Advertisement

ಸರಣಿ

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಬಹುಪಾಲು ಬಡ ತಾಯಂದಿರು ತಮ್ಮ ಮಕ್ಕಳಿಗಾಗಿ ಪಡುತ್ತಿದ್ದ ಕಷ್ಟ ಹೇಳಲಸಾಧ್ಯವಾದುದು. ತಮ್ಮ ಮಗ ಬಹಳಷ್ಟು ಓದಿ ದೊಡ್ಡ ಹುದ್ದೆ ಪಡೆಯಬೇಕು ಎಂಬ ಕನಸನ್ನು ಕೂಡ ಕಾಣಲು ಸಾಧ್ಯವಾಗದಂಥ ದುಃಸ್ಥಿತಿಯಲ್ಲಿ ಅವರಿದ್ದರು. ಮಗ ಬೀಡಿ, ಸಿಗರೇಟ್, ಇಸ್ಪೆಟ್, ಕುಡಿತ ಮುಂತಾದ ದುಶ್ಚಟಗಳಿಗೆ ಬಲಿಯಾಗಬಾರದು ಎಂಬ ಚಿಂತೆ ಅವರನ್ನು ಸದಾ ಕಾಡುತ್ತಿತ್ತು. ಮಗ ಆರೋಗ್ಯ ಕಾಪಾಡಿಕೊಂಡಿರಬೇಕು, ಯಾವುದೋ ಕೂಲಿನಾಲಿ ಮಾಡಿಕೊಂಡು ಮರ್ಯಾದೆವಂತನಾಗಿ ಬದುಕಬೇಕು ಎಂಬುದು ಅವರ ಆಸೆಯಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

read more
`ಕ್ರಾಂತಿ ಕನ್ನೆಯ ಮೋಹದ ಮಳೆಯಲ್ಲಿ’

`ಕ್ರಾಂತಿ ಕನ್ನೆಯ ಮೋಹದ ಮಳೆಯಲ್ಲಿ’

ರೂಮಿನ ವರಾಂಡದಲ್ಲಿ ಕೆಲವು ವಿದ್ಯಾರ್ಥಿ ಮಿತ್ರರು ನನ್ನ ಪರವಾಗಿ ಬಂದು ಬಾಗಿಲು ಬಡಿದು ಕೂಗಿದ್ದರು. ಒಳಗಿದ್ದವರು ಹೆದರಿದ್ದರು. ಗುಂಡ್ಲುಪೇಟೆಯ ಶಿವಬುದ್ಧಿ ಎಂಬ ಮಿತ್ರ ಇದ್ದ. ದ.ಸಂ.ಸದ ಅರೆಕಾಲಿಕ ಕಾರ್ಯಕರ್ತನಾಗಿ ರಾಜ್ಯಶಾಸ್ತ್ರದಲ್ಲಿ ಎಂ.ಎ.ಮುಗಿಸುತ್ತಿದ್ದ. ಅವಾಜ್ ಹಾಕಿದ್ದ. ‘ಬಾಗ್ಲು ತಗೀಲಿಲ್ಲಾ ಅಂದ್ರೆ ಯೀಚ್ವಾರಿಂದ ಬೀಗಾ ಹಾಕಂದು ಪೋಲಿಸ್ಗೆ ಕಂಪ್ಲೇಂಟ್ ಕೊಡ್ತೀನಿ’ ಎಂದು ಅಬ್ಬರಿಸಿದ್ದ. ಅವರು ನನ್ನನ್ನು ಹೊರಗೆ ಬಿಡಲೇ ಬೇಕಿತ್ತು. ಅವನೊಮ್ಮೆ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಕಾರಿಗೆ ಅಡ್ಡ ನಿಂತು ಧಮಕಿ ಹಾಕಿ ನಮ್ಮ ಹಳ್ಳಿಗೆ ಇಂತಿಂತಹ ಕೆಲಸಗಳನ್ನು ಮಾಡಿಕೊಡಬೇಕೆಂದು ಆಗ್ರಹಿಸಿ ಯಶಸ್ವಿ ಆಗಿದ್ದ.
ಮೊಗಳ್ಳಿ ಗಣೇಶ್ ಬರೆಯುವ ಸರಣಿ.

read more
ಬಡವರ ಶಕ್ತಿ ಅದಮ್ಯ

ಬಡವರ ಶಕ್ತಿ ಅದಮ್ಯ

ಬಡವರು ಎಷ್ಟೇ ಮೂಢನಂಬಿಕೆಯವರಿದ್ದರೂ ತಮ್ಮ ಶಕ್ತಿಯನ್ನು ಅವಲಂಬಿಸಿಯೆ ಬದುಕುವುದು ಅವರ ಜಾಯಮಾನವಾಗಿದೆ. ಬದುಕೆಂಬುದು ಅವರಿಗೆ ಹೋರಾಟದ ಅಖಾಡಾ ಆಗಿದೆ. ಆಹಾರ, ಬಟ್ಟೆ, ಆಶ್ರಯ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಅವರು ನಿರಂತರವಾಗಿ ಹೋರಾಡುತ್ತಲೇ ಇರುತ್ತಾರೆ. ಆದರೆ ಈ ಹೋರಾಟ ಮಾರ್ಕ್ಸ್ ಹೇಳುವ ವರ್ಗ ಹೋರಾಟವಾಗಿರುವುದಿಲ್ಲ. ಅವರ ಶೋಷಣೆ ಮಾಡುವವರು ಅವರಿಗೆ ಅನ್ನದಾತರು ಎಂದು ಕಾಣುತ್ತಿದ್ದರೇ ಹೊರತು ಶೋಷಕರಾಗಿ ಕಾಣುತ್ತಿರಲಿಲ್ಲ.  ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 33ನೆಯ ಕಂತು ಇಲ್ಲಿದೆ. 

read more
ಅಲೆಗಳು ಕರೆತಂದಿದ್ದವು ದಂಡೆಗೆ

ಅಲೆಗಳು ಕರೆತಂದಿದ್ದವು ದಂಡೆಗೆ

ಅದೇ ಅವನು ನಮ್ಮಪ್ಪ ನರಭಕ್ಷಕ ಬಾಂಡ್ಲಿಯಲ್ಲಿ ಬೋಂಡ ಹಾಕುತಿದ್ದ. ಅವನ ಹೆಂಡತಿ ಸಪ್ಲೆರ‍್ರಾಗಿದ್ದಳು. ಪುಟ್ಟ ಹುಡುಗಿ; ಅವಳ ಹೆಸರು ಮೀನಾಕ್ಷಿ, ಶಾಲೆಗೆ ಸೇರಿದ್ದಳೊ ಇಲ್ಲವೊ ಗೊತ್ತಿರಲಿಲ್ಲ. ಅವಳ ತಾಯ ತದ್ರೂಪ. ಅಲಲಲಾ… ಎಂತಹ ಪಾಳೆಯಗಾರ… ಇಲ್ಲಿ ಫುಟ್‌ಪಾತಲ್ಲಿ ಬಂದು ಬಿದ್ದಿದ್ದಾನಲ್ಲಾ. ಇವನೆನಾ ನಮ್ಮಪ್ಪ! ಕೊಂದು ಬಿಡಲು ಎಷ್ಟು ಸಲ ಯತ್ನಿಸಿ ವಿಫಲನಾಗಿದ್ದನಲ್ಲಾ! ಈಗ ಇಲ್ಲಿ ಈ ಪಾಡಿನಲ್ಲಿ. ಮೆರೆದಿದ್ದವನ ಗತಿಯೇ ಇದೂ ಎಂದು ಗಕ್ಕನೆ ನಿಂತೆ. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ. 

read more
ಇದು ಪ್ರೇಕ್ಷಕಾನುಸಂಧಾನ

ಇದು ಪ್ರೇಕ್ಷಕಾನುಸಂಧಾನ

ಒಂದು ಪ್ರಸಂಗದಲ್ಲಿ ಭೀಷ್ಮ, ಸತ್ಯವತಿಯನ್ನು ತುಂಬಾ ವರ್ಣನೆ ಮಾಡಿದ್ದನ್ನುಸರೋಜಕ್ಕ ನೋಡಿದರು. ತಂದೆ ಇಷ್ಟ ಪಟ್ಟ ಹೆಣ್ಣನ್ನು ತಾಯಿ ಅಂತನೇ ನೋಡಬೇಕಿತ್ತು. ಹಾಗೆಲ್ಲಾ ತುಂಬಾ ವರ್ಣನೆ ಮಾಡಿದ್ದು ಆಭಾಸವಾಯಿತು ಅಂದರು. ಕರ್ಣಪರ್ವದಲ್ಲಿ ಕರ್ಣ ಪಾಪ, ಪಾಂಡವರಾಗಿ ಹುಟ್ಟಿದರೂ ಏನು ಇಲ್ಲ. ತಾಯಿ ಇದಾರೆ, ತಮ್ಮಂದಿರಿದಾರೆ. ಆದರೂ ಯಾರೂ ಇಲ್ಲ. ಇಡೀ ಮಹಾಭಾರತದಲ್ಲಿ ಕರ್ಣ ಅಂದ್ರೆ ಬಹಳ ಪ್ರೀತಿ. ಕುಂತಿ ನೋಡಿದ್ರೆ ಸಿಟ್ಟು ಬರತ್ತೆ ಒಂದೊಂದ್ಸಲ. ಆದರೆ ಕೀಲಿ ಕೈ ಇರೋದು ಕೃಷ್ಣನ ಹತ್ರನೇ. ಕಪಟ ನಾಟಕ ಅಂತನೇ ಇದೆಯಲ್ಲ.
ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯ‌ ಬರಹ

read more
ಪತ್ರಿಕಾ ಸ್ವಾತಂತ್ರ್ಯದ ಸುತ್ತಮುತ್ತ ʻದ ಪೋಸ್ಟ್‌ʼ

ಪತ್ರಿಕಾ ಸ್ವಾತಂತ್ರ್ಯದ ಸುತ್ತಮುತ್ತ ʻದ ಪೋಸ್ಟ್‌ʼ

ಅಮೆರಿಕ ರಕ್ಷಣಾ ವಿಭಾಗದ ಪೆಂಟಗನ್‌ ಪೇಪರುಗಳಿಗೆ ಸಂಬಂಧಿಸಿದಂತೆ ನ್ಯೂಯಾರ್ಕ್ ಟೈಮ್ಸ್‌ ಪತ್ರಿಕೆಗೆ ಒದಗಿದ ಅವಸ್ಥೆಯನ್ನು ತಿಳಿದಿದ್ದರೂ ಬೆನ್ ಬ್ರಾಡ್ಲಿ ತಾವೇಕೆ ಆ ಮಾಹಿತಿಯನ್ನು ಪ್ರಸಾರ ಮಾಡಕೂಡದು ಎಂದು ಯೋಚಿಸುತ್ತಾನೆ. ಅದು ಹೊಳೆದ ಕೂಡಲೆ ಡೇನಿಯಲ್‌ ಎಲ್‌ಬರ್ಗ್‌ ನನ್ನು ಸಂಪರ್ಕಿಸಿ ಉದ್ದೇಶಿತ ಮಾಹಿತಿಯನ್ನು ಪಡೆಯಲು ಸಫಲನಾಗುತ್ತಾನೆ. ನ್ಯೂಯಾರ್ಕ್‌ ಟೈಮ್ಸ್‌ನಿಂದ ಯುದ್ಧದ ಸತ್ಯವಾದ ಮಾಹಿತಿ ಸಾರ್ವಜನಿಕರಿಗೆ ತಿಳಿಯಲಾಗದ ಪರಿಸ್ಥಿಗೆ ಎಲ್‌ಬರ್ಗ್ ನೊಂದುಕೊಂಡಿರುತ್ತಾನೆ.
ಎ.ಎನ್. ಪ್ರಸನ್ನ ಬರಹ ಇಲ್ಲಿದೆ.

read more
ಅಂಬಾಭವಾನಿಯ ಆರಾಧನೆಯ ದಿನಗಳು

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

read more

ಮೂಕ ನಾಯಕನ ದೇಶ ಯಾವುದು

ರಾಘವೇಂದ್ರಾಯ ನಮಃ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ್ದ ನಮಗೆ ಒಂದಿಷ್ಟು ನಯ ವಿನಯ ಪ್ಯಾಂಟಸಿ ರಮ್ಯತೆ ಇತ್ತು. ನಾವಾಗಿ ನಾವು ‘ದಲಿತ’ ರೂಪಿಸಿದಾಗ ಅಗ್ನಿ ಪರ್ವತದಂತೆ ಮನದೊಳಗೆ ಲಾವಾ ಕುದಿಯುತ್ತಿತ್ತು. ಆ ಮಳವಳ್ಳಿ ಪೈಲ್ವಾನನೂ ಬ್ಲೇಡೇಟಿನ ಚಿಕ್ಕಣ್ಣನೂ ನಮ್ಮ ಬೆನ್ನು ತಟ್ಟಿದ್ದರು. ಬೋರ್ಡಿಗೆ ಹಚ್ಚಿದ ಸಾಯಂಕಾಲದ ಒಳಗೆ ತರಾವರಿ ಕೀಳು ಬಯ್ಗಳಗಳು ಅದೇ ದಲಿತ ಪತ್ರಿಕೆಯ ಮೂಲೆಗಳಲ್ಲೆಲ್ಲ ದಾಖಲಾಗುತ್ತಿದ್ದವು. ಅವನ್ನೆಲ್ಲ ಇಲ್ಲಿ ದಾಖಲಿಸಲಾಗದು. ಮೊಗಳ್ಳಿ ಗಣೇಶ್ ಬರೆಯುವ ಸರಣಿ.

read more
ಎಲ್ಲ ನಾಡುಗಳ ದುಡಿಮೆಗಾರರೂ ಒಂದಾಗಲಿ ಎಂದವನು

ಎಲ್ಲ ನಾಡುಗಳ ದುಡಿಮೆಗಾರರೂ ಒಂದಾಗಲಿ ಎಂದವನು

ಜೀವಂತಿಕೆಯಿಂದ ತುಂಬಿ ತುಳುಕುತ್ತಿದ್ದ ಸೊಹೊ ಪ್ರದೇಶ, ಅಪಾಯಕಾರಿ ಅನಾರೋಗ್ಯಕರ ಸ್ಥಳವೂ ಆಗಿತ್ತು. ಸರಾಸರಿ ಹದಿನಾಲ್ಕು ಜನರು ಒಂದೇ ಮನೆಯಲ್ಲಿ ವಾಸಿಸುವಂತಹ ಜನಸಂದಣಿ, ಬಡತನದ ಬೀಡಾಗಿತ್ತು. ಕಾಯಿಲೆಗಳ ಗೂಡಾಗಿತ್ತು. ೧೮೫೪ರಲ್ಲಿ ಈ ಪ್ರದೇಶ ಕಾಲರಾ ಬಾಧೆಯಿಂದ ಬಳಲಿತು. ಸರಿಯಾದ ಕೆಲಸವಿಲ್ಲದ, ಹಣದ ನಿರ್ವಣೆಯಲ್ಲಿ ಚತುರನಲ್ಲದ ಮಾರ್ಕ್ಸ್ ನಿರಂತರವಾಗಿ ಗೆಳೆಯರ ಕೊಡುಗೆಯಲ್ಲಿ ಜೀವನ ಸಾಗಿಸುತ್ತಿದ್ದ. ಆಪ್ತನಾದ ಎಂಗೆಲ್ಸ್, ಬೇಕರಿ, ಹಾಲು, ತರಕಾರಿ, ಚಹಾ ಅಂಗಡಿಯವರ ಬಳಿ ಮಾರ್ಕ್ಸ್ ಮಾಡಿದ ಸಾಲವನ್ನು ತೀರಿಸುತ್ತಿದ್ದ.
ಯೋಗೀಂದ್ರ ಮರವಂತೆ ಬರೆಯುವ ಸರಣಿ

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ