Advertisement

ಸರಣಿ

ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ಊರು ಬಾಬಾ ಎಂದು ಕರೆದರೂ ಭಾವನೆಗಳಿಗೆ ಬೀಗ ಹಾಕುತ್ತಿದ್ದೆ. ಕಲ್ಪಿಸಿಕೊಳ್ಳುವ ಊರೇ ಚೆಂದ. ಅಲ್ಲಿ ಆ ನರಕ ಇನ್ನೂ ಹಾಗೇ ಇತ್ತು. ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿತ್ತು. ಆ ನರಕದ ಇಂಚಿಂಚೂ ನನ್ನ ಕಣ್ಣಲ್ಲಿ ಆತ್ಮದಲ್ಲಿ ಯಾವತ್ತೂ ಫಲಿಸುತ್ತಲೇ ಇದ್ದವು. ಮರೆಯಲಾರೆ ಊರುಕೇರಿಯ; ಸತ್ತವರ ನೆರಳ…ಅಪ್ಪನ ಎರಡನೇ ಹೆಂಡತಿಯ ಹೆಸರದು ಮಾದೇವಿ. ಮಾದೇಶ್ವರ ಒಕ್ಕಲಿನ ಮನೆತನದವಳು.
ಮೊಗಳ್ಳಿ ಗಣೇಶ್‍ ಬರೆಯುವ ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹದಿನೇಳನೆಯ ಕಂತು

read more
ಬಲಿಪ ಗಾನಮೀಮಾಂಸೆ

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

read more
ಸಮುದಾಯ ಸಂಘಟನೆ

ಸಮುದಾಯ ಸಂಘಟನೆ

ಶಿರಹಟ್ಟಿ ತಾಲೂಕು ಬಾಲೆಹೊಸೂರಲ್ಲಿ ಸವರ್ಣೀಯರ ಗಲಬೆಯಲ್ಲಿ ಮಹಾಂತಪ್ಪ ಹನುಮಂತಪ್ಪ ಗುಡಗೇರಿ ಎನ್ನುವವರು ಕೊಲೆಯಾದರು. ಈ ಘಟನೆಯು ಇಡೀ ಗಂಟಿಚೋರ್ ಸಮುದಾಯವನ್ನು ಎಚ್ಚರಿಸಿತು. ನಾವು ಮೌನವಾಗಿದ್ದರೆ ಮೇಲುಜಾತಿಗಳ ದಬ್ಬಾಳಿಕೆ ಮತ್ತೆ ಮತ್ತೆ ನಡೆಯುತ್ತದೆ ಎಂದು ಎಲ್ಲರೂ ಒಟ್ಟಾದರು. ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿರುವ ಎಲ್ಲಾ ಗಂಟಿಚೋರರು ಒಂದಾದರು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯಲ್ಲಿ ಹೊಸ ಬರಹ

read more
ಮೀನಿನ ರುಚಿ ಹಿಡಿದು ಅಲೆದಾಡಿದವರು

ಮೀನಿನ ರುಚಿ ಹಿಡಿದು ಅಲೆದಾಡಿದವರು

ಒಂದು ಪ್ರವಾಸ ಕಥನ ಹೇಗಿರಬೇಕು ಅನ್ನೋದಕ್ಕೆ ಬೆಂಚ್‌ಮಾರ್ಕ್ ಆಗಿ ನಿಲ್ಲುತ್ತದೆ ಈ ಪುಸ್ತಕ. ಆದರೆ ಇದನ್ನು ಪ್ರವಾಸ ಕಥನವೆನ್ನಲು ಸಾಧ್ಯವೇ ಅಥವಾ ಬೇರೆ ಏನಾದರೂ ಹೆಸರು ಕೊಡಬೇಕೆ ಅನ್ನುವುದು ನನಗೆ ತಿಳಿದಿಲ್ಲ. ಯಾಕೆಂದರೆ ಮೀನಿನ ಖಾದ್ಯಗಳ ಸವಿಯುವ ನೆಪದಲ್ಲಿ ಭಾರತದ ಪ್ರತಿ ರಾಜ್ಯಗಳ ಕರಾವಳಿ ಪ್ರದೇಶಗಳಿಗೂ ಭೇಟಿಕೊಟ್ಟು, ಆಯಾ ರಾಜ್ಯಗಳಲ್ಲಿ ಮೀನು ಅಲ್ಲಿನ ಸಂಸ್ಕೃತಿಯಲ್ಲಿ ವಹಿಸಿದ ಪಾತ್ರದ ಬಗ್ಗೆ ಲೇಖಕರು ಬಹಳ ಆಳವಾಗಿ ವಿಶ್ಲೇಷಣೆ ಮಾಡುತ್ತಾ ಸಾಗುತ್ತಾರೆ. ‘ಓದುವ ಸುಖ’ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

read more
ಲಂಡನ್ನನ್ನು ಪ್ರಧಾನ ಪಾತ್ರವಾಗಿಸಿದ ಕಾದಂಬರಿಕಾರ

ಲಂಡನ್ನನ್ನು ಪ್ರಧಾನ ಪಾತ್ರವಾಗಿಸಿದ ಕಾದಂಬರಿಕಾರ

ಕಿರಿಯ ಓದುಗರಿಂದ ಹಿಡಿದು ಹಿರಿಯ ಪುಸ್ತಕಪ್ರಿಯರ ತನಕ ಜನಪ್ರಿಯವಾದ “ಆಲಿವರ್ ಟ್ವಿಸ್ಟ್” ಹುಟ್ಟಿದ್ದು ಲಂಡನ್ ನ ಬೀದಿಗಳಿಂದಲೇ. ಲಂಡನ್ ನ ಬಡತನ ಕ್ರೌರ್ಯ ಅಪರಾಧಗಳೇ ಪ್ರಧಾನ ಭೂಮಿಕೆಯಲ್ಲಿರುವ ಕಥೆ. ಸಾಲವನ್ನು ತೀರಿಸಲಾಗದೇ ತಂದೆ ಜೈಲಿನಲ್ಲಿ ದಿನಕಳೆಯುವುದನ್ನು, ನಿರಾಶ್ರಿತ ವಸತಿಗಳಲ್ಲಿ ಅನಾಥ ಮಕ್ಕಳ ಹತಾಶೆಯನ್ನು ಬಾಲ್ಯದಲ್ಲಿ ಡಿಕನ್ಸ್ ಕಂಡವನು. ಖ್ಯಾತ ಕಾದಂಬರಿಕಾರ ಡಿಕನ್ಸ್‌ನ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

read more
ನೆತ್ತರ ಒಗಟುಗಳ ಬಿಡಿಸುವುದು ಕಷ್ಟ

ನೆತ್ತರ ಒಗಟುಗಳ ಬಿಡಿಸುವುದು ಕಷ್ಟ

ಆ ಹಂದಿಗಳಿಗೆ ತಿಂಗಳಿಗಾಗುವಷ್ಟು ಆಹಾರವನ್ನು ಅಪ್ಪ ಹಿತ್ತಿಲ ಸೌದೆ ಮನೆಯಲ್ಲಿ ತರಿಸಿಇಟ್ಟಿರುತ್ತಿದ್ದ. ಅಷ್ಟೇ ಅವನ ಕೆಲಸ. ಆಗಾಗ ನಾನೇ ಅವುಗಳ ಎಲ್ಲ ಕೆಲಸ ಮಾಡುತ್ತಿದ್ದುದು. ಅಪ್ಪ ಬಂದು ನೋಡಿದ ಕೂಡಲೆ ಗಕ್ಕನೆ ಎದ್ದು ಮೂಲೆ ಸೇರಿ ಭಯದಿಂದ ನೋಡುತ್ತಿದ್ದವು. ಯಾಕೆ ಇವು ನನ್ನಂತೆಯೇ ಬೆದರಿ ನನ್ನ ಬಳಿ ಬಂದು ಗಾಬರಿಯಾಗುತ್ತವಲ್ಲಾ… ಹೇಗೆ ಗೊತ್ತಾಯಿತು ಈ ಹಂದಿಗಳಿಗೆ ಅಪ್ಪನ ಅವತಾರಗಳು ಎಂದು ಅಚ್ಚರಿಯಾಗುತ್ತಿತ್ತು. ಮೊಗಳ್ಳಿ ಗಣೇಶ್‍ ಬರೆಯುವ  ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹೊಸ ಕಂತು ನಿಮ್ಮ ಓದಿಗಾಗಿ. 

read more
‘ಯಕ್ಷಗಾನೀಯವಲ್ಲದ್ದು ಔಚಿತ್ಯವೂ ಅಲ್ಲ’

‘ಯಕ್ಷಗಾನೀಯವಲ್ಲದ್ದು ಔಚಿತ್ಯವೂ ಅಲ್ಲ’

ಯಕ್ಷಗಾನದ ಆವರಣದಲ್ಲೇ ಹುಟ್ಟಿ ಬೆಳೆದ ಜಿ ಎಸ್ ಭಟ್ಟರು, ಗುಂಡುಬಾಳದ ಆಟ ನೋಡುತ್ತಲೇ ಬೆಳೆದವರು. ಅವರ ಯೌವನ ಕಾಲದಲ್ಲಿ ನಾಟಕದ ಬಗ್ಗೆಯು ಆಸಕ್ತಿ ವಹಿಸಿದ್ದರು. ಗುಂಡುಬಾಳದ ಹರಕೆ ಆಟವು ಯಕ್ಷಗಾನ ಕಲಾ ಪ್ರಕಾರದಲ್ಲೇ ವಿಶಿಷ್ಟವಾದ ಮಾದರಿ. ಅಲ್ಲಿ ದೇವರೇ ಪ್ರೇಕ್ಷಕರು. ಹಾಗಾದ್ದರಿಂದಲೇ ಅದು ಹೊಸ ನಡೆಯ ಪ್ರಯೋಗಗಳಿಗೆ…
“ಯಕ್ಷಾರ್ಥ ಚಿಂತಾಮಣಿ”ಯಲ್ಲಿ ಜಿ ಎಸ್ ಭಟ್ಟರ ಜೊತೆಗೆ ತಾವು ನಡೆಸಿದ ಸಂದರ್ಶನವನ್ನು ಬರೆದಿದ್ದಾರೆ ಕೃತಿ ಆರ್‌ ಪುರಪ್ಪೇಮನೆ

read more
ಗಣಿತವೊಂದು ಭಾಷೆಯೆಂಬ ಹೊಸ ದೃಷ್ಟಿ

ಗಣಿತವೊಂದು ಭಾಷೆಯೆಂಬ ಹೊಸ ದೃಷ್ಟಿ

ನಾವು ಬಳಸುವ ಸಂಖ್ಯೆಗಳು, ವಿಜ್ಞಾನದಲ್ಲಿ ಬರುವ ಅಳತೆಯ ಮಾನಗಳು, ಇತಿಹಾಸದ ಇಸವಿಗಳು, ಸಮಯ, ಕಾಲಗಣನೆ ಮೊದಲಾದ ಯಾವುದೇ ಸಂದರ್ಭವನ್ನು ತೆಗೆದುಕೊಳ್ಳಿ. ಅಲ್ಲಿ ಗಣಿತ ಎಂಬ ಭಾಷೆಯನ್ನು ಬಳಸದೇ ಇದ್ದರೆ ಸಂದರ್ಭವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಗಣಿತ ಎಂಬ ಭಾಷೆಗೆ ಅಂಕೆಗಳೇ ಅಕ್ಷರಗಳು. ಕೂಡುವುದು, ಕಳೆಯುವುದು, ಗುಣಿಸುವುದು, ಭಾಗಿಸುವುದು ಅದರ ವ್ಯಾಕರಣ ಎಂದು ಒಮ್ಮೆ ಯೋಚಿಸಿ ನೋಡು ಆಗ ನೀನು ಗಣಿತ ವಿಷಯವನ್ನು ನೋಡುವ ದಿಕ್ಕೇ ಬದಲಾಗುತ್ತದೆ.
‘ಗಣಿತ ಮೇಷ್ಟರ ಶಾಲಾ ಡೈರಿ’ಯಲ್ಲಿ ಅರವಿಂದ ಕುಡ್ಲ ಇಂದಿನ ಬರಹ

read more
ಸಾಮಾಜಿಕ ಸಂಘರ್ಷ ಮತ್ತು ಕೊಡುಕೊಳ್ಳುವಿಕೆ

ಸಾಮಾಜಿಕ ಸಂಘರ್ಷ ಮತ್ತು ಕೊಡುಕೊಳ್ಳುವಿಕೆ

ಕೆರೆ ಒತ್ತುವರಿಯ ಕಾರಣಕ್ಕೆ ಮಳೆನೀರು ಗಂಟಿಚೋರರ ಓಣಿಗೆ ನುಗ್ಗಿತು. ನೀರುನಿಂತು ಆಡು ಕುರಿಗಳು ಸಾವನ್ನಪ್ಪಿದವು. ಮೇವಿನ ಬಣವೆಗಳು ನೀರಲ್ಲಿ ತೇಲಿದವು. ಹೀಗಾಗಿ ಗಂಟಿಚೋರರು ಇದರ ವಿರುದ್ಧ ಕೋರ್ಟಿಗೆ ಹೋದರು. ಕೋರ್ಟು ಕೆರೆಯನ್ನು ಪುನಶ್ಚೇತನ ಮಾಡಲು ಆದೇಶಿಸಿತು. ಈ ಆದೇಶ ಪಾಲನೆಯಾಗಲಿಲ್ಲ. ನಂತರ  ನ್ಯಾಯಾಂಗ ನಿಂದನೆ ದಾವೆ ಹೂಡಿದರು.
‘ಗಂಟಿಚೋರರ ಕಥನಗಳು ‘ಸರಣಿಯಲ್ಲಿ ಡಾ. ಅರುಣ್ ಜೋಳದ ಕೂಡ್ಲಿಗಿ  ಸಾಮಾಜಿಕ ಸವಾಲುಗಳ  ಕುರಿತು ಬರೆದಿದ್ದಾರೆ. 

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ