ಸೌದಿಯ ಹೊಸ ಮೆಗಾ ಪ್ರಾಜೆಕ್ಟ್!: ದರ್ಶನ್ ಜಯಣ್ಣ ಸರಣಿ
ಆತ “ದುಬೈ ನಲ್ಲಿ ಏನಿದೆ? ಒಂದು ಐದಾರು ಶಾಪಿಂಗ್ ಮಾಲ್ಗಳು, ಎರಡು ಮುಖ್ಯ ರಸ್ತೆ, ಎರಡು ಹೋಟೆಲ್ಲು ಮತ್ತು ಬಹು ಮಹಡಿ ಕಟ್ಟಡ ಅಷ್ಟೇ ತಾನೇ?! ನಮ್ಮದು ಅದಕ್ಕಿಂತ ದೊಡ್ಡ ಯೋಜನೆ ಮತ್ತು ಹತ್ತು ಪಟ್ಟು ಹಿರಿದಾದದ್ದು” ಎಂದುಬಿಟ್ಟ. ಪ್ರಶ್ನೆ ಕೇಳುತ್ತಿದ್ದವರು ಕಕ್ಕಾ ಬಿಕ್ಕಿ. ಈ ಉತ್ತರ ಕೆಲವು egoistic ಸೌದಿಗಳಿಗೆ ಅಪ್ಯಾಯವಾಗಬಹುದು; ಆದರೆ ಒಂದು ವಿಷಯ ಗಮನದಲ್ಲಿಟ್ಟುಕೊಳ್ಳಬೇಕು. ದುಬೈ ನಗರ ಅಥವಾ ಯುಎಇ ದೇಶ ಈ ಎಲ್ಲವನ್ನೂ 50 ವರ್ಷ ಮುಂಚಿತವಾಗಿ ಮಾಡಿ ಗೆದ್ದಿದೆ. ಆಗಲೇ ಅವರ ದೃಷ್ಟಿಕೋನ ಹಾಗಿತ್ತು ಎಂಬುದನ್ನು ಯಾರೂ ಮರೆಯಬಾರದು.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಐದನೆಯ ಬರಹ
ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ
ಏನೇ ಹೇಳಿ, ಆ ಕಾಡು ಮಧ್ಯದ ಪುಟ್ಟ ಶಾಲೆಯಲ್ಲಿ ಓದುವಾಗಿನ ಆ ನೆನಪುಗಳು ನಿಜಕ್ಕೂ ಚಿರಸ್ಮರಣೀಯ. ನಮ್ಮನೆಯಿಂದ ಶಾಲೆ ಸುಮಾರು ಎರಡು ಕಿ.ಮೀ. ನಷ್ಟು ದೂರವಿತ್ತು. ಎರಡು ಸೊಪ್ಪಿನ ಬೆಟ್ಟ ದಾಟಿ, ಒಂದು ಗುಡ್ಡ ಏರಿಳಿದರೆ, ನಮ್ಮ ಶಾಲೆ. ಮಳೆಗಾಲದಲ್ಲಿ ಒಂದು ಪುಟ್ಟ ಕಾಲುವೆ ದಾಟಬೇಕಾಗುತ್ತಿತ್ತು. ಹೆಚ್ಚು ಕಮ್ಮಿ ಮಾರಗಲವಿದ್ದ ಆ ಕಾಲುವೆ, ಅಂಥ ಭಯಂಕರ ಕಾಲುವೆಯೇನೂ ಆಗಿರಲಿಲ್ಲ. ಅದೂ ಕೂಡಾ ನಮ್ಮ ಬಾಲ್ಯದ ಸಂಗಾತಿಯಂತೇ ನಮ್ಮ ಖುಶಿಯಲ್ಲಿ ಪಾಲು ಪಡೆದಿತ್ತು.
ರೂಪಾ ರವೀಂದ್ರ ಜೋಶಿ ಹೊಸ ಸರಣಿ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಇಂದಿನಿಂದ 
ಅಲಾರಾಂ ಹಾಗೂ ಓದುವ ವೇಳೆಯ ಕುರಿತು ಒಂದಷ್ಟು ಮಾತು… ಬಸವನಗೌಡ ಹೆಬ್ಬಳಗೆರೆ ಸರಣಿ
ನಮ್ಮಜ್ಜನ ಮನೆಯಲ್ಲಿ ಇದ್ದಾಗ, ನಮ್ಮಜ್ಜ ನನ್ನನ್ನು ಬೆಳಗ್ಗೆ ಏಳಿಸುವ ಅಲಾರಾಂನಂತೆ ಕೆಲಸ ಮಾಡುತ್ತಿದ್ದರು. ಆದರೆ ಯಾವಾಗ ಹಾಸ್ಟೆಲ್ ಸೇರಿದೆನೋ ಅಲ್ಲಿ ಹಾಸ್ಟೆಲ್ ವಾರ್ಡನ್ ಪೀಪಿಯನ್ನು ಊದಿ ಏಳಿಸುತ್ತಿದ್ದರು. ಆಗ ನಮ್ಮ ಮಲ್ಲಾಡಿಹಳ್ಳಿಯ ಹಾಸ್ಟೆಲ್ಲಿನಲ್ಲಿ ತುಂಬಾ ಶಿಸ್ತು ಇತ್ತು. ನಾವು ಕಡ್ಡಾಯವಾಗಿ ಬೆಳಗ್ಗೆ 5 ಕ್ಕೆ ಏಳಲೇಬೇಕಾಗಿತ್ತು. ಏಳದಿದ್ದರೆ ಕೋಲು ಹಿಡಿದುಕೊಂಡು ಬರುತ್ತಿದ್ದರು. ಒಂದೊಮ್ಮೆ ಮಲಗಿರುವುದನ್ನು ಕಂಡರೆ ಕುಂಡೆಯ ಮೇಲೆ ಬಾರಿಸುತ್ತಾ ಹೋಗುತ್ತಿದ್ದರು, ಬೆಳಗ್ಗೆ ಎದ್ದು ಕೆಲವರು ಓದುತ್ತಾ ಕುಳಿತರೆ ಕೆಲವರು ಬ್ರಷ್ ಮಾಡಲು ಹೋಗುತ್ತಿದ್ದರು. ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ
ಪದಗಳಲ್ಲಡಗಿದ ಅನೇಕಾರ್ಥ ಮತ್ತು ನ್ಯಾಂಡೊ ಪೆರಾಡೊ: ಸುಮಾವೀಣಾ ಸರಣಿ
ಈ ‘ಮಾನ’ ಎಂದಾಗ ಮೊನ್ನೆ ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತವೇ ನೆನಪಾಗುತ್ತದೆ. ‘ವಿಮಾನ’ ಬರೆ ಪ್ರಯಾಣಿಕರನ್ನು ಹೊತ್ತು ಸಾಗುವುದಲ್ಲ. ದೇವಾಲಯದ ಗರ್ಭಗುಡಿಯ ಮೇಲ್ಭಾಗದ ಗೋಪುರಕ್ಕೂ ‘ವಿಮಾನ’ ಎಂದು ಕರೆಯುತ್ತಾರೆ. ವಿಚಿತ್ರ ಎಂದರೆ ಪಾರ್ಥೀವ ಶರೀರವನ್ನು ಸಾಗಿಸುವ ಬಿದಿರಿನ ಜೋಡಣೆಗೂ ವಿಮಾನವೆನ್ನುವರು. ಒಂದೊಮ್ಮೆ ತಿರುಪತಿ ಗೋವಿಂದರಾಜ ದೇವಸ್ಥಾನವನ್ನು ವೀಕ್ಷಣೆ ಮಾಡುತ್ತಾ ಇದು ‘ವಿಮಾನ ಗೋಪುರ’ ಎಂದು ವಿವರಿಸುತ್ತಿದ್ದಂತೆ ನಿಜವಾಗಿ ವಿಮಾನವೊಂದು ಹಾರಿ ಹೋಗಿದ್ದು ಇಲ್ಲಿ ನೆನಪಾಗುತ್ತಿದೆ…
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ
ಮಲೆನಾಡಿನ ಗದ್ದೆಗಳಲ್ಲಿ ನೆಟ್ಟಿ ಸಂಭ್ರಮ: ಭವ್ಯ ಟಿ. ಎಸ್. ಸರಣಿ
ಹೂಟಿ ಮಾಡಿದ ನೆಲದ ಮಣ್ಣು ಉಬ್ಬು ತಗ್ಗುಗಳಿಂದ ಕೂಡಿದ್ದು ಅದನ್ನು ನೆಟ್ಟಿಗೆ ಸಹಾಯಕವಾಗುವಂತೆ ಸಮತಟ್ಟು ಮಾಡಲು ನಳ್ಳಿ ಬಳಸುತ್ತಾರೆ. ಹಿಂದೆ ಎತ್ತುಗಳನ್ನು ಬಳಸಿ ಹೂಟಿ ಮಾಡುತ್ತಿದ್ದರಿಂದ ಇದಕ್ಕಾಗಿ ಬಳಸುವ ನೊಗ ಮತ್ತು ನೇಗಿಲು ಪ್ರತಿ ಮನೆಗಳಲ್ಲಿ ಇರುತ್ತಿತ್ತು. ಕಾಲ ಬದಲಾದಂತೆ ಇವುಗಳ ಸ್ಥಾನವನ್ನು ಆಧುನಿಕ ಕೃಷಿ ಸಲಕರಣೆಗಳು ಆಕ್ರಮಿಸಿವೆ. ಈ ಎತ್ತುಗಳಿಗೆ ಆಹಾರವಾಗಿ ಕೊಡಲು ಹುರುಳಿಯನ್ನು ಬೇಯಿಸುತ್ತಿದ್ದರು. ಇದನ್ನು ಬೇಯಿಸಿದ ನೀರೇ ಹುರುಳಿಕಟ್ಟು. ಮಳೆಗಾಲದಲ್ಲಿ ಹುರುಳಿ ಕಟ್ಟಿನ ಘಮ ತೇಲಿ ಬಂದರೆ ಆಹಾ ಎಷ್ಟು ಸುಂದರ ಅನುಭೂತಿ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ
ಸೌದಿ ದೇಶದ ಹಿನ್ನೆಲೆ…: ದರ್ಶನ್ ಜಯಣ್ಣ ಸರಣಿ
ಈ ದೇಶದ ಮೊದಲ ಹೆಸರು ನಜ್ದ್ ಮತ್ತು ಹೇಜಾಜ್ ಎಂದಾಗಿತ್ತು. ಹೆಜಾಜ್ನಲ್ಲಿಯೇ ಮೆಕ್ಕಾ- ಮದೀನಾ ಎಲ್ಲ ಇರುವುದು ಮತ್ತು ನಜ್ದ್ ಎಂದರೆ ಇಂದಿನ ಸೌದಿಯ ಮಧ್ಯ ಭಾಗವಾಗಿದೆ. ಅಬ್ದುಲ್ ಅಜೀಜ್(1875 – 1953) ಈ ಎರಡು ಭಾಗಗಳ ಜೊತೆಗೆ ತಂಪಾದ ಬೆಟ್ಟಗುಡ್ಡಗಳಿಂದ ಕೂಡಿರುವ ಯೆಮೆನ್ಗೆ ಹೊಂದಿಕೊಂಡಿರುವ ದಕ್ಷಿಣದ ನಜ್ರನ್, ಅಸಿರ್ ಮತ್ತು ಉತ್ತರದ ಅಂದರೆ ಸಿರಿಯಾ ಇರಾಕ್ನ ಕಡೆಯ ನಾರ್ದರ್ನ್ ಗಡಿಯನ್ನು ಹಾಗೆಯೇ ಇಂದಿನ ತೈಲದ ತೊಟ್ಟಿಲಾದ ಈಸ್ಟರ್ನ್ ಪ್ರಾವಿನ್ಸ್ ಅನ್ನು ನಂತರದ ವರ್ಷಗಳಲ್ಲಿ ದಂಗೆ ಹೊರಟು ಸೌದಿಗೆ ಸೇರಿಸಿಕೊಳ್ಳುತ್ತಾನೆ.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ನಾಲ್ಕನೆಯ ಬರಹ
ಬರೀ ನಾಲ್ಕು ಗೋಡೆಯ ಮಧ್ಯೆ ಕಲಿಯುವುದೇ ಶಿಕ್ಷಣವಲ್ಲ…!!: ಬಸವನಗೌಡ ಹೆಬ್ಬಳಗೆರೆ ಸರಣಿ
ಒಮ್ಮೆ ಪಟ್ಟಣದ ಮಕ್ಕಳಿಗೆ ಭತ್ತ, ಕುಂಬಳಕಾಯಿ ಇಟ್ಟು ಭತ್ತ ಬೆಳೆಯುವ ಗಿಡ ತೋರಿಸಿ ಕುಂಬಳಕಾಯಿ ಬೆಳೆಯುವ ಗಿಡ ಹೇಗಿರಬಹುದು ಎಂದು ಕೇಳಿದರಂತೆ. ಆಗ ಅವರು ಚಿಕ್ಕ ಭತ್ತವನ್ನು ಬೆಳೆಯುವ ಗಿಡವೇ ಈ ರೀತಿ ಇರಬೇಕಾದರೆ ಇಷ್ಟು ದಪ್ಪನೆಯ ಕುಂಬಳಕಾಯಿಯ ಬೆಳೆಯುವ ಗಿಡದ ಕಾಂಡ ಇನ್ನೂ ದಪ್ಪದಾಗಿರಬೇಕು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ
ಕಾವ್ಯದ ಮಳೆ ಸುರಿಸಿ ಮುಕ್ತರಾದ ವೆಂಕಟೇಶಮೂರ್ತಿಗಳು: ಸುಮಾವೀಣಾ ಸರಣಿ
ಬೆಂಗಳೂರಿನ ಸಂತಜೋಸೆಫರ ಕಾಲೇಜಿನಲ್ಲಿ ಸತತ 27 ವರ್ಷ ಒಂದೇ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಇವರು ಮಾಯವಾಗಿದ್ದ ಕನ್ನಡವನ್ನು ಕನ್ನಡ ಸಂಘ ಮಾಡುವ ಮೂಲಕ ಕನ್ನಡಮಯವಾಗಿಸಿದ್ದರು. ತಮ್ಮ ಪುಸ್ತಕಗಳಲ್ಲದೆ ತಮ್ಮ ವಿದ್ಯಾರ್ಥಿಗಳಿಂದಲೂ ಪುಸ್ತಕವನ್ನು ಹೊರತಂದವರು.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತೊಂಭತ್ತನೆಯ ಬರಹ ನಿಮ್ಮ ಓದಿಗೆ
ಬಾರ್ಬೆಡೋಸ್ ದೇಶದ ಕವಿ ಎಸ್ಟರ್ ಫಿಲಿಪ್ಸ್: ಎಸ್. ಜಯಶ್ರೀನಿವಾಸ ರಾವ್ ಸರಣಿ
ಫಿಲಿಪ್ಸ್ ಅವರ ಕವಿತೆಗಳಲ್ಲಿ ಅಪಾರವಾದ ಉದಾರ ಮನೋಭಾವವಿದೆ. ‘ವ್ಯಕ್ತಪಡಿಸಿದ ಪ್ರತಿಯೊಂದು ಕಲ್ಪನೆ ಅಥವಾ ಭಾವನೆಯು ಜನರು ಅಥವಾ ಅವರ ಸುತ್ತಲಿನ ಪ್ರಪಂಚದ ಮೇಲೆ ಅವಲಂಬಿತವಾಗಿರುವುದರಿಂದ ತನಗಾಗಿ ಮಾತ್ರ ಬರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ವೆಸ್ಟ್ ಇಂಡೀಸ್-ನ ಬಾರ್ಬೆಡೋಸ್ ದೇಶದ ಕವಿ  ಎಸ್ಟರ್ ಫಿಲಿಪ್ಸ್-ರವರ (ESTHER PHILLIPS) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
						








