ದೇವರನ್ನು ಕುರಿತು ಒಂದಿಷ್ಟು….: ಬಸವನಗೌಡ ಹೆಬ್ಬಳಗೆರೆ ಸರಣಿ
ಇತ್ತೀಚೆಗಂತೂ ದೇವರ ಆರಾಧನೆಯ ಜೊತೆ ಜೊತೆಗೆ ಪುರುಷ ಪ್ರಯತ್ನಕ್ಕೂ ಹೆಚ್ಚು ಒತ್ತು ಕೊಡಬೇಕು ಎಂದು ಕಲಿತಿದ್ದೇನೆ. ದೇವರು ಒಂಥರಾ ರಾಸಾಯನಿಕ ಕ್ರಿಯೆಯ ‘ಕ್ರಿಯಾವರ್ಧಕ’ (ಕ್ಯಾಟಲಿಸ್ಟ್) ಇದ್ದ ಹಾಗೆ ಎಂದು ನಂಬಿದ್ದೇನೆ. ವ್ಯಕ್ತಿ ತಾನು ಮಾಡುವ ಕಾರ್ಯಗಳಿಂದ ದೇವರ ಸ್ಥಾನಕ್ಕೆ ಏರಬಹುದು ಎಂದು ಹಲವು ಮಹಾನುಭಾವರ ಜೀವನದಿಂದ ತಿಳಿದುಕೊಂಡಿದ್ದೇನೆ. ಆದರೂ ಹಲವರು ದೇವರ ಹೆಸರಲ್ಲಿ ಜಗಳವಾಡುವುದನ್ನು ನೋಡಿ ವಿಚಿತ್ರ ಎನಿಸುತ್ತದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತನೆಯ ಕಂತು ನಿಮ್ಮ ಓದಿಗೆ
ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್ ಕಾವ್ಯ ಕಥನ: ಎಸ್ ಜಯಶ್ರೀನಿವಾಸ ರಾವ್ ಸರಣಿ
ಕ್ರೂಗರ್ ಅವರು ಜೀವನಪ್ರೀತಿಯ ಖಾಸಗಿ ದುಃಖ ಮತ್ತು ಅಸಾಧ್ಯತೆಗಳ ಹಾಡುಗಳನ್ನು ರಚಿಸುವ ಕವಿ. ಈ ಕವಿಯು ವಿವಿಧ ಸಂಸ್ಕೃತಿಗಳ ಒಬ್ಬ ಸ್ವಯಂ ನಿರ್ಮಿತ ದೈವವಾಣಿಯಂತೆ. ಅವರ ಕಾವ್ಯ ಒಂದು ಗಂಭೀರ ಆಲೂಗಡ್ಡೆ ಕೃಷಿಯ ಹಾಗೆ. ರಾತ್ರಿಯಲ್ಲಿ ಹೇಗೆ ನಡೆಯಬೇಕು, ಕತ್ತಲೆಯಲ್ಲಿ ನಾವು ತಲುಪುವ ಯಾವುದೇ ಗಮ್ಯಸ್ಥಾನವನ್ನು ಹೇಗೆ ಹೊಂದಬೇಕು, ನಾವು ನಂಬಬಹುದಾದ ಅಥವಾ ನಂಬದಿರುವ ಬೆಳಕಿಗೆ ಅಂತಿಮವಾಗಿ ನಮ್ಮನ್ನು ಒಪ್ಪಿಸಿಕೊಳ್ಳುವುದು ಹೇಗೆ ಎಂದು ಕ್ರೂಗರ್ ನಮಗೆ ಕಲಿಸುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಜರ್ಮನಿ ದೇಶದ ಕವಿ ಮೈಕಲ್ ಕ್ರೂಗರ್-ರವರ (Michael Krüger) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು
ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ ಸರಣಿ
ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ
ಸುಂದರ ಕಾಡಿನ ರೋಚಕ ಕಥೆಗಳು-೨: ರೂಪಾ ರವೀಂದ್ರ ಜೋಷಿ ಸರಣಿ
ಶಾಲೆಗೆ ಹೋಗುವಾಗ, ಹಲವೆಡೆ ನಾವು ಇಂಥ ನಯನ ಮನೋಹರ “ಹೂ ರಥ” ನೋಡುತ್ತ ಹೋಗುತ್ತಿದ್ದೆವು. ಈಗಲೂ ಆ ಸುಂದರ ದೃಶ್ಯ ನನ್ನ ಕಣ್ಣಿಗೆ ಕಟ್ಟಿದಂತಿದೆ. ಹಾಗೇ ಇನ್ನೊಂದು ಚಂದದ ಹೂ ಅಂದರೆ, ಚದುರಂಗಿ. ಇದು ತೀರಾ ಪುಟಾಣಿ ಹೂಗಳ ಗೊಂಚಲು. ನಕ್ಷತ್ರದ ಆಕಾರದ ಗಾಢ ಕೇಸರಿ, ಕೆಂಪು ಹೂಗಳ ಚದುರಂಗಿ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಸಪೂರ ಕಾಂಡಕ್ಕೆ ಸೂಕ್ಷ್ಮ ಮುಳ್ಳುಗಳಿರುತ್ತವೆ. ಇದರ ಹೂ ನೋಡಲು ಬಹಳ ಚಂದ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೊಂದನೆಯ ಕಂತು
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು” ಇಂದಿನಿಂದ
ಮನುಷ್ಯನಿಗೆ ಮನುಷ್ಯನೇ ಹುಟ್ಟುವ ತದ್ರೂಪಿತನ ಪುರಾತನ ಕಾಲದಿಂದಲೂ ಕುತೂಹಲ ಮೂಡಿಸಿದೆ. ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಗ್ರೀಕ್ ಗಣಿತಜ್ಞ-ತತ್ವಶಾಸ್ತ್ರಿ ಪೈಥಾಗೊರಸ್ ಅನುವಂಶೀಯತೆಯ ಸೂತ್ರ ವೀರ್ಯದಲ್ಲಿದೆ ಎನ್ನುತ್ತಾನೆ. ಅವನ ಪ್ರಕಾರ, ವೀರ್ಯ ಪುರುಷನಿಂದ ಹೊರಬರುವ ಮುನ್ನ ದೇಹದ ಎಲ್ಲಾ ಭಾಗಗಳಲ್ಲಿ ಹರಿದು ಆ ಭಾಗಗಳೆಲ್ಲದುರ ಮಾಹಿತಿಯನ್ನೂ ಕಲೆಹಾಕಿ ತದ್ರೂಪಿ ಇರುವ ಬೀಜವಾಗುತ್ತದೆ. ಈ ಬೀಜ ಗರ್ಭವನ್ನು ಸೇರಿದಾಗ, ಆ ತದ್ರೂಪಿಗೆ ಬೇಕಿರುವ ಪೋಷಕಾಂಶ ನೀಡಿ ಅದನ್ನು ದೊಡ್ಡದು ಮಾಡುವುದಷ್ಟೇ ಹೆಣ್ಣಿನ ಕೆಲಸ.
ಶೇಷಾದ್ರಿ ಗಂಜೂರು ಬರೆಯುವ ನೂತನ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”
ಪುಸ್ತಕ ಹಾಗೂ ನೋಟ್ ಪುಸ್ತಕದ ಬಗ್ಗೆ ಒಂದಷ್ಟು ಮಾತು…: ಬಸವನಗೌಡ ಹೆಬ್ಬಳಗೆರೆ ಸರಣಿ
ನನಗೆ ಟಿಸಿಹೆಚ್ ಓದುವಾಗ ನಮ್ಮೂರಲ್ಲಿದ್ದ ಒಬ್ಬರು ನನಗೆ ಅವರ ಪುಸ್ತಕಗಳನ್ನು ಉಚಿತವಾಗಿ ಕೊಟ್ಟಿದ್ದರು. ಅಲ್ಲದೇ ನಮ್ಮೂರ ಗ್ರಂಥಪಾಲಕ ವಿಜಯಣ್ಣನೂ ಕೇಳಿದಾಗ ಪುಸ್ತಕಗಳನ್ನು ಕೊಡುತ್ತಿದ್ದರು. ನನ್ನ ಓದಿಗೆ ತುಂಬಾ ಸಹಕಾರ ಮಾಡಿದರು. ಪ್ರೌಢಶಾಲೆಯಲ್ಲಿದ್ದಾನ ನನಗೆ ನನ್ನ ಸೀನಿಯರ್ ಒಬ್ಬರು ಹಳೇ ಪುಸ್ತಕಗಳನ್ನು ಕೊಡುತ್ತೇನೆ ಎಂದು ಹೇಳಿ ಮೊದಲೇ ನನ್ನ ಬಳಿ ಅಡ್ವಾನ್ಸ್ ಆಗಿ ಹಣ ಪಡೆದು ಯಾಮಾರಿಸಿದ ಘಟನೆಯನ್ನು ನಾನು ಇನ್ನೂ ಮರೆತಿಲ್ಲ. ಅಲ್ಲದೇ ಪಿಯುಸಿಯನ್ನು ಬೆಂಗಳೂರಿನಲ್ಲಿ ಓದುವಾಗ ನಮ್ಮ ಹಾಸ್ಟೆಲ್ಲಿನ ಕೆಲ ಹುಡುಗರು ಪುಸ್ತಕಗಳನ್ನು ಕದ್ದು ಆಗ ಅವೆನ್ಯೂ ರಸ್ತೆಯಲ್ಲಿದ್ದ ಸೆಕೆಂಡ್ ಹ್ಯಾಂಡ್ ಪುಸ್ತಕದಂಗಡಿಗಳಿಗೆ ಮಾರುತ್ತಿದ್ದ ಘಟನೆಗಳೂ ಇವೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಮೊಹಮ್ಮದ್ ಚಾಚಾ!: ದರ್ಶನ್ ಜಯಣ್ಣ ಸರಣಿ
ಅವರು ಇಲ್ಲಿನ 45-50 ಡಿಗ್ರಿ ಉಷ್ಣಾಂಶವನ್ನ ಬಳಸಿಕೊಂಡು ಪ್ಲಾಸ್ಟಿಕ್ನ ಡಬ್ಬಿಯಲ್ಲಿ ತಾವು ತಂದ ಆಹಾರವನ್ನು ಬಿಸಿ ಮಾಡಿಕೊಳ್ಳುವುದನ್ನು ನೋಡಿ ಸಂಕಟವೂ ಆಯಿತು. ಏನಾದರೂ ಮಾಡಬೇಕಲ್ಲ ಎಂದು ಯೋಚಿಸುವಾಗ ಒಂದು ಹೊಸ tupperware ನ ಊಟದ ಡಬ್ಬಿಯನ್ನು ತಂದುಕೊಡುವುದು ಸೂಕ್ತ ಅಂತ ಅನ್ನಿಸಿತು.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಹನ್ನೊಂದನೆಯ ಕಂತು
ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ
ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ
“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ
ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ









