Advertisement

ಸರಣಿ

ಮುಳ್ಳಕ್ಕಿಯ ರೆಕ್ಕೆಪುಕ್ಕಗಳು: ಡಾ. ಚಂದ್ರಮತಿ ಸೋಂದಾ ಸರಣಿ

ಮುಳ್ಳಕ್ಕಿಯ ರೆಕ್ಕೆಪುಕ್ಕಗಳು: ಡಾ. ಚಂದ್ರಮತಿ ಸೋಂದಾ ಸರಣಿ

ಹಿಂದೆ ಕೂಲಿ ಕೆಲಸ ಮಾಡುವ ಜನರು ಬೇಸಿಗೆಯಲ್ಲಿ ಒಣಗಿಸಿಟ್ಟ ಹಲಸಿನ ಬೀಜಗಳನ್ನು ಮಳೆಗಾಲದಲ್ಲಿ ಮುಖ್ಯ ಆಹಾರವಾಗಿ ಬಳಸುತ್ತಿದ್ದರು. ಆಗ ಅಧಿಕ ಮಳೆ ಹೊಯ್ಯುತ್ತಿದ್ದುದರಿಂದ ಅವರಿಗೆ ಕೂಲಿಕೆಲಸ ಸಿಗುತ್ತಿರಲಿಲ್ಲ, ದವಸಧಾನ್ಯಗಳನ್ನು ಕೊಳ್ಳಲು ಆಗುತ್ತಿರಲಿಲ್ಲ. ಒಂದುಹೊತ್ತು ಅನ್ನವನ್ನೋ ಗಂಜಿಯನ್ನೋ ಉಂಡರೆ ಇನ್ನೊಂದು ಹೊತ್ತಿಗೆ ಹಲಸಿನ ಬೇಳೆಯೇ ಆಹಾರವಾಗಿತ್ತು. ಹೀಗೆ ಹಲಸಿನ ಬೇಳೆ ಅವರನ್ನು ಸಲಹುತ್ತಿತ್ತು. ಇತ್ತೀಚೆಗೆ ಹಲಸಿನ ಬೇಳೆಯಲ್ಲಿ ಅತ್ಯಧಿಕ ಪೌಷ್ಟಿಕಾಂಶ ಇದೆ ಎನ್ನುವ ಸಂಗತಿ ಪ್ರಚಲಿತವಾಗಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯಲ್ಲಿ ಮೂರನೆಯ ಬರಹ

read more
ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

read more
ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ನೆನಪಾಗಿ ಕಾಡುವ ಆ ಪಟಗಳು: ಮಾರುತಿ ಗೋಪಿಕುಂಟೆ ಸರಣಿ

ಇಷ್ಟಕ್ಕೆಲ್ಲ ಕಾರಣವಾದ ಕಪ್ಪು ಬಿಳುಪಿನ ಪಾಸ್ಪೋರ್ಟ್ ಸೈಜ್ ಫೋಟೊ ಸರ್ಕಾರವು ಉಚಿತವಾಗಿ ಕೊಟ್ಟ ಅಂಗಿಯಲ್ಲಿ ಕಪ್ಪು ಮಿಶ್ರಿತ ನೀಲಿಯ ನನ್ನ ಪಟ ಚಂದವಾಗಿ ಕಾಣುತ್ತಿತ್ತು. ಅದನ್ನೆ ನವೋದಯ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಅಂಟಿಸಲಾಯಿತು. ಸ್ವಲ್ಪ ತಯಾರಿಯೊಂದಿಗೆ ಪರೀಕ್ಷೆಯನ್ನು ಬರೆದರೂ ಮತ್ತೆ ಅದರ ಬಗ್ಗೆ ಯಾವ ವಿಚಾರವೂ ತಿಳಿಯಲಿಲ್ಲ. ನಂತರದ ವರ್ಷಗಳಲ್ಲಿ ಅನೇಕರು ಪರೀಕ್ಷೆ ಬರೆದರು. ಆದರೆ ಯಾರೂ ಆಯ್ಕೆಯಾಗಲಿಲ್ಲ. ಅದ್ಹೇಗೆ ಅಂತ ಇವತ್ತಿಗೂ ತಿಳಿದಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

read more

ಕೇರಳಿಗರ ಬೆಂಗಳೂರ ನಂಟು: ಎಚ್.ಗೋಪಾಲಕೃಷ್ಣ ಸರಣಿ

ಅಯ್ಯಪ್ಪ ದೇವರ ಮೂಲ ಕೇರಳ. ಅಂದ ಹಾಗೆ ನಾನು ಬೆಳೆದು ಓದಿ ನಂತರ ಕೆಲಸ ಮಾಡುತ್ತಿದ್ದ ಕಡೆ ಕೇರಳದವರ ಸಂಖ್ಯೆ ಹೆಚ್ಚು ಮತ್ತು ತುಂಬಾ ಚಟುವಟಿಕೆಯಿಂದಲೂ ಕೂಡಿದ್ದರು. ಕೇರಳದ ಸುಮಾರು ಹುಡುಗಿಯರು ಕನ್ನಡದ ಹುಡುಗರ ಕೈ ಹಿಡಿದಿದ್ದರು. ಸಮುದ್ರ ತೀರದ ಹುಡುಗಿಯರು ಅಂದರೆ ಆಕರ್ಷಕ ಮೈಕಟ್ಟು, ಗುಂಗುರು ಕೂದಲು ಮತ್ತು ಕೊಂಚ ಮುಂದೆ ಬಂದ ಹಲ್ಲುಗಳು. ಬಹುಶಃ ಆಡುವ ಭಾಷೆಯ ಪ್ರಭಾವ ಇರಬಹುದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹತ್ತನೆಯ ಕಂತು ನಿಮ್ಮ ಓದಿಗೆ

read more
ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳು ಪಾಠ ಕೇಳಬೇಕು. ಆಗ ಈ ರೌದ್ರಮಳೆಯಾಗಮನವಾಗುತ್ತಿತ್ತು. ನಾವು ಶಾಲೆಗೆ ಹೊರಡುವ ಸಮಯಕ್ಕೆ ಸರಿಯಾಗಿ ಶಾಲೆ ಬಿಡುವ ಕಡೆಯ ಅವಧಿಯಲ್ಲಿ ಮಳೆ ಹಾಜರಿ ಹಾಕುತ್ತಿತ್ತು. ಜೊತೆಗೆ ಮೈ ಕೊರೆಯುವ ಚಳಿ. ಈ ಕಾರಣಕ್ಕೆ ಮೊದಲ ಬೆಂಚ್ ಬೇಡ ಅನ್ನಿಸುತ್ತಿತ್ತು ಹಿಂದಿನ ಬೆಂಚ್ ಆದರೆ ಕಾಲ ಮೇಲೆ ಕಾಲು ಹಾಕಿ ಚಳಿ ಕಡಿಮೆ ಮಾಡಿಕೊಳ್ಳಬಹುದಲ್ಲ ಅನ್ನುವ ಉಪಾಯ ಅಷ್ಟೇ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

read more
ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

read more
ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕಾಶಿಗೆ ಹೋಗಲೂ ಚೌಕಾಶಿಯೇ: ಡಾ. ಚಂದ್ರಮತಿ ಸೋಂದಾ ಸರಣಿ

ಕೆಲವು ಬಾರಿ ಮನೆಯ ತಾಪತ್ರಯವಿದ್ದಾಗ ಸುಗ್ಗಿ ಮಾಡಲು ಕಷ್ಟ ಅಂತ ಫಸಲುಗುತ್ತಿಗೆ ಅಂತ ಕೊಡುವ ರೂಢಿಯಿತ್ತು. ಬೆಳೆಯ ಅಂದಾಜು ಮಾಡಿ ಇಂತಿಷ್ಟು ಹಣ ಅಂತ ನಿಗದಿಮಾಡಿ ಒಟ್ಟಾಗಿ ಹಣವನ್ನು ಸಂದಾಯ ಮಾಡುತ್ತಿದ್ದರು. ಆ ವರ್ಷ ಬೆಳೆ ಅಂದಾಜಿಗಿಂತ ಹೆಚ್ಚಾದರೆ ಅಥವಾ ಇವರ ಬೆಳೆಗೆ ಒಳ್ಳೆಯ ದರ ಬಂದರೆ ಬೆಳೆಗಾರರು ಕೈಕೈ ಹಿಸುಕಿಕೊಳ್ಳುತ್ತಿದ್ದರು. ʻಅಯ್ಯೋ! ಅನ್ಯಾಯವಾಗಿ ದುಡ್ಡು ಕಳಕಂಡೆ.ʼ ಅಂತ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಎರಡನೆಯ ಬರಹ

read more
ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

read more
ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ