ಮಕ್ಕಳ ಮನಸ್ಸಿನ ಮೇಲೆ ಸಂಬಂಧಗಳ ಪ್ರಭಾವಗಳು…: ಅನುಸೂಯ ಯತೀಶ್ ಸರಣಿ
ಆ ಹುಡುಗನನ್ನು ಹತ್ತಿರ ಕರೆದು ನಿನಗೆ ಅಮ್ಮ ಇಲ್ಲದಿದ್ದರೇನು ನಾನು ನಿನ್ನ ಅಮ್ಮನಂತೆ, ನಾನು ನಿನ್ನನ್ನು ಪ್ರೀತಿಸುವುದಿಲ್ಲವೇ? ಎಂದು ಸಮಾಧಾನ ಮಾಡಿದೆ. “ನಾನು ಮರೆತರು ಇವರೆಲ್ಲ ನನ್ನನ್ನು ಮರೆಯಲು ಬಿಡುವುದಿಲ್ಲ ಮಿಸ್. ದಿನ ದಿನ ನೆನೆಸಿ ನೆನೆಸಿ ನನ್ನನ್ನು ಅಳಿಸುತ್ತಾರೆ ಎಂದ. ಈಗ ನಿನ್ನ ಗೆಳೆಯರು ಒಳ್ಳೆಯವರಾಗಿದ್ದಾರೆ. ಇನ್ಮೇಲೆ ಅವರು ನಿನ್ನ ಹೀಗೆಲ್ಲ ಅಳಿಸುವುದಿಲ್ಲ ಇನ್ನು ಮುಂದೆ ನಿನ್ನ ಜೊತೆ ಇರುತ್ತಾರೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ
ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ
ಹೆಯ್ಕೊನೆನ್ ಅವರ ಕಾವ್ಯದಲ್ಲಿ ಪ್ರಕೃತಿಯು ಜೀವದಿಂದ ತುಂಬಿದೆ; ಅದಕ್ಕೆ ಕಣ್ಣುಗಳಿವೆ, ಮೂಗುಗಳಿವೆ (‘ಮಾನವ ತವಕದ ವಾಸನೆ ಬರುತಿದೆ’), ಆದರೆ ಅದೇ ಸಮಯದಲ್ಲಿ ಪ್ರಕೃತಿಯು ಮನುಷ್ಯರಿಂದ ಅಪಾಯಕ್ಕೊಳಗಾಗುತ್ತದೆ. ಅಂತರಿಕ್ಷವೂ ಸುರಕ್ಷಿತವಾಗಿಲ್ಲ; ಸ್ಪುಟ್ನಿಕ್ ಮತ್ತು ಕೀಲು ಸಡಿಲವಾಗಿಹೋದ ಉಪಗ್ರಹಗಳ ಜತೆಗೆ ನಾಯಿ ಲಾಯ್ಕಾ ಒಂದು ಜೀವಂತ ಕಾವಲುನಾಯಿಯಂತೆ ಮುಂದಿನ ಶತಮಾನಗಳವರೆಗೆ ಅಂತರಿಕ್ಷದಲ್ಲಿ ತೇಲುತ್ತಲಿರುತ್ತವೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ
ಕಾರ್ತಿಕ್ ಕೃಷ್ಣ ಬರೆಯುವ “ಒಲಂಪಿಕ್ಸ್ ಅಂಗಣ” ಸರಣಿ ಇಂದಿನಿಂದ
ಭವ್ಯವಾದ ಉತ್ಸವದಲ್ಲಿ ಪಾಲ್ಗೊಳ್ಳುವುದೇ ಹಲವಾರು ಕ್ರೀಡಾಪಟುಗಳ ಕನಸು. ಅದನ್ನು ಸಾಕಾರಗೊಳಿಸಲು ಹಗಲಿರುಳು ಶ್ರಮಿಸುವ ಎಷ್ಟೋ ಅಥ್ಲೀಟ್ಗಳಲ್ಲಿ ಗುರಿಮುಟ್ಟುವುದು ಬೆರಳೆಣಿಕೆಯ ಮಂದಿಯಷ್ಟೇ! ಉಳಿದವರು ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ್ದೆ ತಮ್ಮ ಸೌಭಾಗ್ಯವೆಂದು ಮುಂದಿನ ನಾಲ್ಕು ವರುಷಗಳನ್ನು ಇನ್ನಷ್ಟು ತಯಾರಿಯೊಂದಿಗೆ ಕಳೆಯುತ್ತಾರೆ. ಸೋತವರು ಒಂದೆಡೆಯಾದರೆ, ಕೂದಲೆಳೆಯ ಅಂತರದಲ್ಲಿ ಪದಕ ವಂಚಿತರಾದವರು ಇನ್ನೊಂದೆಡೆ. ಇಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ, ದಾಖಲೆಗಳು ಧೂಳಿಪಟವಾಗುತ್ತವೆ. ಕಾರ್ತಿಕ್ ಕೃಷ್ಣ ಹೊಸ ಸರಣಿ “ಒಲಂಪಿಕ್ಸ್ ಅಂಗಣ” ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ
ಆಟದ ಸುತ್ತ ಒಂದು ಸುತ್ತು: ಚಂದ್ರಮತಿ ಸೋಂದಾ ಸರಣಿ
ಮಳೆಗಾಲ ಮುಗಿದ ಮೇಲೆ ಊರಿನ ಬೀದಿ ಶಾಲೆಯ ಅಂಗಳ, ದೇವಸ್ಥಾನದ ಮುಂದಿನ ಬಯಲು ಎಲ್ಲವೂ ನಮ್ಮ ಆಟಕ್ಕೆ ಸೂಕ್ತ ಎಂದು ಭಾವಿಸಿ ಆಡುತ್ತಿದ್ದೆವು. ಮುಟ್ಟಾಟ ಅಥವಾ ಹಿಡಿಯೋ ಆಟಕ್ಕೆ ಬಹಳ ಪ್ರಾಧಾನ್ಯವಿತ್ತು. ಅಟ್ಟಿಸಿಕೊಂಡು ಹೋಗಿ ಹಿಡಿಯುವುದು ಒಂಥರಾ ಖುಶಿ ಕೊಡುತ್ತಿತ್ತು. ಇದರ ಇನ್ನೊಂದ ರೂಪವೇ ʻಕೂತು ಹಿಡಿತಿಯೋ ನಿಂತು ಹಿಡಿತಿಯೋʼ ಎನ್ನುವುದು. ಕೇಳಿದಾಗ ನಿಂತು ಎಂದರೆ ನಿಂತಾಗ, ಇಲ್ಲವೆ ಕುಳಿತು ಎಂದರೆ ಕುಳಿತಾಗ ಅವರನ್ನು ಮುಟ್ಟಬೇಕು, ಆಗ ಅವರು ಆಟದಿಂದ ಹೊರಕ್ಕೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ
ಅಮೆರಿಕಾದ ಹುಡುಗ ರೈತನೇ!: ಗುರುಪ್ರಸಾದ ಕುರ್ತಕೋಟಿ ಸರಣಿ
ಹೋದಹೋದಂತೆ ತಾವು ಮಾಡುತ್ತಿದ್ದ ಕೆಲಸವನ್ನೂ ಬಿಟ್ಟು, ಇದನ್ನೇ ಮಾಡಲು ತೊಡಗಿ ಸಿಕ್ಕಾಪಟ್ಟೆ ದುಡ್ಡು ಮಾಡಿದರಂತೆ. ಇದ್ದ ಒಬ್ಬನೇ ಮಗನಿಗೂ ಕೂಡ ಬೇರೆ ಕಡೆ ಯಾಕೆ ಕೆಲಸ ಮಾಡ್ತೀಯಾ ನನ್ನ ಕೃಷಿ ಕೆಲಸವನ್ನೇ ಮಾಡು ಅಂತ ಅವನನ್ನೂ ತಮ್ಮ ಜೊತೆಗೆ ಸೇರಿಸಿಕೊಂಡರು. ಮಗ ಮದುವೆಯ ವಯಸ್ಸಿಗೆ ಬಂದಾಗ ಭಾರತದಲ್ಲೇ ಒಂದು ಹುಡುಗಿಯನ್ನೂ ಹುಡುಕಿದರಂತೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಇಪ್ಪತ್ತೆರಡನೆಯ ಬರಹ
ಸುಮಾ ಸತೀಶ್ ಹೊಸ ಸರಣಿ “ರಂಗಿನ ರಾಟೆ” ಆರಂಭ…
ಹಳ್ಳಿಯೂರ ಬದುಕು ಹಗಲು-ರಾತ್ರಿಯ ಪರಿವಿಲ್ಲದೆ ಕತೆ ನೇಯುವ ಕಥಾಕಣಜ. ಸುಮಾ ಸತೀಶ್ ಇಂಥ ಕಣಜದ ಹತ್ತು ಹಲವು ಕತೆಗಳನ್ನು “ರಂಗಿನ ರಾಟೆ” ಸರಣಿಯಲ್ಲಿ ಪ್ರತೀ ಬುಧವಾರ ಕೆಂಡಸಂಪಿಗೆಯ ಓದುಗರ ಮುಂದೆ ಇಡಲಿದ್ದಾರೆ. ಈ ಹೊಸ ಸರಣಿಯ ಮೊದಲ ಕಂತು ಇಲ್ಲಿದೆ
ಇಂಗ್ಲೀಸ್ನ್ಯಾಗೆ ಹೆಸರು ಬರೆಯಲು ಕಲಿತ ಮಂಜಣ್ಣ!: ಬಸವನಗೌಡ ಹೆಬ್ಬಳಗೆರೆ ಸರಣಿ
ಹೆಸರು ಕಲಿತ ಮಂಜಣ್ಣ ಸಂಬಳವಿದ್ದ ಮನೆಗೆ ಹೋಗಿ ದನಗಳನ್ನೆಲ್ಲಾ ಕಟ್ಟಿ ಹಾಕಿ ಎಣ್ಣೆ ಅಂಗಡಿಗೆ ಹೋಗಿ, ಹೆಸರು ಕಲಿತ ಖುಷಿಗೆ ತುಸು ಹೆಚ್ಚೇ ಕುಡಿದಿದ್ದಾನೆ. ಮನೆ ಓಣಿಯಾಗೆಲ್ಲಾ ತೂರಾಡುತ್ತಾ ‘ನಂಗೆ ಇಂಗ್ಲೀಸ್ನ್ಯಾಗೆ ಹೆಸ್ರು ಬರೆಯೋಕೆ ಬರುತ್ತೆ’ ಎಂದು ಕೂಗಾಡುತ್ತಾ ಹೋಗಿದ್ದಾನೆ. ಮನೆಗೆ ಹೋಗಿ ಮಣ್ಣ ನೆಲದ ಮೇಲೆ ಕಲ್ಲಲ್ಲಿ ಮನೆ ತುಂಬಾ ಕೆತ್ತಿದ್ದಾನೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಪತ್ರಿಕಾ ರಂಗದ ನಾಡೋಜ ಪಾಟೀಲ ಪುಟ್ಟಪ್ಪ: ರಂಜಾನ್ ದರ್ಗಾ ಸರಣಿ
ಬಡವರ ಬಗ್ಗೆ, ಹದಗೆಟ್ಟ ರಾಜಕೀಯ ಸ್ಥಿತಿಯ ಬಗ್ಗೆ ಮತ್ತು ಸಾಮಾಜಿಕ ನಿಷ್ಕ್ರಿಯತೆಯ ಬಗ್ಗೆ ಪಾಪು ಮರಗುತ್ತಿದ್ದರು. ಸಾಹಿತ್ಯ, ರಾಜಕಾರಣ, ಸಿನಿಮಾರಂಗ ಮುಂತಾದ ಕ್ಷೇತ್ರಗಳಲ್ಲಿನ ದೊಡ್ಡವರ ಸಣ್ಣತನದ ಬಗ್ಗೆ ಮತ್ತು ಸಣ್ಣವರ ದೊಡ್ಡತನದ ಬಗ್ಗೆ ವಿವರಿಸುತ್ತಿದ್ದರು. ಅವರ ಮಾತುಗಳು ರಂಜಕತೆಯಿಂದ ಮತ್ತು ಕೆಲವು ಸಲ ವಿಷಾದದಿಂದ ಕೂಡಿರುತ್ತಿದ್ದವು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 83ನೇ ಕಂತು ನಿಮ್ಮ ಓದಿಗೆ
ಎಮರ್ಜೆನ್ಸಿಯ ಸುತ್ತ… : ಎಚ್. ಗೋಪಾಲಕೃಷ್ಣ ಸರಣಿ
ಅವರನ್ನು ಸಾರ್ವಜನಿಕ ಸಮಾರಂಭಗಳಲ್ಲಿ ವೇದಿಕೆ ಮೇಲೆ ನೋಡಿದ್ದೆ, ಹಿಂದೆ ಅವರು ಅರ್ಥಮಂತ್ರಿ ಆಗಿದ್ದಾಗ ರಾಜಾಜಿನಗರದ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿನ ಒಂದು ಕಾರ್ಯಕ್ರಮಕ್ಕೆ ಬಂದಿದ್ದಾಗ ನೋಡಿದ್ದೆ ಮತ್ತು ಅವರ ಭಾಷಣ ಕೇಳಿದ್ದೆ. ಮಂಗಳಾರತಿ ತಟ್ಟೆಗೆ ಪಕ್ಕದವರಿಂದ ನೋಟು ಕೇಳಿ ಪಡೆದು ಹಾಕಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತನೆಯ ಕಂತು ನಿಮ್ಮ ಓದಿಗೆ










