿನ್ನನ್ನು ಪ್ರೀತಿಸುವುದಿಲ್ಲವೇ? ಎಂದು ಸಮಾಧಾನ ಮಾಡಿದೆ. “ನಾನು ಮರೆತರು ಇವರೆಲ್ಲ ನನ್ನನ್ನು ಮರೆಯಲು ಬಿಡುವುದಿಲ್ಲ ಮಿಸ್. ದಿನ ದಿನ ನೆನೆಸಿ ನೆನೆಸಿ ನನ್ನನ್ನು ಅಳಿಸುತ್ತಾರೆ ಎಂದ. ಈಗ ನಿನ್ನ ಗೆಳೆಯರು ಒಳ್ಳೆಯವರಾಗಿದ್ದಾರೆ. ಇನ್ಮೇಲೆ ಅವರು ನಿನ್ನ ಹೀಗೆಲ್ಲ ಅಳಿಸುವುದಿಲ್ಲ ಇನ್ನು ಮುಂದೆ ನಿನ್ನ ಜೊತೆ ಇರುತ್ತಾರೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

read more
ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಹೆಯ್ಕೊನೆನ್ ಅವರ ಕಾವ್ಯದಲ್ಲಿ ಪ್ರಕೃತಿಯು ಜೀವದಿಂದ ತುಂಬಿದೆ; ಅದಕ್ಕೆ ಕಣ್ಣುಗಳಿವೆ, ಮೂಗುಗಳಿವೆ (‘ಮಾನವ ತವಕದ ವಾಸನೆ ಬರುತಿದೆ’), ಆದರೆ ಅದೇ ಸಮಯದಲ್ಲಿ ಪ್ರಕೃತಿಯು ಮನುಷ್ಯರಿಂದ ಅಪಾಯಕ್ಕೊಳಗಾಗುತ್ತದೆ. ಅಂತರಿಕ್ಷವೂ ಸುರಕ್ಷಿತವಾಗಿಲ್ಲ; ಸ್ಪುಟ್ನಿಕ್ ಮತ್ತು ಕೀಲು ಸಡಿಲವಾಗಿಹೋದ ಉಪಗ್ರಹಗಳ ಜತೆಗೆ ನಾಯಿ ಲಾಯ್ಕಾ ಒಂದು ಜೀವಂತ ಕಾವಲುನಾಯಿಯಂತೆ ಮುಂದಿನ ಶತಮಾನಗಳವರೆಗೆ ಅಂತರಿಕ್ಷದಲ್ಲಿ ತೇಲುತ್ತಲಿರುತ್ತವೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

read more
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ ಇಂದಿನಿಂದ

ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ ಇಂದಿನಿಂದ

ಭವ್ಯವಾದ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಹಲವಾರು ಕ್ರೀಡಾಪಟುಗಳ ಕನಸು. ಅದನ್ನು ಸಾಕಾರಗೊಳಿಸಲು ಹಗಲಿರುಳು ಶ್ರಮಿಸುವ ಎಷ್ಟೋ ಅಥ್ಲೀಟ್‌ಗಳಲ್ಲಿ ಗುರಿಮುಟ್ಟುವುದು ಬೆರಳೆಣಿಕೆಯ ಮಂದಿಯಷ್ಟೇ! ಉಳಿದವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದೆ ತಮ್ಮ ಸೌಭಾಗ್ಯವೆಂದು ಮುಂದಿನ ನಾಲ್ಕು ವರುಷಗಳನ್ನು ಇನ್ನಷ್ಟು ತಯಾರಿಯೊಂದಿಗೆ ಕಳೆಯುತ್ತಾರೆ. ಸೋತವರು ಒಂದೆಡೆಯಾದರೆ, ಕೂದಲೆಳೆಯ ಅಂತರದಲ್ಲಿ ಪದಕ ವಂಚಿತರಾದವರು ಇನ್ನೊಂದೆಡೆ. ಇಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ, ದಾಖಲೆಗಳು ಧೂಳಿಪಟವಾಗುತ್ತವೆ. ಕಾರ್ತಿಕ್‌ ಕೃಷ್ಣ ಹೊಸ ಸರಣಿ “ಒಲಂಪಿಕ್ಸ್‌ ಅಂಗಣ” ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

read more
ಆಟದ ಸುತ್ತ ಒಂದು ಸುತ್ತು: ಚಂದ್ರಮತಿ ಸೋಂದಾ ಸರಣಿ

ಆಟದ ಸುತ್ತ ಒಂದು ಸುತ್ತು: ಚಂದ್ರಮತಿ ಸೋಂದಾ ಸರಣಿ

ಮಳೆಗಾಲ ಮುಗಿದ ಮೇಲೆ ಊರಿನ ಬೀದಿ ಶಾಲೆಯ ಅಂಗಳ, ದೇವಸ್ಥಾನದ ಮುಂದಿನ ಬಯಲು ಎಲ್ಲವೂ ನಮ್ಮ ಆಟಕ್ಕೆ ಸೂಕ್ತ ಎಂದು ಭಾವಿಸಿ ಆಡುತ್ತಿದ್ದೆವು. ಮುಟ್ಟಾಟ ಅಥವಾ ಹಿಡಿಯೋ ಆಟಕ್ಕೆ ಬಹಳ ಪ್ರಾಧಾನ್ಯವಿತ್ತು. ಅಟ್ಟಿಸಿಕೊಂಡು ಹೋಗಿ ಹಿಡಿಯುವುದು ಒಂಥರಾ ಖುಶಿ ಕೊಡುತ್ತಿತ್ತು. ಇದರ ಇನ್ನೊಂದ ರೂಪವೇ ʻಕೂತು ಹಿಡಿತಿಯೋ ನಿಂತು ಹಿಡಿತಿಯೋʼ ಎನ್ನುವುದು. ಕೇಳಿದಾಗ ನಿಂತು ಎಂದರೆ ನಿಂತಾಗ, ಇಲ್ಲವೆ ಕುಳಿತು ಎಂದರೆ ಕುಳಿತಾಗ ಅವರನ್ನು ಮುಟ್ಟಬೇಕು, ಆಗ ಅವರು ಆಟದಿಂದ ಹೊರಕ್ಕೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

read more
ಅಮೆರಿಕಾದ ಹುಡುಗ ರೈತನೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಅಮೆರಿಕಾದ ಹುಡುಗ ರೈತನೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಹೋದಹೋದಂತೆ ತಾವು ಮಾಡುತ್ತಿದ್ದ ಕೆಲಸವನ್ನೂ ಬಿಟ್ಟು, ಇದನ್ನೇ ಮಾಡಲು ತೊಡಗಿ ಸಿಕ್ಕಾಪಟ್ಟೆ ದುಡ್ಡು ಮಾಡಿದರಂತೆ. ಇದ್ದ ಒಬ್ಬನೇ ಮಗನಿಗೂ ಕೂಡ ಬೇರೆ ಕಡೆ ಯಾಕೆ ಕೆಲಸ ಮಾಡ್ತೀಯಾ ನನ್ನ ಕೃಷಿ ಕೆಲಸವನ್ನೇ ಮಾಡು ಅಂತ ಅವನನ್ನೂ ತಮ್ಮ ಜೊತೆಗೆ ಸೇರಿಸಿಕೊಂಡರು. ಮಗ ಮದುವೆಯ ವಯಸ್ಸಿಗೆ ಬಂದಾಗ ಭಾರತದಲ್ಲೇ ಒಂದು ಹುಡುಗಿಯನ್ನೂ ಹುಡುಕಿದರಂತೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೆರಡನೆಯ ಬರಹ

read more
ಸುಮಾ ಸತೀಶ್‌ ಹೊಸ ಸರಣಿ “ರಂಗಿನ ರಾಟೆ” ಆರಂಭ…

ಸುಮಾ ಸತೀಶ್‌ ಹೊಸ ಸರಣಿ “ರಂಗಿನ ರಾಟೆ” ಆರಂಭ…

ಹಳ್ಳಿಯೂರ ಬದುಕು ಹಗಲು-ರಾತ್ರಿಯ ಪರಿವಿಲ್ಲದೆ ಕತೆ ನೇಯುವ ಕಥಾಕಣಜ. ಸುಮಾ ಸತೀಶ್ ಇಂಥ ಕಣಜದ ಹತ್ತು ಹಲವು ಕತೆಗಳನ್ನು‌ “ರಂಗಿನ ರಾಟೆ” ಸರಣಿಯಲ್ಲಿ ಪ್ರತೀ ಬುಧವಾರ ಕೆಂಡಸಂಪಿಗೆಯ ಓದುಗರ ಮುಂದೆ ಇಡಲಿದ್ದಾರೆ. ಈ ಹೊಸ ಸರಣಿಯ ಮೊದಲ ಕಂತು ಇಲ್ಲಿದೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ