ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ
ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ
ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ
‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ
ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ
ನಾಲಗೆ ಖಾರದಿಂದ ಚುರುಕ್ ಎಂದ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ
ನಮ್ಮಮ್ಮ ನಾಗಮ್ಮ: ಸುಮಾ ಸತೀಶ್ ಸರಣಿ
ಒಟ್ನಾಗೆ ಅಮ್ಮ ದೋಡ್ಡ ಸಂಸಾರದಾಗೆ ಸೈ ಅನ್ನುಸ್ಕಂಡಿದ್ದು ಸಣ್ದೇನಲ್ಲ. ಅಪ್ಪ ರಾಜಕೀಯದಾಗಿತ್ತು. ಮನೇನಾಗೆ ಇರ್ತಾ ಇರ್ಲಿಲ್ಲ. ಮಾತುಕತೆಗೆ ಸಿಗುತ್ಲೇ ಇರ್ಲಿಲ್ಲ. ಮನ್ ತುಂಬಾ ಜನ. ಕೆಲ್ಸ. ಮದಮದಲು ಅತ್ತೆದೀರ್ಗೆ ಬಿಗುಮಾನ ಇತ್ತು. ನಮ್ಮ ದೊಡ್ಡತ್ತೆ ಮಾತೂ ಅಂದ್ರೆ ಮನ್ಯಾಗೆ ವೇದವಾಕ್ಯ. ಅವ್ರೂ ಒಂದಿನ ನಾವು ಎಂಟು ಜನ ಯಾವತ್ತಿದ್ರೂ ಒಂದೇನೇಯಾ ಅಂತ ಯೋಳ್ದಾಗ ಅಮ್ಮುಂಗೆ ನಾನೊಬ್ಳೇ ಅಲ್ವಾ ಅಂಗಾರೆ ಹೊರುಗ್ನೋಳು ಅಂತ ಸಂಕಟ ಆಗಿ ಮರೇನಾಗೆ ಕಣ್ಣಾಗೆ ನೀರು ಹಾಕ್ಕಂಡಿದ್ದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ತಾಯಿಯ ಕುರಿತ ಬರಹ ನಿಮ್ಮ ಓದಿಗೆ
ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್ ಜಯಣ್ಣ ಸರಣಿ
ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡೆದು, ಇಲ್ಲಿಗೆ ಕರೆಸಿಕೊಂಡಿದ್ದಾರೆ, ಈಗಲೂ ಕಾಯಿಸುತ್ತಿದ್ದಾರೆ ಎಂದುಕೊಳ್ಳುವಷ್ಟರಲ್ಲಿ ಯಾರೋ ಪುಸ್ತಕಗಳನ್ನು ಹೊತ್ತು ಬರುತ್ತಿರುವುದು ಕಾಣಿಸಿತು. “ಓಹ್, ಇವರೋ ಅಭಯಾ ತೊಟ್ಟ ಮಹಿಳೆ!” ತಮ್ಮ ಮುಖವೊಂದನ್ನ ಕಾಣುವಹಾಗೆ ಬಿಟ್ಟು ಇಡೀ ದೇಹಕ್ಕೆ ಅಭಯಾ ತೊಟ್ಟಿದ್ದಾರೆ. ಕಾರಿನಿಂದ ಹೊರಗಡೆ ಇಳಿದೆ. “ಬುಕ್ಸ್?” ಎಂದು ಕೇಳಿದರು. “ಎಸ್” ಎಂದೆ. ನಲವತ್ತು ರಿಯಾಲ್ ಕೊಡಲು ಹೇಳಿದರು, ಕೊಟ್ಟೆ. ಹಣಪಡೆದು ಪುಸ್ತಕಗಳನ್ನು ಕೊಟ್ಟು ಹೊರಟುಬಿಟ್ಟರು!
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಐದನೆಯ ಕಂತು
ನಮ್ಮ ಕಾಲದ ಕೃಷಿ….: ರೂಪಾ ರವೀಂದ್ರ ಜೋಶಿ ಸರಣಿ
ಈ ಗದ್ದೆ ಕೆಲಸ ನಡೆಯುವಾಗ ನಾನಂತೂ ಮಧ್ಯಾಹ್ನ ಶಾಲೆ ಬಿಟ್ಟೊಡನೆ ಗದ್ದೆಗೆ ಓಡುತ್ತಿದ್ದೆ. ಅವೆಲ್ಲವನ್ನೂ ಕಣ್ಣು ತುಂಬಿಕೊಳ್ಳುತ್ತ, ಅವರ ಮಾತು, ಗಲಗಲ ನಗೆಗೆ ನಾನೂ ಹಲ್ಲು ಕಿಸಿಯುತ್ತ ಮೈ ಮರೆತು ನಿಂತು ಬಿಡುತ್ತಿದ್ದೆ. ತಿರುಗಾ ಆಯಿ ಜೋರಾಗಿ ಕರೆದು, “ಯೇ ಬಾರೇ. ಊಟ ಮಾಡಿ ಶಾಲೆಗೆ ಹೊರಡು” ಎಂದು ಗದರಿದಾಗ, “ಥೋ… ಇದೊಂದು ಮಳ್ಳು ಶಾಲೆ” ಎಂದು ನನ್ನೊಳಗೇ ಗೊಣಗುತ್ತ, ಅಲ್ಲಿಂದ ಕಾಲು ಕೀಳುತ್ತಿದ್ದೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿ
ಆರಿಸಬಹುದು ಕಿಚ್ಚು; ಆರಿಸುವುದ್ಹೇಗೆ ಇದ್ದರೆ ಹೊಟ್ಟೆಕಿಚ್ಚು?!: ಬಸವನಗೌಡ ಹೆಬ್ಬಳಗೆರೆ ಸರಣಿ
ರೈತ ‘ನಾನು ಬಿತ್ತುವ ಬೀಜಗಳನ್ನೇ ನನ್ನ ನೆರೆಹೊರೆಯ ಹೊಲದ ರೈತರಿಗೂ ನೀಡುತ್ತೇನೆ’ ಎಂದು ಹೇಳಿದನಂತೆ! ಆಗ ಅವರಿಗೆ ಇನ್ನೂ ಅಚ್ಚರಿಯಾಗಿ ‘ನೀವು ನಿಮ್ಮ ಸ್ಪರ್ಧಾಳುಗಳಿಗೆ ಕೊಟ್ಟರೆ ನೀವೇ ನಿಮ್ಮ ಸ್ಪರ್ಧಿಯನ್ನು ಬೆಳೆಸಿದಂತಾಗುವುದಿಲ್ಲವೇ?’ ಎಂದಾಗ ಆ ರೈತ ‘ನಾನು ಬಿತ್ತುವ ಬೀಜಗಳನ್ನೇ ಅಕ್ಕಪಕ್ಕದವರಿಗೂ ಕೊಟ್ಟರೆ ಫಲ ಬಿಡುವ ಸಮಯದಲ್ಲಿ ಪರಾಗಸ್ಪರ್ಶದಿಂದಾಗಿ ನನ್ನ ಹೊಲದ ಫಲವು ಉತ್ತಮವಾಗುತ್ತದೆ. ಒಂದೊಮ್ಮೆ ಅಕ್ಕಪಕ್ಕದ ಹೊಲದವರು ಕಮ್ಮಿ ಗುಣಮಟ್ಟವಿರುವ ಬೀಜಗಳನ್ನು ಬಿತ್ತಿದರೆ ಫಲ ಬಿಡುವ ಸಮಯದಲ್ಲಿ ಆ ಹೊಲದ ಪರಾಗರೇಣುಗಳಿಂದ ನನ್ನ ಹೊಲದ ಫಲವೂ ಕಮ್ಮಿಯಾಗುತ್ತದೆ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಭಾಷೆಯೊಳಗೆ ಇನ್ನೊಂದು ಭಾಷೆ: ಸುಮಾವೀಣಾ ಸರಣಿ
ದೋಸೆ ಚಟ್ನಿಯ ಘಮ ನಮ್ಮ ಮೂಗನ್ನು ದಾಟಿ ಭರ್ರನೆ ದೇಹ ಪ್ರವೇಶಿಸುತ್ತಿತ್ತು. ಅದೇ ಭರದಲ್ಲಿ ತಿಂದಿದ್ದರೆ ಚೆನ್ನಾಗಿತ್ತು. ಸುಮ್ಮನಿರಲಾರದೆ “ಇದು ಏನು ಚಟ್ನಿ” ಎಂದೆ. ಹೊಟೆಲ್ ಮಾಣಿಗೆ ಕನ್ನಡ ಅರ್ಥವಾಯಿತು ಆದರೆ ಉತ್ತರವನ್ನು ತೆಲುಗಿನಲ್ಲಿಯೇ “ಇದಿ ಪಲ್ಲಿ ಚಟ್ನಿ” ಎಂದ. ಕಸಿವಿಸಿ ಆಯಿತು “ಹೇಗ್ ಮಾಡ್ತೀರಿ?” ಅಂದೆ ಅದಕ್ಕವನು “ಪಲ್ಲಿಲನು ಧಂಚಿ, ವೆಯಿಂಚಿ, ಪುಡಿಛೇಸಿ…” ಎನ್ನುತ್ತಿದ್ದಂತೆ ವಾಕರಿಕೆ ಬರಲು ಶುರುವಾಯಿತು. ಕನ್ನಡದಲ್ಲಿ ‘ಪಲ್ಲಿ’ ಅಂದರೆ ‘ಹಲ್ಲಿ’ ಅಲ್ಲವೆ. ಆದರೂ ಬಿಡಲಿಲ್ಲ; ಗೂಗಲಮ್ಮನ ಸಹಾಯ ಪಡೆದು ನೋಡಿದರೆ ತೆಲುಗಿನಲ್ಲಿ ‘ಪಲ್ಲಿ’ ಅಂದರೆ ಕನ್ನಡದಲ್ಲಿ ‘ನೆಲಗಡಲೆ’ ಅಂತಿತ್ತು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ತೆರಡನೆಯ ಬರಹ ನಿಮ್ಮ ಓದಿಗೆ
ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ
ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ









