Advertisement

ಸರಣಿ

ಓದಿ ತಿಳಿ ಗಿಡವ ನೆಟ್ಟು ಕಲಿ

ಓದಿ ತಿಳಿ ಗಿಡವ ನೆಟ್ಟು ಕಲಿ

ಮಣ್ಣು ನಿರ್ಜೀವ ವಸ್ತು ಅಲ್ಲ ಅದು ಜೀವಂತ! ಅದರಲ್ಲಿ ಎಷ್ಟೋ ಕ್ರಿಮಿ ಕೀಟಗಳು, ಶಿಲೀಂದ್ರಗಳು, ಬಹುಮುಖ್ಯವಾಗಿ ಎರೆ ಹುಳುಗಳು ಇವೆಲ್ಲ ಇರಲೇಬೇಕು, ಅವುಗಳನ್ನು ಹೇಗೆ ಹೆಚ್ಚಿಸಬೇಕು, ಮಣ್ಣಿಗೆ ಹೊದಿಕೆ ಹೇಗೆ ಮಾಡಬೇಕು, ಸಸ್ಯಗಳನ್ನು ಸಹಜವಾಗಿ ಹೇಗೆ ಪೋಷಿಸಬೇಕು ಎಂಬೆಲ್ಲ ಹೊಸ ಹೊಸ ವಿಷಯಗಳ ಅರಿವು ನನಗೆ ಈ ಮಹಾನುಭಾವರು ಬರೆದ ಪುಸ್ತಕಗಳ ಮೂಲಕ ತಿಳಿದಿತ್ತು. ಇನ್ನೂ ಹಲವಾರು ಟಿಪ್ಪಣಿ ಮಾಡಿಟ್ಟುಕೊಂಡ ನನ್ನ ಹೊತ್ತಿಗೆಗಳು ಬೃಹದಾಕಾರವಾಗಿ ಬೆಳೆದಿದ್ದವು. ಈಗ ಗಿಡಗಳನ್ನು ಬೆಳೆಯುವ ಸಮಯ ಬಂದಿತ್ತು! ಇದು ಹೊಸದಾಗಿ ರೈತರಾಗುವವರಿಗೆ ಎದುರಾಗುವ ಸಮಸ್ಯೆ. ಸಿಕ್ಕಾಪಟ್ಟೆ ಮಾಹಿತಿಗಳ ಕೇಳಿ ತಬ್ಬಿಬ್ಬಾಗಿ ಬಿಡುತ್ತಾರೆ.  ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಅಂಕಣ “ಗ್ರಾಮ ಡ್ರಾಮಾಯಣ”

read more
ʻದ ಡಿಪಾರ್ಟೆಡ್ʼ: ಕ್ರೈಮ್‌ ಕಥನದ ಅಂತರ್ಮುಖಿ ಪಯಣ

ʻದ ಡಿಪಾರ್ಟೆಡ್ʼ: ಕ್ರೈಮ್‌ ಕಥನದ ಅಂತರ್ಮುಖಿ ಪಯಣ

ಕಾಲಿನ್ ಸಲ್ಲಿವನ್ ಎಂಬ ಯುವ ಕ್ರಿಮಿನಲ್ ಪೊಲೀಸ್ ಇಲಾಖೆಯ ಒಳಗೆ ನುಸುಳಿಕೊಂಡು ಅಲ್ಲಿನ ಎಲ್ಲ ವಿದ್ಯಮಾನಗಳನ್ನು ಗ್ಯಾಂಗ್‌ ಲೀಡರ್‌ ಗೆ ರವಾನಿಸುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಇದು ಕಥನದ ಪ್ರಾರಂಭಿಕ ಭಾಗವಾದರೆ ಚಿತ್ರ ಮುಂದುವರಿದಂತೆ ಅವರು ತಮ್ಮ ನಿಯೋಜಿತ ಕೆಲಸಗಳಲ್ಲಿ
ತೊಡಗುತ್ತಾರೆ. ಇದರಲ್ಲಿ ನಿರತರಾದಾಗ ಬಿಲ್ಲಿ ಕಾಸ್ಟಿಗನ್‌ ಮತ್ತು ಕಾಲಿನ್‌ ಸಲ್ಲಿವನ್‌ ಅಂತರಂಗದಲ್ಲಿ ಸಂಭವಿಸುವ ಸಂಘರ್ಷದ ಪದರುಗಳನ್ನು ಪ್ರಕಟಿಸುವುದೇ ನಿರ್ದೇಶಕನ ಉದ್ದೇಶ. ಇಂಥದನ್ನು ಪ್ರಕಟಿಸುವ ಏಕಾಂತ ಕ್ಷಣಗಳಲ್ಲಿ ಪಾತ್ರಗಳ ಅಭಿನಯ ಪರಿಣಾಮಕಾರಿ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಅಮೆರಿಕದ ʻದ ಡಿಪಾರ್ಟೆಡ್ʼ ಸಿನಿಮಾದ ವಿಶ್ಲೇಷಣೆ

read more
ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ಓ ದೇವರೆ ಈ ಪುಣ್ಯ ಅವನಿಗೆ ಲಭಿಸಲಿ

ನನ್ನ ತಂದೆಗೆ ಆ ತೂತಿನ ದುಡ್ಡು ಕೇಳಿದೆ. ಅವರು ಕೊಡಲಿಲ್ಲ. ಆ ದುಡ್ಡು ನನ್ನದಲ್ಲ ಎಂದರು. ನನಗೆ ಅರ್ಥವಾಗಲಿಲ್ಲ. ಆ ತೂತಿನ ದುಡ್ಡಿಗಾಗಿ ಕೊಂಯಾ ಕೊಂಯಾ ಮಾಡುತ್ತಿದ್ದೆ. ಸೇಂಗಾ ಬೆಲ್ಲ ಕೊಳ್ಳುವವರೆಗೂ ಆ ತೂತಿನ ದುಡ್ಡಿನಲ್ಲಿ ಕಿರುಬೆರಳು ಸೇರಿಸಿ ಆಡುವ ಖುಷಿಯೂ ಇತ್ತು. ಹೀಗೆ ಆ ದುಡ್ಡು ಡಬಲ್ ಧಮಾಕಾ ಇಫೆಕ್ಟ್ ಕೊಡುತ್ತಿತ್ತು. ಅಂದು ಇದೊಂದು ದೊಡ್ಡ ಚಿಂತೆಯಾಯಿತು. ನನ್ನ ತಂದೆ ಇಷ್ಟೇಕೇ ಕಠೋರ ಆಗಿದ್ದಾರೆ ಎಂಬುದು ತಿಳಿಯಲಿಲ್ಲ. ಅಂತೂ ಶನಿದೇವರ ಗುಡಿಯ ಮುಂದೆ ಹೋದೆವು. ತಂದೆ ಆ ಎರಡು ರೂಪಾಯಿ ಚಿಲ್ಲರೆ ದುಡ್ಡನ್ನು ಕುಂಬಳ ಚಾಟಿಯ ಕಿಸೆಯಲ್ಲಿ ಇಟ್ಟುಕೊಂಡಿದ್ದರು. ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 42ನೇ ಕಂತು ಇಲ್ಲಿದೆ.

read more
ಒಳಗುದಿಯ ದೀಪ ಉರಿಯುತಿತ್ತು

ಒಳಗುದಿಯ ದೀಪ ಉರಿಯುತಿತ್ತು

ಆಗ ನನಗೆ ಒಂದು ಸುಂದರ ಹವ್ಯಾಸ ಇತ್ತು. ಈಗಲೂ ಅದನ್ನು ಬಿಟ್ಟಿಲ್ಲ… ಹಳೆಯ ಹಿಂದಿ ಸಿನಿಮಾ ಹಾಡುಗಳನ್ನು ಕೇಳುತ್ತಲೇ ಇರುವುದು… ಆ ಮುಖೇಶ್, ರಫೀ, ಸೈಗಲ್, ಕಿಶೋರ್ ಕುಮಾರ್, ಲತಾ ಅವರ ಕೊನೆ ಮೊದಲಿಲ್ಲದ ಹಾಡುಗಳ ನನ್ನ ಪೂರ್ವಿಕರಿಗೆಲ್ಲ ಕೇಳಿಸಬೇಕು ಎಂಬಂತೆ ಸುಪ್ತ ಪ್ರಜ್ಞೆಯಲ್ಲಿ ಮಲಗಿದ್ದ ಅವರನ್ನೆಲ್ಲ ಎಬ್ಬಿಸಿ ಈ ಹಾಡನ್ನು ಕೇಳಿ… ಈ ಅನಂತ ಹಿಂದೂಸ್ತಾನಿ ಸಂಗೀತದ ಸಮುದ್ರದ ಅಲೆಯ ರಾಗಗಳ ಆಲಿಸಿ ಎನ್ನುತ್ತಿದ್ದೆ. ನನ್ನ ಅಳಲನ್ನು ಈ ಸಂಗೀತಗಾರರು ಅದೆಷ್ಟು ಸಲ ಸಂತೈಸಿದ್ದಾರೊ ಏನೊ..ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆಯ 33ನೇ ಕಂತು

read more
ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು

ಒಲಿವಿಯಾ ನ್ಯೂಟನ್ ಜಾನ್ ಮತ್ತು ಬೆಂಗಳೂರು ಒಳ ಚರಂಡಿ ಆಫೀಸು

ಮ್ಯಾಕ್ಸ್ ಬೋರ್ನ್ ಬೆಂಗಳೂರಿನಲ್ಲಿದ್ದ ಕೆಲವೇ ತಿಂಗಳುಗಳಲ್ಲಿ, ರಾಮನ್‌ರ ಮೂಲಕ ಅವರಿಗೆ ಮೈಸೂರು ಸಂಸ್ಥಾನದ ಅಂದಿನ ಹಲವಾರು ಗಣ್ಯರ ಪರಿಚಯವಾಯಿತು. ಹೀಗೆ ಪರಿಚಯವಾದವರಲ್ಲಿ ದಿವಾನ್ ಮಿರ್ಜಾ ಇಸ್ಮಾಯಿಲ್ ಸಾಹೇಬರೂ ಒಬ್ಬರು. ಆ ಕಾಲದಲ್ಲಿ, ಇಸ್ಮಾಯಿಲ್ ಸಾಹೇಬರು ಬೆಂಗಳೂರಿನಲ್ಲಿ ಹಲವಾರು ಸಾರ್ವಜನಿಕ ಮೂಲ ಸೌಕರ್ಯ ಮತ್ತು ಕಟ್ಟಡಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದರು. ಈ ಕಟ್ಟಡಗಳನ್ನು ವಿನ್ಯಾಸ ಮಾಡಲು ಅವರು ಒಬ್ಬ ನುರಿತ ಆರ್ಕಿಟೆಕ್ಟ್‌ಗಾಗಿ ಹುಡುಕಾಟದಲ್ಲಿದ್ದರು.
ಶೇಷಾದ್ರಿ ಗಂಜೂರು ಬರಹ

read more
ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

read more
ನನ್ನ ತಂದೆ ಶರಣರಂತೆ, ಸಂತರಂತೆ

ನನ್ನ ತಂದೆ ಶರಣರಂತೆ, ಸಂತರಂತೆ

ಅವರು ಜೀವನದಲ್ಲಿ ಸಾಲವನ್ನೇ ಮಾಡಲಿಲ್ಲ. ದುಡಿಮೆಯೆ ಅವರ ಬ್ಯಾಂಕು.  ವಾಪಸ್ ಮಾಡುವ ಶಕ್ತಿಇಲ್ಲವೆಂದ ಮೇಲೆ ಸಾಲ ಮಾಡಬಾರದು ಎಂಬುದು ಅವರ ನೀತಿಯಾಗಿತ್ತು. ಸಮಾಜ ಜಾತಿ ಉಪಜಾತಿಗಳ ಬಂಧನದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಸ್ಪೃಶ್ಯತೆ ಆಚರಿಸುತ್ತಿದ್ದರೂ  ಆ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ‘ನೀವು ಹಾಗಿರಬೇಕು, ಹೀಗಿರಬೇಕು’ ಎಂದು ಯಾರಿಗೂ ಉಪದೇಶ ಮಾಡಲಿಲ್ಲ. ಆದರೆ ಸ್ವಂತಕ್ಕೆ ಜಾತಿ, ಧರ್ಮ ಮತ್ತು ಅಸ್ಪೃಶ್ಯತೆ ಮುಂತಾದವುಗಳನ್ನು ಮೀರಿ ಬದುಕಿದವರು. ನಾನು ಶನಿವಾರ ಜನಿಸಿದ್ದರಿಂದ ಪ್ರತಿ ಶನಿವಾರ ನನ್ನನ್ನು ಕರೆದುಕೊಂಡು ಶನಿದೇವರ ಗುಡಿಗೆ ಹೋಗುತ್ತಿದ್ದರು. ರಂಜಾನ್‌ ದರ್ಗಾ ಬರೆಯುವ  ನೆನಪಾದಾಗಲೆಲ್ಲ ಸರಣಿ

read more
ಅಸ್ಪೃಶ್ಯ ಆಕಾಶದ ಚಲನೆ

ಅಸ್ಪೃಶ್ಯ ಆಕಾಶದ ಚಲನೆ

ಚಲುವರಾಜನ ತಮ್ಮ ಚಂದ್ರ ಹಾಸ್ಟಲಲ್ಲೆ ಇದ್ದ. ಇನ್ನು ಚಿಕ್ಕವನು. ಬಾರೋ ಎಂದು ಕರೆದೊಯ್ದು ಎಲ್ಲ ಕ್ಲೀನ್ ಮಾಡಿಸಿದೆ. ಆ ಬ್ಯಾಗಲ್ಲಿದ್ದ ಅಕ್ಕಿ ಎಂತಾವು ನೋಡು ಎಂದೆ. ಯೋಗ್ಯ ಇದ್ದರೆ ಕೊಂಡೊಯ್ಯುವ ಎನಿಸಿತ್ತು. ಕಲ್ಲು ಮಿಶ್ರತ ಹುಳು ಹಿಡಿದ ಬೂಸ್ಲು ನುಚ್ಚಕ್ಕಿಯಾಗಿದ್ದವು. ಆ ನಾಯಿಗೆ ಇದನ್ನು ಬೇಯಿಸಿ ಹಾಕುತ್ತಿದ್ದರೆ ಈ ಪ್ರಾಧ್ಯಾಪಕರು.. ‘ನೀನೂ ಅದನ್ನೆ ಊಟ ಮಾಡಪ್ಪ’ ಎಂದಿದ್ದನಲ್ಲ ಮಹಾಶಯ! ಆ ನಾಯಿ ಮನೆ ಬಿಟ್ಟು ಹೋಗಿರುವುದರಲ್ಲಿ ನಮ್ಮ ಪಾಲು ಎಷ್ಟಿದೆಯೊ ಏನೊ!
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ 32ನೇಯ ಕಂತು.

read more
ಈ‌ ಒಂಟೆಗೇಕೆ ಮರಿಯ ಮೇಲಿಷ್ಟು ಸಿಟ್ಟು..

ಈ‌ ಒಂಟೆಗೇಕೆ ಮರಿಯ ಮೇಲಿಷ್ಟು ಸಿಟ್ಟು..

ಚಿತ್ರದ ಕಥಾವಸ್ತು ಹುಬ್ಬೇರಿಸುವಂಥಾದ್ದು. ಒಂಟೆಯೊಂದು ಬಿಳಿ ಬಣ್ಣದ ಮರಿ ಹಾಕಲು ಎರಡು ದಿನ ತೆಗೆದುಕೊಂಡ ನಂತರ ಮರಿಗೆ ಪ್ರೀತಿ ನಿರಾಕರಿಸಿ ಹಾಲು ಕುಡಿಯಲು ಬಿಡುವುದಿಲ್ಲ. ಮಾಡಿದ ಪ್ರಯತ್ನಗಳೆಲ್ಲ ವ್ಯರ್ಥವಾಗಿ ಕೊನೆಗೆ ತಾಯಿ ಒಂಟೆಗೆ ಅದರ ಮರಿಯ ಮೇಲೆ ಪ್ರೀತಿ ಹುಟ್ಟಿಸುವುದಕ್ಕೆ ಪಿಟೀಲು ವಾದನ ಕೇಳಿಸುವುದರಿಂದ ಸಮಸ್ಯೆ ನಿವಾರಣೆಯಾಗುತ್ತೆ. ಒಂದು ರೀತಿಯಲ್ಲಿ ಚಿತ್ರ ಸುಖಾಂತ.
ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಟಾಕೀಸ್‌ʼನಲ್ಲಿ ಮಂಗೋಲಿಯ ʻದ ಸ್ಟೋರಿ ಆಫ್‌ ವೀಪಿಂಗ್‌ ಕ್ಯಾಮೆಲ್‌ʼ ಸಿನಿಮಾದ ವಿಶ್ಲೇಷಣೆ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ