Advertisement

ಸರಣಿ

ಚೆಗೆವಾರನನ್ನು ನೆನಪಿಸುವ ʻಮೋಟಾರ್ ಸೈಕಲ್ ಡೈರೀಸ್ʼ

ಚೆಗೆವಾರನನ್ನು ನೆನಪಿಸುವ ʻಮೋಟಾರ್ ಸೈಕಲ್ ಡೈರೀಸ್ʼ

1952ರಲ್ಲಿ ಅದೊಂದು ದಿನ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಒಂದಾದ ಅರ್ಜಂಟೀನಾದಲ್ಲಿ ಮೆಡಿಕಲ್ ಓದುತ್ತಿದ್ದ ಸ್ನೇಹಿತರಾದ ಅರ್ನೆಸ್ಟೋ ಚೆಗೆವಾರ ಮತ್ತು ಆಲ್ಬರ್ಟೋ ಗ್ರೆನಾಡೋಗೆ ಒಂದು ಅಪೂರ್ವವಾದ ಉಮೇದು ಉಂಟಾಗುತ್ತದೆ. ಅದು ಎಂಥವರನ್ನೂ ಬೆಚ್ಚಿಬೀಳಿಸುವಂಥಾದ್ದು. ಸುಮಾರು ಎಂಟು ಸಾವಿರ ಮೈಲಿ ವಿಸ್ತಾರದ ಇಡೀ ದಕ್ಷಿಣ ಅಮೆರಿಕವನ್ನು 1939ನೇ ಮಾಡೆಲ್ಲಿನ ಮೋಟಾರ್ ಬೈಕಿನಲ್ಲಿ ಸುತ್ತಾಡಿಕೊಂಡು ಬರಬೇಕು, ಎಂದು. ಹಾಗೆಂದೇ ಪ್ರಯಾಣ ಹೊರಟ ಗೆಳೆಯರಿಬ್ಬರ ಸ್ವಭಾವ, ನಡವಳಿಕೆ ಒಂದಕ್ಕೊಂದು ತಾಳಮೇಳವಿಲ್ಲದ್ದು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಬ್ರೆಜಿ಼ಲ್‌ನ ʻಮೋಟಾರ್ ಸೈಕಲ್ ಡೈರೀಸ್ʼ ಸಿನಿಮಾದ ವಿಶ್ಲೇಷಣೆ

read more
ಉಜ್ಬೆಕಿಸ್ತಾನದ ನೆನಪಿನಲ್ಲಿ ಇತಿಹಾಸದ ನೋಟಗಳು

ಉಜ್ಬೆಕಿಸ್ತಾನದ ನೆನಪಿನಲ್ಲಿ ಇತಿಹಾಸದ ನೋಟಗಳು

ನಮ್ಮ ಗೈಡ್, ಇತಿಹಾಸ ತಜ್ಞೆ ಗುಲ್ಚೆಹರಾ ನಮ್ಮನ್ನು ಈ ಮದ್ರಸಾ ಮುಂದೆ ಇರುವ ಬೃಹತ್ತಾದ ಏಕಶಿಲಾ ಕುಂಡವನ್ನು ತೋರಿಸಿದಳು. ಅದು ಒಂದು ಟ್ಯಾಂಕರ್ ನೀರು ತುಂಬುವಷ್ಟು ಆಳ ಮತ್ತು ಅಗಲ ಹೊಂದಿದೆ. ೧೯೧೭ರಲ್ಲಿ ರಷ್ಯಾದಲ್ಲಿ ನಡೆದ ಅಕ್ಟೋಬರ್ ಮಹಾಕ್ರಾಂತಿ ನಡೆದ ಘಟನೆಯಲ್ಲಿ ಕಮ್ಯುನಿಸ್ಟ್ ಸರ್ಕಾರ ಬಂದದ್ದು ಗೊತ್ತಾದ ಕೂಡಲೆ ಸಮರಕಂದದ ಯುವತಿಯರು ತಮ್ಮ ಬುರ್ಖಾಗಳನ್ನು ತಂದು ಈ ಕುಂಡದಲ್ಲಿ ಹಾಕಿ ಸುಟ್ಟರು ಎಂದು ಗುಲ್ ಚೆಹರಾ ತಿಳಿಸಿದಳು. ಹಾಗೆ ಬುರ್ಖಾಗಳನ್ನು ಸುಟ್ಟವರಲ್ಲಿ ಆಗ ಯುವತಿಯಾಗಿದ್ದ ತನ್ನ ಅಜ್ಜಿಯೂ ಇದ್ದಳೆಂದು ಹೇಳಿದಳು. ನಮಗೆಲ್ಲ ಆಶ್ವರ್ಯವೆನಿಸಿತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗೆಲೆಲ್ಲʼ ಸರಣಿಯ ೪೬ನೇ ಕಂತು ಇಂದಿನ ಓದಿಗಾಗಿ

read more
ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

“ನನ್ನ ಸ್ವಕಾರಣದಿಂದ ಪಿಎಚ್.ಡಿ ಸಂಶೋಧನೆಗೂ, ಅತಿಥಿ ಉಪನ್ಯಾಸಕ ವೃತ್ತಿಗೂ ರಾಜಿನಾಮೆ ನೀಡುತ್ತಿರುವೆ’ ಎಂದು ಒಂದು ಸಾಲಿನ ರಾಜಿನಾಮೆ ಬರೆದು ಲಕೋಟೆಯಲ್ಲಿಟ್ಟು ಯಾರ್ಯಾರಿಗೆ ಕೊಡಬೇಕೊ ಅವರಿಗೆಲ್ಲ ಕೊಟ್ಟು ಹಾಸ್ಟಲಿಗೆ ಬಂದೆ. ಆ ಕ್ಷಣವೇ ಕ್ಯಾಂಪಸ್ಸನ್ನು ತೊರೆದೆ. ಯಾರಿಗೂ ಹೇಳಲಿಲ್ಲ. ಇಷ್ಟು ಕಾಲ ಪೊರೆದ ಕ್ಯಾಂಪಸ್ಸೇ ನಿನ್ನನ್ನು ಬಿಟ್ಟು ಹೋಗುತ್ತಿರುವೆ. ನಿನ್ನ ಈ ನೆಲದ ಸಾರವನೆಲ್ಲ ತಾಯ ಎದೆ ಹಾಲ ಕುಡಿದಂತೆ ಹೀರಿ ಅರಗಿಸಿಕೊಂಡಿರುವೆ. ಹೋಗುವೆ ನನ್ನ ಮುದ್ದಿನ ನವಿಲುದಾರಿಗಳೇ ಎಂದು ಕತ್ತಲಲ್ಲಿ ಬಂದಿದ್ದೆ”
ʻನನ್ನ ಅನಂತ ಅಸ್ಪೃಶ್ಯ ಆಕಾಶʼ ಮೊಗಳ್ಳಿ ಗಣೇಶ್‌  ಆತ್ಮಕತೆಯ  ಮೂವತ್ತೇಳನೆಯ ಕಂತು. 

read more
ಕೆ.ವಿ.‌ತಿರುಮಲೇಶ್ ಅವರ ಹೊಸ ಸರಣಿ ಆರಂಭ

ಕೆ.ವಿ.‌ತಿರುಮಲೇಶ್ ಅವರ ಹೊಸ ಸರಣಿ ಆರಂಭ

ಅಳಿಲು ತಾನು ಸಂಗ್ರಹಿಸಿದ ಕಾಳುಗಳನ್ನು ಯಾರಿಗೂ ಕಾಣದಂತೆ ಬಚ್ಚಿಟ್ಟು ಎಲ್ಲಿ ಬಚ್ಚಿಟ್ಟಿದ್ದೇನೆನ್ನುವುದನ್ನು ಮರೆತ ಹಾಗೆ ಹಿರಿಯ ಬರಹಗಾರ ಕೆ.ವಿ. ತಿರುಮಲೇಶ್ ಅವರು ಇತಿಹಾಸದ ಕುರಿತು ಮಾಡಿಕೊಂಡು ಮರೆತಿದ್ದ ಟಿಪ್ಪಣಿಗಳ ಪುಸ್ತಕವೊಂದು ಈಗ ಬಹು ವರ್ಷಗಳ ನಂತರ ಸಿಕ್ಕಿದೆ. ಅವು ಭಾರತದ ರಾಜವಂಶಗಳನ್ನು ಅರಿಯುವ ನಿಟ್ಟಿನಲ್ಲಿ ಪೋಣಿಸಿಕೊಂಡ ಶತಮಾನಗಳ ಮಾಹಿತಿ. ಈ ಮಾಹಿತಿಯನ್ನು ಲೇಖನ ರೂಪದಲ್ಲಿ ಅವರು ಬರೆಯಲಿದ್ದು, ʼನನ್ನ ಹಿಸ್ಟರಿ ಪುಸ್ತಕʼ ಸರಣಿ ಲೇಖನಗಳು ಪ್ರಕಟವಾಗಲಿವೆ. ಸರಣಿಯ ಮೊದಲ ಬರಹ ಇಂದಿನ ಓದಿಗಾಗಿ.

read more
ಸಮರಕಂದ್‌ನ ಪಾರಂಪರಿಕ ಸ್ಥಳಗಳು ಮತ್ತು ಬಿಜಾಪುರದ ಗೋಲಗುಮ್ಮಟ

ಸಮರಕಂದ್‌ನ ಪಾರಂಪರಿಕ ಸ್ಥಳಗಳು ಮತ್ತು ಬಿಜಾಪುರದ ಗೋಲಗುಮ್ಮಟ

ಸಮರಕಂದ್ ನಗರದ ರೇಗಿಸ್ತಾನ್ ಚೌಕ್ ಅತ್ಯಂತ ಸುಂದರವಾದ ಇಸ್ಲಾಮೀ ಶೈಲಿಯ ವರ್ಣರಂಜಿತ ಇಮಾರತುಗಳಿಂದ ಕೂಡಿದ ಪ್ರದೇಶವಾಗಿದೆ. ತೈಮೂರ ಲಂಗನ ಗೋರಿ ಕೂಡ ಇಲ್ಲೇ ಇದೆ. ಅದು ಎತ್ತರದ ಪ್ರದೇಶದಲ್ಲಿರುವುದರಿಂದ ಬಹಳಷ್ಟು ಮೆಟ್ಟಿಲುಗಳನ್ನು ಹತ್ತಿ ಹೋಗಬೇಕು. ಸುದೈವದಿಂದ ನಮ್ಮ ಗೈಡ್ ಗುಲ್‌ಚೆಹರಾ ಎಂಬ ಯುವತಿ ಸಮರಕಂದ್ ಇತಿಹಾಸವನ್ನು ಬಹಳ ಚನ್ನಾಗಿ ಬಲ್ಲವಳಾಗಿದ್ದಳು. ಆಕೆ ಸಮರಕಂದ್ ಇತಿಹಾಸದ ಮೇಲೆ ಸಂಶೋಧನೆ ಮಾಡಿದವಳಾಗಿದ್ದಳೆಂಬ ನೆನಪು. ಪ್ರತಿಯೊಂದು ಸ್ಥಳದ ಬಗ್ಗೆ ಆಕೆ ವಿವರಿಸುವ ರೀತಿ ನನಗಂತೂ ಬಹಳ ಉಪಯುಕ್ತವಾಯಿತು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 45ನೇ ಕಂತು ಇಲ್ಲಿದೆ.

read more
ನಡೆ ಎಲ್ಲೆಂದರಲ್ಲಿಗೆ ನಡೆ

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

read more
ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್‌ ನ ʻಕಾಂದಹಾರ್ʼ

ರಾಜಕೀಯ ಸ್ಥಿತಿಗೊಂದು ಪ್ರತಿಕ್ರಿಯೆ ಇರಾನ್‌ ನ ʻಕಾಂದಹಾರ್ʼ

ಮೊಹಿಸಿನ್ ಮಕ್ಬಲ್‌ಬಫ್ ಆಫ್ಘಾನಿಸ್ತಾನದ ಬಗ್ಗೆ ತಯಾರಿಸಿದ ಇತರ ಚಿತ್ರಗಳಿಗಿಂತ ಆಫ್ಘಾನಿಸ್ತಾನದಲ್ಲಿಯೇ ಚಿತ್ರೀಕರಣಗೊಂಡು ವಿಶೇಷ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ ʻಕಾಂದಹಾರ್ʼ. ನರಕದಲ್ಲಿರುವವರ ಬಗ್ಗೆ ಅಲ್ಲಿಯೇ ಹೋಗಿ ಚಿತ್ರೀಕರಣ ಮಾಡುತ್ತೇನೆ ಎನ್ನುವ ಎದೆಗಾರಿಕೆ ಮಕ್ಬಲ್‌ಬಫ್‌ನದು. ತಾನು ಅಲ್ಲಿರುವಷ್ಟು ಕಾಲ ಪ್ರತಿದಿನವೂ ಒಂದು ಪರೀಕ್ಷೆಯಾಗಿತ್ತು, ಜೀವವನ್ನು ಎಡಗೈಯಲ್ಲಿ ಹಿಡಿದಿರಬೇಕಾಗಿತ್ತು. ಅಲ್ಲಿನ ಜನರ ಅನುಮಾನ, ಆತಂಕಗಳನ್ನು ತೀರ ಪ್ರಯಾಸದಿಂದ ನಿವಾರಿಸಬೇಕಾಗಿತ್ತು. ಚಿತ್ರದಲ್ಲಿ ನಟಿಸಲು ಅಲ್ಲಿನವರನ್ನೇ ಅವಲಂಬಿಸಬೇಕಾದ ಪ್ರಸಂಗವಿತ್ತು.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಇರಾನ್‌ ನ ʻಕಾಂದಹಾರ್ʼ ಸಿನಿಮಾದ ವಿಶ್ಲೇಷಣೆ

read more
‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

read more
ಅಸಂಗತವಾಗಿ ಸಂಗಾತಿ ಆಗಿದ್ದೆ

ಅಸಂಗತವಾಗಿ ಸಂಗಾತಿ ಆಗಿದ್ದೆ

ನಿಜ; ತಾತನನ್ನು ಹೊರಗೆ ಮಲಗಿಸಿದ್ದರು. ಬಸಿದು ಹೋಗಿದ್ದ. ಮಾತು ಸರಿಯಾಗಿ ಹೊರಡುತ್ತಿರಲಿಲ್ಲ. ಹೋದ ಕೂಡಲೆ ವ್ಯಗ್ರ ನಾಯಿಗಳಂತೆ ನನ್ನ ಮೇಲೆ ಆ ಬಂಧು ಬಳಗ ಬೊಗಳಿತು. ಕೇರು ಮಾಡಲಿಲ್ಲ. ಅವನು ದರಿದ್ರ ನನ್ನಪ್ಪ ಹೆಣದಂತೆ ಅರೆ ಬೆತ್ತಲೆಯಾಗಿ ಬೀದಿಯ ಲೈಟು ಕಂಬಕ್ಕೆ ಒರಗಿಕೊಂಡು ಅಮಲಾಗಿ ಯಾರ ಮೇಲೊ ಬೈಯ್ಯುತ್ತಿದ್ದ. ನನ್ನ ಕಂಡ ಕೂಡಲೇ… ‘ವರದಕ್ಷಿಣೆಯಾ ಯೆಸ್ಟು ತಕಂದಿದ್ದಾನಂತೆ ಕೇಳೀ… ಆ ದುಡ್ಡು ನನುಗೆ ಸೇರಬೇಕೂ’ ಎಂದು ಕುಯ್‌ಗರೆಯುತ್ತಿದ್ದ. ಇವನು ಇಂಗೇ ಭಿಕ್ಷೆ ಬೇಡಿಕೊಂಡೇ ಸಾಯುತ್ತಾನೆ ಎನಿಸಿತು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 35ನೇ ಕಂತು

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ