Advertisement

ಸರಣಿ

ಸ್ವಾಯತ್ತತೆಯೆಡೆಗೆ ತುಡಿಯುವ ದಾಕ್ಷಾಯಿಣಿಯ ಪಾತ್ರ

ಸ್ವಾಯತ್ತತೆಯೆಡೆಗೆ ತುಡಿಯುವ ದಾಕ್ಷಾಯಿಣಿಯ ಪಾತ್ರ

ಸಂಸಾರಕ್ಕೆ ಯೋಗ್ಯವೆನಿಸುವ ಲಕ್ಷಣಗಳಾವುವೂ ಶಿವನಲ್ಲಿ ಇರುವಂತೆ ನಮಗೆ ಕಾಣಿಸುವುದಿಲ್ಲ. ಅವಳ ಅಪ್ಪನಾದ ದಕ್ಷನಿಗೂ ಹಾಗೆ ಕಂಡಿರಬೇಕು. ಇಲ್ಲಿ ನಾವು ಗಮನಿಸಬೇಕಾದ್ದು, ಶಿವನ ಅಲೆಮಾರಿತನ, ಒರಟುತನವು ‘ಗೃಹಸ್ಥ’ ನ ಲಕ್ಷಣಕ್ಕೆ ತೀರಾ ವಿರುದ್ಧವಾದುದು ಎನ್ನುವುದನ್ನು. ಲಹರಿಯಲ್ಲಿ ಯೋಚಿಸುತ್ತಾ ಹೋದರೆ, ಇದು ಹಲವು ಉತ್ತರಗಳನ್ನು ಮೇಲಿನ ಪ್ರಶ್ನೆಗಳಿಗೆ ಕೊಡುತ್ತಾ ಹೋಗುತ್ತದೆ.

read more
ಪಿ.ಆರ್.ರಾಮಯ್ಯನವರ ರಾಜಕೀಯ ನಡವಳಿಕೆಗಳು

ಪಿ.ಆರ್.ರಾಮಯ್ಯನವರ ರಾಜಕೀಯ ನಡವಳಿಕೆಗಳು

ಆ 74 ಜನರಲ್ಲಿ ಒಬ್ಬರಾದ ನಮ್ಮ ತಂದೆ ವಿಧಾನಸಭೆಯಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದರು ಎನ್ನುವ ಕುತೂಹಲ ನನಗೆ ಮೊದಲಿಂದಲೂ ಇತ್ತು. ಮನೆಯಲ್ಲಿ ಹೆಚ್ಚು ಮಾತನಾಡದವರು ಅಲ್ಲಿ ಮಾತಾಡುತ್ತಿದ್ದರೇ? ಏನು ಮಾತನಾಡುತ್ತಿದ್ದರು? ಅಥವಾ ‘ಸೈಲೆಂಟ್ ಮೆಂಬರ್ʼ ಆಗಿದ್ದರೋ? ಕಳೆದ ಹತ್ತು ವರ್ಷಗಳಲ್ಲಿ ಈ ಕುತೂಹಲ ಇನ್ನೂ ಹೆಚ್ಚಾಯಿತು. ವಿಧಾನಸೌಧದ ಗ್ರಂಥಾಲಯದಲ್ಲಿ ನನ್ನ ಹಳೆಯ ಎಂ ಎಸ್ ಸಿ ಸಹಪಾಠಿ…

read more
ಸೌತ್‌ ಕೊರಿಯಾದ ʻಓಲ್ಡ್‌ಬಾಯ್’: ಚುರುಕು ನಿರೂಪಣೆಯ ಚೌಕಟ್ಟುಗಳು

ಸೌತ್‌ ಕೊರಿಯಾದ ʻಓಲ್ಡ್‌ಬಾಯ್’: ಚುರುಕು ನಿರೂಪಣೆಯ ಚೌಕಟ್ಟುಗಳು

ಕೋಣೆಯೊಳಗೆ ಅತ್ತಿಂದಿತ್ತ ಓಡಾಡಲು ಒಂದಿಷ್ಟು ಜಾಗ ಮತ್ತು ಹೊರಗಿನಿಂದ ಊಟ ಕೊಡಲು ಉಕ್ಕಿನ ಬಾಗಿಲಿನಲ್ಲಿ ಅಂಗೈ ಅಗಲದ ಕಿಂಡಿ. ಇಷ್ಟಲ್ಲದೆ ಉರುಳುವ ಗಂಟೆಗಳು ಸುಮ್ಮನೆ ಅವನನ್ನು ಸುತ್ತಿ ಚಿಂದಿ ಮಾಡುವುದನ್ನು ತಪ್ಪಿಸಿ, ಬೇರೆ ಕಡೆ ದೃಷ್ಟಿ ಹರಿಸುವಂತೆ ಮಾಡಲು ಸದಾ ಕಾಲ ಆನ್‌ ಆಗಿಯೇ ಇರುವ ಟೀವಿ. ಅದೇ ಅವನ ಸಂಗಾತಿ. ಉಳಿದಂತೆ ಆಗಾಗ ಹೊರಗೆಲ್ಲೋ ದೂರದಿಂದ ಅವನಿಗೆ ಆಗಾಗ ವಾಹನಗಳ ಓಡಾಟ ಇತ್ಯಾದಿಗಳ ಶಬ್ದ.

read more
ಎ ಪ್ಯಾಸೇಜ್ ಟು ನಾವಿಗಲ್ಲಿ…

ಎ ಪ್ಯಾಸೇಜ್ ಟು ನಾವಿಗಲ್ಲಿ…

ನಮ್ಮ ಕೆಲ ಜನ ಎಷ್ಟೊಂದು ವಿಚಿತ್ರವಾಗಿರುತ್ತಾರೆ ಎನ್ನುವುದಕ್ಕೆ ಗೌಸ್ ಮತ್ತು ಖೈರುನ್ನೀಸಾಳ ನಿಶ್ಚಿತಾರ್ಥವೇ ಸಾಕ್ಷಿ. ತನ್ನ ಮಗಳನ್ನು ತಮ್ಮನಿಗೆ ಕೊಡಬೇಕೆಂದು ಗೌಸ್ ಅಕ್ಕ ನಿರ್ಧರಿಸಿದಳು. ಆತನೋ ಗಂಡನಾಗುವ ಸಾಧ್ಯತೆ ಇಲ್ಲದವನು. ಆತನ ನಡಿಗೆ, ಮಾತು ಮುಂತಾದವು ಹೆಂಗಸರ ಹಾಗೇ ಇದ್ದವು. ಅವನ ಸಹವಾಸವೂ ಹೆಣ್ಣುಮಕ್ಕಳ ಜೊತೆಗೇ ಇತ್ತು. ಕಂಡ ಕಂಡವರ ಮನೆಯಲ್ಲಿ ಕಲಬತ್ತಿನಲ್ಲಿ ಚಟ್ನಿ ಕುಟ್ಟೋದು ಮತ್ತು ಮಸಾಲೆ ಅರಿದು ಕೊಡೋದು ಎಂದರೆ ಆತನಿಗೆ…

read more
ಯಾವುದು ಕನಸು? ಯಾವುದು ನನಸು?

ಯಾವುದು ಕನಸು? ಯಾವುದು ನನಸು?

ಸೋನ್ಯಾಳನ್ನು ಅವಳ ದಿಗ್ಭ್ರಾಂತಿ, ಅಸ್ಪಷ್ಟ ಭಯಗಳಲ್ಲಿ, ಅಪಶಕುನದ ಹೆದರಿಕೆಗಳಲ್ಲಿ ಹಾಗೇ ಬಿಟ್ಟು ಅವನು ಹೊರಟು ಹೋದ. ಅವನು ಇನ್ನೊಂದು ವಿಚಿತ್ರವಾದ, ಅನಿರೀಕ್ಷಿತವಾದ ಭೇಟಿ ನೀಡಿದ್ದ ಅನ್ನುವುದು ಆನಂತರ ತಿಳಿಯಿತು. ಹನ್ನೊಂದು ಗಂಟೆಯ ನಂತರ ತಿಳಿಯಿತು. ಮಳೆ ಇನ್ನೂ ನಿಂತಿರಲಿಲ್ಲ.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

read more
ಮುಸುಕಿನ ಮರೆಯ ಪಾಡು

ಮುಸುಕಿನ ಮರೆಯ ಪಾಡು

ನಾವು ಹುಟ್ಟಿ ಬೆಳೆದಿದ್ದ ಊರಲ್ಲಿ ಚಿಕ್ಕಪ್ಪ ಎಂಬುವವನೊಬ್ಬ ಇದ್ದ. ರಭಸವಾದ ಕುಡುಕ. ಎಣ್ಣೆ ಕೊಡಿಸಿದರೆ ಎಲ್ಲಾ ನ್ಯಾಯವನ್ನು ತಲೆಕೆಳಗೆ ಮಾಡುತ್ತಿದ್ದ. ಆ ಮನೆಯಲ್ಲಿ ನನ್ನ ತಮ್ಮನಿಗೂ ನನಗೂ ಭಾಗ ಬರಬೇಕಿತ್ತು. ನಾನದರತ್ತ ತಿರುಗಿಯೂ ನೋಡಿರಲಿಲ್ಲ. ತಮ್ಮ ಬೆಂಗಳೂರು ಸೇರಿ ಅಲ್ಲೇ ಸಂಸಾರ ಹೂಡಿ ಒಂದು ಪುಟ್ಟ ಮನೆಯನ್ನು ಮಾಡಿಕೊಂಡಿದ್ದ. ಅವನಿಗೂ ಅಂತಹ ಆಸಕ್ತಿ ಇರಲಿಲ್ಲ. ಆದರೆ ನನ್ನಕ್ಕ ಬಿಟ್ಟಿರಲಿಲ್ಲ. ನಾವು ಭಾಗ ಕೊಡುವುದಿಲ್ಲ ಎಂದು ಅವನ ಮಗ ಹಾಗೂ ಹೆಂಡತಿ ಎಗರಾಡುತ್ತಿದ್ದರು.
ಮೊಗಳ್ಳಿ ಗಣೇಶ್‌ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಮೂರನೆಯ ಕಂತು

read more
ವಿಪರೀತ ನಡೆಯ ಅಜ್ಜ ಬಲಿಪರೂ, ಅವರ ವಿಪರೀತ ಪ್ರೀತಿಯೂ

ವಿಪರೀತ ನಡೆಯ ಅಜ್ಜ ಬಲಿಪರೂ, ಅವರ ವಿಪರೀತ ಪ್ರೀತಿಯೂ

ಅಜ್ಜ ಬಲಿಪರು ಸ್ವಲ್ಪ ವಿಕ್ಷಿಪ್ತ ಸ್ವಭಾವದವರೂ ಹೌದು. ನಾಲ್ಕಾರು ದಿನಗಳ ಕಾಲು ಉಪವಾಸ ಇರಬಲ್ಲರು, ನಾಲ್ಕಾರು ದಿನದ ಭೋಜನವನ್ನು ಒಮ್ಮೆಗೇ ಮಾಡಬಲ್ಲರು. ಬಡತನ, ತಿರುಗಾಟದ ಬದುಕು ಅವರದ್ದಾಗಿತ್ತು. ಹಾಗಾಗಿ ಜೀವನ ಕ್ರಮದಲ್ಲಿಯೂ ಈ ರೀತಿಯ ವ್ಯತ್ಯಾಸಗಳಿದ್ದವು. ಅದರಿಂದ ಅವರ ಆರೋಗ್ಯವೂ ಏರುಪೇರಾದುದುಂಟು. ಆದರೆ ಅವರಿಗೆ ಮೊಮ್ಮಗನ ಕಂಠ ಶಕ್ತಿಯ ಮೇಲೆ…

read more
ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆ ಎಂದು ಶೀರ್ಷಿಕೆ ಕೊಟ್ಟು ಬರಹವನ್ನು ಮುಗಿಸಿದರೂ, ಅದು ನಿಜಕ್ಕೂ ಹಾಗಿರಲಿಲ್ಲ ಎಂಬುದು ನನಗೆ ಬಳಿಕ ತಿಳಿಯಿತು. ಮರಳುಗಾಡಿನಲ್ಲಿ ನಡೆದ ಕೊಲೆಯ ಪೂರ್ವಾಪರಗಳು ಎಷ್ಟೋಕಾಲದ ಬಳಿಕ ಅನಾವರಣಗೊಂಡಿದ್ದವು. ಅದು ಮೊಬೈಲು, ಕಂಪ್ಯೂಟರು ಇಲ್ಲದ ಕಾಲವಾದ್ದರಿಂದ ಪತ್ತೆದಾರಿಕೆಯು ನಿಧಾನವಾಗಿತ್ತು. ಕೊಲೆಯ ಹಿಂದಿರುವ ಕಾರಣವನ್ನು ಹುಡುಕಬೇಕಾದರೆ ಸಾಕ್ಷ್ಯಗಳು ಅಗತ್ಯವಾಗಿರುತ್ತವೆ.

read more
ಕಾಳಪ್ಪಬ್ಲಾಕಿನಲ್ಲಿ ಟೆಸ್ಟ್ ಕ್ರಿಕೆಟಿಗರು!

ಕಾಳಪ್ಪಬ್ಲಾಕಿನಲ್ಲಿ ಟೆಸ್ಟ್ ಕ್ರಿಕೆಟಿಗರು!

ಈ ಕ್ರಿಕೆಟ್ ಹುಚ್ಚು ಬರೆ ಹುಡುಗರಿಗಲ್ಲ, ಹುಡುಗಿಯರಿಗೂ ಇದ್ದಿತು. ನಮ್ಮ ಮನೆಯಲ್ಲೂ ರಾಮೇಶ್ವರಿ, ಎದಿರು ಮನೆಯ ಸ್ವರ್ಣ, ವಿಜಯ, ಪುಷ್ಪರಿಗೂ ಕ್ರಿಕೆಟ್‌ನಲ್ಲಿ ಬಹಳ ಆಸಕ್ತಿ ಇದ್ದು ಅವರೂ ಕ್ರಿಕೆಟ್ ನೋಡಲು ಹೋಗುತ್ತಿದ್ದರು. 1953 ಜನವರಿಯಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ಕ್ರಿಕೆಟ್‌ ಪಂದ್ಯಾವಳಿ ಬೆಂಗಳೂರಿನಲ್ಲಿ ನಡೆಯಿತು. ಅದರ ಹೆಸರು ರೋಹಿಂಗಟನ್ ಬೇರಿಯಾ ಟ್ರೋಫಿ.

read more

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ