ಪ್ರತಿರೋಧ ಮಾರ್ಗಗಳ ಕತೆ ಹೇಳುವ ಸಿನಿಮಾ ʻಕೈರೋ 678’
ಫೈಜಾ಼ಳ ಗಂಡನಿಗೆ ಸರಿಯಾದ ಕೆಲಸವಿಲ್ಲ. ವರಮಾನದ ಅಭಾವವಿರುವ ಗಂಡ ಮತ್ತು ಸ್ಕೂಲಿಗೆ ಹೋಗುವ ಇಬ್ಬರು ಮಕ್ಕಳನ್ನು ಆಕೆ ನಿಭಾಯಿಸಬೇಕು. ಆದಾಯದ ಕೊರತೆ. ಅದಕ್ಕಾಗಿ ಸಂಬಳ ವಿತರಿಸುವವನೊಂದಿಗೆ ಮಾಡುವ ಚರ್ಚೆ ವ್ಯರ್ಥ. ಜೊತೆಗೆ ಪ್ರತಿದಿನದ ಲೈಂಗಿಕ ಹಿಂಸೆಯಿಂದ ರಾತ್ರಿ ಕಾಡಿ, ಬೇಡಿ ಬರುವ ಗಂಡನನ್ನು ಹತ್ತಿರ ಬಿಟ್ಟುಕೊಳ್ಳಲು ಮನಸ್ಸಿರುವುದಿಲ್ಲ. ಗಂಡಸು ಎಂದರೆ ಸಾಕು ಉರಿದುಕ್ಕುವ ಹಿಂಸೆ ಆವರಿಸಿ ಗಂಡನನ್ನು ದೂರವಿಡಲು ಪ್ರತಿ ರಾತ್ರಿಯೂ ಈರುಳ್ಳಿ ತಿನ್ನುತ್ತಾಳೆ. ಗಂಡನಿಗೋ ಉಕ್ಕೇರಿ ಬರುವ ಅಭಿಲಾಷೆಯನ್ನು ಹತ್ತಿಕ್ಕುವ ಒದ್ದಾಟ.
ಅಪರಾಧ ಮತ್ತು ಶಿಕ್ಷೆ: ಸ್ಥಿಮಿತವಿಲ್ಲದ ಮನಸ್ಸು
ಈ ಎಲ್ಲ ಮಾತು ರಾಸ್ಕೋಲ್ನಿಕೋವ್ನನ್ನು ತಡೆದು ನಿಲ್ಲಿಸಿದವು. ಅವನ ನಾಲಗೆ ತುದಿಗೆ ಬಂದಿದ್ದ, ‘ನಾನು ಕೊಲೆಮಾಡಿದೆ,’ ಅನ್ನುವ ಮಾತು ಅಲ್ಲೇ ಹೆಪ್ಪುಗಟ್ಟಿತು. ಈ ಎಲ್ಲ ಉದ್ಗಾರ ಶಾಂತವಾಗಿ ಕೇಳಿಸಿಕೊಂಡ. ಹಿಂದೆ ತಿರುಗಿ ನೋಡದೆ ಪೋಲೀಸು ಸ್ಟೇಷನ್ನಿನ ರಸ್ತೆಯಲ್ಲಿ ನಡೆದ. ದಾರಿಯಲ್ಲಿ ಅವನ ಮುಂದೆಯೇ ಯಾವುದೋ ನೆರಳು ಹಾದು ಹೋದ ಹಾಗೆ ಅನ್ನಿಸಿತು. ಅವನಿಗೆ ಆಶ್ಚರ್ಯವಾಗಲಿಲ್ಲ. ಇದು ಹೀಗೇ ಆಗುತ್ತದೆ ಎಂದು ಮೊದಲೇ ಅವನು ಊಹಿಸಿದಂತಿತ್ತು. ಹೇಮಾರ್ಕೆಟ್ಟಿನಲ್ಲಿ ಎರಡನೆಯ ಬಾರಿ ಇಡೀ ಲೋಕಕ್ಕೆ….
ಇಂಗ್ಲಿಷ್ ಪಾಸು ಮಾಡಿಸುವ ‘ದಾತ’
ಹಾಸ್ಟೆಲ್ನಲ್ಲಿ ಓದುವುದಕ್ಕೆ ಬಿಎಸ್ಸಿ ಹುಡುಗರಿಗಿಂತ ಹೆಚ್ಚಿನ ಸಮಯ ವ್ಯಯಿಸುತ್ತಿದ್ದ ನಾವು, ರಾತ್ರಿ ಹಗಲೆನ್ನದೆ ಪುಸ್ತಕ ಹಿಡಿದೇ ಇರುತ್ತಿದ್ದೆವು. ಸದಾ ಕನ್ನಡಕ ಹಾಕುತ್ತ ಎಲ್ಲರಿಂದ ‘ಇಂಟಲಿಜೆಂಟ್’ ಎಂದು ಕರೆಸಿಕೊಳ್ಳುತ್ತಿದ್ದ ರಂಗನಾಥ್ ನಮ್ಮ ಓದನ್ನ ಕಂಡು ‘ನೀವು ಸೈನ್ಸ್ ತಗಬೇಕಾಗಿತ್ತು ಕಂಡ್ರಲ’ ಎನ್ನುತ್ತಿದ್ದ. ಓದಿ ಬಸವಳಿಯುತ್ತಿದ್ದ ನಮಗೆ ಮಧ್ಯೆ ಕರೆಂಟ್ ಹೋದರೆ ತಂಪೆನಿಸುತ್ತಿತ್ತು. ಆದರೆ ಅದನ್ನ ತೋರಗೊಡದೆ ಕರೆಂಟಿಗೆ ಶಪಿಸುವರಂತೆ ನಾಟಕವಾಡುತ್ತಿದ್ದೆವು. ಹೀಗೆ ಒಮ್ಮೆ ನಮಗೂ ಪ್ರಭನಿಗೂ ಚಾಲೆಂಜ್ ಬಿತ್ತು.
ಗುರುಪ್ರಸಾದ್ ಕಂಟಲಗೆರೆ ಬರೆಯುವ ಟ್ರಂಕು ತಟ್ಟೆ ಸರಣಿಯ ಬರಹ ಇಲ್ಲಿದೆ.
ಹಿಮ್ಮೇಳದಲ್ಲಿ ಮದ್ದಳೆ, ಖಂಜೀರ, ಪುಂಗಿ ಇತ್ಯಾದಿ
ಖಂಜೀರ ಪೂರ್ಣಪ್ರಮಾಣದಲ್ಲಿ ಯಕ್ಷಗಾನ ಹಿಮ್ಮೇಳದ ಭಾಗವಾಗಿತ್ತು. ಭಾಗವತರ ಹಿಂದೆ ಒತ್ತು ಮದ್ದಳೆಗಾರರು ಅಥವಾ ಅಲ್ಪ ಸ್ವಲ್ಪ ತಾಳ ಜ್ಞಾನ ಇದ್ದವರು, ಖಂಜೀರವನ್ನು ನಿಂತು ನುಡಿಸುತ್ತಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತರು ಮೇಳ ತಿರುಗಾಟದಲ್ಲಿ ಖಂಜೀರದ ನುಡಿಸುವಿಕೆಯೊಂದಿಗೆ ಭಾಗವತಿಕೆಯನ್ನು ಮಾಡಿದ್ದರು. ಖಂಜೀರದ ಬಳಕೆ ಕಾಲಕ್ರಮೇಣ ನಿಂತಿತು. ಹೊಸ ವಾದ್ಯಗಳು ಹಿಮ್ಮೇಳವನ್ನು ಸೇರಿಕೊಂಡ ಬಗ್ಗೆ ‘ಬಲಿಪ ಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರೆದಿದ್ದಾರೆ.
ಗಣ್ಯರ ಒಡನಾಟದಲ್ಲಿ ಕಂಡ ಸರಳತೆಯ ಮುಖಗಳು
ಯಾವುದಾದರೂ ಗಣ್ಯ ವ್ಯಕ್ತಿಗಳನ್ನು ಬರುವಿಕೆಯು ಮಧ್ಯಾಹ್ನ ಹನ್ನೊಂದು ಗಂಟೆಗೆ ಎಂದು ಇದ್ದರೂ ನಾವು ಭದ್ರತೆಯ ದೃಷ್ಟಿಯಿಂದ ಬೆಳಿಗ್ಗೆ ಮುಂಜಾನೆಯೇ ಅಲ್ಲಿರಬೇಕಾಗುತ್ತಿತ್ತು. ಅಲ್ಲಿ ಎಲ್ಲ ತಪಾಸಣೆಗಳನ್ನು ಮಾಡಿದ ನಂತರ ಆಸ್ಪತ್ರೆಯವರಾದ ನಾವು ಮೊದಲಿನ ಸುತ್ತಿನಲ್ಲಿ ಇರುತ್ತಿದ್ದೆವು. ಗಣ್ಯವ್ಯಕ್ತಿಗಳಿಗಾಗಿ ತಯಾರು ಮಾಡುತ್ತಿರುವ ಎಲ್ಲಾ ತಿನಿಸುಗಳ ರುಚಿಯನ್ನು ಕೂಡ ನೋಡಬೇಕೆಂಬ ಸೂಚನೆ ನೀಡಲಾಯಿತು. ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ನೆನಪುಗಳ ಮೆರವಣಿಗೆ ಸರಣಿ.
`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?
ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು.
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.
ಉಪೇಂದ್ರನ ಹಾವಳಿ ಮತ್ತು ರಾಮಾಂಜಿ ಲವ್
ಸರ್ಕಾರದಿಂದ ನಡೆಯುವ ಯಾವುದೇ ಪರೀಕ್ಷೆಗಳನ್ನು ನಡೆಸಲು ನಮ್ಮ ಜೂನಿಯರ್ ಕಾಲೇಜಿನ ಕೊಠಡಿಗಳನ್ನ ಕಡ್ಡಾಯವಾಗಿ ತೆಗೆದುಕೊಳ್ಳುತ್ತಿದ್ದುದರಿಂದ ಆಗೆಲ್ಲ ನಮಗೆ ದೀರ್ಘ ರಜೆ ಸಿಗುತ್ತಿತ್ತು. ಚೆನ್ನಾಗಿ ಓದಬೇಕೆಂಬ ಕನಸು ಹೊತ್ತು ಬಂದಿದ್ದ ನಮಗೆ ಇಲ್ಲಿನ ವಿಪರೀತ ರಜೆಗಳಿಂದಾಗಿ ನಿರಾಸೆ ಉಂಟಾಗಿತ್ತು. ನಮಗೆ ಇತ್ತ ಕೆಲ ತಿಂಗಳು ಕಳೆದರೂ ಕಾಲೇಜು ಪ್ರಾರಂಭ ಆಗದೆ ಊರಲ್ಲೆ ಉಳಿದಾಗ, ಪಕ್ಕದ ಮನೆ ಕೇಸುದೊಡಪ್ಪ ‘ಎಲ್ಲೊ ಪೇಲಾಗವೆ ಅದ್ಕೆ ಹೋಗಿಲ್ಲ’ ಎಂದು ಅನುಮಾನ ಪಟ್ಟುಕೊಳ್ಳುತ್ತಿತ್ತು. ಗುರುಪ್ರಸಾದ್ ಕಂಟಲಗೆರೆ ಬರಹ.
ಠಕ್ಕರ ಸಲಹುವ `ಕಾಳಿ’ ಮತ್ತು ಠಕ್ಕದೀಕ್ಷೆ
ಸರ್ವಶಕ್ತನ ಹೆಂಡತಿಯನ್ನು ದೇವಿ, ಭವಾನಿ, ಕಾಳಿ- ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಅವಳು ಒಂದು ಬೊಂಬೆಯನ್ನು ಮಾಡಿದಳು. ಅದಕ್ಕೆ ಜೀವಶಕ್ತಿ ತುಂಬಿದಳು. ಅದು ಜೀವ ತುಂಬಿಕೊಂಡ ಕೂಡಲೇ, ತನ್ನ ಬಹಳ ಮಂದಿ ಭಕ್ತರನ್ನು ಕೂಡಿಸಿದಳು. ಅವಳು ಅವರಿಗೆ ಠಕ್ಕರು ಎಂದು ಹೆಸರಿಟ್ಟಳು. ಅವರಿಗೆಲ್ಲಾ ಠಕ್ಕ ವೃತ್ತಿಯನ್ನು ಅದರ ಚಮತ್ಕಾರಗಳನ್ನು ಕಲಿಸಿದಳು. ಅದರ ಗುಟ್ಟುಗಳನ್ನು ಅವರೆಲ್ಲಾ ಸರಿಯಾಗಿ ಅರಿತುಕೊಳ್ಳುವಂತೆ ಮಾಡಲು, ತಾನು ರೂಪಿಸಿ ಜೀವ ನೀಡಿದ್ದ ಬೊಂಬೆಯನ್ನು ತನ್ನ ಕೈಯಾರೆ ನಾಶ ಮಾಡಿದಳು. ಅವಳು ಠಕ್ಕರಿಗೆ…
ಏಕಸೂತ್ರದಲ್ಲಿ ಬಂಧಿಯಾದ ಭಿನ್ನ ನೆಲೆಗಳು
ವಿಶ್ವನಾಥರ ಅದೃಷ್ಟವೆಂದರೆ, ಪಲ್ಲಟಗಳು, ಪರಿವರ್ತನೆ ಜರುಗುತ್ತಿದ್ದ ಕಾಲದಲ್ಲಿ ಎಲ್ಲವನ್ನೂ ಬಿಡುಗಣ್ಣಿನಿಂದ ನೋಡುವಂತ ವಯಸ್ಸಿನಲ್ಲಿ ಅವರಿದ್ದುದು. ಮುಂಬೈನಲ್ಲಿ ಸಂಶೋಧಕನ ವೃತ್ತಿ, ನಂತರ ಅಮೆರಿಕಾದಲ್ಲಿ ವೃತ್ತಿ, ಸಂಶೋಧನೆಗಳಿಂದಾಗಿ ಮೂಡಿದ ವಿಶಾಲ ಜೀವನ ದೃಷ್ಟಿ, ಇವುಗಳ ಹಿನ್ನೆಲೆಯಲ್ಲಿ ಸುಮಾರು ೫೦-೬೦ ವರ್ಷಗಳ ನಂತರ ಒಂದು ರೀತಿಯ ‘ಮಾನಸಿಕ ದೂರ’ದಿಂದ ಈ ಕತೆ ಬರೆದಿದ್ದು, ತಂದೆ-ತಾಯಿ-ಪತ್ರಿಕೆಗಳ ಬಗ್ಗೆ ಮಾತ್ರವಲ್ಲ, ಸೋದರ ಬ್ರಹ್ಮಾನಂದ, ಕುಟುಂಬಕ್ಕೆ ಆಪ್ತರಾಗಿದ್ದವರ…









