ಸಮೀಪ ಚಿತ್ರಿಕೆಗಳಲ್ಲಿ ಕತೆ ಹೇಳುವ ಅಮೆರಿಕದ ʻಪ್ರೆಷಸ್ʼ
ಕ್ಲೇರೀಸ್ಗೆ ಹೊಸ ಸ್ಕೂಲಿನ ಟ್ರೈನ್ ಟೀಚರ್ ರೇನ್ಳ ಮಾತು, ವರ್ತನೆಗಳು ಅವಳೊಳಗೆ ಹುದುಗಿರುವ ಸಂಕಟವನ್ನು ತಕ್ಕಷ್ಟು ಉಪಶಮನ ಮಾಡುತ್ತವೆ. ತನಗೊಂದೂ ತಿಳಿಯುವುದಿಲ್ಲ, ಶುದ್ಧ ಅನಕ್ಷರಸ್ಥೆ ಎಂದು ಬೇಡಿಕೊಳ್ಳುವ ರೀತಿ ಅವಳ ವರ್ತನೆ. ಯಾರೂ ನನ್ನನ್ನು ಪ್ರೀತಿಸುವುದಿಲ್ಲ ಎಂದು ಕಣ್ಣೀರಿಡದೆ ಕಠಿಣವಾಗಿ ಹೇಳುತ್ತಾಳೆ. ಯಾರಿಲ್ಲದಿದ್ದರೂ ನಿನ್ನ ಮಕ್ಕಳು ನಿನ್ನನ್ನು ಪ್ರೀತಿಸುತ್ತವೆ ಎನ್ನುತ್ತಾಳೆ ಟೀಚರ್ ರೇನ್.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾ ಸರಣಿ
ಅಮರಾವತಿ ಎಂಬ ಹುಚ್ಚಿಯ ವಿಸ್ಮಯ
ಉಸಿರಾಡಿದ್ದೆ ಅವಳೆದೆ ನಡುವೆ. ಏನೊ ಸುಖ ತೊಟ್ಟಿಲ ಕೂಸಂತೆ. ತಾಯನ್ನು ಅಪ್ಪ ಕೊಲ್ಲುವನು ಎಂಬುದು ಈ ಹುಚ್ಚಿಗೆ ಹೇಗೆ ಗೊತ್ತಾಯಿತು! ಯಾರಿಗೂ ಗೊತ್ತಿಲ್ಲದ್ದ ಹೇಗೆ ಪತ್ತೆ ಮಾಡಿದ್ದಳು. ಇವಳೆಂತಹ ಹುಚ್ಚಿ. ಇಲ್ಲವೇ ಯಕ್ಷಿಣಿ ಇರಬೇಕೇ? ಎಷ್ಟು ವಿಷಯಗಳೆಲ್ಲ ತಂತಾನೆ ಅವಳಿಗೆ ತಿಳಿಯುತ್ತಿದ್ದವು. ಅವತ್ತೊಂದಿನ ನಟ್ಟಿರುಳಲ್ಲಿ ನಾಳೆ ಬೆಳಿಗ್ಗೆ ಇಂತವರು ಸಾಯುತ್ತಾರೆ ಎಂದು ಹೇಳಿದ್ದಳು. ಹಾಗೇ ಆ ಊರ ದೊಡ್ಡ ಸಾಹುಕಾರ ಪ್ರಾಣ ಬಿಟ್ಟಿದ್ದ. ಒಹೋ; ಅವಳಲ್ಲಿ ಮೃತ್ಯು ದೇವತೆಯೂ ಸೇರಿಕೊಂಡಿದ್ದಾಳೆಂದು ಜನ ಅವಳ ಕಣ್ಣಿಂದ ತಪ್ಪಿಸಿಕೊಳ್ಳುತ್ತಿದ್ದರು. ಮೊಗಳ್ಳಿ ಗಣೇಶ್ ಸರಣಿ
ಸಮಾಧಾನದ ನಾಲ್ಕು ಮಾತು ಬಯಸುವ ರೋಗಿಗಳು
ರೋಗಿ ಹೇಳುವುದನ್ನು ಗಮನವಿಟ್ಟು ಕೇಳಿದಾಗ ಅವರ ಕಾಯಿಲೆಯ ಜೊತೆಗೆ ಮನಸ್ಸಿನ ತೊಂದರೆಗಳು ಇದ್ದರೆ ಅದು ನಮಗೆ ಗೋಚರಿಸುತ್ತದೆ. ಹಾಗಾಗಿ ನಾನಂತೂ ಹೆಚ್ಚಿನ ಸಮಯ ನನ್ನಲ್ಲಿಗೆ ಬರುವ ವ್ಯಕ್ತಿಗಳ ರೋಗ ಲಕ್ಷಣದ ಜೊತೆಯಲ್ಲಿ ಅವರು ಹೇಳುವ ಇನ್ನಿತರ ವಿಷಯದ ಬಗ್ಗೆ ಕೂಡಾ ಕಿವಿ ಕೊಡುತ್ತೇನೆ. ಕೆಲವೊಮ್ಮೆ ಇದು ತೊಂದರೆಯೂ ಕೂಡಾ ಆಗಬಹುದು. ಯಾಕೆಂದರೆ
ಬೇರೆ ರೋಗಿಗಳು ಕಾಯುತ್ತಾ ಇದ್ದಾಗಲೂ ಹಲವರು ಅವರ ಕಷ್ಟ-ಸುಖಗಳನ್ನು ಹೇಳುತ್ತಾ ಹೋಗುತ್ತಿರುತ್ತಾರೆ. ನನ್ನ ಊಟದ ಸಮಯ ಆಗಿ, ಹೊಟ್ಟೆ ಹಸಿಯುತ್ತಾ ಇದ್ದರೂ ಅವರಿಗೆ ಪರಿವೆ ಇರುವುದಿಲ್ಲ. ಡಾ.ಕೆ.ಬಿ. ಸೂರ್ಯಕುಮಾರ್ ಬರಹ
ಮಗುವಿನ ಹಣೆಬರಹ ಬರೆಯುವ ಸೆಟಿಗೆವ್ವ
ಅಂತರ್ಜಾತಿ ಮತ್ತು ಅಂತರ ಧರ್ಮೀಯ ವಿವಾಹಗಳು ಈ ಸಮುದಾಯದಲ್ಲಿ ಬಹು ಹಿಂದಿನಿಂದಲೆ ನಡೆದಿವೆ. ಈ ಪರಂಪರೆ ಈಗಲೂ ವಿರಳವಾಗಿ ಮುಂದುವರಿದೆ. ತಮಗಿಂತ ಮೇಲಿನ ಸಮುದಾಯಗಳಲ್ಲಿ ಮತ್ತು ಸಮನಾಂತರ ಎಂದು ಭಾವಿಸಿದ ಸಮುದಾಯಗಳಲ್ಲಿ ಮದುವೆ ನಡೆದಿರುವುದು ಹೆಚ್ಚು. ತಮಗಿಂತ ಕೆಳಗಿನವರು ಎಂದು ಭಾವಿಸಿದ ಸಮುದಾಯಗಳ ಜತೆ ಮದುವೆ ಸಂಬಂಧಗಳು ಕಡಿಮೆ. ಹುಟ್ಟಿನಿಂದ ಸಾವಿನವರೆಗೆ ನಡೆಸುವ ಆಚರಣೆಗಳು ವಿಭಿನ್ನವಾಗಿವೆ. ಡಾ. ಅರುಣ್ ಜೋಳದ ಕೂಡ್ಲಿಗಿ ಬರೆಯುವ ‘ಗಂಟಿಚೋರರ ಕಥನಗಳು’ ಸರಣಿಯ ಹದಿನೈದನೇ ಕಂತು.
ರೇಷ್ಮೆಯ ಮಾಂತ್ರಿಕ ಚಿಟ್ಟೆಗಳ ಅಸುಖ
ನಾನೂ ನನ್ನ ತಾಯಿಯೂ ಅಪ್ಪನ ಆದೇಶಗಳಿಗೆ ಸದಾ ಸಿದ್ಧವಾಗಿರಲೇಬೇಕಿತ್ತು. ಆಗಿನ್ನೂ ಆತ ಪೇಟೆಯ ಎಂಡದ ದಾಸನಾಗಿರಲಿಲ್ಲಾ. ಖಡಕ್ ಆದ ಮನುಷ್ಯ. ಅತ್ಯುಗ್ರ ಸ್ವಾಭಿಮಾನಿ. ಆ ಕ್ಷಣವೇ ಅಲ್ಲೇ ಮರಣವಾದರೂ ಚಿಂತೆ ಇಲ್ಲಾ ಎಂದು ಅನ್ಯಾಯದ ವಿರುದ್ಧ ಪ್ರತಿಭಟಿಸಿ ಇಡೀ ಊರಿಗೆ ಊರನ್ನೇ ಎದುರು ಹಾಕಿಕೊಂಡು ದಂಗೆ ಏಳುತ್ತಿದ್ದ. ಅವನ ರೇಷಿಮೆಯ ಮನಸ್ಸೇ ತಿಳಿಯುತ್ತಿರಲಿಲ್ಲ. ಅತ್ತ ತಾತ ತನ್ನ ಹೋಟೆಲ್ ಕಾಯಕದಲ್ಲಿ ಮುಳುಗಿರುತ್ತಿದ್ದ. ಎಷ್ಟೋ ಬಡವರಿಗೆ ಸುಮ್ಮನೆ ಸಾಲದ ಲೆಕ್ಕದಲ್ಲಿ ಅನ್ನಹಾಕುತಿದ್ದ ಎಂದೂ ಸಾಲ ಕೇಳಿರಲಿಲ್ಲ ಯಾರನ್ನೂ ತಾತ.
ಬಲಿಪರ ಏರುಪದ್ಯಗಳ ಅನನ್ಯತೆ
ಯಕ್ಷಗಾನ ಕಲೆಯ ಹೊಸ ಪಲ್ಲವ ಯಕ್ಷಗಾಯನ. ಕೇವಲ ಗಾಯನಮಾತ್ರವೇ ಇರುವ ಯಕ್ಷಗಾನದ ಹೊಸ ಸಾಧ್ಯತೆ. ಇದನ್ನು ಯಕ್ಷಗಾನ ಭಾಗವತಿಕೆಯ ಅನನ್ಯತೆಯನ್ನು ತೋರಿಸಲು ಯಕ್ಷಗಾಯನವೇ ಮೊದಲಾದ ಕಾರ್ಯಕ್ರಮಗಳಲ್ಲಿ ಬಳಸಿಕೊಳ್ಳಬಹುದು. ಇದರಿಂದ ಭಾಗವತಿಕೆಯ ಶಕ್ತಿ ಮತ್ತು ಯಕ್ಷಗಾನದ ಹಾಡುಗಾರಿಕೆಯಲ್ಲಿನ ವಿಭಿನ್ನತೆಯನ್ನು ಚೆನ್ನಾಗಿ ತೋರಿಸಬಹುದೆಂಬುದು ಎನ್ನುವ ಅಭಿಮತ ಕಿರಿಯ ಬಲಿಪರದ್ದು. ಬಲಿಪಮಾರ್ಗ ಸರಣಿಯಲ್ಲಿ ಅವರ ಗಾಯನ ಶೈಲಿಯ ವಿಶ್ಲೇಷಣೆಯನ್ನು ಮಾಡಿದ್ದಾರೆ ಕೃಷ್ಣ ಪ್ರಕಾಶ್ ಉಳಿತ್ತಾಯ
ಚರ್ಚೆಗಳಲ್ಲಿ ರಸಸಿದ್ಧಾಂತ ಪಠ್ಯಗಳ ಪ್ರಮಾಣ
ಯಾವುದಕ್ಕೆ ಉತ್ತರ ಸಿಗುತ್ತಿಲ್ಲವೊ ಅದನ್ನು ಶಾಸ್ತ್ರ ಹೇಳುತ್ತದೆ ಅಂದ ಮೇಲೆ ಉತ್ತರ ಸಿಗದೇ ನಮಗೆ ಸಮಾಧಾನವಾಗುವ ಹಾಗೆ ಅಥವಾ ಮುಂದಿನ ಚರ್ಚೆ ತಾತ್ಕಾಲಿಕಯಾಗಿಯಾದರೂ ಕೊನೆಗೊಳ್ಳುವಂತೆ ರಸ ಸಿದ್ಧಾಂತವು ‘ಶಾಸ್ತ್ರ’ವಾಗುತ್ತದೆ. ಸಮಾಜದ ಎಲ್ಲ ಘಟಕಗಳಲ್ಲೂ ಮನುಷ್ಯ ವ್ಯವಹರಿಸುವಾಗ ಈ ‘ಶಾಸ್ತ್ರ’ಕ್ಕೆ ಸಂವಾದಿಯಾಗುವ ಹಲವು ಪರಿಕರಗಳನ್ನು ಬಳಸಿ ಆ ಸಂದರ್ಭಕ್ಕೆ ಅಂತ್ಯ ಹಾಡುವುದು ಸಾಮಾನ್ಯವೇ. ಇದೇ ಹಿನ್ನೆಲೆಯಲ್ಲಿ…
ನಮ್ ಶಾಲೆಗೆ ಬನ್ನಿ ಸಾರ್… ಎನ್ನುವ ಪ್ರೀತಿಯ ಕರೆ
ಸಮುದಾಯದತ್ತ ಶಾಲೆ ಕಾರ್ಯಕ್ರಮಕ್ಕೆ ಅಲ್ಲಿನ ಶಾಲೆಗಳಿಗೆ ಅಲ್ಲಿನ ಅಧ್ಯಾಪಕರ ಜೊತೆಗೆ ನಡೆದುಕೊಂಡೇ ಹೋಗಿ ಬಂದಾಗ ಅಲ್ಲಿನ ನಿಜವಾದ ಪರಿಸ್ಥಿತಿಯ ಅರಿವಾಗುತ್ತಿತ್ತು. ಶಾಲೆವರೆಗೂ ಬಂದರೆ ಆ ಶಾಲೆಯ ಅಧ್ಯಾಪಕರು ಬಹಳ ಪ್ರೀತಿಯಿಂದ ‘ಸಾರ್ ನೀವು ಶಾಲೆವರೆಗೂ ಬರುತ್ತೀರಿ ಅನ್ನುವುದೇ ಸಂತೋಷ. ಯಾವ ಅಧಿಕಾರಿಯೂ ಇಲ್ಲಿವರೆಗೆ ಬಂದುದ್ದೇ ಇಲ್ಲ’ ಎಂದು ತಮ್ಮ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತಿದ್ದರು. ಗಣಿತ ಮೇಷ್ಟರ ಶಾಲಾ ಡೈರಿ ಸರಣಿಯಲ್ಲಿ ಅರವಿಂದ ಕುಡ್ಲ ಲೇಖನ
‘ಗಂಟಿಚೋರ್’ ಎಂಬ ಐಡೆಂಟಿಟಿ ಅಥವಾ ಗುರುತಿನ ಪ್ರಶ್ನೆ
ಕರ್ನಾಟಕ ಸರಕಾರವು ೧೯೭೬ರಲ್ಲಿ ಪರಿಶಿಷ್ಟ ಜಾತಿ, ಪಂಗಡದ ಅಮೆಂಡ್ಮೆಂಟನ್ನು ಪಾಸು ಮಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗೆ ‘ಗಂಟಿಚೋರ್’ ಹೆಸರು ಮಾತ್ರ ಸೇರಿ ಅದರ ಜತೆ ಇದ್ದ ಸಮಾನಾಂತರ ಪದಗಳನ್ನು ಕೈಬಿಡಲಾಯಿತು. ಈ ಪಟ್ಟಿಯು ಗಂಟಿಚೋರ್ ಸಮುದಾಯಕ್ಕೆ ಬಿಕ್ಕಟ್ಟನ್ನು ತಂದಿಟ್ಟಿತು. ಕಾರಣ ಒಂದೇ ಸಮಾನಾಂತರ ಪದಗಳಾದ ಭಾಮ್ಟಾ, ಉಚಲ್ಯ, ವಡ್ಡರ್, ತುಡುಗವಡ್ಡರ್, ಗಿರಣಿವಡ್ಡರ್, ಠಕಾರಿ, ಪಾತ್ರೂಟ್ ಹೊರಗುಳಿದವು.









