ಓದುಗರಿಗೊಂದು ಪತ್ರ…
ಈ ಆತ್ಮಕಥನ ಕಾದಂಬರಿಯಲ್ಲಿ ಬರುವ ಎಲ್ಲ ಪಾತ್ರಗಳ ನೆನೆದರೆ ತುಂಬ ಬೇಸರವಾಗುತ್ತದೆ. ಅನೇಕರು ಸತ್ತು ಹೋಗಿದ್ದಾರೆ… ಅವರು ಕೇವಲ ಪಾತ್ರವಾಗಿರಲಿಲ್ಲ… ನನ್ನ ವ್ಯಕ್ತಿತ್ವದ ಬೇರುಗಳಾಗಿದ್ದರು. ಆದರೆ ಆ ಕ್ಷಣಕ್ಕೆ ಪಾತ್ರಗಳಾಗಿಯೇ ಬರೆಹಕ್ಕೆ ಕರೆದುಕೊಂಡೆ. ಇವನು ಕೆಟ್ಟವನು… ಅವರು ಬಹಳ ಒಳ್ಳೆಯವರು ಎಂಬ ಭೇದ ಮಾಡಲಿಲ್ಲ. ಬಾಲ್ಯದಲ್ಲಿ ಇಡೀ ಊರಾದ ಊರೇ ನೆರೆದು ರಾಮಾಯಣ ಮಹಾಭಾರತಗಳ ನಾಟಕ ನೋಡುತ್ತಿದ್ದರು. ನಮಗೆ ರಾಮನೂ ರಾವಣನೂ ಇಬ್ಬರೂ ನಮ್ಮ ಸ್ವಂತ ಸಂಬಂಧಿಕರೇ ಆಗಿರುತ್ತಿದ್ದರು.
‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯಲ್ಲಿ ತಮ್ಮ ಆತ್ಮಕತೆಯನ್ನು ಬರೆದ ಮೊಗಳ್ಳಿ ಗಣೇಶ್ ಕೆಂಡಸಂಪಿಗೆಯ ಓದುಗರಿಗೆ ಪತ್ರವೊಂದನ್ನು ಬರೆದಿದ್ದಾರೆ
ಕರುಳಬಳ್ಳಿಯೋ… ಕೊರಳ ಉರುಳೋ…
ಅಲ್ಲಿ ಜನರು ಒಬ್ಬರಿಗೊಬ್ಬರು ಅಂಟಿಕೊಂಡು ಟೊಮೇಟೊ ಕೆಂಪು ರಸವನ್ನು ಒಬ್ಬರಿಗೊಬ್ಬರು ಮೆತ್ತುತ್ತಿರುತ್ತಾರೆ. ಮುಂದುವರಿದ ಹಾಗೆ ಚಿತ್ರ ಬದಲಾಗಿ ಅವರ ತಲೆಯ ಮೇಲೆ ಅಂಗಾತ ಮಲಗಿದ ಟಿಲ್ಡಾಳನ್ನು ದಾಟಿಸುತ್ತಿರುತ್ತಾರೆ. ಅವಳ ಮೈ ಮೇಲೆ ಟೊಮ್ಯಾಟೋ ರಸ ಹರಿಯುತ್ತಿರುತ್ತದೆ. ಕೆಂಪು ಬಣ್ಣ ಸೂಸುವ ಅಹಿತಕರವಾದ ಭಾವನೆಗಳಿಗೆ ಮತ್ತು ಚಿತ್ರದ ಅಂತರಾಳಕ್ಕೂ ಸಂಬಂಧವಿರುವುದು ವಿಶೇಷ. ಅಲ್ಲದೆ ಟೊಮ್ಯಾಟೊ ರಸದಲ್ಲಿ ಮುಳುಗಿರುವ ಟಿಲ್ಡಾಳ ಮುಖದಲ್ಲಿ ನಗುವಿರುವುದು ಆಶ್ಚರ್ಯವೇ. ಅಲ್ಲದೆ ಇದು ಸಾಕಷ್ಟು ಗೊಂದಲಗಳನ್ನೂ ಹುಟ್ಟಿಸುತ್ತದೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಇಂಗ್ಲೆಂಡ್ನ ʻವಿ ನೀಡ್ ಟು ಟಾಕ್ ಅಬೌಟ್ ಕೆವಿನ್ʼ ಸಿನಿಮಾದ ವಿಶ್ಲೇಷಣೆ
ಸಮಾಜವಾದದ ಪ್ರೇರಣೆಗೊಂದು ಉದಾಹರಣೆ ಸೋವಿಯತ್ ರಷ್ಯಾ
ಸೋವಿಯತ್ ದೇಶಕ್ಕೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಯುವಕರೆಲ್ಲ ಎರಡನೇ ಮಹಾಯುದ್ಧದ ನಂತರ ಜನಿಸಿದವರೇ ಆಗಿದ್ದರು. ಅವರಿಗೆ ೧೯೧೭ರ ಕ್ರಾಂತಿಯಾಗಲಿ, ೧೯೪೫ರಲ್ಲಿ ಕೊನೆಗೊಂಡ ಎರಡನೇ ಮಹಾಯುದ್ಧದ ಅನಾಹುತಗಳಾಗಲೀ ಅನುಭವಕ್ಕೆ ಬರಲು ಸಾಧ್ಯವೇ ಇಲ್ಲ. ಅವನ್ನೆಲ್ಲ ಅವರು ತಿಳಿದುಕೊಳ್ಳುವುದು ಹಿರಿಯರ ಅನುಭವದಿಂದ, ಇತಿಹಾಸದ ಪುಟಗಳಿಂದ. ಬಹುಪಾಲು ಯುವಕರು ಇದನ್ನೆಲ್ಲ ಅರಿತರೂ ಐರೋಪ್ಯ ದೇಶಗಳ ಜನರ ಮತ್ತು ಅವರು ಬಳಸುವ ವಸ್ತುಗಳ ಸಂಪರ್ಕದಿಂದ ಅವರ ಮನಸ್ಸು ಕ್ರಮೇಣ ಕೊಳ್ಳುಬಾಕ ಸಂಸ್ಕೃತಿಯ ಕಡೆಗೆ ವಾಲತೊಡಗಿತು. ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೫೦ನೇ ಕಂತು ಇಲ್ಲಿದೆ.
ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ
ಮಾಳವದ ಯಶೋಧರ್ಮನು ಭಾರತದಲ್ಲಿ ಹೂಣರನ್ನು ಅಣಗಿಸಲು ಪ್ರಮುಖ ಪಾತ್ರ ವಹಿಸಿದವನು. ದಿಗ್ವಿಜಯವನ್ನು ಮಾಡಿ ಬ್ರಹ್ಮಪುತ್ರಾ ನದಿಯಿಂದ ಮಹೇಂದ್ರ ಪರ್ವತದವರೆಗೂ, ಹಿಮಾಲಯದಿಂದ ಪಶ್ಚಿಮ ಸಮುದ್ರದ ತನಕವೂ ವಿಸ್ತರಿಸಿದ್ದ ರಾಜ್ಯವನ್ನು ಮಂಡಸೋರದ ರಾಜಧಾನಿಯಿಂದ ಆಳಿದನು. ಯಶೋಧರ್ಮನು ಉತ್ತಮ ಹಿಂದೂ ಅರಸನಾಗಿದ್ದು ಮನು, ಭರತ ಮೊದಲಾದವರಿಗೆ ಹೋಲಿಸಲ್ಪಟ್ಟಿದ್ದನು. ಈತನ ಮಂತ್ರಿಯಾದ ಧರ್ಮದೋಷನು ವರ್ಣಸಂಕರವಾಗದಂತೆ ಯತ್ನಿಸಿದನು. ಯಶೋಧರ್ಮನ ವಿಷಯಗಳು ಮಂಡಸೋರದ ಶಿಲಾಸ್ತಂಭದಿಂದ ತಿಳಿಯುತ್ತವೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.
ಪದಗಳಿಗೆ ಸಿಗದ ಫಕೀರ
ಭಾರತದಿಂದ ಹೊರಡುವ ಮೊದಲು ಮಾಂಸಾಹಾರ ಮಾಡುವುದಿಲ್ಲ, ವೈನ್ ಕುಡಿಯುವುದಿಲ್ಲ ಎಂದು ತಾಯಿಗೆ ಮಾತು ಕೊಟ್ಟು ಹೊರಟವರು ಗಾಂಧೀಜಿ . 20 ಬ್ಯಾರನ್ ಕೋರ್ಟ್ ರಸ್ತೆಯಲ್ಲಿ ಇನ್ನರ್ ಟೆಂಪಲ್ಗೆ ಭರ್ತಿ ಆಗುವಾಗ ಉಳಿದಿದ್ದ ಮನೆಯ ಮಾಲಕಿ ವಾರಕ್ಕೆ ಮೂವತ್ತು ಶಿಲ್ಲಿಂಗ್ ಬಾಡಿಗೆ ಪಡೆಯುತ್ತಿದ್ದಳು. ಆದರೆ ಸಸ್ಯಾಹಾರ ಒದಗಿಸುವುದು ಆಕೆಗೆ ಕಷ್ಟ ಆಗುತ್ತಿತ್ತು. ಊಟ ಕೆಟ್ಟದಾಗಿರುವುದು, ಹಸಿದುಕೊಂಡೇ ದಿನಕಳೆಯುತ್ತಿದ್ದುದನ್ನು ಗಾಂಧೀಜಿ ಬೇರೆ ಬೇರೆ ಸಂದರ್ಭದಲ್ಲಿ ನೆನಪಿಸಿದ್ದಿದೆ. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಗಾಂಧೀಜಿಯವರ ಲಂಡನ್ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ
ಜ್ಞಾನವೆಂಬುದು ಬಣ್ಣದ ಸೊತ್ತಲ್ಲ ಬಿಡಿ
ಮಾಸ್ಕೋದಲ್ಲಿ ಅನೇಕ ಆಫ್ರಿಕಾದ ಯುವಕರು ರಷ್ಯನ್ ಯುವತಿಯರನ್ನು ಮದುವೆಯಾಗಿದ್ದರು. ಅವರ ಮಕ್ಕಳು ಮಿಶ್ರವರ್ಣದವರಾಗಿದ್ದರು. ದಕ್ಷಿಣ ಆಫ್ರಿಕಾದ ಮಿಶ್ರವರ್ಣೀಯರ ಬಿಷಪ್ ಅಲೆನ್ ಬೊಸೆಕ್ “ವು ಆರ್ ದ ಫ್ಯೂಚರ್ ಆಫ್ ಸೌತ್ ಆಫ್ರಿಕಾ” ಎಂದು ಹೇಳಿದ್ದರು. ಮಿಶ್ರವರ್ಣೀಯರು ದಕ್ಷಿಣ ಆಫ್ರಿಕಾ ಅಷ್ಟೇ ಅಲ್ಲ ಇಡೀ ಜಗತ್ತಿನ ಭವಿಷ್ಯ ಎಂಬುದು ಸಾಬೀತಾಗುತ್ತಿದೆ. ಭಾರತದ ಎಲ್ಲ ಜಾತಿ ಮತ್ತು ಧರ್ಮಗಳಲ್ಲಿಆಫ್ರಿಕಾದ ಮೂಲ ನಿವಾಸಿಗಳು ಇದ್ದಾರೆ ಬೆಳ್ಳಗಿದ್ದವರೂ ಇದ್ದಾರೆ. ಆದರೂ ಜಾತಿ ಭ್ರಮೆ ಉಳಿದುಕೊಂಡಿದೆ. ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೪೯ನೇ ಭಾಗ ಇಲ್ಲಿದೆ.
ಯಾರು ಹಚ್ಚಿದರು ಈ ಹಣತೆಯ..
ಹೀಗೆ ಯೋಚಿಸುತ್ತಿರುವ ಒಂದು ದಿನ ಒಂದು ಘನಘೋರ ವಿದ್ವತ್ ಸಭೆಯಲ್ಲಿ ಮೂಕನಾಗಿ ಕೂತಿದ್ದೆ. ಆ ವಿದ್ವಾಂಸರ ವೈಖರಿಗೆ ಮೈಕೇ ಕಿತ್ತುಹೋಗುತಿತ್ತು. ಯಾವ ಯಕ್ಷಗಾನದ ರುದ್ರ ರಾಕ್ಷಸ ಪಾತ್ರವೂ ಅವರ ಮುಂದೆ ನಾಚುವಂತಿತ್ತು. ಪೋಸ್ಟ್ ಮ್ಯಾನ್ ಅಲ್ಲಿಗೇ ಬಂದು ಹುಡುಕಿ ಪತ್ರ ಕೊಟ್ಟು ಸಹಿ ಪಡೆದು ಹೋದ. ತೆರೆದು ನೋಡಿದೆ. ನಿಜವೇ ಎನಿಸಿತು. ಇದು ಏಪ್ರಿಲ್ ತಿಂಗಳಲ್ಲ… ನನ್ನನ್ನು ಮೂರ್ಖನನ್ನಾಗಿಸಲು ಸಾಧ್ಯವಿಲ್ಲ ಎಂದು ಮತ್ತೆ ಓದಿದೆ. ಈ ಪತ್ರ ನಿಜವೇ ಎಂದು ಆ ಪತ್ರದಲ್ಲೇ ಇದ್ದ ನಂಬರಿಗೆ ಫೋನಾಯಿಸಿದೆ. ಕರೆ ಸ್ವೀಕರಿಸಿದವರು ʻಕಂಗ್ರಾಜುಲೇಷನ್ʼ ಎಂದರು. ಮೊಗಳ್ಳಿ ಗಣೇಶ್ ಆತ್ಮಕತೆ ಸರಣಿ
ನಿಂಬೆಗಿಡಕ್ಕೇನು ಮನಸ್ಸಿದೆಯೇ?
ಆ ಭವ್ಯ ಮನೆಗೆ ಇಸ್ರೇಲಿನ ರಕ್ಷಣಾ ಮಂತ್ರಿಯ ಜೊತೆಗೆ ಅವನ ಹೆಂಡತಿ ಮೀರಾ ನವಾನ್ ಮತ್ತು ಅವನ ಅಧಿಕಾರಿ ವರ್ಗದಲ್ಲಿ, ರಕ್ಷಣಾ ಮಂತ್ರಿಯಲ್ಲಿ ಅನುರಾಗದಲೆಗಳನ್ನು ಹುಟ್ಟಿಸುವ ಸುಂದರಿಯೊಬ್ಬಳು ಇರುತ್ತಾಳೆ. ಜೊತೆಗೆ ಹತ್ತಾರು ಜನ ಸಹಾಯಕ ವರ್ಗದವರು. ನೋಡನೋಡುತ್ತಿದ್ದಂತೆ ತಾನು ಅತ್ತಿತ್ತ ಓಡಾಡಿ ಇಟ್ಟಿದ್ದ ಹೆಜ್ಜೆಗಳ ಮೇಲೆ ಬೇರೆ ಬೇರೆ ಹೆಜ್ಜೆಗಳು ಕಾಣುತ್ತವೆ. ಜೊತೆಗೆ ಅಷ್ಟುದ್ದಕ್ಕೂ ಬೇಲಿ ಹಬ್ಬಲು ಪ್ರಾರಂಭವಾಗುತ್ತದೆ. ಇಸ್ರೇಲಿನ ಸೀಕ್ರೆಟ್ ಪೊಲೀಸ್ನವರು ರಕ್ಷಣಾ ಮಂತ್ರಿಯ ಹಿತ ದೃಷ್ಟಿಯಿಂದ ಮತ್ತು ಉಗ್ರರ ಆಕ್ರಮಣದ ಸಂಭಾವ್ಯದ ಕಾರಣ ಇಡೀ ನಿಂಬೆ ಗಿಡದ ತೋಟವನ್ನು ಕಡಿಯಬೇಕೆಂದು ಯೋಚಿಸುತ್ತಾರೆ.
ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…
ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ










