Advertisement

ಸರಣಿ

ಹ್ಯಾಂಗರ್ಸ್‌ ಆನ್‌…..

ಹ್ಯಾಂಗರ್ಸ್‌ ಆನ್‌…..

ಬರಹಗಾರನಾಗಿ ನಾನು Hanger on ಸ್ಥಾನದ ಪಾತ್ರವನ್ನೇ ತುಂಬಾ ಇಷ್ಟಪಡುತ್ತೇನೆ. ಯಾರೂ ನಿಮ್ಮನ್ನು ಗಮನಿಸುವುದಿಲ್ಲ, ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಹೆಚ್ಚು ಜನ ನಿಮ್ಮನ್ನು ನಿಷ್ಪ್ರಯೋಜಕ ವ್ಯಕ್ತಿ ಎಂದು ಪರಿಗಣಿಸಿ ನಿಮ್ಮ ತಂಟೆಗೇ ಬರುವುದಿಲ್ಲ. ನಿಮ್ಮ ಸ್ವಾತಂತ್ರ್ಯ, ನಿಮಗೆ ಸಿಗುವ ಸಮಯ ಎಲ್ಲವೂ ಹೆಚ್ಚಾಗುತ್ತದೆ. ಎಲ್ಲರನ್ನೂ ನೀವು ನಿರಾಳವಾಗಿ ಗಮನಿಸಬಹುದು. ನಿಮಗೇ ಗೊತ್ತಿಲ್ಲದಂತೆ ನಿಮ್ಮ ವ್ಯಕ್ತಿತ್ವಕ್ಕೆ ಒಂದಕ್ಕಿಂತ ಹೆಚ್ಚು ಆಯಾಮಗಳು ಸಿಗುತ್ತವೆ. ನನ್ನ ಕುಟುಂಬದ ಸದಸ್ಯರು ಇದನ್ನೆಲ್ಲ ಒಪ್ಪುವುದಿಲ್ಲ. ಇದನ್ನು ಒಂದು ತಂತ್ರವೆಂದು ಭಾವಿಸುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೆರಡನೆಯ ಪ್ರಬಂಧ ನಿಮ್ಮ ಓದಿಗೆ

read more
ಯುದ್ಧಕಾಲದ ಸಿಗಾರುಪ್ರಿಯ ನಾಯಕ

ಯುದ್ಧಕಾಲದ ಸಿಗಾರುಪ್ರಿಯ ನಾಯಕ

1932ರಲ್ಲಿ ಚರ್ಚಿಲ್ ತನ್ನ ಪೂರ್ವಜರ ಇತಿಹಾಸ ಹುಡುಕಿ ಬರೆಯಲು ಯುರೋಪ್ ತಿರುಗಾಟದಲ್ಲಿದ್ದಾಗ ಜರ್ಮನಿಯಲ್ಲಿ ಹಿಟ್ಲರ್‌ನನ್ನು ಭೇಟಿಯಾಗಲು ಬಯಸಿದ್ದರು. ಹಿಟ್ಲರ್ ಭೇಟಿಗೆ ಪೂರ್ವದಲ್ಲಿ ತಾನು ಕೇಳಬೇಕೆಂದುಕೊಂಡ ಪ್ರಶ್ನೆಗಳನ್ನು ಬರೆದೂ ತಪುಪಿಸಿದ್ದರು. ಅವುಗಳಲ್ಲೊಂದು ಯಹೂದಿ ದ್ವೇಷದ ಕುರಿತಾದ “ಯಾವುದೇ ಮನುಷ್ಯ ತಾನು ಎಲ್ಲಿ ಹುಟ್ಟುವೆ ಎಂದು ಹೇಗೆ ನಿರ್ಧರಿಸಲು ಸಾಧ್ಯ?” ಎಂಬುದಾಗಿತ್ತು. ಇಂತಹ ಪ್ರಶ್ನೆಗಳೇ ಅಂದು ಇಬ್ಬರು ನಾಯಕರ ಭೇಟಿ ರದ್ದಾಗಲು ಕಾರಣ ಆಗಿರಬೇಕು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

read more
ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ನೆದರ್ಲ್ಯಾಂಡ್ಸ್‌ ಕಟ್ಟಿಕೊಟ್ಟ ಮರೆಯಲಾಗದ ನೆನಪುಗಳು…

ಉದ್ಘಾಟನಾ ಸಮಾರಂಭದಲ್ಲಿ ಭವ್ಯ ಸಭಾಂಗಣದ ಹೊರಗಡೆ ನೂರಾರು ಹಣತೆಗಳ ಗೋಪುರವನ್ನು ಕಲಾತ್ಮಕವಾಗಿ ನಿರ್ಮಿಸಿದ್ದರು. ಹಿರೊಶಿಮಾ ಮತ್ತು ನಾಗಸಾಕಿಯಲ್ಲಿ ಅಮೆರಿಕದ ಬಾಂಬುದಾಳಿಗೆ ಈಡಾದ ಲಕ್ಷಾಂತರ ನತದೃಷ್ಟರ ಸ್ಮರಣಾರ್ಥ ಆ ಹಣತೆಗಳನ್ನು ಬೆಳಗುವ ಅವಕಾಶವನ್ನು ಪ್ರತಿನಿಧಿಗಳಿಗೆ ಕಲ್ಪಿಸಲಾಗಿತ್ತು. ಅಮೆರಿಕದ ಹದಿಹರೆಯದ ಹುಡುಗಿಯೊಬ್ಬಳು ಬಹಳ ತಲ್ಲೀನತೆಯಿಂದ ದೀಪ ಬೆಳಗಿಸಲು ಪ್ರಯತ್ನಿಸುತ್ತಿದ್ದಳು. ಬಾಂಬು ದುರಂತಕ್ಕೆ ಸಂಬಂಧಿಸಿದ ವಿವಿಧ ಚಿತ್ರಗಳ ಪೋಸ್ಟರ್‌ಗಳನ್ನು ಅಲ್ಲಿಯೆ ಪ್ರದರ್ಶನಕ್ಕೆ ಇಡಲಾಗಿತ್ತು. ಆ ಭಯಂಕರ ಚಿತ್ರಗಳು ಅವಳನ್ನು ಘಾಸಿಗೊಳಿಸಿದ್ದವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 60ನೇ ಕಂತು ನಿಮ್ಮ ಓದಿಗೆ.

read more
ನಾನೇಕೆ ಪಾತ್ರವಾಗುವುದಿಲ್ಲ

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

read more
ಶಾಲಾ ಕಲಿಕೆಯ ಆರಂಭದ ದಿನಗಳು…..

ಶಾಲಾ ಕಲಿಕೆಯ ಆರಂಭದ ದಿನಗಳು…..

ಎದುರು ಮನೆಯಾದ್ದರಿಂದ ಗೃಹ ಕೆಲಸಗಳನ್ನು ಮಾಡುವಾಗ ಬರುತ್ತಿದ್ದರು. ಪ್ರತಿದಿನವು ಪಕ್ಕದಲ್ಲೆ ಕೂರಿಸಿಕೊಂಡು ಅಕ್ಷರಾಭ್ಯಾಸ ಮಾಡಿಸಿದರು. ನಾನು ಹಠಕ್ಕೆ ಬಿದ್ದವನಂತೆ ಕಲಿತೆ. ಅದೊಂದು ತಪಸ್ಸು ಎನ್ನುವಂತೆ ಕಲಿತುಕೊಂಡೆ. ಅಲ್ಲಿಂದ ನನ್ನಲ್ಲಿ ಆತ್ಮವಿಶ್ವಾಸ ಇನ್ನಷ್ಟು ಹೆಚ್ಚಿತು. ಓದುವುದನ್ನು ಬಹಳ ಬೇಗನೆ ಕಲಿತಿದ್ದೆ. ಅಷ್ಟರಲ್ಲಾಗಲೇ ಒಂದನೆ ತರಗತಿಯ ಪುಸ್ತಕದ ಆರು ಪಾಠಗಳು ಮುಗಿದು ಹೋಗಿದ್ದವು. ಏಳನೆಯ ಪಾಠವೆ ‘ಚರಕ’ ಗಾಂಧೀಜಿಯವರ ಆದರ್ಶದ ಪ್ರತಿಬಿಂಬದಂತಿದ್ದ ನಮ್ಮ ಉಡುಪುಗಳನ್ನು ನಾವೆ ತಯಾರಿಸಿಕೊಳ್ಳಬೇಕು ಎನ್ನುವ ಸೂಚಕವಾಗಿ ನೂಲು ನೇಯುತಿದ್ದ ಚರಕದ ಮುಂದೆ ಕುಳಿತಿದ್ದ ಚಿತ್ರ ನಮ್ಮನ್ನು ಆಕರ್ಷಿಸಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

read more
“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

“ರಾಜಾಜಿನಗರ” ಹೆಸರಿನ ಚರಿತ್ರೆ ಗೊತ್ತಾ?

ಒಂದು ಭಾನುವಾರ ಬೆಳಿಗ್ಗೆ ಇಡೀ ರಾಜಾಜಿನಗರ ಬೆಚ್ಚಿ ಬೀಳುವ ಹಾಗೇ ದೊಡ್ಡ ಶಬ್ದ ಕೇಳಿಸಿತು. ಎಲ್ಲರೂ ಧಾವಂತದಿಂದ ಅವರವರ ಮನೆಗಳಿಂದ ಆಚೆ ಬಂದರು. ಏನು ಏನು ಅಂದುಕೊಂಡು ಅವರವರಲ್ಲೇ ಮಾತಾಡಿ ಕೊಂಡರು. ಸ್ವಲ್ಪ ಹೊತ್ತಿಗೆ ಮೊದಲು ವಿಮಾನ ಹೋಯಿತು, ಅದೇ ಸಿಡಿದು ಹೋಗಿರಬೇಕು ಎಂದು ತರ್ಕಿಸಿದರು. ಮನೆಗೆ ಬೀಗ ಜಡಿದು ಬಿದ್ದಿರುವ ವಿಮಾನದ ಅವಶೇಷ ನೋಡಲು ಸಾಲು ಸಾಲಾಗಿ ಇಡೀ ಸಂಸಾರ ಹೊರಟಿತು. ನಾನೂ ಈ ಗುಂಪಿನಲ್ಲಿದ್ದೆ. ಸುಮಾರು ದೂರ ಎರಡು ಮೂರು ಗಂಟೆ ನಡೆದೆವು ಅಂತ ಕಾಣುತ್ತೆ. ಎಲ್ಲೂ ವಿಮಾನದ ಅವಶೇಷ ಕಾಣಿಸಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎರಡನೇ ಕಂತು ನಿಮ್ಮ ಓದಿಗೆ

read more
ಸರ್ಟಿಫಿಕೇಟ್‌ ದಾತರು

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

read more
ಮುಸಾಫಿರ್ – ಇ – ಲಂಡನ್

ಮುಸಾಫಿರ್ – ಇ – ಲಂಡನ್

ಸರ್ ಸಯ್ಯದ್ ಅಹ್ಮದ್‌ರ ಬ್ರಿಟಿಷ್ ಒಲವಿನ ಹೊರತಾಗಿ ಭಾರತೀಯ ಮುಸ್ಲಿಂರನ್ನು ಆಧುನೀಕರಣದ ಕಡೆಗೆ ಒಯ್ಯುವ ಅವರ ನಿರಂತರ ಯತ್ನದ ಕಾರಣಕ್ಕೆ “ಆಧುನೀಕರಣದ ಪ್ರವರ್ತಕ” ಎಂದೂ ಅವರನ್ನು ಕರೆದಿದ್ದಾರೆ. ಶ್ರದ್ಧಾವಂತ ಮುಸ್ಲಿಂ ಆಗಿದ್ದರೂ ಧಾರ್ಮಿಕ ಸಾಂಪ್ರದಾಯಿಕತೆ ಸಿದ್ಧಾಂತಗಳ ವಿಮರ್ಶಕರು ವಿರೋಧಿಯೂ ಆಗಿದ್ದರು. ಯೂರೋಪಿನ ವಿಜ್ಞಾನವನ್ನು ಆಧರಿಸಿದ ತಮ್ಮದೇ ಧರ್ಮಶಾಸ್ತ್ರವನ್ನು ರೂಪಿಸಿದ್ದರು. 1870ರಲ್ಲಿ ಆರಂಭಿಸಿದ್ದ “ಮಹಮದೀಯ ಸಮಾಜ ಸುಧಾರಕ” ಎನ್ನುವ ನಿಯತಕಾಲಿಕ ಅವರ ತಿಳಿವು ನೋಟಗಳನ್ನು ತಿಳಿಸುತ್ತದೆ.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

read more
ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ