ಸಮತಾವಾದಿ ಪ್ರಧಾನಿಯ ವಿಲಾಯತಿ ದಿನಗಳು
ನೆಹರೂರ ಆಗಿನ ಜೀವನದೃಷ್ಟಿ ದ್ವಂದ್ವಗಳಿಂದ ಕೂಡಿತ್ತು. ಓದು, ಸಹವಾಸ, ಉಪನ್ಯಾಸ, ಸಂಪರ್ಕಗಳು ತಾತ್ವಿಕ ಪ್ರಜ್ಞೆಯನ್ನು ಸುಪ್ತವಾಗಿ ಪ್ರಭಾವಿಸಿದಂತೆ ಕಾಣಿಸುತ್ತಿದ್ದರೂ ಹೆಚ್ಚಿನ ಸಮಯ “ಆ ಕ್ಷಣದ ಸುಖ ನೆಮ್ಮದಿಯ” ನವಿರಾದ ಜೀವನ ಹಿತಕರ ಅನುಭವ ಹುಡುಕಾಟದಲ್ಲಿ ಮುಳುಗಿತ್ತು. ಹತ್ತೊಂಭತ್ತನೆಯ ಶತಮಾನದ ಮುಕ್ತಾಯಕ್ಕಿಂತ ಮೊದಲು ಬರೆಯುತ್ತಿದ್ದ ಆಸ್ಕರ್ ವೈಲ್ಡ್, ವಾಟರ್ ಪೇಟರ್ ರಿಂದ ಜನಪ್ರಿಯವಾದ ನವಿರು ಬದುಕಿನ ಹಂಬಲ ಅವರನ್ನು ಸೋಂಕಿತ್ತು. ರಾಷ್ಟ್ರೀಯತೆ, ಸ್ವಾತಂತ್ಯ್ರ ಸಂಗ್ರಾಮದ ಒಲವು ಸೆಳೆತಗಳು ಆರಂಭವಾಗಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ದಿವಂಗತ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಕುರಿತ ಮರವಂತೆ ಬರಹ ಇಲ್ಲಿದೆ.
ಸೋವಿಯತ್ ದೇಶದಲ್ಲಿ ಮಿಂಚಿದ ನಮ್ಮ ಧ್ವಜ
ತಾಷ್ಕೆಂಟ್ ವಿಮಾನ ನಿಲ್ದಾಣದಿಂದ ಹೊರಗೆ ಬಂದ ಕೂಡಲೇ ನನಗೆ ಆಶ್ಚರ್ಯ ಕಾದಿತ್ತು. ಎಲ್ಲೆಂದರಲ್ಲಿ ಭಾರತದ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿದ್ದವು. ಬೀದಿಗಳು ನಮ್ಮ ಧ್ವಜದಿಂದ ಕೂಡಿದ ಪರಪರಿಗಳಿಂದ ಅಲಂಕೃತವಾಗಿದ್ದವು. ಎಲ್ಲೆಂದರಲ್ಲಿ ನಮ್ಮ ರವಿಶಂಕರ್ ಸಿತಾರ್ ಮತ್ತು ಬಿಸ್ಮಿಲ್ಲಾ ಖಾನ್ ಶಹನಾಯಿ ನಾದಮಾಧುರ್ಯಕ್ಕೆ ಕಿವಿಗಳು ತೆರೆದುಕೊಳ್ಳತೊಡಗಿದವು. ನಮ್ಮ ಗೈಡ್ ನಮ್ಮನ್ನು ಪಂಚತಾರಾ “ಹೋಟೆಲ್ ತಾಷ್ಕೆಂಟ್”ಗೆ ಒಯ್ದರು. ಅಲ್ಲಿಯೆ ರಿಷಪ್ಷನಿಸ್ಟ್ “ಇಂಜಿಷ್ಕಿ ದ್ರುಜಿಯೆ” (ಇಂಡಿಯನ್ ಫ್ರೆಂಡ್ಸ್) ಎಂದು ಖುಷಿಯಿಂದ ಬರಮಾಡಿಕೊಂಡರು. ಭಾರತದ ಬಗ್ಗೆ ಸೋವಿಯತ್ ದೇಶದವರಿಗೆ ಇದ್ದ ಅಭಿಮಾನ, ಪ್ರೀತಿ, ಗೌರವ ಕಂಡು ಆಶ್ಚರ್ಯಚಕಿತನಾದೆ.
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 43ನೇ ಕಂತು ಇಲ್ಲಿದೆ.
ಬದಲಾವಣೆಯಲ್ಲಿ ಸ್ವಾತಂತ್ರ್ಯದ ಸಾಕಾರ
ಈ ಭೂಗೋಳದ ಬಹುತೇಕ ರಾಷ್ಟ್ರಗಳಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಜಗಳ, ಕದನ, ವೈಮನಸ್ಸು, ಪ್ರತಿಭಟನೆ, ಆಗ್ರಹಗಳು ನಡೆಯುತ್ತಲೇ ಇರುವುದನ್ನು ಓದಿದಾಗ, ಕೇಳಿದಾಗ ಮನುಷ್ಯ ಮನಸ್ಸು ಅದೆಷ್ಟು ಅತಂತ್ರವೆನಿಸುತ್ತದೆ. ಆ ಮನಸ್ಸುಗಳು ಅದೆಷ್ಟು ಸುಲಭವಾಗಿ ಆಕ್ರಮಣಶೀಲತೆಯನ್ನು ಅಪ್ಪಿಕೊಳ್ಳುತ್ತವೆ ಎಂದು ಗೋಚರಿಸುತ್ತದೆ. ತಾನು ಮುಖ್ಯ, ತನ್ನದು ಮುಖ್ಯ, ತನ್ನದೇ ಮೇಲು, ತನ್ನದನ್ನು ವಾದಿಸುತ್ತಾ ಮುಂದಿರಿಸಬೇಕು, ಎನ್ನುವುದು ಬರೀ ಮನುಷ್ಯ ಸ್ವಭಾವವೇ ಹೌದು. ಒಮ್ಮೊಮ್ಮೆ ಅದು ಎಲ್ಲ ಪ್ರಾಣಿಗಳ ಸಾರ್ವತ್ರಿಕ ಸ್ವಭಾವ ಎನ್ನುವುದಾದರೂ ಪ್ರಾಣಿಪ್ರಪಂಚವನ್ನು ಗಮನಿಸಿದಾಗ ಈ ಬಗೆಯ ವೈಮನಸ್ಯಗಳು ಕಾಣುವುದಿಲ್ಲ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”
ನನ್ನ ತಾಯಿಬೇರೇ ನನ್ನ ಕಥೆ
ಕಣ್ಣೀರ ಕಣ್ಣರೆಪ್ಪೆಗಳು ತಡೆಯದಾದವು. ತುಳುಕಿದವು. ಹೇಳಿದೆ. ‘ನಾನಲ್ಲ ಕಥೆ ಬರೆದದ್ದು. ಕಥೆಯ ನನ್ನ ತಾಯಿ ಹೇಳಿ ಬರೆಸಿದಳು. ನನ್ನ ತಾಯಿ ಈಗ ನನ್ನ ನೆತ್ತರಲ್ಲಿ ಮಾತ್ರ ಬದುಕಿ ಉಳಿದಿದ್ದಾಳೆ. ಅವಳ ಆತ್ಮ ನನ್ನ ಎದೆಗೂಡ ದೇಗುಲದಲ್ಲಿ ನನ್ನ ಚೈತನ್ಯವಾಗಿದೆ… ಅವಳ ಮೌನ ನನ್ನ ಭಾಷೆಯಾಗಿದೆ. ಅವಳ ಕಿಚ್ಚು ನನ್ನ ಬರೆಹದ ಬೆಳಕಾಗಿದೆ… ನಾನು ನೆಪದ ಕಥೆಗಾರ ಅಷ್ಟೇ… ಅವಳೇ ನನ್ನ ಬರೆಹದ ಬೇರು ಕಾಂಡ ರೆಂಬೆ ಕೊಂಬೆ ಚಿಗುರು ಎಲ್ಲ… ಎಲ್ಲ ಅವಳೇ… ನನ್ನದೇನಿದ್ದರೂ ಅವಳ ಕಥೆಯ ನೆರಳು ಅಷ್ಟೇ’ ಎಂದೆ.
ಮೊಗಳ್ಳಿ ಗಣೇಶ್ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 34ನೇ ಕಂತು
ಓದಿ ತಿಳಿ ಗಿಡವ ನೆಟ್ಟು ಕಲಿ
ಮಣ್ಣು ನಿರ್ಜೀವ ವಸ್ತು ಅಲ್ಲ ಅದು ಜೀವಂತ! ಅದರಲ್ಲಿ ಎಷ್ಟೋ ಕ್ರಿಮಿ ಕೀಟಗಳು, ಶಿಲೀಂದ್ರಗಳು, ಬಹುಮುಖ್ಯವಾಗಿ ಎರೆ ಹುಳುಗಳು ಇವೆಲ್ಲ ಇರಲೇಬೇಕು, ಅವುಗಳನ್ನು ಹೇಗೆ ಹೆಚ್ಚಿಸಬೇಕು, ಮಣ್ಣಿಗೆ ಹೊದಿಕೆ ಹೇಗೆ ಮಾಡಬೇಕು, ಸಸ್ಯಗಳನ್ನು ಸಹಜವಾಗಿ ಹೇಗೆ ಪೋಷಿಸಬೇಕು ಎಂಬೆಲ್ಲ ಹೊಸ ಹೊಸ ವಿಷಯಗಳ ಅರಿವು ನನಗೆ ಈ ಮಹಾನುಭಾವರು ಬರೆದ ಪುಸ್ತಕಗಳ ಮೂಲಕ ತಿಳಿದಿತ್ತು. ಇನ್ನೂ ಹಲವಾರು ಟಿಪ್ಪಣಿ ಮಾಡಿಟ್ಟುಕೊಂಡ ನನ್ನ ಹೊತ್ತಿಗೆಗಳು ಬೃಹದಾಕಾರವಾಗಿ ಬೆಳೆದಿದ್ದವು. ಈಗ ಗಿಡಗಳನ್ನು ಬೆಳೆಯುವ ಸಮಯ ಬಂದಿತ್ತು! ಇದು ಹೊಸದಾಗಿ ರೈತರಾಗುವವರಿಗೆ ಎದುರಾಗುವ ಸಮಸ್ಯೆ. ಸಿಕ್ಕಾಪಟ್ಟೆ ಮಾಹಿತಿಗಳ ಕೇಳಿ ತಬ್ಬಿಬ್ಬಾಗಿ ಬಿಡುತ್ತಾರೆ. ಗುರುಪ್ರಸಾದ್ ಕುರ್ತಕೋಟಿ ಬರೆಯುವ ಅಂಕಣ “ಗ್ರಾಮ ಡ್ರಾಮಾಯಣ”
ʻದ ಡಿಪಾರ್ಟೆಡ್ʼ: ಕ್ರೈಮ್ ಕಥನದ ಅಂತರ್ಮುಖಿ ಪಯಣ
ಕಾಲಿನ್ ಸಲ್ಲಿವನ್ ಎಂಬ ಯುವ ಕ್ರಿಮಿನಲ್ ಪೊಲೀಸ್ ಇಲಾಖೆಯ ಒಳಗೆ ನುಸುಳಿಕೊಂಡು ಅಲ್ಲಿನ ಎಲ್ಲ ವಿದ್ಯಮಾನಗಳನ್ನು ಗ್ಯಾಂಗ್ ಲೀಡರ್ ಗೆ ರವಾನಿಸುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಇದು ಕಥನದ ಪ್ರಾರಂಭಿಕ ಭಾಗವಾದರೆ ಚಿತ್ರ ಮುಂದುವರಿದಂತೆ ಅವರು ತಮ್ಮ ನಿಯೋಜಿತ ಕೆಲಸಗಳಲ್ಲಿ
ತೊಡಗುತ್ತಾರೆ. ಇದರಲ್ಲಿ ನಿರತರಾದಾಗ ಬಿಲ್ಲಿ ಕಾಸ್ಟಿಗನ್ ಮತ್ತು ಕಾಲಿನ್ ಸಲ್ಲಿವನ್ ಅಂತರಂಗದಲ್ಲಿ ಸಂಭವಿಸುವ ಸಂಘರ್ಷದ ಪದರುಗಳನ್ನು ಪ್ರಕಟಿಸುವುದೇ ನಿರ್ದೇಶಕನ ಉದ್ದೇಶ. ಇಂಥದನ್ನು ಪ್ರಕಟಿಸುವ ಏಕಾಂತ ಕ್ಷಣಗಳಲ್ಲಿ ಪಾತ್ರಗಳ ಅಭಿನಯ ಪರಿಣಾಮಕಾರಿ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಅಮೆರಿಕದ ʻದ ಡಿಪಾರ್ಟೆಡ್ʼ ಸಿನಿಮಾದ ವಿಶ್ಲೇಷಣೆ
ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ
ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.
ಒಳಗುದಿಯ ದೀಪ ಉರಿಯುತಿತ್ತು
ಆಗ ನನಗೆ ಒಂದು ಸುಂದರ ಹವ್ಯಾಸ ಇತ್ತು. ಈಗಲೂ ಅದನ್ನು ಬಿಟ್ಟಿಲ್ಲ… ಹಳೆಯ ಹಿಂದಿ ಸಿನಿಮಾ ಹಾಡುಗಳನ್ನು ಕೇಳುತ್ತಲೇ ಇರುವುದು… ಆ ಮುಖೇಶ್, ರಫೀ, ಸೈಗಲ್, ಕಿಶೋರ್ ಕುಮಾರ್, ಲತಾ ಅವರ ಕೊನೆ ಮೊದಲಿಲ್ಲದ ಹಾಡುಗಳ ನನ್ನ ಪೂರ್ವಿಕರಿಗೆಲ್ಲ ಕೇಳಿಸಬೇಕು ಎಂಬಂತೆ ಸುಪ್ತ ಪ್ರಜ್ಞೆಯಲ್ಲಿ ಮಲಗಿದ್ದ ಅವರನ್ನೆಲ್ಲ ಎಬ್ಬಿಸಿ ಈ ಹಾಡನ್ನು ಕೇಳಿ… ಈ ಅನಂತ ಹಿಂದೂಸ್ತಾನಿ ಸಂಗೀತದ ಸಮುದ್ರದ ಅಲೆಯ ರಾಗಗಳ ಆಲಿಸಿ ಎನ್ನುತ್ತಿದ್ದೆ. ನನ್ನ ಅಳಲನ್ನು ಈ ಸಂಗೀತಗಾರರು ಅದೆಷ್ಟು ಸಲ ಸಂತೈಸಿದ್ದಾರೊ ಏನೊ..ಮೊಗಳ್ಳಿ ಗಣೇಶ್ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆಯ 33ನೇ ಕಂತು
ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು
ಮ್ಯಾಕ್ಸ್ ಬೋರ್ನ್ ಬೆಂಗಳೂರಿನಲ್ಲಿದ್ದ ಕೆಲವೇ ತಿಂಗಳುಗಳಲ್ಲಿ, ರಾಮನ್ರ ಮೂಲಕ ಅವರಿಗೆ ಮೈಸೂರು ಸಂಸ್ಥಾನದ ಅಂದಿನ ಹಲವಾರು ಗಣ್ಯರ ಪರಿಚಯವಾಯಿತು. ಹೀಗೆ ಪರಿಚಯವಾದವರಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸಾಹೇಬರೂ ಒಬ್ಬರು. ಆ ಕಾಲದಲ್ಲಿ, ಇಸ್ಮಾಯಿಲ್ ಸಾಹೇಬರು ಬೆಂಗಳೂರಿನಲ್ಲಿ ಹಲವಾರು ಸಾರ್ವಜನಿಕ ಮೂಲ ಸೌಕರ್ಯ ಮತ್ತು ಕಟ್ಟಡಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದರು. ಈ ಕಟ್ಟಡಗಳನ್ನು ವಿನ್ಯಾಸ ಮಾಡಲು ಅವರು ಒಬ್ಬ ನುರಿತ ಆರ್ಕಿಟೆಕ್ಟ್ಗಾಗಿ ಹುಡುಕಾಟದಲ್ಲಿದ್ದರು.
ಶೇಷಾದ್ರಿ ಗಂಜೂರು ಬರಹ








